Sign In

By signing in or creating an account, you agree with Associated Broadcasting Company's Terms & Conditions and Privacy Policy.

ತನಿಖೆಯಲ್ಲಿ ಕಲ್ಲಿದ್ದಲು ಕಳ್ಳತನ ಬಯಲು; ಸ್ಟೇಷನ್ ಮಾಸ್ಟರ್, ಗುತ್ತಿಗೆದಾರನ ವಿರುದ್ಧ FIR

ಆರ್‌ಟಿಪಿಎಸ್ ಮತ್ತು ವೈಟಿಪಿಎಸ್ ವಿದ್ಯುತ್ ಘಟಕಗಳಿಗೆ ಸರಬರಾಜು ಮಾಡುವ ಕಲ್ಲಿದ್ದಲು ಕಳ್ಳತನ ಬಯಲಾಗಿದ್ದು ಗುತ್ತಿಗೆದಾರ ಶ್ರೀನಿವಾಸುಲು ಹಾಗೂ ಯರಮರಸ್ ರೈಲು ನಿಲ್ದಾಣದ ಸ್ಟೇಷನ್ ಮಾಸ್ಟರ್ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಇದೇ ನವೆಂಬರ್ 19, 20ರಂದು ಐದು ಲಕ್ಷ ಮೌಲ್ಯದ 120 ಮೆಟ್ರಿಕ್ ಟನ್ ಕಚ್ಚಾ ಕಲ್ಲಿದ್ದಲು ಕಳ್ಳತನವಾಗಿದೆ ಎನ್ನಲಾಗಿದೆ.

ತನಿಖೆಯಲ್ಲಿ ಕಲ್ಲಿದ್ದಲು ಕಳ್ಳತನ ಬಯಲು; ಸ್ಟೇಷನ್ ಮಾಸ್ಟರ್, ಗುತ್ತಿಗೆದಾರನ ವಿರುದ್ಧ FIR
ರಾಯಚೂರು ವಿದ್ಯುತ್ ಉತ್ಪಾದನಾ ಘಟಕ
Follow us
ಭೀಮೇಶ್​​ ಪೂಜಾರ್
| Updated By: ಆಯೇಷಾ ಬಾನು

Updated on: Nov 25, 2023 | 9:13 AM

ರಾಯಚೂರು, ನ.25: ವಿದ್ಯುತ್ ಉತ್ಪಾದನಾ ಘಟಕಗಳಿಗೆ ಸೇರಿದ ಕಲ್ಲಿದ್ದಲು ಅಕ್ರಮ ಸಾಗಾಟ (Illegal Coal Collection) ಪ್ರಕರಣ ಸಂಬಂಧ KPTCL ತನಿಖಾ ಸಮಿತಿ ಪರಿಶೀಲನೆ ವೇಳೆ ಕಲ್ಲಿದ್ದಲು ಕಳ್ಳತನ ಬಯಲಾಗಿದೆ. ಸದ್ಯ ಗುತ್ತಿಗೆದಾರ ಶ್ರೀನಿವಾಸುಲು ಹಾಗೂ ಯರಮರಸ್ ರೈಲು ನಿಲ್ದಾಣದ ಸ್ಟೇಷನ್ ಮಾಸ್ಟರ್ ವಿರುದ್ಧ ಎಫ್​ಐಆರ್ (FIR) ದಾಖಲಾಗಿದೆ. ಆರ್‌ಟಿಪಿಎಸ್ ಮತ್ತು ವೈಟಿಪಿಎಸ್ ವಿದ್ಯುತ್ ಘಟಕಗಳಿಗೆ ಸರಬರಾಜು ಮಾಡುವ ಕಲ್ಲಿದ್ದಲು ಅನಧಿಕೃತ ಜಾಗದಲ್ಲಿ ಸಂಗ್ರಹವಾಗಿದ್ದ ಸ್ಥಳಕ್ಕೆ ತನಿಖಾ ತಂಡದ ಅಧಿಕಾರಿ ಯತಿರಾಜ್ ರಘುನಾಥ, ಅಜಯ ಮತ್ತು ಕೃಷ್ಣಾಮೂರ್ತಿ ಅವರು ಭೇಟಿ ನೀಡಿ ಪರಿಶೀಲಿಸಿದ್ದು ಅಕ್ರಮ ಬಯಲಾಗಿದೆ.

ಯರಮರಸ್ ವಿದ್ಯುತ್ ಉತ್ಪಾದನಾ ಘಟಕದ ಕಾರ್ಯನಿರ್ವಾಹಕ ನಿರ್ದೇಶಕ ಮಹೇಂದ್ರ ಅವರು ರಾಯಚೂರು ಗ್ರಾಮೀಣ ಠಾಣೆಗೆ ಕಲ್ಲಿದ್ದಲು ಕಳ್ಳತನದ ಬಗ್ಗೆ ದೂರು ನೀಡಿದ್ದರು. ಇನ್ನು ಆರ್‌ಟಿಪಿಎಸ್ ಮತ್ತು ವೈಟಿಪಿಎಸ್ ವಿದ್ಯುತ್ ಘಟಕಗಳಿಗೆ ಸರಬರಾಜು ಮಾಡುವ ಕಲ್ಲಿದ್ದಲು ಅನಧಿಕೃತ ಜಾಗದಲ್ಲಿ ಸಂಗ್ರಹವಾಗಿದ್ದ ಸ್ಥಳಕ್ಕೆ ತನಿಖಾ ತಂಡದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದು ಅಕ್ರಮ ಬಯಲಾಗಿದೆ. ಮತ್ತೊಂದೆಡೆ ಕಲ್ಲಿದ್ದಲು ಬೇರೆಡೆ ಮಾರಾಟದ ಬಗ್ಗೆ ಖುದ್ದು ಗುತ್ತಿಗೆದಾರ ಶ್ರೀನಿವಾಸುಲು ಟಿವಿ9 ಎದುರು ಒಪ್ಪಿಕೊಂಡಿದ್ದರು. ಇದೀಗ ರಾಯಚೂರು ತಾಲೂಕಿನ ಯರಮರಸ್ ರೈಲ್ವೆ ನಿಲ್ದಾಣದ ಸ್ಟೇಷನ್ ಮಾಸ್ಟರ್, ಗುತ್ತಿಗೆದಾರ ಶ್ರೀನಿವಾಸುಲು ವಿರುದ್ಧ ಎಫ್​ಐಆರ್ ದಾಖಲಾಗಿದೆ.

ಇನ್ನು ಶ್ರೀನಿವಾಸುಲು ಅವರು ರಾಘವೇಂದ್ರ ಎಂಟರ್ ಪ್ರೈಸಸ್ ಹೆಸರಿನ ಕಂಪನಿ ಮೂಲಕ ರೈಲ್ವೆ ವ್ಯಾಗನ್ ಸ್ಬಚ್ಛಗೊಳಿಸುವ ಗುತ್ತಿಗೆ ಪಡೆದಿದ್ದರು. ಇದೇ ನವೆಂಬರ್ 19, 20ರಂದು ಐದು ಲಕ್ಷ ಮೌಲ್ಯದ 120 ಮೆಟ್ರಿಕ್ ಟನ್ ಕಚ್ಚಾ ಕಲ್ಲಿದ್ದಲು ಕಳ್ಳತನವಾಗಿದೆ. ಆರ್​ಟಿಪಿಎಸ್ ಹಾಗೂ ವೈಟಿಪಿಎಸ್​ಗೆ ಸೇರಿದ ಕಲ್ಲಿದ್ದಲನ್ನ ಕಳ್ಳತನ ಮಾಡಿ ಯರಮರಸ್ ರೈಲು ನಿಲ್ದಾಣದ ಹೊರ ಭಾಗದಲ್ಲಿ ಶೇಖರಣೆ ಮಾಡಿದ್ದರ ಬಗ್ಗೆ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಗುತ್ತಿಗೆದಾರ ಶ್ರೀನಿವಾಸುಲು ಹಾಗೂ ಯರಮರಸ್ ರೈಲು ನಿಲ್ದಾಣದ ರೈಲ್ವೆ ಸ್ಟೇಷನ್ ಮಾಸ್ಟರ್ ವಿರುದ್ಧ ಕ್ರಮಕ್ಕೆ ಒತ್ತಾಯ ಕೇಳಿ ಬಂದಿದೆ.

ಇದನ್ನೂ ಓದಿ: ಥೇಟ್ ಸಿನಿಮಾ ಶೈಲಿಯಂತೆ ಗೂಡ್ಸ್ ರೈಲು ನಿಂತಾಗ ಚಿನ್ನದಂತಹ ಕಲ್ಲಿದ್ದಲು ಕದಿಯುವುದು ಅಂದಿನಿಂದಲೂ ನಡೆಯುತ್ತಾ ಬಂದಿದೆಯಂತೆ – ಆರ್​ಟಿಪಿಎಸ್​ ಅಧಿಕಾರಿ ಮಾತು

ವ್ಯಾಗನ್‌ನಲ್ಲಿ ತುಂಬಿದ್ದ ಕಲ್ಲಿದ್ದಲನ್ನು ವೈಟಿಪಿಎಸ್ ಮತ್ತು ಆರ್‌ಟಿಪಿಎಸ್ ಪ್ರಾಂಗಣದಲ್ಲಿ ಸಂಪೂರ್ಣವಾಗಿ ಸುರಿಯಬೇಕು. ವ್ಯಾಗನ್ ಖಾಲಿಯಾದ ನಂತರವೇ ಅಲ್ಲಿಂದ ರೈಲು ಚಲಿಸಲು ಹಸಿರು ನಿಶಾನೆ ನೀಡಬೇಕು. ಆದರೆ, ವ್ಯಾಗನ್‌ಗಳಲ್ಲಿ ದೊಡ್ಡ ಪ್ರಮಾಣದ ಕಲ್ಲಿದ್ದಲುನ್ನು ಉಳಿಸಿ, ವಾಪಸ್ ಕಳುಹಿಸಲಾಗುತ್ತಿತ್ತು ಎಂಬ ವಿಷಯ ಬಹಿರಂಗವಾಗಿದೆ.

ರಾಯಚೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್