AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ಜಮೀನು ಮಾರಿ ಹಣ ನೀಡ್ತೇನೆ, ರಾಯಚೂರು ಅಥವಾ ಸಿಂಧನೂರು ಕ್ಷೇತ್ರದಿಂದ ಸ್ಪರ್ಧಿಸುವಂತೆ ಸಿದ್ದರಾಮಯ್ಯಗೆ ಅಭಿಮಾನಿ ಆಹ್ವಾನ

ರಾಯಚೂರು ಜಿಲ್ಲೆಯಿಂದ ಸ್ಪರ್ಧಿಸುವಂತೆ ಸಿದ್ದರಾಮಯ್ಯ ಅವರನ್ನು ಅಭಿಮಾನಿಯೊಬ್ಬರು ಒತ್ತಾಯಿಸಿದ್ದು, ಸ್ಪರ್ಧೆ ಮಾಡಿದ್ರೆ ಎರಡು ಎಕರೆ ಜಮೀನು ಮಾರಿ ಹಣ ಕೊಡುವ ಭರವಸೆ ನೀಡಿದ್ದಾರೆ.

ನನ್ನ ಜಮೀನು ಮಾರಿ ಹಣ ನೀಡ್ತೇನೆ, ರಾಯಚೂರು ಅಥವಾ ಸಿಂಧನೂರು ಕ್ಷೇತ್ರದಿಂದ ಸ್ಪರ್ಧಿಸುವಂತೆ ಸಿದ್ದರಾಮಯ್ಯಗೆ ಅಭಿಮಾನಿ ಆಹ್ವಾನ
TV9 Web
| Edited By: |

Updated on: Jan 31, 2023 | 10:20 AM

Share

ರಾಯಚೂರು: ಮಾಜಿ ಸಿಎಂ ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧಿಸುವುದಾಗಿ ಘೋಷಿಸಿದ್ದರೂ ಇನ್ನೂ ಹಲವು ಗೊಂದಲಗಳಿವೆ. ಸದ್ಯ ಸಿದ್ದರಾಮಯ್ಯ ಅಭಿಮಾನಿಗಳು ಮಾತ್ರ ತಮ್ಮ ಆಸ್ತಿ ಮಾರಾಲೂ ಸಿದ್ದ ದಯಮಾಡಿ ಇಲ್ಲಿಂದ ಸ್ಪರ್ಧಿಸಿ ಎಂದು ಮನವಿ ಮಾಡುತ್ತಿದ್ದಾರೆ. ರಾಯಚೂರಿನಲ್ಲಿ ಸಿದ್ದರಾಮಯ್ಯ ಸ್ಪರ್ಧೆಗೆ ಅಭಿಮಾನಿಯೊಬ್ಬರು ಆಫರ್​ ನೀಡಿದ್ದಾರೆ.

ಯಾದಗಿರಿ ಕ್ಷೇತೃದಿಂದ ಸ್ಫರ್ಧೆ ಮಾಡಿದರೆ 1 ಕೋಟಿ ರೂಪಾಯಿ ಬಹುಮಾನ ನೀಡುವುದಾಗಿ ಮಾಜಿ ತಾಪಂ ಸದಸ್ಯ ಚಂದ್ರಯ್ಯಾ ನಾಗರಾಳ ಎಂಬುವರು ಈ ಹಿಂದೆ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್​ ಆಫರ್​ ನೀಡಿದ್ದರು. ಇದೀಗ ಸಿದ್ದರಾಮಯ್ಯಗೆ ಮತ್ತೊಂದು ಬಿಗ್​ ಆಫರ್ ಬಂದಿದೆ. ರಾಯಚೂರು ಜಿಲ್ಲೆಯಿಂದ ಸ್ಪರ್ಧಿಸುವಂತೆ ಸಿದ್ದರಾಮಯ್ಯ ಅವರನ್ನು ಅಭಿಮಾನಿಯೊಬ್ಬರು ಒತ್ತಾಯಿಸಿದ್ದು, ಸ್ಪರ್ಧೆ ಮಾಡಿದ್ರೆ ಎರಡು ಎಕರೆ ಜಮೀನು ಮಾರಿ ಹಣ ಕೊಡುವ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: Karnataka News Live: ಸಿಡಿ ಷಡ್ಯಂತ್ರ; ಡಿಕೆ ಶಿವಕುಮಾರ್​, ರಮೇಶ ಜಾರಕಿಹೋಳಿ ಫೈಟ್ ಮಧ್ಯೆ ಇಂದಿನ ​​ಅಪ್ಡೇಟ್ಸ್​

ರಾಯಚೂರು ನಗರ ಅಥವಾ ಸಿಂಧನೂರು ಕ್ಷೇತ್ರದಿಂದ ಸ್ಪರ್ಧಿಸುವಂತೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಚಿಕ್ಕ ಹೆಸರೂರು ಗ್ರಾಮದ ಅಭಿಮಾನಿ ಶರಣು ಕಡ್ಡೋಣಿ ಎಂಬುವವರು ಆಫರ್ ನೀಡಿದ್ದಾರೆ. ಸಿದ್ದರಾಮಯ್ಯ ಸ್ಪರ್ಧಿಸಿದ್ರೆ 2 ಎಕರೆ ಜಮೀನು ಮಾರಿ ಹಣ ನೀಡುತ್ತೇನೆ ಎಂದಿದ್ದಾರೆ.

ರಾಯಚೂರು ಜಿಲ್ಲೆಯ ಅಭಿವೃದ್ಧಿಗೆ ಸಿದ್ದರಾಮಯ್ಯ ಬರಬೇಕು. ಸಿಂಧನೂರು ಅಥವಾ ರಾಯಚೂರು ಕ್ಷೇತ್ರದಿಂದ ಸ್ಪರ್ಧೆ ಮಾಡಲಿ. 50 ಸಾವಿರ ಮತಗಳ ಅಂತರದಿಂದ ಸಿದ್ದರಾಮಯ್ಯ ಗೆಲ್ಲಲಿದ್ದಾರೆ ಎಂದು ಫೇಸ್​ಬುಕ್​ನಲ್ಲಿ ಸಿದ್ದರಾಮಯ್ಯ ಅಭಿಮಾನಿ ಶರಣು ಪೋಸ್ಟ್​ ಮಾಡಿದ್ದಾರೆ.

ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?