AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃಷ್ಣಾ ನದಿಯಲ್ಲಿ ನಿತ್ಯವೂ ಬೃಹತಾಕಾರದ‌ ಮೊಸಳೆಗಳು ಪ್ರತ್ತಕ್ಷ, ಹೆಚ್ಚಾಯ್ತು ಜನರಲ್ಲಿ ಆತಂಕ

ರಾಯಚೂರ ತಾಲೂಕಿನ ನಾರದಗಡ್ಡೆ ಬಳಿ ಬೃಹತಾಕಾರದ‌ ಮೊಸಳೆ ಪ್ರತ್ಯಕ್ಷವಾಗಿದೆ. ನಾರದಗಡ್ಡೆಗೆ ತೆಪ್ಪದಲ್ಲಿ ತೆರಳ್ತಿದ್ದ ಜನ ಮೊಸಳೆಯನ್ನು ನೋಡಿ ಆತಂಕಕ್ಕೆ ಒಳಗಾಗಿದ್ದಾರೆ. ಇನ್ನು ನದಿ ತೀರದ ಗ್ರಾಮಸ್ಥರಲ್ಲೂ ಕೂಡ ಆತಂಕ ಮನೆ ಮಾಡಿದೆ.

ಕೃಷ್ಣಾ ನದಿಯಲ್ಲಿ ನಿತ್ಯವೂ ಬೃಹತಾಕಾರದ‌ ಮೊಸಳೆಗಳು ಪ್ರತ್ತಕ್ಷ, ಹೆಚ್ಚಾಯ್ತು ಜನರಲ್ಲಿ ಆತಂಕ
ನಾರದಗಡ್ಡೆ ಬಳಿ ಬೃಹತಾಕಾರದ‌ ಮೊಸಳೆ ಪ್ರತ್ಯಕ್ಷ
TV9 Web
| Updated By: ಆಯೇಷಾ ಬಾನು|

Updated on: Sep 15, 2021 | 10:51 AM

Share

ರಾಯಚೂರು: ಕೃಷ್ಣಾ ನದಿಯಲ್ಲಿ ನೀರಿನ ಹರಿವಿನ ಪ್ರಮಾಣ ಹೆಚ್ಚಳವಾಗಿದೆ. ಇದರ ನಡುವೆ ಜನರಿಗೆ ಮತ್ತಷ್ಟು ಆತಂಕ ಹೆಚ್ಚಿಸುವಂತೆ ಕೃಷ್ಣನದಿಯಲ್ಲಿ ನಿತ್ಯವೂ ಮೊಸಳೆಗಳ ಪ್ರತ್ತಕ್ಷವಾಗುತ್ತಿವೆ. ಬೃಹತಾಕಾರದ‌ ಮೊಸಳೆಗಳನ್ನು ನೋಡಿ ಜನರು ಬೆಚ್ಚಿಬೀಳುತ್ತಿದ್ದಾರೆ.

ರಾಯಚೂರ ತಾಲೂಕಿನ ನಾರದಗಡ್ಡೆ ಬಳಿ ಬೃಹತಾಕಾರದ‌ ಮೊಸಳೆ ಪ್ರತ್ಯಕ್ಷವಾಗಿದೆ. ನಾರದಗಡ್ಡೆಗೆ ತೆಪ್ಪದಲ್ಲಿ ತೆರಳ್ತಿದ್ದ ಜನ ಮೊಸಳೆಯನ್ನು ನೋಡಿ ಆತಂಕಕ್ಕೆ ಒಳಗಾಗಿದ್ದಾರೆ. ಇನ್ನು ನದಿ ತೀರದ ಗ್ರಾಮಸ್ಥರಲ್ಲೂ ಕೂಡ ಆತಂಕ ಮನೆ ಮಾಡಿದೆ. ನಿತ್ಯವೂ ನದಿಯಲ್ಲಿ ಬೃಹದಾಕಾರದ‌ ಮೊಸಳೆಗಳು ತೇಲಿ ಬರುತ್ತಿರುವುದನ್ನು ನೋಡಿ ಜನರು ತಮ್ಮ ಜಾನುವಾರುಗಳನ್ನು ನದಿ ನೀರು ಕುಡಿಯಲು ಸಹ ಬಿಡದಂತ ಪರಿಸ್ಥಿತಿ ಎದುರಾಗಿದೆ. ನೀರು ಕುಡಿಯಲು ನದಿಗೆ ಬರುವ ಜಾನುವಾರುಗಳನ್ನ ಮೊಸಳೆಗಳು ಎಳೆದೊಯ್ಯುತ್ತಿವೆ. ಹೀಗಾಗಿ ಗ್ರಾಮಸ್ಥರು ಆತಂಕ ವ್ಯಕ್ತಪಡಿಸುತ್ತ ಆದಷ್ಟು ಬೇಗ ಈ ಬಗ್ಗೆ ಸರ್ಕಾರ ಏನಾದರೂ ಪರಿಹಾರ ಕೈಗೊಳ್ಳಬೇಕೆಂದು ಮನವಿ ಮಾಡಿಕೊಂಡಿದ್ದಾರೆ.

ಇನ್ನು ಮತ್ತೊಂದೆಡೆ ಮಹಾರಾಷ್ಟ್ರದಲ್ಲಿ ಹೆಚ್ಚಿದ ಮಳೆಯಿಂದ ಕೃಷ್ಣಾ ನದಿಯಲ್ಲಿ ನೀರಿನ ಹರಿವು ಪ್ರಮಾಣ ಹೆಚ್ಚಳವಾಗಿದೆ. ಹೀಗಾಗಿ ಹಿಪ್ಪರಗಿ ಬ್ಯಾರೇಜ್‌ ಒಳ ಹರಿವು 1 ಲಕ್ಷ 4 ಸಾವಿರ ಕ್ಯೂಸೆಕ್ ಹಾಗೂ ಹೊರಹರಿವು 1 ಲಕ್ಷ ,3 ಸಾವಿರ ಕ್ಯೂಸೆಕ್ ಆಗಿದೆ.

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ಹಾಗೂ ಜಮಖಂಡಿ ತಾಲೂಕಿನ ಕೃಷ್ಣಾ ನದಿ ಪಾತ್ರದ ಜನರಿಗೆ ಸುರಕ್ಷಿತವಾಗಿರಲು ಜನರಿಗೆ ಸೂಚನೆ ನೀಡಲಾಗಿದೆ. ನದಿ ಅಕ್ಕ ಪಕ್ಕದ ಬೋರ್ ವೆಲ್, ಪಂಪ್ ಸೆಟ್ಗಳನ್ನು ಸುರಕ್ಷಿತವಾಗಿಟ್ಟುಕೊಳ್ಳಲು ಸೂಚಿಸಲಾಗಿದೆ. ಸೆಪ್ಟಂಬರ್ ಅಂತ್ಯದಲ್ಲಿ ಪ್ರವಾಹಕ್ಕೆ ಸಿಲುಕಿದ್ದ ಕೃಷ್ಣಾ ತೀರದಲ್ಲಿ ಈಗ ಮತ್ತೆ ನದಿ ಉಕ್ಕುತ್ತಿರುವುದು ಆತಂಕ ಮೂಡಿಸಿದೆ.

ಇದನ್ನೂ ಓದಿ: ಬೆಳಗಾವಿಯಲ್ಲಿ ಶುರುವಾಯ್ತು ಪ್ರವಾಹ ಭೀತಿ! ಎಚ್ಚರಿಕೆಯಿಂದಿರಲು ಜಿಲ್ಲಾಡಳಿತ ಸೂಚನೆ

ಪತ್ನಿಯ ಹುಡುಕುತ್ತಾ ಕಾರಿನಲ್ಲಿ ರೈಲ್ವೆ ಪ್ಲಾಟ್​ಫಾರ್ಮ್​ಗೆ ಬಂದ ಪತಿ
ಪತ್ನಿಯ ಹುಡುಕುತ್ತಾ ಕಾರಿನಲ್ಲಿ ರೈಲ್ವೆ ಪ್ಲಾಟ್​ಫಾರ್ಮ್​ಗೆ ಬಂದ ಪತಿ
ಮಗಳೊಟ್ಟಿಗೆ ಕಾಪು ಮಾರಿಗುಡಿ ದೇವಾಲಯಕ್ಕೆ ಅಶ್ವಿನಿ ಪುನೀತ್​​ ರಾಜ್​​ಕುಮಾರ್
ಮಗಳೊಟ್ಟಿಗೆ ಕಾಪು ಮಾರಿಗುಡಿ ದೇವಾಲಯಕ್ಕೆ ಅಶ್ವಿನಿ ಪುನೀತ್​​ ರಾಜ್​​ಕುಮಾರ್
ಸಿಎಂ ಜೊತೆಗಿದ್ದ ಶಾಸಕರೆಲ್ಲ ಸ್ವಂತ ಖರ್ಚಿನಲ್ಲಿ ದೆಹಲಿ ಹೋಗಿದ್ದರೇ?
ಸಿಎಂ ಜೊತೆಗಿದ್ದ ಶಾಸಕರೆಲ್ಲ ಸ್ವಂತ ಖರ್ಚಿನಲ್ಲಿ ದೆಹಲಿ ಹೋಗಿದ್ದರೇ?
ಕೆಲದಿನಗಳ ಮಟ್ಟಿಗೆ ಮುಂದೂಡಲ್ಪಟ್ಟ ಮುಖ್ಯಮಂತ್ರಿ ಗಾದಿಯ ಸಂಘರ್ಷ
ಕೆಲದಿನಗಳ ಮಟ್ಟಿಗೆ ಮುಂದೂಡಲ್ಪಟ್ಟ ಮುಖ್ಯಮಂತ್ರಿ ಗಾದಿಯ ಸಂಘರ್ಷ
ಯಶ್ ವಿಚಾರದಲ್ಲಿ ಅಷ್ಟು ಕಟುತ್ವ ಏಕೆ? ಉತ್ತರಿಸಿದ ತಾಯಿ ಪುಷ್ಪಾ
ಯಶ್ ವಿಚಾರದಲ್ಲಿ ಅಷ್ಟು ಕಟುತ್ವ ಏಕೆ? ಉತ್ತರಿಸಿದ ತಾಯಿ ಪುಷ್ಪಾ
ಧಾರ್ಮಿಕ ಸ್ಥಳಕ್ಕೆ ಬಂದಾಗ ರಾಜಕೀಯ ಮಾತಾಡಲಾರೆ: ಪರಮೇಶ್ವರ್
ಧಾರ್ಮಿಕ ಸ್ಥಳಕ್ಕೆ ಬಂದಾಗ ರಾಜಕೀಯ ಮಾತಾಡಲಾರೆ: ಪರಮೇಶ್ವರ್
ದಿನಸಿ ಸಾಲ ವಾಪಾಸ್ ಕೇಳಿದ್ದಕ್ಕೆ ಅಂಗಡಿಗೇ ಬೆಂಕಿ ಹಚ್ಚಲು ಮುಂದಾದ ವ್ಯಕ್ತಿ!
ದಿನಸಿ ಸಾಲ ವಾಪಾಸ್ ಕೇಳಿದ್ದಕ್ಕೆ ಅಂಗಡಿಗೇ ಬೆಂಕಿ ಹಚ್ಚಲು ಮುಂದಾದ ವ್ಯಕ್ತಿ!
ಸಿದ್ದರಾಮಯ್ಯ ಮತ್ತು ಶಿವಕುಮಾರ್ ನಡುವೆ ಸಂಘರ್ಷ ಶುರುವಾಗಿದೆ: ಅಶೋಕ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ನಡುವೆ ಸಂಘರ್ಷ ಶುರುವಾಗಿದೆ: ಅಶೋಕ
ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಅಸಹಾಯಕ ತಂದೆ
ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಅಸಹಾಯಕ ತಂದೆ
ಗಜಲಕ್ಷ್ಮಿ, ಮಹಾಲಕ್ಷ್ಮಿ ಅಲಂಕಾರದಲ್ಲಿ ಕಂಗೊಳಿಸುತ್ತಿರುವ ಚಾಮುಂಡೇಶ್ವರಿ
ಗಜಲಕ್ಷ್ಮಿ, ಮಹಾಲಕ್ಷ್ಮಿ ಅಲಂಕಾರದಲ್ಲಿ ಕಂಗೊಳಿಸುತ್ತಿರುವ ಚಾಮುಂಡೇಶ್ವರಿ