AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Raichur News: ಜೆಸಿಬಿ ಹರಿದು ಜಮೀನಿನಲ್ಲಿ ಮಲಗಿದ್ದ ಮೂವರು ಸಾವು

ಜೆಸಿಬಿ ಹರಿದು ಜಮೀನಿನಲ್ಲಿ ಮಲಗಿದ್ದ ಮೂವರು ಸಾವನ್ನಪ್ಪಿರುವ ಘಟನೆ ಜಲ್ಲೆಯ ದೇವದುರ್ಗ ತಾಲೂಕಿನ ನಿಲವಂಜಿ ಗ್ರಾಮದ ಬಳಿ ನಡೆದಿದೆ. ಛತ್ತೀಸ್​ಗಢ ಮೂಲದವರಾದ ವಿಷ್ಣು(26), ಶಿವರಾಮ್(28), ಬಲರಾಮ್(30) ಮೃತ ದುರ್ದೈವಿಗಳು.

Raichur News: ಜೆಸಿಬಿ ಹರಿದು ಜಮೀನಿನಲ್ಲಿ ಮಲಗಿದ್ದ ಮೂವರು ಸಾವು
ಜೆಸಿಬಿ ಹರಿದು ಸಾವು
ಕಿರಣ್ ಹನುಮಂತ್​ ಮಾದಾರ್
|

Updated on: Jun 14, 2023 | 10:12 AM

Share

ರಾಯಚೂರು: ಜೆಸಿಬಿ(JCB) ಹರಿದು ಜಮೀನಿನಲ್ಲಿ ಮಲಗಿದ್ದ ಮೂವರು ಸಾವನ್ನಪ್ಪಿರುವ ಘಟನೆ ಜಲ್ಲೆಯ ದೇವದುರ್ಗ(Devadurga) ತಾಲೂಕಿನ ನಿಲವಂಜಿ ಗ್ರಾಮದ ಬಳಿ ನಡೆದಿದೆ. ಛತ್ತೀಸ್​ಗಢ ಮೂಲದವರಾದ ವಿಷ್ಣು(26), ಶಿವರಾಮ್(28), ಬಲರಾಮ್(30) ಮೃತ ದುರ್ದೈವಿಗಳು. ಜಮೀನಿನಲ್ಲಿ ಬೋರ್‌ವೆಲ್ ಕೊರೆದು ಕಾಲುದಾರಿಯಲ್ಲಿಯೇ ರಾತ್ರಿ ಮೂವರು ಮಲಗಿದ್ದರು. ಈ ವೇಳೆ ಕಾಲುದಾರಿಯಲ್ಲಿ ಬಂದ ಜೆಸಿಬಿ, ಮೂವರು ಮೇಲೂ ಹರಿದು ಸ್ಥಳದಲ್ಲೇ ಧಾರುಣ ಅಂತ್ಯ ಕಂಡಿದ್ದಾರೆ. ಈ ಕುರಿತು ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿ; ಓರ್ವ ಸಾವು

ತುಮಕೂರು: ಜಿಲ್ಲೆಯ ಮಧುಗಿರಿ ತಾಲೂಕಿನ ತೆರಿಯೂರಿನ ಹೊರವಲಯದ ಅಣ್ಣನಹಳ್ಳಿ ಗೇಟ್ ಬಳಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿಯಾಗಿದ್ದು, ಕಾರು ಚಾಲಕ ಭರತ್ ಕುಮಾರ್(24) ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಕಾರಿನಲ್ಲಿದ್ದ ನಾಲ್ವರಿಗೆ ಗಾಯಗಳಾಗಿದ್ದು, ಮಧುಗಿರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಕುರಿತು ಕೊಡಿಗೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ:Vijayapur News: ರಸ್ತೆ ಅಪಘಾತದಲ್ಲಿ ನವದಂಪತಿ ಸಾವು: ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ 

ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು

ತುಮಕೂರು: ಜಿಲ್ಲೆಯ ಕೊರಟಗೆರೆ ತಾಲೂಕಿನ ಅಗ್ರಹಾರದ ಬಳಿ ಲಾರಿ ಹಾಗೂ ಎರ್ಟಿಗಾ ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ‌ ಸಾವನ್ನಪ್ಪಿದ್ದಾರೆ. ಶಿವು ನಾಯಕ್, ಪರಮೇಶ್ ಮೃತ ದುರ್ದೈವಿಗಳು‌. ಇನ್ನು ಐವರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ತಡ ರಾತ್ರಿ ಸುಮಾರು 2 ಗಂಟೆ ಸಮಯದಲ್ಲಿ ಈ ಭೀಕರ ರಸ್ತೆ ಅಪಘಾತ ನಡೆದಿದ್ದು, ಇವರು ಸ್ನೇಹಿತನ ಮದುವೆಗೆ ತೆರಳಿ ವಾಪಸ್ ಕೊರಟಗೆರೆ ಹಾಗೂ ಕೊಡಿಗೇನಹಳ್ಳಿಗೆ ವಾಪಸ್ ಬರುತಿದ್ದ ವೇಳೆ ಈ ಘಟನೆ ನಡೆದಿದೆ. ಸ್ಥಳಕ್ಕೆ ಕೊರಟಗೆರೆ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

ಇನ್ನಷ್ಟು ಅಪಘಾತ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ