AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆಯಲ್ಲಿ ವೀರಶೈವ ಸಮಾವೇಶ ಬೆನ್ನಲ್ಲೆ ರಾಯಚೂರಿನಲ್ಲಿ ಸಮಾವೇಶ ನಡೆಸಲು ಕರೆ ಕೊಟ್ಟ ಜಯಮೃತ್ಯುಂಜಯ ಸ್ವಾಮೀಜಿ

ಪಂಚಮಸಾಲಿ 2ಎ ಮೀಸಲಾತಿಗಾಗಿ ಹಾಗೂ ಎಲ್ಲಾ ಲಿಂಗಾಯತರಿಗೂ ಓಬಿಸಿ ಮೀಸಲಾತಿಗಾಗಿ ರಾಯಚೂರಿನಲ್ಲಿ ಮೀಸಲಾತಿ ಸಮಾವೇಶ ನಡೆಸಲು ಜಯಮೃತ್ಯುಂಜಯ ಸ್ವಾಮೀಜಿ ಮುಂದಾಗಿದ್ದಾರೆ. ಹಾಘೂ ನಾಳೆ(ಡಿ.24) ಜಿಲ್ಲೆಯ ಲಿಂಗಸುಗೂರು ತಾಲೂಕಿನ ಯರಡೋಣಿ ಬಳಿಯ ರಾಜ್ಯ ಹೆದ್ದಾರಿ ಬಂದ್​ಗೆ ಕರೆ ನೀಡಿದ್ದಾರೆ.

ದಾವಣಗೆರೆಯಲ್ಲಿ ವೀರಶೈವ ಸಮಾವೇಶ ಬೆನ್ನಲ್ಲೆ ರಾಯಚೂರಿನಲ್ಲಿ ಸಮಾವೇಶ ನಡೆಸಲು ಕರೆ ಕೊಟ್ಟ ಜಯಮೃತ್ಯುಂಜಯ ಸ್ವಾಮೀಜಿ
ಜಯಮೃತ್ಯುಂಜಯ ಸ್ವಾಮೀಜಿ
ಭೀಮೇಶ್​​ ಪೂಜಾರ್
| Edited By: |

Updated on: Dec 23, 2023 | 2:37 PM

Share

ರಾಯಚೂರು, ಡಿ.23: ದಾವಣಗೆರೆಯ ವೀರಶೈವ ಲಿಂಗಾಯತ ಸಮಾವೇಶದ (Davanagere Veerashaiva-Lingayat meet) ಮಧ್ಯೆ ರಾಯಚೂರಿನಲ್ಲಿ ಮೀಸಲಾತಿ ಸಮಾವೇಶ ನಡೆಸಲು ಜಯಮೃತ್ಯುಂಜಯ ಸ್ವಾಮೀಜಿ (Jaya Mruthyunjaya Swamiji) ಕರೆ ಕೊಟ್ಟಿದ್ದಾರೆ. ಪಂಚಮಸಾಲಿ 2ಎ ಮೀಸಲಾತಿಗಾಗಿ ಹಾಗೂ ಎಲ್ಲಾ ಲಿಂಗಾಯತರಿಗೂ ಓಬಿಸಿ ಮೀಸಲಾತಿಗಾಗಿ ಸಮಾವೇಶ ನಡೆಸಲು ಮುಂದಾಗಿದ್ದಾರೆ. ಹಾಘೂ ನಾಳೆ(ಡಿ.24) ಜಿಲ್ಲೆಯ ಲಿಂಗಸುಗೂರು ತಾಲೂಕಿನ ಯರಡೋಣಿ ಬಳಿಯ ರಾಜ್ಯ ಹೆದ್ದಾರಿ ಬಂದ್​ಗೆ ಕರೆ ನೀಡಿದ್ದಾರೆ.

ನಾಳೆ ಹೆದ್ದಾರಿಯಲ್ಲೇ ಇಷ್ಟಲಿಂಗ ಪೂಜೆ ಮಾಡುವ ಮೂಲಕ ಸಮಾವೇಶಕ್ಕೆ ಚಾಲನೆ ನೀಡಲಾಗುತ್ತೆ. ಮಧ್ಯಾಹ್ನ ಯರಡೋಣದಲ್ಲೇ ಜಿಲ್ಲಾ ಮಟ್ಟದ ಮೀಸಲಾತಿ ಸಮಾವೇಶ ನಡೆಸಲಾಗುತ್ತೆ. ಸಮಾವೇಶಕ್ಕೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಶಾಸಕ ವಿಜಯಾನಂದ ಕಾಶಪ್ಪನವರ್, ಸಂಸದ ಸಂಗಣ್ಣ ಕರಡಿ ಭಾಗಿಯಾಗಲಿದ್ದಾರೆ. ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ಬೆಳಗಾವಿಯಿಂದ ಬೆಂಗಳೂರಿಗೆ ಹೋದ ಮೇಲೆ ಕಾನೂನು ತಜ್ಞರ ಸಭೆ ಕರೀತಿನಿ, ನಂತರ ನಿಮ್ಮ ಸಭೆ ಅಂತ ಭರವಸೆ ಕೊಟ್ಟಿದ್ರು. ಆ ಬಗ್ಗೆ ಸರ್ಕಾರದ ಗಮನ ಸೆಳೆಯಲು ಸಮಾವೇಶ ಮಾಡಲಾಗುತ್ತಿದೆ ಎಂದು ರಾಯಚೂರಿನಲ್ಲಿ ಜಯಮೃತ್ಯುಂಜಯ ಶ್ರೀಗಳು ತಿಳಿಸಿದರು.

ಸಿಎಂ ಸಿದ್ದರಾಮಯ್ಯ ಒಂದು ವಾರದಲ್ಲಿ ಕಾನೂನು ತಜ್ಞರ ಸಭೆ ಕರೀತಿನಿ. ಬಳಿಕ ನಿಮ್ಮ ಜೊತೆ ಮಾತನಾಡ್ತಿನಿ ಎಂದಿದ್ದರು. ಕೊಟ್ಟ ಮಾತಿನಂತೆ ಸಂಕ್ರಾತಿ ಒಳಗೆ ಸಭೆ ಕರೆದು ಅಂತಿಮ ತೀರ್ಮಾನಕ್ಕೆ ಬರಬೇಕು. ಲೋಕಸಭೆ ಚುನಾವಣೆ ಒಳಗೆ ಕೇಂದ್ರಲ್ಲಿ ಓಬಿಸಿ, ರಾಜ್ಯದಲ್ಲಿ 2ಎ ಮೀಸಲಾತಿ ಕೊಡಬೇಕು ಎಂದು ಜಯಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ದಾವಣಗೆರೆ: ಶಾಮನೂರು ಶಿವಶಂಕರಪ್ಪರ ಮೆರವಣಿಗೆ ಮೂಲಕ ವೀರಶೈವ ಮಹಾಸಭಾ ಅಧಿವೇಶನಕ್ಕೆ ಚಾಲನೆ

ಇನ್ನು ಇದೇ  ವೇಳೆ ದಾವಣಗೆರೆ ವೀರಶೈವ-ಲಿಂಗಾಯತ ಸಮಾವೇಶಕ್ಕೆ ಅಧಿಕೃತ ಆಹ್ವಾನ ಇಲ್ಲದ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ ಜಯಮೃತ್ಯುಂಜಯ ಸ್ವಾಮೀಜಿ, ಮೀಸಲಾತಿ ಹೋರಾಟ ಶುರುವಾದ ಬಳಿಕ ನಿತ್ಯ ಪ್ರತಿ ಊರಲ್ಲಿ, ನೂರಾರು ಅಧಿವೇಶನ, ಸಮಾವೇಶ ಆಗ್ತಿವೆ ನಾನು ಹೋಗ್ತಿಲ್ಲ. 2ಎ ಮೀಸಲಾತಿಗೆ ಹೋರಾಟ ಮಾತ್ರ ಮಾಡ್ತಿದ್ದೇನೆ ಎಂದರು.

ಶಾಮನೂರು ಶಿವಶಂಕರಪ್ಪ ವಿರುದ್ಧ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ ಸ್ವಾಮೀಜಿ

ಅವರ ವಿರುದ್ಧ ಎಲ್ಲಾ ಕಡೆ ಮುನಿಸಿಕೊಂಡಿದ್ದಾರೆ. ಮೀಸಲಾತಿ ಹೋರಾಟಕ್ಕೆ ಇವತ್ತಿನವರೆಗೆ ಹೋರಾಟಕ್ಕೆ ಬೆಂಬಲ ಪತ್ರ ಅವರಿಂದ ಬಂದಿಲ್ಲ. ಲಿಂಗಾಯತರಲ್ಲಿ 82 ಪರ್ಸೆಂಟ್ ನಾವೇ ಇದ್ದಿವಿ. ಕೊನೆ ಪಕ್ಷ ಎರಡು ದಿನ ನಡೆಯುವ ಕಾರ್ಯಕ್ರಮದಲ್ಲಿ ಪಂಚಮಸಾಲಿ ಹೋರಾಟಕ್ಕೆ ಬೆಂಬಲ ಕೊಡೊ ನಿರ್ಣಯಗಳು, ಎಲ್ಲಾ ಲಿಂಗಾಯತರನ್ನ ಓಬಿಸಿಗೆ ಮೀಸಲಾತಿ ಸೇರ್ಪಡೆ ನಿರ್ಣಯಗಳು, ಬಸವಣ್ಣವರನ್ನ ನಮ್ಮ ಧರ್ಮ ಗುರು ಅಂತ ಘೋಷಣೆ ನಿರ್ಣಯ ಮಾಡಬೇಕು. ಅದಕ್ಕೆ ಸಲಹೆ ಬೇಕಿದ್ರೆ ಕೊಡ್ತಿನಿ ಎಂದು ಶಾಮನೂರು ಶಿವಶಂಕರಪ್ಪ ವಿರುದ್ಧ ಪರೋಕ್ಷವಾಗಿ  ಜಯಮೃತ್ಯುಂಜಯ ಸ್ವಾಮೀಜಿ ಅಸಮಾಧಾನ ಹೊರಹಾಕಿದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Bhemesh Poojar
Bhemesh Poojar

ಕಳೆದ 10 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.ಈ ಹಿಂದೆ ಬೆಂಗಳೂರು ನಗರದಲ್ಲಿ ಕ್ರೈಂ ರಿಪೋರ್ಟರ್ ಆಗಿ ಎಂಟು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದೇನೆ.ಟಿವಿ9 ಸಂಸ್ಥೆಯಲ್ಲಿ ಕಳೆದ ಎರಡು ವರ್ಷಗಳಿಂದ ರಾಯಚೂರು ಜಿಲ್ಲಾ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ.ನನ್ನ ಹವ್ಯಾಸ ಕ್ರಿಕೆಟ್ ಆಡುವುದು.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?