AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೂಸ್ವಾಧೀನ ಮಾಡಿಕೊಂಡು 30 ವರ್ಷವಾದರೂ ಪರಿಹಾರ ನೀಡದ ನೀರಾವರಿ ಇಲಾಖೆ: ಕಚೇರಿಯ ಎಲ್ಲ ಪೀಠೋಪಕರಣ ಜಪ್ತಿ ಆಯ್ತು

Lingasugur court: ರೈತರಿಗೆ ಪರಿಹಾರ ವಿತರಣೆಗೆ ನೀರಾವರಿ ಇಲಾಖೆ ವಿಳಂಬ ಧೋರಣೆ ತೋರಿದ ಹಿನ್ನೆಲೆ ಇಲಾಖೆಯ ಕಚೇರಿ ಪೀಠೋಪಕರಣಗಳನ್ನು ಜಪ್ತಿ ಮಾಡಿವಂತೆ ಲಿಂಗಸುಗೂರು ಕೋರ್ಟ್ ನ್ಯಾಯಾಧೀಶ ಚಂದ್ರಶೇಖರ್​ ಆದೇಶಿಸಿದ್ದರು.

ಭೂಸ್ವಾಧೀನ ಮಾಡಿಕೊಂಡು 30 ವರ್ಷವಾದರೂ ಪರಿಹಾರ ನೀಡದ ನೀರಾವರಿ ಇಲಾಖೆ: ಕಚೇರಿಯ ಎಲ್ಲ ಪೀಠೋಪಕರಣ ಜಪ್ತಿ ಆಯ್ತು
30 ವರ್ಷದಿಂದ ಭೂಸ್ವಾಧೀನ ಪರಿಹಾರ ನೀಡದ ನೀರಾವರಿ ಇಲಾಖೆ: ಕಚೇರಿಯ ಎಲ್ಲ ಪೀಠೋಪಕರಣ ಜಪ್ತಿ ಆಯ್ತು
Follow us
TV9 Web
| Updated By: ಸಾಧು ಶ್ರೀನಾಥ್​

Updated on:Jun 25, 2022 | 2:26 PM

ರಾಯಚೂರು: ನೀರಾವರಿ ಇಲಾಖೆಯು (Irrigation department) ರೈತರ ಭೂಸ್ವಾಧೀನ ಪರಿಹಾರ ನೀಡದ ಹಿನ್ನೆಲೆ ಲಿಂಗಸುಗೂರು ಕೋರ್ಟ್ ಆದೇಶದಂತೆ ಸಿಂಧನೂರು ನೀರಾವರಿ ಇಲಾಖೆ ಕಚೇರಿಯ ಪೀಠೋಪಕರಣಗಳನ್ನು ಜಪ್ತಿ ಮಾಡಲಾಗಿದೆ. ನ್ಯಾಯಾಲಯದ ಆದೇಶದಂತೆ (Lingasugur court) ವಕೀಲರಾದ ಶಶಿಕಾಂತ್, ಗಿರೀಶ್ ಈಚನಾಳ ನೇತೃತ್ವದಲ್ಲಿ ಪೀಠೋಪಕರಣಗಳ ಜಪ್ತಿ ಕಾರ್ಯ ನಡೆಯಿತು. ನೀರಾವರಿ ಕಚೇರಿಯ 2 ಸಿಪಿಯು, 4 ಮಾನಿಟರ್, 37 ಕುರ್ಚಿ, ಕೀ ಬೋರ್ಡ್, ಮೌಸ್‌, ಕಚೇರಿಯ ಎಲ್ಲಾ‌ ಪೀಠೋಪಕರಣಯನ್ನು ಜಪ್ತಿ ಮಾಡಲಾಗಿದೆ.

ರಾಯಚೂರು ಜಿಲ್ಲೆ ಸಿಂಧನೂರು ಪಟ್ಟಣದ ನೀರಾವರಿ ಇಲಾಖೆ ಅಧಿಕಾರಿಗಳ‌ ಸಮ್ಮುಖದಲ್ಲೇ ಪೀಠೋಪಕರಣ ಜಪ್ತಿ ಮಾಡಲಾಗಿದೆ. 30 ವರ್ಷಗಳ ಹಿಂದೆ ರೈತರಿಂದ ಪಿಕಪ್ ಡ್ಯಾಮ್​ಗಾಗಿ ಭೂಸ್ವಾಧೀನ ಮಾಡಿಕೊಳ್ಳಲಾಗಿತ್ತು. ಆದರೆ ನೀರಾವರಿ ಇಲಾಖೆ ಸಂತ್ರಸ್ತ ರೈತರಿಗೆ ಈವರೆಗೂ ಪರಿಹಾರ ನೀಡಿಲ್ಲ. ಹೀಗಾಗಿ ಶ್ರೀನಿವಾಸ್ ಮತ್ತು ಶಕುಂತಲಾ ಎಂಬ ರೈತರು ಕೋರ್ಟ್ ಮೊರೆ ಹೋಗಿದ್ದರು.

ಸಂತ್ರಸ್ತ ರೈತರಾದ ಶ್ರೀನಿವಾಸ್​ಗೆ ಸೇರಿದ 14 ಗುಂಟೆಗೆ 3,11,035 ರೂ. ಪರಿಹಾರ ಮತ್ತು ಶಕುಂತಲಾ ಎಂಬುವವರ 12 ಗುಂಟೆಗೆ 2,88,856 ರೂ. ಪರಿಹಾರ ನೀಡುವಂತೆ ಕೋರ್ಟ್​ ಆದೇಶಿಸಿತ್ತು. ಆದಾಗ್ಯೂ, ರೈತರಿಗೆ ಪರಿಹಾರ ವಿತರಣೆಗೆ ನೀರಾವರಿ ಇಲಾಖೆ ವಿಳಂಬ ಧೋರಣೆ ತೋರಿದ ಹಿನ್ನೆಲೆ ಇಲಾಖೆಯ ಕಚೇರಿ ಪೀಠೋಪಕರಣಗಳನ್ನು ಜಪ್ತಿ ಮಾಡಿವಂತೆ ಲಿಂಗಸುಗೂರು ಕೋರ್ಟ್ ನ್ಯಾಯಾಧೀಶ ಚಂದ್ರಶೇಖರ್​ ಆದೇಶಿಸಿದ್ದರು.

ಇದನ್ನೂ ಓದಿ: ಡಿಕೆ ಶಿವಕುಮಾರ್ ವಿರುದ್ಧ ದೆಹಲಿ ಕೋರ್ಟ್​ಗೆ ಸಲ್ಲಿಕೆಯಾಗಿರುವ ಇಡಿ ಚಾರ್ಜ್ ಶೀಟ್​​ನಲ್ಲಿ ಏನೆಲ್ಲಾ ಆರೋಪಗಳಿವೆ?

Published On - 2:19 pm, Sat, 25 June 22

ದೃಷ್ಟಿಹೀನ ಮಕ್ಕಳು ಹುಟ್ಟುಹಬ್ಬದ ಶುಭಾಶಯ ಕೋರಿದಾಗ ಕಣ್ಣೀರಿಟ್ಟ ರಾಷ್ಟ್ರಪತಿ
ದೃಷ್ಟಿಹೀನ ಮಕ್ಕಳು ಹುಟ್ಟುಹಬ್ಬದ ಶುಭಾಶಯ ಕೋರಿದಾಗ ಕಣ್ಣೀರಿಟ್ಟ ರಾಷ್ಟ್ರಪತಿ
‘ಪಪ್ಪಿ’ ಸಿನಿಮಾಗೆ 50 ದಿನದ ಸಂಭ್ರಮ; ವೇದಿಕೆಯಲ್ಲಿ ಬಾಲ ನಟರ ಡೈಲಾಗ್
‘ಪಪ್ಪಿ’ ಸಿನಿಮಾಗೆ 50 ದಿನದ ಸಂಭ್ರಮ; ವೇದಿಕೆಯಲ್ಲಿ ಬಾಲ ನಟರ ಡೈಲಾಗ್
ಬೆನ್ನು ನೋವಿಗೆ ಕಾರಣವೇನು? ಯೋಗದ ಮೂಲಕ ಪರಿಹರಿಸಿಕೊಳ್ಳುವುದು ಹೇಗೆ?
ಬೆನ್ನು ನೋವಿಗೆ ಕಾರಣವೇನು? ಯೋಗದ ಮೂಲಕ ಪರಿಹರಿಸಿಕೊಳ್ಳುವುದು ಹೇಗೆ?
ಐದು ದಿನಗಳ ಕಾಲ ಸುಟ್ಟ ಗಾಯಗಳೊಂದಿಗೆ ಜೀವನ್ಮರಣ ಹೋರಾಟ ನಡೆಸಿದ ಬಾಲಕ
ಐದು ದಿನಗಳ ಕಾಲ ಸುಟ್ಟ ಗಾಯಗಳೊಂದಿಗೆ ಜೀವನ್ಮರಣ ಹೋರಾಟ ನಡೆಸಿದ ಬಾಲಕ
ವಿದ್ಯುತ್ ಚಿತಾಗಾರದ ಕರೆಂಟ್ ಬಿಲ್ ಬಾಕಿ: ಬಡವಾಯ್ತೇ ಬಿಟಿಡಿಎ
ವಿದ್ಯುತ್ ಚಿತಾಗಾರದ ಕರೆಂಟ್ ಬಿಲ್ ಬಾಕಿ: ಬಡವಾಯ್ತೇ ಬಿಟಿಡಿಎ
ದಿನಕ್ಕೆ 10 ಗಂಟೆ ಕೆಲಸದ ಅವಧಿ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದ್ದಿಷ್ಟು!
ದಿನಕ್ಕೆ 10 ಗಂಟೆ ಕೆಲಸದ ಅವಧಿ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದ್ದಿಷ್ಟು!
ತನ್ನ ಸಿಗ್ನೇಚರ್ ಸ್ಟೆಪ್​ ಹಾಕುತ್ತಾ ಕುಣಿದು ರಂಜಿಸಿದ ಲೆಜೆಂಡರಿ ಸ್ಟಾರ್
ತನ್ನ ಸಿಗ್ನೇಚರ್ ಸ್ಟೆಪ್​ ಹಾಕುತ್ತಾ ಕುಣಿದು ರಂಜಿಸಿದ ಲೆಜೆಂಡರಿ ಸ್ಟಾರ್
ಇಲ್ಲಿಂದ ಮೇಲೆತ್ತಿ ಎಂಬಂತೆ ಅಸಾಹಯಕತೆಯಿಂದ ಜನರತ್ತ ನೋಡುತ್ತಿರುವ ನಾಯಿ
ಇಲ್ಲಿಂದ ಮೇಲೆತ್ತಿ ಎಂಬಂತೆ ಅಸಾಹಯಕತೆಯಿಂದ ಜನರತ್ತ ನೋಡುತ್ತಿರುವ ನಾಯಿ
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಭೂಕುಸಿತ; ಹಲವು ರಸ್ತೆಗಳು ಬಂದ್
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಭೂಕುಸಿತ; ಹಲವು ರಸ್ತೆಗಳು ಬಂದ್
ಸೂಲಿಬೆಲೆ ನಮ್ಮ ಸಂಸ್ಕೃತಿ ಮತ್ತು ಇತಿಹಾಸದ ಬಗ್ಗೆ ಮಾತಾಡುತ್ತಾರೆ: ಯತ್ನಾಳ್
ಸೂಲಿಬೆಲೆ ನಮ್ಮ ಸಂಸ್ಕೃತಿ ಮತ್ತು ಇತಿಹಾಸದ ಬಗ್ಗೆ ಮಾತಾಡುತ್ತಾರೆ: ಯತ್ನಾಳ್