AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತರ್ಜಾತಿ ವಿವಾಹ ಪೀಡಿಗೆ ದೂರಾದ ಪ್ರೇಮಿಗಳು, ಫೇಸ್‌ಬುಕ್‌ ಲೈವ್‌ ಮಾಡಿ ನಂತರ ನೇಣಿಗೆ ಶರಣಾದ ಯುವಕ

ಇಬ್ಬರನ್ನ ಪೊಲೀಸರು ಬೇರ್ಪಡಿಸಿ ಯುವತಿಯನ್ನ ಪೋಷಕರ ಜೊತೆ ಕಳಿಸಿದ್ದರು. ಇದರಿಂದ ಮನನೊಂದ ಭೀಮೇಶ್ ನಾಯಕ್ ಡೆತ್‌ನೋಟ್‌ ಬರೆದು ಫೇಸ್‌ಬುಕ್‌ ಲೈವ್‌ನಲ್ಲೇ ನೇಣಿಗೆ ಶರಣಾಗಿದ್ದಾರೆ.

ಅಂತರ್ಜಾತಿ ವಿವಾಹ ಪೀಡಿಗೆ ದೂರಾದ ಪ್ರೇಮಿಗಳು, ಫೇಸ್‌ಬುಕ್‌ ಲೈವ್‌ ಮಾಡಿ ನಂತರ ನೇಣಿಗೆ ಶರಣಾದ ಯುವಕ
ಭೀಮೇಶ್ ನಾಯಕ್
TV9 Web
| Edited By: |

Updated on: Sep 08, 2021 | 8:19 AM

Share

ರಾಯಚೂರು: ಪ್ರೀತಿಸಿ ವಿವಾಹವಾಗಿದ್ದ ಯುವತಿ ತನನ್ನು ದೂರ ಮಾಡಿದ ಹಿನ್ನೆಲೆ ಫೇಸ್‌ಬುಕ್‌ ಲೈವ್‌ನಲ್ಲಿ ಮಾತನಾಡಿ ಬಳಿಕ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರು ತಾಲೂಕಿನ ಗಾಣಧಾಳ ಗ್ರಾಮದಲ್ಲಿ ನಡೆದಿದೆ. ನೇಣಿ ಬಿಗಿದುಕೊಂಡು ಭೀಮೇಶ್ ನಾಯಕ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಯುವತಿ ಸಂಧ್ಯಾ ಹಾಗೂ ಯುವಕ ಭೀಮೇಶ್ ನಾಯಕ್ ಇಬ್ಬರೂ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ಅಂತರ್ಜಾತಿ ವಿವಾಹ ಹಿನ್ನೆಲೆಯಲ್ಲಿ ಈ ಮದುವೆಗೆ ಪೋಷಕರಿಂದ ವಿರೋಧವಿತ್ತು. ವಿಚಾರಣೆಗೆಂದು ಇಡಪನೂರ ಠಾಣೆ ಪೊಲೀಸರು ನವ ದಂಪತಿಯನ್ನು ಕರೆಸಿದ್ದರು. ಆಗ ಇಬ್ಬರನ್ನ ಪೊಲೀಸರು ಬೇರ್ಪಡಿಸಿ ಯುವತಿಯನ್ನ ಪೋಷಕರ ಜೊತೆ ಕಳಿಸಿದ್ದರು. ಇದರಿಂದ ಮನನೊಂದ ಭೀಮೇಶ್ ನಾಯಕ್ ಡೆತ್‌ನೋಟ್‌ ಬರೆದು ಫೇಸ್‌ಬುಕ್‌ ಲೈವ್‌ನಲ್ಲಿ ಮಾತನಾಡಿ ತನ್ನ ಸಾವಿಗೆ ತಾನೇ ಕಾರಣ ಎಂದು ತಿಳಿಸಿ ಬಳಿಕ ನೇಣಿಗೆ ಶರಣಾಗಿದ್ದಾರೆ.

ಇನ್ನು ಮೃತ ಭೀಮೇಶ್ ನಾಯಕ್ ಡೆತ್‌ನೋಟ್ನಲ್ಲಿ ಇಡಪನೂರು ಠಾಣೆ ಪಿಎಸ್ಐ ಗಂಗಪ್ಪ, ಯುವತಿ ತಂದೆ ಚಕ್ರಪಾಣಿ ಸೇರಿ ಹಲವರು ತನ್ನ ಸಾವಿಗೆ ಕಾರಣವೆಂದು ಉಲ್ಲೇಖಿಸಿದ್ದಾರೆ. ಅಲ್ಲದೆ ಮದುವೆಯಾದ ಯುವತಿಯನ್ನು ಬಿಡದಿದ್ರೆ ಪೋಷಕರ ವಿರುದ್ದ ಕೇಸ್ ದಾಖಲಿಸುವುದಾಗಿ ಪಿಎಸ್ಐ ಬೆದರಿಕೆ ಹಾಕಿರುವುದಾಗಿ ಆರೋಪಿಸಲಾಗಿದೆ. ಜೊತೆಗೆ ಭೀಮೇಶನಾಯಕ ಬಳಿ ಪಿಎಸ್ಐ ಗಂಗಪ್ಪ 3 ಲಕ್ಷ ರೂಪಾಯಿ ಲಂಚ ಪಡೆದಿರುವ ಬಗ್ಗೆಯೂ ಡೆತ್‌ನೋಟ್ನಲ್ಲಿ ಉಲ್ಲೇಖಿಸಲಾಗಿದೆ. ಮಗನ ಆತ್ಮಹತ್ಯೆ ಸುದ್ದಿ ಕೇಳಿ ಭಿಮೇಶನಾಯಕನ ತಂದೆ ಸಹ ನಾಪತ್ತೆಯಾಗಿದ್ದಾರೆ. ಅಂತರ್ಜಾತಿ ವಿವಾಹ ಮಾಡಿಕೊಂಡಿದಕ್ಕೆ ಪೊಲೀಸರಿಂದಲೇ ಅನ್ಯಾಯ ಮಾಡಿದ ಆರೋಪ ಕೇಳಿ ಬಂದಿದೆ.

ಇದನ್ನೂ ಓದಿ: Suicide: ಒಂದೇ ಮನೆಯಲ್ಲಿ ಮೂವರು ನೇಣುಬಿಗಿದುಕೊಂಡು ಆತ್ಮಹತ್ಯೆ

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ