AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರಿನಲ್ಲಿ ಸೇಂದಿ ಮಾರಾಟ ದಂಧೆ, ವಿಷಕಾರಿ ಸಿಹೆಚ್ ಪೌಡರ್ ಮಿಕ್ಸ್; ಜೀವ ಹೋಗುತ್ತೆ ಹುಷಾರ್!

ಅದು ಹಿಂದುಳಿದ ಜಿಲ್ಲೆ ಎನ್ನುವ ಹಣೆ ಪಟ್ಟಿ ಕಟ್ಟಿಕೊಂಡಿರುವ ಪ್ರದೇಶ. ಅಲ್ಲಿ ಕೂಲಿ ಕಾರ್ಮಿಕ ವರ್ಗದ ಜನ, ಗೂಳೇ ಹೋಗುವ ಜನರೇ ಹೆಚ್ಚು. ತುತ್ತು ಅನ್ನಕ್ಕೂ ಪರದಾಡುವ ಆ ಜಿಲ್ಲೆಯಲ್ಲಿ ಅಕ್ರಮ ಸೇಂದಿ ದಂಧೆ ಸದ್ದಿಲ್ಲದೇ ನಡೆಯುತ್ತಿದೆ. ಈ ಕುರಿತು ಒಂದು ಸ್ಟೋರಿ ಇಲ್ಲಿದೆ ನೋಡಿ

ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on:Mar 24, 2023 | 10:10 AM

Share

ಮುಖ್ಯಾಂಶಗಳು

  • ರಾಯಚೂರಿನಲ್ಲಿ ಬೇಸಿಗೆ ಹಿನ್ನೆಲೆ ಶುರುವಾಯ್ತು ಸೇಂದಿ ದಂಧೆ; ಕೇವಲ10ರೂ.ಗೆ ಒಂದು ಲೀಟರ್ ಸೇಂದಿ
  • ನಿಷೇಧಿತ ಕೆಮಿಕಲ್​ನಿಂದ ಸೇಂದಿ ತಯಾರಿ, ಅಕ್ರಮಕ್ಕೆ ಬ್ರೇಕ್​ ಹಾಕುವಂತೆ ಜನರ ಬೇಡಿಕೆ
  • ರಾಯಚೂರಿನಲ್ಲಿ ಬೇಸಿಗೆ ಹಿನ್ನೆಲೆ ಶುರುವಾಯ್ತು ಸೇಂದಿ ದಂಧೆ

ರಾಯಚೂರು: ಬೇಸಿಗೆಯ ಬಿಸಿಲು ಹೆಚ್ಚಾಗುತ್ತಿರುವ ಬೆನ್ನಲ್ಲೆ ಜಿಲ್ಲೆಯಲ್ಲಿ ಅಕ್ರಮ ಸೇಂದಿ ದಂಧೆ ಸದ್ದಿಲ್ಲದೇ ನಡೆಯುತ್ತಿದೆ. ಆಂಧ್ರ, ತೆಲಂಗಾಣ ಗಡಿಯಲ್ಲಿರುವ ಕಾರಣಕ್ಕೆ ಅಂತರ್​ರಾಜ್ಯ ದಂಧೆಕೋರರು ರಾಯಚೂರಿನಲ್ಲಿ ಅಕ್ರಮ ಸೇಂದಿ ದಂಧೆ ನಡೆಸುತ್ತಿದ್ದಾರೆ. ಸಿ.ಎಚ್ ಪೌಡರ್ ಎನ್ನುವುದು ನಿಷೇಧಿತ ಕೆಮಿಕಲ್. ಇದೇ ನಿಷೇಧಿತ ಸಿಎಚ್ ಪೌಡರ್​​ನಿಂದ ಕಳಪೆ ಗುಣಮಟ್ಟದ ಸೇಂದಿ ತಯಾರಿಸಲಾಗುತ್ತಲಿದೆ. ಜಿಲ್ಲೆಯಲ್ಲಿ ಅತೀ ಹೆಚ್ಚು ಕಾರ್ಮಿಕರ ವರ್ಗ ಇದ್ದು ಗೂಳೆ ಹೋಗುವ ಜನರೇ ಹೆಚ್ಚಿದ್ದಾರೆ. ಒಂದು ಲೀಟರ್ ಸೇಂದಿಗೆ ಕೇವಲ 10, 20, 30 ರೂಪಾಯಿ ಮಾತ್ರ. ಇದೇ ಕಾರಣಕ್ಕೆ ಜಿಲ್ಲೆಯಲ್ಲಿ ಮಧ್ಯ ವ್ಯಸನಿಗಳು ಹೆಚ್ಚಿನ ದರ ನೀಡದೇ ಈ ಕಡಿಮೆ ದರದ ಸೇಂದಿ ಸೇವನೆ ಮಾಡುತ್ತಿದ್ದಾರೆ. ಇದೇ ಕಾರಣಕ್ಕೆ ಈ ದಂಧೆ ಫುಲ್ ಆಕ್ಟಿವ್ ಆಗಿದೆ. ಇನ್ನು ಅಬಕಾರಿ ಇಲಾಖೆ ಹಾಗೂ ಪೊಲೀಸ್ ಇಲಾಖೆ ನಿತ್ಯ ಈ ಬಗ್ಗೆ ಮಾನಿಟರ್ ಮಾಡಿದ್ರೂ ಏನೂ ಪ್ರಯೋಜವಾಗುತ್ತಿಲ್ಲ. ಕೇವಲ ಅಲ್ಲೊಬ್ಬ ಇಲ್ಲೊಬ್ಬ ದುರುಳರು ಸಿಕ್ಕಿಬೀಳುತ್ತಾರೆ. ಈ ಜಾಲ ಮಾತ್ರ ಜಿಲ್ಲೆಯಲ್ಲಿ ನಾಯಿಕೊಡೆಗಳಂತೆ ತನ್ನ ಅಟ್ಟಹಾಸ ಮೆರೆಯುತ್ತಿದೆ.

ಜಿಲ್ಲೆಗೆ ರೆಲ್ವೆ ಮಾರ್ಗ, ರಸ್ತೆ ಮಾರ್ಗದ ಮೂಲಕವೇ ಹೆಚ್ಚಾಗಿ ಸಿಎಚ್​ ಪೌಡರ್ ಹಾಗೂ ಸೇಂದಿ ಸಪ್ಲೈ ಆಗುತ್ತೆ. ಆಂದ್ರ, ತೆಲಂಗಾಣದಲ್ಲಿ ಸೇಂದಿ ಲೀಗಲ್ ಆಗಿ ನಡೆಯುತ್ತಿದೆ. ಇದೇ ಗಡಿ ಭಾಗಕ್ಕೆ ದುರುಳರು ಬೈಕ್, ಆಟೋಗಳ ಮೂಲಕವೂ ಸೇಂದಿ ರಾಯಚೂರಿಗೆ ತಲುಪಿಸುತ್ತಾರೆ. ಅಲ್ಲಿಂದ ತರಲಾಗುವ ಸೇಂದಿಗೆ ನಿಷೇಧಿತ ಸಿಎಚ್ ಪೌಡರ್ ಮಿಕ್ಸ್ ಮಾಡಲಾಗುತ್ತೆ. ಈ ಮೂಲಕ ಸೇಂದಿ ಪ್ರಮಾಣವನ್ನ ಹೆಚ್ಚಿಗೆ ಮಾಡಿ ಮಧ್ಯ ವ್ಯಸನಕ್ಕೆ ದಾಸರಾಗಿರುವ ಕೂಲಿ ಕಾರ್ಮಿಕರು, ರೈತರು, ಗೂಳೆ ಹೋಗುವ ಬಡ ಜನರನ್ನ ಸೆಳೆಯಲಾಗುತ್ತೆ. ಒಂದು ಕೆಜಿ ಸಿಎಚ್ ಪೌಡರ್​ಗೆ ಎರಡು ವರೆಯಿಂದ ಮೂರು ಸಾವಿರ ಕೊಟ್ಟು ಆಂದ್ರ, ತೆಲಂಗಾಣದಲ್ಲಿ ಖರೀದಿಸಲಾಗುತ್ತೆ. ಒಂದು ಕೆಜಿ ಸಿಎಚ್ ಪೌಡರ್​ ನಿಂದ ಸುಮಾರು 3 ಸಾವಿರ ಲೀಟರ್​ಗೂ ಹೆಚ್ಚು ಸೇಂದಿ ತಯಾರಿಸಬಹುದು. ಹೀಗಾಗಿ ನಿಷೇಧಿತ ಸಿಎಚ್ ಪೌಡರ್ ನಿಂದ ತಯಾರಿಸಲಾಗುವ ಸೇಂದಿ ದಂಧೆ ನಡೆಯುತ್ತಿದೆ.

ಇದನ್ನೂ ಓದಿ: ಏಮ್ಸ್ ಸ್ಥಾಪನೆಗೆ ಮಾತು ತಪ್ಪಿದ ಬೊಮ್ಮಾಯಿ ಸರ್ಕಾರ, ಕೊತ ಕೊತ ಕುದಿಯುತ್ತಿರುವ ಸ್ಥಳೀಯರು, ಮಾ 24 ರಂದು ಅಮಿತ್​ ಶಾಗೆ ರಾಯಚೂರು ಬಂದ್ ಬಿಸಿ

ಇದರ ಬಗ್ಗೆ ಪೊಲೀಸ್ ಇಲಾಖೆ ಹಾಗೂ ಅಬಕಾರಿ ಇಲಾಖೆ ಎರಡು ಜಂಟಿ ಕಾರ್ಯಾಚರಣೆ ನಡೆಯುತ್ತಿದೆ. ಅವರಿಗೆ ಅಕ್ರಮ ಸೇಂದಿ ಮೂಲಗಳು ಗೊತ್ತಿವೆ. ಅದನ್ನ ಬುಡ ಸಮೇತ ಪೊಲೀಸ್ ಇಲಾಖೆ ಹಾಗೂ ಅಬಕಾರಿ ಇಲಾಖೆ ಕಿತ್ತು ಹಾಕಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ಈ ಭಾಗದಲ್ಲಿ ದುರಂತ ಅಂದರೆ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರು ಅಧಿಕಾರದಲ್ಲಿದ್ರೂ ಯಾರೋಬ್ಬರು ಅಕ್ರಮ ಮದ್ಯ ಹಾಗೂ ಅಕ್ರಮ ಸೇಂದಿ ದಂಧೆ ತಡೆಗಟ್ಟುವ ಕ್ರಮ ಕೈಗೊಂಡಿಲ್ಲ. ಹೀಗಾಗಿ ಈ ದಂಧೆ ಜಿಲ್ಲೆಯಲ್ಲಿ ಬೇರೂರಿದೆ. ಆದಷ್ಟು ಬೇಗ ಇದನ್ನ ತಡೆಗಟ್ಟುವಂತೆ ಜನರು ಮನವಿ ಮಾಡುತ್ತಿದ್ದಾರೆ.

ವರದಿ: ಭೀಮೇಶ್ ಪೂಜಾರ್ ಟಿವಿ9 ರಾಯಚೂರು

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:08 am, Fri, 24 March 23

Follow Us
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ