AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಟ್ಟೆ ತೊಳೆಯುವ ವೇಳೆ ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ಕೊಚ್ಚಿ ಹೋದ ತಾಯಿ-ಮಗಳು

ರಾಯಚೂರು (Raichur) ತಾಲೂಕಿನ ಬಿ.ಯದ್ಲಾಪೂರ ಗ್ರಾಮದ ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ತಾಯಿ-ಮಗಳು ಕೊಚ್ಚಿ ಹೋದ ಘಟನೆ ನಡೆದಿದೆ. ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದು, ತಾಯಿ ಮೃತದೇಹ ಪತ್ತೆಯಾಗಿದೆ. ಸಧ್ಯ ಮಗಳು ಶ್ರಾವಣಿ ಪತ್ತೆಗೆ ಶೋಧ ಕಾರ್ಯ ನಡೆದಿದೆ.

ಬಟ್ಟೆ ತೊಳೆಯುವ ವೇಳೆ ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ಕೊಚ್ಚಿ ಹೋದ ತಾಯಿ-ಮಗಳು
ಟ್ಟೆ ತೊಳೆಯುವ ವೇಳೆ ಕಾಲುವೆಯಲ್ಲಿ ಕೊಚ್ಚಿ ಹೋದ ತಾಯಿ-ಮಗಳು
ಭೀಮೇಶ್​​ ಪೂಜಾರ್
| Edited By: |

Updated on:Oct 13, 2024 | 5:07 PM

Share

ರಾಯಚೂರು, ಅ.13: ಬಟ್ಟೆ ತೊಳೆಯುವ ವೇಳೆ ಕಾಲುವೆಯಲ್ಲಿ ತಾಯಿ-ಮಗಳು ಕೊಚ್ಚಿ ಹೋದ ಘಟನೆ ರಾಯಚೂರು (Raichur) ತಾಲೂಕಿನ ಬಿ.ಯದ್ಲಾಪೂರ ಗ್ರಾಮದಲ್ಲಿ ನಡೆದಿದೆ. ತಾಯಿ ಸುಜಾತಾ (27) ಹಾಗೂ ಮಗಳು ಶ್ರಾವಣಿ (10)ಕಾಲುವೆಯಲ್ಲಿ ಕೊಚ್ಚ ಹೋದವರು. ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದು, ತಾಯಿ ಮೃತದೇಹ ಪತ್ತೆಯಾಗಿದೆ. ಸಧ್ಯ ಮಗಳು ಶ್ರಾವಣಿ ಪತ್ತೆಗೆ ಶೋಧ ಕಾರ್ಯ ನಡೆದಿದೆ. ಪ್ರತಿ ದಿನದಂತೆ ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ಬಟ್ಟೆ ತೊಳೆಯುವಾಗ ಈ ದುರ್ಘಟನೆ ನಡೆದಿದೆ. ಈ ಘಟನೆ ಯರಗೇರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕೊಲೆಯಾದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ

ವಿಜಯಪುರ: ಬಬಲೇಶ್ವರ ತಾಲೂಕಿನ ಸಾರವಾಡ ಗ್ರಾಮದ ಹೊರ ಭಾಗದಲ್ಲಿ ಕೊಲೆಯಾದ ಸ್ಥಿತಿಯಲ್ಲಿ ಟ್ರ್ಯಾಕ್ಟರ್ ಚಾಲಕ ತೌಶಿಫ್ ಲಟೋರಿ (24) ಎಂಬ ಯುವಕನ ಶವ ಪತ್ತೆಯಾಗಿದೆ. ಶವದ ಬಳಿ ಬಿಯರ್ ಬಾಟಲ್ ಪತ್ತೆಯಾಗಿದ್ದು, ರಾತ್ರಿ ಗೆಳೆಯರೊಂದಿಗೆ ಪಾರ್ಟಿ ಮಾಡಿ, ಜಮೀನಿನಲ್ಲಿ ಎಳೆದಾಡಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಕೊಲೆಗಾರರ ಪತ್ತೆಗೆ ಮೃತ  ಯುವಕನ ಪೋಷಕರು ಮನವಿ ಮಾಡಿದ್ದು, ಸ್ಥಳಕ್ಕೆ ಎಎಸ್ಪಿ ಶಂಕರ ಮಾರಿಹಾಳ ಸೇರಿದಂತೆ  ಶ್ವಾನದಳ ಕೂಡ ಆಗಮಿಸಿದ್ದು, ಪರಿಶೀಲನೆ ನಡೆಸಲಾಗುತ್ತಿದೆ.

ಇದನ್ನೂ ಓದಿ:ಭೀಮಾ ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ಇಬ್ಬರು ಬಾಲಕಿಯರು ನೀರುಪಾಲು

ಮುರ್ಡೇಶ್ವರದಲ್ಲಿ ಬೆಂಗಳೂರು ಮೂಲದ ಯುವಕನ ರಕ್ಷಣೆ

ಉತ್ತರ ಕನ್ನಡ: ಭಟ್ಕಳ ತಾಲೂಕಿನ ಮುರ್ಡೇಶ್ವರ ಕಡಲ ತೀರದಲ್ಲಿ ಅಲೆಗಳ ಹೊಡೆತಕ್ಕೆ ಕೊಚ್ಚಿ ಹೋಗುತ್ತಿದ್ದ ಬೆಂಗಳೂರು ಮೂಲದ ಯುವಕ ಪುನೀತ್ (20) ಎಂಬಾತನ ರಕ್ಷಣೆ ಮಾಡಲಾಗಿದೆ. ಸಮುದ್ರದಲ್ಲಿ ಆಟ ಆಡುವಾಗ ಅಲೆಗಳ ಅಬ್ಬರಕ್ಕೆ ಯವಕ ಕೊಚ್ಚಿ ಹೋಗುತ್ತಿದ್ದ. ಇದನ್ನು ಗಮನಿಸಿದ ಸ್ಥಳೀಯ ಮೀನುಗಾರರು ಹಾಗೂ ಲೈಫ್ ಗಾರ್ಡ್ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ಧಾವಿಸಿ ಯುವಕನ ರಕ್ಷಣೆ ಮಾಡಿದ್ದಾರೆ.

ದಸರಾ ರಜೆ ಹಿನ್ನೆಲೆ ಸದ್ಯ ಕಡಲ ತೀರದಲ್ಲಿ ಎರಡು ಸಾವಿರಕ್ಕೂ ಹೆಚ್ಚು ಪ್ರವಾಸಿಗರು ಆಗಮಿಸಿದ್ದು, ಸಂಜೆ ವೇಳೆಗೆ ಇನ್ನಷ್ಟು ಪ್ರವಾಸಿಗರ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ. ಈ ಹಿನ್ನಲೆ ಪ್ರವಾಸಿಗರ ರಕ್ಷಣೆಗೆಂದು ಆರು ಜನ ಲೈಫ್ ಗಾರ್ಡ್ ಜೊತೆಗೆ ಪ್ರವಾಸೊದ್ಯಮ ಇಲಾಖೆ ಸಿಬ್ಬಂದಿ ಹಾಗೂ ಪೊಲೀಸರನ್ನ ನಿಯೋಜನೆ ಮಾಡಲಾಗಿದೆ.  ಕೆಲವು ದಿನದ ಹಿಂದೆ ಬೆಂಗಳೂರು ಮೂಲದ ವಿದ್ಯಾರ್ಥಿ ಸಮುದ್ರದಲ್ಲಿ ಕೊಚ್ಚಿ ಹೋದ ಹಿನ್ನೆಲೆ ನಿರ್ಬಂಧ ಮಾಡಲಾಗಿತ್ತು. ನಿನ್ನೆಯಿಂದ  ಜಿಲ್ಲಾಡಳಿತ ಮುರ್ಡೇಶ್ವರದ ಸಮುದ್ರಕ್ಕಿಳಿಯಲು ಅವಕಾಶ ಮಾಡಿಕೊಟ್ಟಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:07 pm, Sun, 13 October 24

2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ