AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರು ಜಿಲ್ಲಾ ಪಂಚಾಯತ್ ಸಿಇಒ ನೇಮಕ ಅನರ್ಹ -ಕಲಬುರಗಿ ಕೆಎಟಿ ಪೀಠ ಆದೇಶ

ರಾಯಚೂರು ಜಿಲ್ಲಾ ಪಂಚಾಯತ್ ಸಿಇಒ ಆಗಿ ನೇಮಕಗೊಂಡಿದ್ದ ನೂರ್ ಜಹಾರ್ ಖಾನಂ ಅವರ ನೇಮಕವನ್ನು ಕಲಬುರಗಿಯ ಆಡಳಿತ ನ್ಯಾಯಾಧಿಕರಣ ಪೀಠ ರದ್ದುಗೊಳಿಸಿ ಆದೇಶ ಹೊರಡಿಸಿದೆ.

ರಾಯಚೂರು ಜಿಲ್ಲಾ ಪಂಚಾಯತ್ ಸಿಇಒ ನೇಮಕ ಅನರ್ಹ -ಕಲಬುರಗಿ ಕೆಎಟಿ ಪೀಠ ಆದೇಶ
ಕಲಬುರಗಿ ನ್ಯಾಯಾಲಯImage Credit source: The Hindu
TV9 Web
| Edited By: |

Updated on:Jul 07, 2022 | 9:52 PM

Share

ರಾಯಚೂರು: ರಾಯಚೂರು (Raichur) ಜಿಲ್ಲಾ ಪಂಚಾಯತ್ ಸಿಇಒ (CEO) ಆಗಿ ನೇಮಕಗೊಂಡಿದ್ದ ನೂರ್ ಜಹಾರ್ ಖಾನಂ ಅವರ ನೇಮಕವನ್ನು ಕಲಬುರಗಿಯ (Kalaburagi) ಆಡಳಿತ ನ್ಯಾಯಾಧಿಕರಣ ಪೀಠ ರದ್ದುಗೊಳಿಸಿ ಆದೇಶ ಹೊರಡಿಸಿದೆ. ನೂರ್ ಜಹಾರ್ ಖಾನಂ ಕೆಎಎಸ್‌ (KAS) ಅಧಿಕಾರಿಯಾಗಿದ್ದರೂ ಅವರನ್ನು ರಾಯಚೂರು ಜಿಲ್ಲಾ ಪಂಚಾಯತ್ ಸಿಇಒ ಆಗಿ ನೇಮಕ ಮಾಡಲಾಗಿತ್ತು. ಐಎಎಸ್ (IAS) ಕೇಡರ್​​ನ ಜಿ.ಪಂ ಸಿಇಓ ಹುದ್ದೆಗೆ, ಕೆಎಎಸ್‌ ಅಧಿಕಾರಿಯನ್ನು ನೇಮಕ ಮಾಡಿರುವುದನ್ನು ಪ್ರಶ್ನಿಸಿ  ಜಿ.ಪಂ ಉಪ ಕಾರ್ಯದರ್ಶಿ ಶಶಿಕಾಂತ್ ಶಿವಪುರೆ ಕೆಎಟಿ ಮೊರೆ ಹೋಗಿದ್ದರು.

ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಂಡ ಕಲಬುರಗಿ ಕೆಎಟಿ ಪೀಠ, ಸಿಇಓ ಹುದ್ದೆಯಲ್ಲಿ ಇವರು ಮುಂದುವರೆಯಲು ಅರ್ಹತೆ ಹೊಂದಿಲ್ಲ. ನೇಮಕ ಕಾನೂನು ಬಾಹಿರವಾಗಿದೆ. ಈ ಸಂಬಂಧ ಸೂಕ್ತ ಕ್ರಮ ಕೈಗೊಳ್ಳುವಂತೆ ಕಲಬುರಗಿಯ ಕೆಎಟಿ ಪೀಠ ಆದೇಶ ಹೊರಡಿಸಿದೆ.

ನಿವೃತ್ತಿ ವಯಸ್ಸು 60ಕ್ಕೇರಿಸುವ ಸರ್ಕಾರದ ಆದೇಶ ಎತ್ತಿ ಹಿಡಿದ ಕರ್ನಾಟಕ ಹೈಕೋರ್ಟ್

ಧಾರವಾಡ: ಖಾಸಗಿ ಕೈಗಾರಿಕೆ ವಲಯದಲ್ಲಿರುವ ನೌಕರರ ವಯಸ್ಸನ್ನು 58ರಿಂದ 60ಕಕ್ಕೆ ಏರಿಸುವ ಸರ್ಕಾರದ ಆದೇಶವನ್ನು ಕರ್ನಾಟಕ ಹೈಕೋರ್ಟ್ ಧಾರವಾಡ ಪೀಠ ಎತ್ತಿ ಹಿಡಿದಿದೆ.

ಮಾರ್ಚ್ 28, 2017ರ ಗಜೆಟ್ ಮಾಡಲಾದ ಕರ್ನಾಟಕ ಕೈಗಾರಿಕಾ ಉದ್ಯೋಗ ಸ್ಥಾಯಿ ಆದೇಶಗಳ (ತಿದ್ದುಪಡಿ) ನಿಯಮಗಳ ಮಾದರಿ ಸ್ಥಾಯಿ ಆದೇಶಗಳು 2017ರ ಪ್ರಕಾರ ಸರ್ಕಾರ ನಿವೃತ್ತಿ ವಯಸ್ಸು ಏರಿಕೆ ಮಾಡಿದೆ. ಸರ್ಕಾರದ ಆದೇಶ ಪ್ರಶ್ನಿಸಿ ಗ್ರಾಸಿಂ ಇಂಡಸ್ಟ್ರೀಸ್ ಲಿಮಿಟೆಡ್​​ನ ಹರಿಹರ್ ಘಟಕ ಸಲ್ಲಿಸಿದ ಅರ್ಜಿಯನ್ನು ಮಂಗಳವಾರ ಆಲಿಸಿದ ನ್ಯಾಯಪೀಠವು ಪ್ರಮಾಣೀಕೃತ ಆದೇಶಗಳ ಕಲಂ 29ರ ಪ್ರಕಾರ ಕಂಪನಿಯ ನೌಕರರು 60 ವರುಷದವರೆಗೆ ಮುಂದುವರಿಯಬಹುದಾಗಿದೆ  ಎಂದು  ಹೇಳಿದೆ.

ಈ ಹಿಂದೆಯೂ ಗ್ರಾಸಿಂ ಇಂಡಸ್ಟ್ರೀಸ್ ಲಿಮಿಟೆಡ್ ಸಲ್ಲಿಸಿದ ಅರ್ಜಿಯನ್ನು ಏಕ ಸದಸ್ಯರ ಪೀಠ ವಜಾ ಮಾಡಿತ್ತು. ಇದನ್ನು ಪ್ರಶ್ನಿಸಿ ಗ್ರಾಸಿಂ ಇಂಡಸ್ಟ್ರೀಸ್ ವಿಭಾಗೀಯ ಪೀಠದ ಮೊರೆ ಹೋಗಿದೆ. ವೈದ್ಯಕೀಯ ಪರೀಕ್ಷೆಗೊಳಡಿಸಿದಾಗ ಅವರು ಮರುಉದ್ಯೋಗ ಮಾಡಲು ಅರ್ಹರು ಅಲ್ಲ ಎಂದು ತೋರಿದಲ್ಲಿ ಅರ್ಜಿಯನ್ನು ವಜಾಗೊಳಿಸಿದ ದಿನಾಂಕವಾದ 2021 ಸೆಪ್ಟೆಂಬರ್ 17ರಂದು ಅಥವಾ ನಂತರ ನಿವೃತ್ತರಾದ ನೌಕರರಿಗೆ ಪೂರ್ತಿ ಸಂಬಳ ಮರುಪಾವತಿ ಮಾಡುವಂತೆ ವಿಭಾಗೀಯ ಪೀಠ ಮೇಲ್ಮನವಿದಾರರರಿಗೆ ನಿರ್ದೇಶಿಸಿದೆ.

Published On - 8:37 pm, Thu, 7 July 22

ಬಿಗ್​​ಬಾಸ್ ಕನ್ನಡ: ಗಿಲ್ಲಿ ಪರವಾಗಿ ಮತ ಕೇಳಿದ ಮಳವಳ್ಳಿ ಶಾಸಕ
ಬಿಗ್​​ಬಾಸ್ ಕನ್ನಡ: ಗಿಲ್ಲಿ ಪರವಾಗಿ ಮತ ಕೇಳಿದ ಮಳವಳ್ಳಿ ಶಾಸಕ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ