AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೂಸ್ವಾಧೀನ ಮಾಡಿಕೊಂಡು 30 ವರ್ಷವಾದರೂ ಪರಿಹಾರ ನೀಡದ ನೀರಾವರಿ ಇಲಾಖೆ: ಕಚೇರಿಯ ಎಲ್ಲ ಪೀಠೋಪಕರಣ ಜಪ್ತಿ ಆಯ್ತು

Lingasugur court: ರೈತರಿಗೆ ಪರಿಹಾರ ವಿತರಣೆಗೆ ನೀರಾವರಿ ಇಲಾಖೆ ವಿಳಂಬ ಧೋರಣೆ ತೋರಿದ ಹಿನ್ನೆಲೆ ಇಲಾಖೆಯ ಕಚೇರಿ ಪೀಠೋಪಕರಣಗಳನ್ನು ಜಪ್ತಿ ಮಾಡಿವಂತೆ ಲಿಂಗಸುಗೂರು ಕೋರ್ಟ್ ನ್ಯಾಯಾಧೀಶ ಚಂದ್ರಶೇಖರ್​ ಆದೇಶಿಸಿದ್ದರು.

ಭೂಸ್ವಾಧೀನ ಮಾಡಿಕೊಂಡು 30 ವರ್ಷವಾದರೂ ಪರಿಹಾರ ನೀಡದ ನೀರಾವರಿ ಇಲಾಖೆ: ಕಚೇರಿಯ ಎಲ್ಲ ಪೀಠೋಪಕರಣ ಜಪ್ತಿ ಆಯ್ತು
30 ವರ್ಷದಿಂದ ಭೂಸ್ವಾಧೀನ ಪರಿಹಾರ ನೀಡದ ನೀರಾವರಿ ಇಲಾಖೆ: ಕಚೇರಿಯ ಎಲ್ಲ ಪೀಠೋಪಕರಣ ಜಪ್ತಿ ಆಯ್ತು
TV9 Web
| Edited By: |

Updated on:Jun 25, 2022 | 2:26 PM

Share

ರಾಯಚೂರು: ನೀರಾವರಿ ಇಲಾಖೆಯು (Irrigation department) ರೈತರ ಭೂಸ್ವಾಧೀನ ಪರಿಹಾರ ನೀಡದ ಹಿನ್ನೆಲೆ ಲಿಂಗಸುಗೂರು ಕೋರ್ಟ್ ಆದೇಶದಂತೆ ಸಿಂಧನೂರು ನೀರಾವರಿ ಇಲಾಖೆ ಕಚೇರಿಯ ಪೀಠೋಪಕರಣಗಳನ್ನು ಜಪ್ತಿ ಮಾಡಲಾಗಿದೆ. ನ್ಯಾಯಾಲಯದ ಆದೇಶದಂತೆ (Lingasugur court) ವಕೀಲರಾದ ಶಶಿಕಾಂತ್, ಗಿರೀಶ್ ಈಚನಾಳ ನೇತೃತ್ವದಲ್ಲಿ ಪೀಠೋಪಕರಣಗಳ ಜಪ್ತಿ ಕಾರ್ಯ ನಡೆಯಿತು. ನೀರಾವರಿ ಕಚೇರಿಯ 2 ಸಿಪಿಯು, 4 ಮಾನಿಟರ್, 37 ಕುರ್ಚಿ, ಕೀ ಬೋರ್ಡ್, ಮೌಸ್‌, ಕಚೇರಿಯ ಎಲ್ಲಾ‌ ಪೀಠೋಪಕರಣಯನ್ನು ಜಪ್ತಿ ಮಾಡಲಾಗಿದೆ.

ರಾಯಚೂರು ಜಿಲ್ಲೆ ಸಿಂಧನೂರು ಪಟ್ಟಣದ ನೀರಾವರಿ ಇಲಾಖೆ ಅಧಿಕಾರಿಗಳ‌ ಸಮ್ಮುಖದಲ್ಲೇ ಪೀಠೋಪಕರಣ ಜಪ್ತಿ ಮಾಡಲಾಗಿದೆ. 30 ವರ್ಷಗಳ ಹಿಂದೆ ರೈತರಿಂದ ಪಿಕಪ್ ಡ್ಯಾಮ್​ಗಾಗಿ ಭೂಸ್ವಾಧೀನ ಮಾಡಿಕೊಳ್ಳಲಾಗಿತ್ತು. ಆದರೆ ನೀರಾವರಿ ಇಲಾಖೆ ಸಂತ್ರಸ್ತ ರೈತರಿಗೆ ಈವರೆಗೂ ಪರಿಹಾರ ನೀಡಿಲ್ಲ. ಹೀಗಾಗಿ ಶ್ರೀನಿವಾಸ್ ಮತ್ತು ಶಕುಂತಲಾ ಎಂಬ ರೈತರು ಕೋರ್ಟ್ ಮೊರೆ ಹೋಗಿದ್ದರು.

ಸಂತ್ರಸ್ತ ರೈತರಾದ ಶ್ರೀನಿವಾಸ್​ಗೆ ಸೇರಿದ 14 ಗುಂಟೆಗೆ 3,11,035 ರೂ. ಪರಿಹಾರ ಮತ್ತು ಶಕುಂತಲಾ ಎಂಬುವವರ 12 ಗುಂಟೆಗೆ 2,88,856 ರೂ. ಪರಿಹಾರ ನೀಡುವಂತೆ ಕೋರ್ಟ್​ ಆದೇಶಿಸಿತ್ತು. ಆದಾಗ್ಯೂ, ರೈತರಿಗೆ ಪರಿಹಾರ ವಿತರಣೆಗೆ ನೀರಾವರಿ ಇಲಾಖೆ ವಿಳಂಬ ಧೋರಣೆ ತೋರಿದ ಹಿನ್ನೆಲೆ ಇಲಾಖೆಯ ಕಚೇರಿ ಪೀಠೋಪಕರಣಗಳನ್ನು ಜಪ್ತಿ ಮಾಡಿವಂತೆ ಲಿಂಗಸುಗೂರು ಕೋರ್ಟ್ ನ್ಯಾಯಾಧೀಶ ಚಂದ್ರಶೇಖರ್​ ಆದೇಶಿಸಿದ್ದರು.

ಇದನ್ನೂ ಓದಿ: ಡಿಕೆ ಶಿವಕುಮಾರ್ ವಿರುದ್ಧ ದೆಹಲಿ ಕೋರ್ಟ್​ಗೆ ಸಲ್ಲಿಕೆಯಾಗಿರುವ ಇಡಿ ಚಾರ್ಜ್ ಶೀಟ್​​ನಲ್ಲಿ ಏನೆಲ್ಲಾ ಆರೋಪಗಳಿವೆ?

Published On - 2:19 pm, Sat, 25 June 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್