AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತರ್ಜಾತಿ ವಿವಾಹ ಪೀಡಿಗೆ ದೂರಾದ ಪ್ರೇಮಿಗಳು, ಫೇಸ್‌ಬುಕ್‌ ಲೈವ್‌ ಮಾಡಿ ನಂತರ ನೇಣಿಗೆ ಶರಣಾದ ಯುವಕ

ಇಬ್ಬರನ್ನ ಪೊಲೀಸರು ಬೇರ್ಪಡಿಸಿ ಯುವತಿಯನ್ನ ಪೋಷಕರ ಜೊತೆ ಕಳಿಸಿದ್ದರು. ಇದರಿಂದ ಮನನೊಂದ ಭೀಮೇಶ್ ನಾಯಕ್ ಡೆತ್‌ನೋಟ್‌ ಬರೆದು ಫೇಸ್‌ಬುಕ್‌ ಲೈವ್‌ನಲ್ಲೇ ನೇಣಿಗೆ ಶರಣಾಗಿದ್ದಾರೆ.

ಅಂತರ್ಜಾತಿ ವಿವಾಹ ಪೀಡಿಗೆ ದೂರಾದ ಪ್ರೇಮಿಗಳು, ಫೇಸ್‌ಬುಕ್‌ ಲೈವ್‌ ಮಾಡಿ ನಂತರ ನೇಣಿಗೆ ಶರಣಾದ ಯುವಕ
ಭೀಮೇಶ್ ನಾಯಕ್
TV9 Web
| Edited By: |

Updated on: Sep 08, 2021 | 8:19 AM

Share

ರಾಯಚೂರು: ಪ್ರೀತಿಸಿ ವಿವಾಹವಾಗಿದ್ದ ಯುವತಿ ತನನ್ನು ದೂರ ಮಾಡಿದ ಹಿನ್ನೆಲೆ ಫೇಸ್‌ಬುಕ್‌ ಲೈವ್‌ನಲ್ಲಿ ಮಾತನಾಡಿ ಬಳಿಕ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರು ತಾಲೂಕಿನ ಗಾಣಧಾಳ ಗ್ರಾಮದಲ್ಲಿ ನಡೆದಿದೆ. ನೇಣಿ ಬಿಗಿದುಕೊಂಡು ಭೀಮೇಶ್ ನಾಯಕ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಯುವತಿ ಸಂಧ್ಯಾ ಹಾಗೂ ಯುವಕ ಭೀಮೇಶ್ ನಾಯಕ್ ಇಬ್ಬರೂ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ಅಂತರ್ಜಾತಿ ವಿವಾಹ ಹಿನ್ನೆಲೆಯಲ್ಲಿ ಈ ಮದುವೆಗೆ ಪೋಷಕರಿಂದ ವಿರೋಧವಿತ್ತು. ವಿಚಾರಣೆಗೆಂದು ಇಡಪನೂರ ಠಾಣೆ ಪೊಲೀಸರು ನವ ದಂಪತಿಯನ್ನು ಕರೆಸಿದ್ದರು. ಆಗ ಇಬ್ಬರನ್ನ ಪೊಲೀಸರು ಬೇರ್ಪಡಿಸಿ ಯುವತಿಯನ್ನ ಪೋಷಕರ ಜೊತೆ ಕಳಿಸಿದ್ದರು. ಇದರಿಂದ ಮನನೊಂದ ಭೀಮೇಶ್ ನಾಯಕ್ ಡೆತ್‌ನೋಟ್‌ ಬರೆದು ಫೇಸ್‌ಬುಕ್‌ ಲೈವ್‌ನಲ್ಲಿ ಮಾತನಾಡಿ ತನ್ನ ಸಾವಿಗೆ ತಾನೇ ಕಾರಣ ಎಂದು ತಿಳಿಸಿ ಬಳಿಕ ನೇಣಿಗೆ ಶರಣಾಗಿದ್ದಾರೆ.

ಇನ್ನು ಮೃತ ಭೀಮೇಶ್ ನಾಯಕ್ ಡೆತ್‌ನೋಟ್ನಲ್ಲಿ ಇಡಪನೂರು ಠಾಣೆ ಪಿಎಸ್ಐ ಗಂಗಪ್ಪ, ಯುವತಿ ತಂದೆ ಚಕ್ರಪಾಣಿ ಸೇರಿ ಹಲವರು ತನ್ನ ಸಾವಿಗೆ ಕಾರಣವೆಂದು ಉಲ್ಲೇಖಿಸಿದ್ದಾರೆ. ಅಲ್ಲದೆ ಮದುವೆಯಾದ ಯುವತಿಯನ್ನು ಬಿಡದಿದ್ರೆ ಪೋಷಕರ ವಿರುದ್ದ ಕೇಸ್ ದಾಖಲಿಸುವುದಾಗಿ ಪಿಎಸ್ಐ ಬೆದರಿಕೆ ಹಾಕಿರುವುದಾಗಿ ಆರೋಪಿಸಲಾಗಿದೆ. ಜೊತೆಗೆ ಭೀಮೇಶನಾಯಕ ಬಳಿ ಪಿಎಸ್ಐ ಗಂಗಪ್ಪ 3 ಲಕ್ಷ ರೂಪಾಯಿ ಲಂಚ ಪಡೆದಿರುವ ಬಗ್ಗೆಯೂ ಡೆತ್‌ನೋಟ್ನಲ್ಲಿ ಉಲ್ಲೇಖಿಸಲಾಗಿದೆ. ಮಗನ ಆತ್ಮಹತ್ಯೆ ಸುದ್ದಿ ಕೇಳಿ ಭಿಮೇಶನಾಯಕನ ತಂದೆ ಸಹ ನಾಪತ್ತೆಯಾಗಿದ್ದಾರೆ. ಅಂತರ್ಜಾತಿ ವಿವಾಹ ಮಾಡಿಕೊಂಡಿದಕ್ಕೆ ಪೊಲೀಸರಿಂದಲೇ ಅನ್ಯಾಯ ಮಾಡಿದ ಆರೋಪ ಕೇಳಿ ಬಂದಿದೆ.

ಇದನ್ನೂ ಓದಿ: Suicide: ಒಂದೇ ಮನೆಯಲ್ಲಿ ಮೂವರು ನೇಣುಬಿಗಿದುಕೊಂಡು ಆತ್ಮಹತ್ಯೆ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!