ರಾಯಚೂರಿನಲ್ಲಿ ಡೆಂಗ್ಯೂ ಜ್ವರಕ್ಕೆ ಮೂವರು ಬಲಿ? ಆಸ್ಪತ್ರೆಯ ಬಳಿ ಸಂಬಂಧಿಕರ ಆಕ್ರೋಶ

ಒಂದೇ ಆಸ್ಪತ್ರೆಯಲ್ಲಿ ಇಬ್ಬರು ಮಕ್ಕಳು ಸೇರಿ ಓರ್ವ ಯುವಕ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ವೈದ್ಯರ ನಿರ್ಲಕ್ಷ್ಯದಿಂದ ನವೀನ್, ವೀರೇಶ್ ಮತ್ತು ದೀಪಾ ಮೃತಪಟ್ಟಿದ್ದಾರೆ ಅಂತ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಯಚೂರಿನಲ್ಲಿ ಡೆಂಗ್ಯೂ ಜ್ವರಕ್ಕೆ ಮೂವರು ಬಲಿ? ಆಸ್ಪತ್ರೆಯ ಬಳಿ ಸಂಬಂಧಿಕರ ಆಕ್ರೋಶ
ಆಸ್ಪತ್ರೆ ಎದುರು ಪೋಷಕರ ಆಕ್ರೋಶ
Updated By: sandhya thejappa

Updated on: Oct 28, 2021 | 12:51 PM

ರಾಯಚೂರು: ಜಿಲ್ಲೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಮೂವರು ಸಾವನ್ನಪ್ಪಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಮೃತರಿಗೆ ಡೆಂಗ್ಯೂ ಇತ್ತು ಎಂಬ ಅನುಮಾನ ಕೂಡಾ ವ್ಯಕ್ತವಾಗಿದ್ದು, ಮೃತರ ಸಂಬಂಧಿಕರು ಆಸ್ಪತ್ರೆ ಎದುರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾನ್ವಿ ಪಟ್ಟಣದ ಕ್ಯೂರಿ ಫಾರ್ಮ ಆಸ್ಪತ್ರೆ ಎದುರು ಪೋಷಕರು ಗಲಾಟೆ ನಡೆಸಿದ್ದಾರೆ. ಮೂವರ ಸಾವಿಗೆ ವೈದ್ಯರೇ ಕಾರಣ ಅಂತ ಆರೋಪಿಸಿದ್ದಾರೆ. ಈ ಘಟನೆ ತಡರಾತ್ರಿ ನಡೆದಿದೆ.

ಒಂದೇ ಆಸ್ಪತ್ರೆಯಲ್ಲಿ ಇಬ್ಬರು ಮಕ್ಕಳು ಸೇರಿ ಓರ್ವ ಯುವಕ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ವೈದ್ಯರ ನಿರ್ಲಕ್ಷ್ಯದಿಂದ ನವೀನ್, ವೀರೇಶ್ ಮತ್ತು ದೀಪಾ ಮೃತಪಟ್ಟಿದ್ದಾರೆ ಅಂತ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಕ್ರೋಶ ಹೆಚ್ಚುತ್ತಿದ್ದಂತೆ ವೈದ್ಯ ಭಾನುಪ್ರಕಾಶ್, ಸಿಬ್ಬಂದಿ ಪರಾರಿಯಾಗಿದ್ದಾರೆ. ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಕಳೆದ 21 ದಿನಗಳಿಂದ ಮಾನ್ವಿ ಪಟ್ಟಣದಲ್ಲಿ ಡೇಂಗ್ಯೂ ಜ್ವರ ಹೆಚ್ಚಳವಾಗುತ್ತಿದೆ. ಆದರೆ ಜ್ವರ ಹೆಚ್ಚಳವಾದರೂ ಸ್ವಚ್ಚತೆ ಬಗ್ಗೆ ಗಮನ‌ ನೀಡದ ಪುರಸಭೆ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದರು. ಹೀಗಾಗಿ ಅಧಿಕಾರಿಗಳ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದರು. ಮಾನವಿ ಶಾಸಕ ರಾಜಾ ವೆಂಕಟಪ್ಪ ನಾಯಕ ನಿರ್ಲಕ್ಷ್ಯದಿಂದ ಬಡ ಮಕ್ಕಳು ನರಳಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ

ಯೂಟ್ಯೂಬ್​​ನಲ್ಲಿ ವಿಡಿಯೋ ನೋಡಿಕೊಂಡು ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ; ಪಾಲಕರಿಗೆ ಗೊತ್ತಾಗದಂತೆ ನಿಭಾಯಿಸಿದ ರೀತಿ ನಿಜಕ್ಕೂ ಶಾಕಿಂಗ್​​

ರಾಯಚೂರು: ಡೆಂಗ್ಯೂಗೆ ಮೂರು ಮಕ್ಕಳು ಬಲಿ; ಸ್ಥಳಕ್ಕೆ ಜಿಲ್ಲಾ ವೈದ್ಯಾಧಿಕಾರಿ ಡಾ. ನಾಗರಾಜ್ ಭೇಟಿ

Published On - 12:44 pm, Thu, 28 October 21