AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Raichur News: ಜೆಸಿಬಿ ಹರಿದು ಜಮೀನಿನಲ್ಲಿ ಮಲಗಿದ್ದ ಮೂವರು ಸಾವು

ಜೆಸಿಬಿ ಹರಿದು ಜಮೀನಿನಲ್ಲಿ ಮಲಗಿದ್ದ ಮೂವರು ಸಾವನ್ನಪ್ಪಿರುವ ಘಟನೆ ಜಲ್ಲೆಯ ದೇವದುರ್ಗ ತಾಲೂಕಿನ ನಿಲವಂಜಿ ಗ್ರಾಮದ ಬಳಿ ನಡೆದಿದೆ. ಛತ್ತೀಸ್​ಗಢ ಮೂಲದವರಾದ ವಿಷ್ಣು(26), ಶಿವರಾಮ್(28), ಬಲರಾಮ್(30) ಮೃತ ದುರ್ದೈವಿಗಳು.

Raichur News: ಜೆಸಿಬಿ ಹರಿದು ಜಮೀನಿನಲ್ಲಿ ಮಲಗಿದ್ದ ಮೂವರು ಸಾವು
ಜೆಸಿಬಿ ಹರಿದು ಸಾವು
ಕಿರಣ್ ಹನುಮಂತ್​ ಮಾದಾರ್
|

Updated on: Jun 14, 2023 | 10:12 AM

Share

ರಾಯಚೂರು: ಜೆಸಿಬಿ(JCB) ಹರಿದು ಜಮೀನಿನಲ್ಲಿ ಮಲಗಿದ್ದ ಮೂವರು ಸಾವನ್ನಪ್ಪಿರುವ ಘಟನೆ ಜಲ್ಲೆಯ ದೇವದುರ್ಗ(Devadurga) ತಾಲೂಕಿನ ನಿಲವಂಜಿ ಗ್ರಾಮದ ಬಳಿ ನಡೆದಿದೆ. ಛತ್ತೀಸ್​ಗಢ ಮೂಲದವರಾದ ವಿಷ್ಣು(26), ಶಿವರಾಮ್(28), ಬಲರಾಮ್(30) ಮೃತ ದುರ್ದೈವಿಗಳು. ಜಮೀನಿನಲ್ಲಿ ಬೋರ್‌ವೆಲ್ ಕೊರೆದು ಕಾಲುದಾರಿಯಲ್ಲಿಯೇ ರಾತ್ರಿ ಮೂವರು ಮಲಗಿದ್ದರು. ಈ ವೇಳೆ ಕಾಲುದಾರಿಯಲ್ಲಿ ಬಂದ ಜೆಸಿಬಿ, ಮೂವರು ಮೇಲೂ ಹರಿದು ಸ್ಥಳದಲ್ಲೇ ಧಾರುಣ ಅಂತ್ಯ ಕಂಡಿದ್ದಾರೆ. ಈ ಕುರಿತು ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿ; ಓರ್ವ ಸಾವು

ತುಮಕೂರು: ಜಿಲ್ಲೆಯ ಮಧುಗಿರಿ ತಾಲೂಕಿನ ತೆರಿಯೂರಿನ ಹೊರವಲಯದ ಅಣ್ಣನಹಳ್ಳಿ ಗೇಟ್ ಬಳಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿಯಾಗಿದ್ದು, ಕಾರು ಚಾಲಕ ಭರತ್ ಕುಮಾರ್(24) ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಕಾರಿನಲ್ಲಿದ್ದ ನಾಲ್ವರಿಗೆ ಗಾಯಗಳಾಗಿದ್ದು, ಮಧುಗಿರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಕುರಿತು ಕೊಡಿಗೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ:Vijayapur News: ರಸ್ತೆ ಅಪಘಾತದಲ್ಲಿ ನವದಂಪತಿ ಸಾವು: ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ 

ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು

ತುಮಕೂರು: ಜಿಲ್ಲೆಯ ಕೊರಟಗೆರೆ ತಾಲೂಕಿನ ಅಗ್ರಹಾರದ ಬಳಿ ಲಾರಿ ಹಾಗೂ ಎರ್ಟಿಗಾ ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ‌ ಸಾವನ್ನಪ್ಪಿದ್ದಾರೆ. ಶಿವು ನಾಯಕ್, ಪರಮೇಶ್ ಮೃತ ದುರ್ದೈವಿಗಳು‌. ಇನ್ನು ಐವರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ತಡ ರಾತ್ರಿ ಸುಮಾರು 2 ಗಂಟೆ ಸಮಯದಲ್ಲಿ ಈ ಭೀಕರ ರಸ್ತೆ ಅಪಘಾತ ನಡೆದಿದ್ದು, ಇವರು ಸ್ನೇಹಿತನ ಮದುವೆಗೆ ತೆರಳಿ ವಾಪಸ್ ಕೊರಟಗೆರೆ ಹಾಗೂ ಕೊಡಿಗೇನಹಳ್ಳಿಗೆ ವಾಪಸ್ ಬರುತಿದ್ದ ವೇಳೆ ಈ ಘಟನೆ ನಡೆದಿದೆ. ಸ್ಥಳಕ್ಕೆ ಕೊರಟಗೆರೆ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

ಇನ್ನಷ್ಟು ಅಪಘಾತ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
‘ಚಾನ್ಸ್ ಕೊಡಿ ಅಂತ ಕೇಳಿಕೊಂಡ್ರಲ್ಲ’; ಕೃಷ್ಣ ವಿರುದ್ಧ ಕಿಡಿಕಾರಿದ ಗುರು
‘ಚಾನ್ಸ್ ಕೊಡಿ ಅಂತ ಕೇಳಿಕೊಂಡ್ರಲ್ಲ’; ಕೃಷ್ಣ ವಿರುದ್ಧ ಕಿಡಿಕಾರಿದ ಗುರು
ಆಲಿಕಲ್ಲು ಮಳೆಗೆ ಕಾಶ್ಮೀರದಂತಾದ ಬಿಸಿಲನಾಡು ಕಲಬುರಗಿ
ಆಲಿಕಲ್ಲು ಮಳೆಗೆ ಕಾಶ್ಮೀರದಂತಾದ ಬಿಸಿಲನಾಡು ಕಲಬುರಗಿ
ಅಬ್ಬಬ್ಬಾ ಒಂದೆರಡಲ್ಲ... ಒಟ್ಟಿಗೆ ರಸ್ತೆ ದಾಟಿದ್ದು ಬರೋಬ್ಬರಿ 15 ಆನೆಗಳು!
ಅಬ್ಬಬ್ಬಾ ಒಂದೆರಡಲ್ಲ... ಒಟ್ಟಿಗೆ ರಸ್ತೆ ದಾಟಿದ್ದು ಬರೋಬ್ಬರಿ 15 ಆನೆಗಳು!
ಕ್ಯಾಮರಾ ಹಿಡಿದ ಮಹಿಳೆ ಮೇಲೆ ಕೋಪಗೊಂಡ ದೈವ!
ಕ್ಯಾಮರಾ ಹಿಡಿದ ಮಹಿಳೆ ಮೇಲೆ ಕೋಪಗೊಂಡ ದೈವ!
ಬಾಂಗ್ಲಾದೇಶದಲ್ಲಿ ಬಸ್ ನದಿಗೆ ಬಿದ್ದಿದ್ದು ಹೇಗೆ? ಇಲ್ಲಿದೆ ವಿಡಿಯೋ
ಬಾಂಗ್ಲಾದೇಶದಲ್ಲಿ ಬಸ್ ನದಿಗೆ ಬಿದ್ದಿದ್ದು ಹೇಗೆ? ಇಲ್ಲಿದೆ ವಿಡಿಯೋ
ಮಡಿಕೇರಿಯಲ್ಲಿ ಹುಲಿ ಕಾಟ: ಥರ್ಮಲ್ ಡ್ರೋನ್ ಕಣ್ಗಾವಲು
ಮಡಿಕೇರಿಯಲ್ಲಿ ಹುಲಿ ಕಾಟ: ಥರ್ಮಲ್ ಡ್ರೋನ್ ಕಣ್ಗಾವಲು
ಅಮೆರಿಕದ ಯುದ್ಧವಿಮಾನವನ್ನು ಹೊಡೆದುರುಳಿಸಿದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಅಮೆರಿಕದ ಯುದ್ಧವಿಮಾನವನ್ನು ಹೊಡೆದುರುಳಿಸಿದ ವಿಡಿಯೋ ಬಿಡುಗಡೆ ಮಾಡಿದ ಇರಾನ್
‘ಕೃಷ್ಣ ಮೊದಲು ಹೀಗಿರಲಿಲ್ಲ, ಸಕ್ಸಸ್ ಸಿಕ್ಕಮೇಲೆ ಬದಲಾಗಿದ್ದಾರೆ’; ಗುರು
‘ಕೃಷ್ಣ ಮೊದಲು ಹೀಗಿರಲಿಲ್ಲ, ಸಕ್ಸಸ್ ಸಿಕ್ಕಮೇಲೆ ಬದಲಾಗಿದ್ದಾರೆ’; ಗುರು
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!