AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃಷ್ಣಾ ನದಿಯಲ್ಲಿ ನಿತ್ಯವೂ ಬೃಹತಾಕಾರದ‌ ಮೊಸಳೆಗಳು ಪ್ರತ್ತಕ್ಷ, ಹೆಚ್ಚಾಯ್ತು ಜನರಲ್ಲಿ ಆತಂಕ

ರಾಯಚೂರ ತಾಲೂಕಿನ ನಾರದಗಡ್ಡೆ ಬಳಿ ಬೃಹತಾಕಾರದ‌ ಮೊಸಳೆ ಪ್ರತ್ಯಕ್ಷವಾಗಿದೆ. ನಾರದಗಡ್ಡೆಗೆ ತೆಪ್ಪದಲ್ಲಿ ತೆರಳ್ತಿದ್ದ ಜನ ಮೊಸಳೆಯನ್ನು ನೋಡಿ ಆತಂಕಕ್ಕೆ ಒಳಗಾಗಿದ್ದಾರೆ. ಇನ್ನು ನದಿ ತೀರದ ಗ್ರಾಮಸ್ಥರಲ್ಲೂ ಕೂಡ ಆತಂಕ ಮನೆ ಮಾಡಿದೆ.

ಕೃಷ್ಣಾ ನದಿಯಲ್ಲಿ ನಿತ್ಯವೂ ಬೃಹತಾಕಾರದ‌ ಮೊಸಳೆಗಳು ಪ್ರತ್ತಕ್ಷ, ಹೆಚ್ಚಾಯ್ತು ಜನರಲ್ಲಿ ಆತಂಕ
ನಾರದಗಡ್ಡೆ ಬಳಿ ಬೃಹತಾಕಾರದ‌ ಮೊಸಳೆ ಪ್ರತ್ಯಕ್ಷ
TV9 Web
| Edited By: |

Updated on: Sep 15, 2021 | 10:51 AM

Share

ರಾಯಚೂರು: ಕೃಷ್ಣಾ ನದಿಯಲ್ಲಿ ನೀರಿನ ಹರಿವಿನ ಪ್ರಮಾಣ ಹೆಚ್ಚಳವಾಗಿದೆ. ಇದರ ನಡುವೆ ಜನರಿಗೆ ಮತ್ತಷ್ಟು ಆತಂಕ ಹೆಚ್ಚಿಸುವಂತೆ ಕೃಷ್ಣನದಿಯಲ್ಲಿ ನಿತ್ಯವೂ ಮೊಸಳೆಗಳ ಪ್ರತ್ತಕ್ಷವಾಗುತ್ತಿವೆ. ಬೃಹತಾಕಾರದ‌ ಮೊಸಳೆಗಳನ್ನು ನೋಡಿ ಜನರು ಬೆಚ್ಚಿಬೀಳುತ್ತಿದ್ದಾರೆ.

ರಾಯಚೂರ ತಾಲೂಕಿನ ನಾರದಗಡ್ಡೆ ಬಳಿ ಬೃಹತಾಕಾರದ‌ ಮೊಸಳೆ ಪ್ರತ್ಯಕ್ಷವಾಗಿದೆ. ನಾರದಗಡ್ಡೆಗೆ ತೆಪ್ಪದಲ್ಲಿ ತೆರಳ್ತಿದ್ದ ಜನ ಮೊಸಳೆಯನ್ನು ನೋಡಿ ಆತಂಕಕ್ಕೆ ಒಳಗಾಗಿದ್ದಾರೆ. ಇನ್ನು ನದಿ ತೀರದ ಗ್ರಾಮಸ್ಥರಲ್ಲೂ ಕೂಡ ಆತಂಕ ಮನೆ ಮಾಡಿದೆ. ನಿತ್ಯವೂ ನದಿಯಲ್ಲಿ ಬೃಹದಾಕಾರದ‌ ಮೊಸಳೆಗಳು ತೇಲಿ ಬರುತ್ತಿರುವುದನ್ನು ನೋಡಿ ಜನರು ತಮ್ಮ ಜಾನುವಾರುಗಳನ್ನು ನದಿ ನೀರು ಕುಡಿಯಲು ಸಹ ಬಿಡದಂತ ಪರಿಸ್ಥಿತಿ ಎದುರಾಗಿದೆ. ನೀರು ಕುಡಿಯಲು ನದಿಗೆ ಬರುವ ಜಾನುವಾರುಗಳನ್ನ ಮೊಸಳೆಗಳು ಎಳೆದೊಯ್ಯುತ್ತಿವೆ. ಹೀಗಾಗಿ ಗ್ರಾಮಸ್ಥರು ಆತಂಕ ವ್ಯಕ್ತಪಡಿಸುತ್ತ ಆದಷ್ಟು ಬೇಗ ಈ ಬಗ್ಗೆ ಸರ್ಕಾರ ಏನಾದರೂ ಪರಿಹಾರ ಕೈಗೊಳ್ಳಬೇಕೆಂದು ಮನವಿ ಮಾಡಿಕೊಂಡಿದ್ದಾರೆ.

ಇನ್ನು ಮತ್ತೊಂದೆಡೆ ಮಹಾರಾಷ್ಟ್ರದಲ್ಲಿ ಹೆಚ್ಚಿದ ಮಳೆಯಿಂದ ಕೃಷ್ಣಾ ನದಿಯಲ್ಲಿ ನೀರಿನ ಹರಿವು ಪ್ರಮಾಣ ಹೆಚ್ಚಳವಾಗಿದೆ. ಹೀಗಾಗಿ ಹಿಪ್ಪರಗಿ ಬ್ಯಾರೇಜ್‌ ಒಳ ಹರಿವು 1 ಲಕ್ಷ 4 ಸಾವಿರ ಕ್ಯೂಸೆಕ್ ಹಾಗೂ ಹೊರಹರಿವು 1 ಲಕ್ಷ ,3 ಸಾವಿರ ಕ್ಯೂಸೆಕ್ ಆಗಿದೆ.

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ಹಾಗೂ ಜಮಖಂಡಿ ತಾಲೂಕಿನ ಕೃಷ್ಣಾ ನದಿ ಪಾತ್ರದ ಜನರಿಗೆ ಸುರಕ್ಷಿತವಾಗಿರಲು ಜನರಿಗೆ ಸೂಚನೆ ನೀಡಲಾಗಿದೆ. ನದಿ ಅಕ್ಕ ಪಕ್ಕದ ಬೋರ್ ವೆಲ್, ಪಂಪ್ ಸೆಟ್ಗಳನ್ನು ಸುರಕ್ಷಿತವಾಗಿಟ್ಟುಕೊಳ್ಳಲು ಸೂಚಿಸಲಾಗಿದೆ. ಸೆಪ್ಟಂಬರ್ ಅಂತ್ಯದಲ್ಲಿ ಪ್ರವಾಹಕ್ಕೆ ಸಿಲುಕಿದ್ದ ಕೃಷ್ಣಾ ತೀರದಲ್ಲಿ ಈಗ ಮತ್ತೆ ನದಿ ಉಕ್ಕುತ್ತಿರುವುದು ಆತಂಕ ಮೂಡಿಸಿದೆ.

ಇದನ್ನೂ ಓದಿ: ಬೆಳಗಾವಿಯಲ್ಲಿ ಶುರುವಾಯ್ತು ಪ್ರವಾಹ ಭೀತಿ! ಎಚ್ಚರಿಕೆಯಿಂದಿರಲು ಜಿಲ್ಲಾಡಳಿತ ಸೂಚನೆ

Follow Us
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್