AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೂಸ್ವಾಧೀನ ಮಾಡಿಕೊಂಡು 30 ವರ್ಷವಾದರೂ ಪರಿಹಾರ ನೀಡದ ನೀರಾವರಿ ಇಲಾಖೆ: ಕಚೇರಿಯ ಎಲ್ಲ ಪೀಠೋಪಕರಣ ಜಪ್ತಿ ಆಯ್ತು

Lingasugur court: ರೈತರಿಗೆ ಪರಿಹಾರ ವಿತರಣೆಗೆ ನೀರಾವರಿ ಇಲಾಖೆ ವಿಳಂಬ ಧೋರಣೆ ತೋರಿದ ಹಿನ್ನೆಲೆ ಇಲಾಖೆಯ ಕಚೇರಿ ಪೀಠೋಪಕರಣಗಳನ್ನು ಜಪ್ತಿ ಮಾಡಿವಂತೆ ಲಿಂಗಸುಗೂರು ಕೋರ್ಟ್ ನ್ಯಾಯಾಧೀಶ ಚಂದ್ರಶೇಖರ್​ ಆದೇಶಿಸಿದ್ದರು.

ಭೂಸ್ವಾಧೀನ ಮಾಡಿಕೊಂಡು 30 ವರ್ಷವಾದರೂ ಪರಿಹಾರ ನೀಡದ ನೀರಾವರಿ ಇಲಾಖೆ: ಕಚೇರಿಯ ಎಲ್ಲ ಪೀಠೋಪಕರಣ ಜಪ್ತಿ ಆಯ್ತು
30 ವರ್ಷದಿಂದ ಭೂಸ್ವಾಧೀನ ಪರಿಹಾರ ನೀಡದ ನೀರಾವರಿ ಇಲಾಖೆ: ಕಚೇರಿಯ ಎಲ್ಲ ಪೀಠೋಪಕರಣ ಜಪ್ತಿ ಆಯ್ತು
TV9 Web
| Edited By: |

Updated on:Jun 25, 2022 | 2:26 PM

Share

ರಾಯಚೂರು: ನೀರಾವರಿ ಇಲಾಖೆಯು (Irrigation department) ರೈತರ ಭೂಸ್ವಾಧೀನ ಪರಿಹಾರ ನೀಡದ ಹಿನ್ನೆಲೆ ಲಿಂಗಸುಗೂರು ಕೋರ್ಟ್ ಆದೇಶದಂತೆ ಸಿಂಧನೂರು ನೀರಾವರಿ ಇಲಾಖೆ ಕಚೇರಿಯ ಪೀಠೋಪಕರಣಗಳನ್ನು ಜಪ್ತಿ ಮಾಡಲಾಗಿದೆ. ನ್ಯಾಯಾಲಯದ ಆದೇಶದಂತೆ (Lingasugur court) ವಕೀಲರಾದ ಶಶಿಕಾಂತ್, ಗಿರೀಶ್ ಈಚನಾಳ ನೇತೃತ್ವದಲ್ಲಿ ಪೀಠೋಪಕರಣಗಳ ಜಪ್ತಿ ಕಾರ್ಯ ನಡೆಯಿತು. ನೀರಾವರಿ ಕಚೇರಿಯ 2 ಸಿಪಿಯು, 4 ಮಾನಿಟರ್, 37 ಕುರ್ಚಿ, ಕೀ ಬೋರ್ಡ್, ಮೌಸ್‌, ಕಚೇರಿಯ ಎಲ್ಲಾ‌ ಪೀಠೋಪಕರಣಯನ್ನು ಜಪ್ತಿ ಮಾಡಲಾಗಿದೆ.

ರಾಯಚೂರು ಜಿಲ್ಲೆ ಸಿಂಧನೂರು ಪಟ್ಟಣದ ನೀರಾವರಿ ಇಲಾಖೆ ಅಧಿಕಾರಿಗಳ‌ ಸಮ್ಮುಖದಲ್ಲೇ ಪೀಠೋಪಕರಣ ಜಪ್ತಿ ಮಾಡಲಾಗಿದೆ. 30 ವರ್ಷಗಳ ಹಿಂದೆ ರೈತರಿಂದ ಪಿಕಪ್ ಡ್ಯಾಮ್​ಗಾಗಿ ಭೂಸ್ವಾಧೀನ ಮಾಡಿಕೊಳ್ಳಲಾಗಿತ್ತು. ಆದರೆ ನೀರಾವರಿ ಇಲಾಖೆ ಸಂತ್ರಸ್ತ ರೈತರಿಗೆ ಈವರೆಗೂ ಪರಿಹಾರ ನೀಡಿಲ್ಲ. ಹೀಗಾಗಿ ಶ್ರೀನಿವಾಸ್ ಮತ್ತು ಶಕುಂತಲಾ ಎಂಬ ರೈತರು ಕೋರ್ಟ್ ಮೊರೆ ಹೋಗಿದ್ದರು.

ಸಂತ್ರಸ್ತ ರೈತರಾದ ಶ್ರೀನಿವಾಸ್​ಗೆ ಸೇರಿದ 14 ಗುಂಟೆಗೆ 3,11,035 ರೂ. ಪರಿಹಾರ ಮತ್ತು ಶಕುಂತಲಾ ಎಂಬುವವರ 12 ಗುಂಟೆಗೆ 2,88,856 ರೂ. ಪರಿಹಾರ ನೀಡುವಂತೆ ಕೋರ್ಟ್​ ಆದೇಶಿಸಿತ್ತು. ಆದಾಗ್ಯೂ, ರೈತರಿಗೆ ಪರಿಹಾರ ವಿತರಣೆಗೆ ನೀರಾವರಿ ಇಲಾಖೆ ವಿಳಂಬ ಧೋರಣೆ ತೋರಿದ ಹಿನ್ನೆಲೆ ಇಲಾಖೆಯ ಕಚೇರಿ ಪೀಠೋಪಕರಣಗಳನ್ನು ಜಪ್ತಿ ಮಾಡಿವಂತೆ ಲಿಂಗಸುಗೂರು ಕೋರ್ಟ್ ನ್ಯಾಯಾಧೀಶ ಚಂದ್ರಶೇಖರ್​ ಆದೇಶಿಸಿದ್ದರು.

ಇದನ್ನೂ ಓದಿ: ಡಿಕೆ ಶಿವಕುಮಾರ್ ವಿರುದ್ಧ ದೆಹಲಿ ಕೋರ್ಟ್​ಗೆ ಸಲ್ಲಿಕೆಯಾಗಿರುವ ಇಡಿ ಚಾರ್ಜ್ ಶೀಟ್​​ನಲ್ಲಿ ಏನೆಲ್ಲಾ ಆರೋಪಗಳಿವೆ?

Published On - 2:19 pm, Sat, 25 June 22

Follow Us
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು