AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತರ್ಜಾತಿ ವಿವಾಹ ಪೀಡಿಗೆ ದೂರಾದ ಪ್ರೇಮಿಗಳು, ಫೇಸ್‌ಬುಕ್‌ ಲೈವ್‌ ಮಾಡಿ ನಂತರ ನೇಣಿಗೆ ಶರಣಾದ ಯುವಕ

ಇಬ್ಬರನ್ನ ಪೊಲೀಸರು ಬೇರ್ಪಡಿಸಿ ಯುವತಿಯನ್ನ ಪೋಷಕರ ಜೊತೆ ಕಳಿಸಿದ್ದರು. ಇದರಿಂದ ಮನನೊಂದ ಭೀಮೇಶ್ ನಾಯಕ್ ಡೆತ್‌ನೋಟ್‌ ಬರೆದು ಫೇಸ್‌ಬುಕ್‌ ಲೈವ್‌ನಲ್ಲೇ ನೇಣಿಗೆ ಶರಣಾಗಿದ್ದಾರೆ.

ಅಂತರ್ಜಾತಿ ವಿವಾಹ ಪೀಡಿಗೆ ದೂರಾದ ಪ್ರೇಮಿಗಳು, ಫೇಸ್‌ಬುಕ್‌ ಲೈವ್‌ ಮಾಡಿ ನಂತರ ನೇಣಿಗೆ ಶರಣಾದ ಯುವಕ
ಭೀಮೇಶ್ ನಾಯಕ್
TV9 Web
| Edited By: |

Updated on: Sep 08, 2021 | 8:19 AM

Share

ರಾಯಚೂರು: ಪ್ರೀತಿಸಿ ವಿವಾಹವಾಗಿದ್ದ ಯುವತಿ ತನನ್ನು ದೂರ ಮಾಡಿದ ಹಿನ್ನೆಲೆ ಫೇಸ್‌ಬುಕ್‌ ಲೈವ್‌ನಲ್ಲಿ ಮಾತನಾಡಿ ಬಳಿಕ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರು ತಾಲೂಕಿನ ಗಾಣಧಾಳ ಗ್ರಾಮದಲ್ಲಿ ನಡೆದಿದೆ. ನೇಣಿ ಬಿಗಿದುಕೊಂಡು ಭೀಮೇಶ್ ನಾಯಕ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಯುವತಿ ಸಂಧ್ಯಾ ಹಾಗೂ ಯುವಕ ಭೀಮೇಶ್ ನಾಯಕ್ ಇಬ್ಬರೂ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ಅಂತರ್ಜಾತಿ ವಿವಾಹ ಹಿನ್ನೆಲೆಯಲ್ಲಿ ಈ ಮದುವೆಗೆ ಪೋಷಕರಿಂದ ವಿರೋಧವಿತ್ತು. ವಿಚಾರಣೆಗೆಂದು ಇಡಪನೂರ ಠಾಣೆ ಪೊಲೀಸರು ನವ ದಂಪತಿಯನ್ನು ಕರೆಸಿದ್ದರು. ಆಗ ಇಬ್ಬರನ್ನ ಪೊಲೀಸರು ಬೇರ್ಪಡಿಸಿ ಯುವತಿಯನ್ನ ಪೋಷಕರ ಜೊತೆ ಕಳಿಸಿದ್ದರು. ಇದರಿಂದ ಮನನೊಂದ ಭೀಮೇಶ್ ನಾಯಕ್ ಡೆತ್‌ನೋಟ್‌ ಬರೆದು ಫೇಸ್‌ಬುಕ್‌ ಲೈವ್‌ನಲ್ಲಿ ಮಾತನಾಡಿ ತನ್ನ ಸಾವಿಗೆ ತಾನೇ ಕಾರಣ ಎಂದು ತಿಳಿಸಿ ಬಳಿಕ ನೇಣಿಗೆ ಶರಣಾಗಿದ್ದಾರೆ.

ಇನ್ನು ಮೃತ ಭೀಮೇಶ್ ನಾಯಕ್ ಡೆತ್‌ನೋಟ್ನಲ್ಲಿ ಇಡಪನೂರು ಠಾಣೆ ಪಿಎಸ್ಐ ಗಂಗಪ್ಪ, ಯುವತಿ ತಂದೆ ಚಕ್ರಪಾಣಿ ಸೇರಿ ಹಲವರು ತನ್ನ ಸಾವಿಗೆ ಕಾರಣವೆಂದು ಉಲ್ಲೇಖಿಸಿದ್ದಾರೆ. ಅಲ್ಲದೆ ಮದುವೆಯಾದ ಯುವತಿಯನ್ನು ಬಿಡದಿದ್ರೆ ಪೋಷಕರ ವಿರುದ್ದ ಕೇಸ್ ದಾಖಲಿಸುವುದಾಗಿ ಪಿಎಸ್ಐ ಬೆದರಿಕೆ ಹಾಕಿರುವುದಾಗಿ ಆರೋಪಿಸಲಾಗಿದೆ. ಜೊತೆಗೆ ಭೀಮೇಶನಾಯಕ ಬಳಿ ಪಿಎಸ್ಐ ಗಂಗಪ್ಪ 3 ಲಕ್ಷ ರೂಪಾಯಿ ಲಂಚ ಪಡೆದಿರುವ ಬಗ್ಗೆಯೂ ಡೆತ್‌ನೋಟ್ನಲ್ಲಿ ಉಲ್ಲೇಖಿಸಲಾಗಿದೆ. ಮಗನ ಆತ್ಮಹತ್ಯೆ ಸುದ್ದಿ ಕೇಳಿ ಭಿಮೇಶನಾಯಕನ ತಂದೆ ಸಹ ನಾಪತ್ತೆಯಾಗಿದ್ದಾರೆ. ಅಂತರ್ಜಾತಿ ವಿವಾಹ ಮಾಡಿಕೊಂಡಿದಕ್ಕೆ ಪೊಲೀಸರಿಂದಲೇ ಅನ್ಯಾಯ ಮಾಡಿದ ಆರೋಪ ಕೇಳಿ ಬಂದಿದೆ.

ಇದನ್ನೂ ಓದಿ: Suicide: ಒಂದೇ ಮನೆಯಲ್ಲಿ ಮೂವರು ನೇಣುಬಿಗಿದುಕೊಂಡು ಆತ್ಮಹತ್ಯೆ

ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ