AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃಷ್ಣಾ ನದಿಯಲ್ಲಿ ನಿತ್ಯವೂ ಬೃಹತಾಕಾರದ‌ ಮೊಸಳೆಗಳು ಪ್ರತ್ತಕ್ಷ, ಹೆಚ್ಚಾಯ್ತು ಜನರಲ್ಲಿ ಆತಂಕ

ರಾಯಚೂರ ತಾಲೂಕಿನ ನಾರದಗಡ್ಡೆ ಬಳಿ ಬೃಹತಾಕಾರದ‌ ಮೊಸಳೆ ಪ್ರತ್ಯಕ್ಷವಾಗಿದೆ. ನಾರದಗಡ್ಡೆಗೆ ತೆಪ್ಪದಲ್ಲಿ ತೆರಳ್ತಿದ್ದ ಜನ ಮೊಸಳೆಯನ್ನು ನೋಡಿ ಆತಂಕಕ್ಕೆ ಒಳಗಾಗಿದ್ದಾರೆ. ಇನ್ನು ನದಿ ತೀರದ ಗ್ರಾಮಸ್ಥರಲ್ಲೂ ಕೂಡ ಆತಂಕ ಮನೆ ಮಾಡಿದೆ.

ಕೃಷ್ಣಾ ನದಿಯಲ್ಲಿ ನಿತ್ಯವೂ ಬೃಹತಾಕಾರದ‌ ಮೊಸಳೆಗಳು ಪ್ರತ್ತಕ್ಷ, ಹೆಚ್ಚಾಯ್ತು ಜನರಲ್ಲಿ ಆತಂಕ
ನಾರದಗಡ್ಡೆ ಬಳಿ ಬೃಹತಾಕಾರದ‌ ಮೊಸಳೆ ಪ್ರತ್ಯಕ್ಷ
TV9 Web
| Edited By: ಆಯೇಷಾ ಬಾನು|

Updated on: Sep 15, 2021 | 10:51 AM

Share

ರಾಯಚೂರು: ಕೃಷ್ಣಾ ನದಿಯಲ್ಲಿ ನೀರಿನ ಹರಿವಿನ ಪ್ರಮಾಣ ಹೆಚ್ಚಳವಾಗಿದೆ. ಇದರ ನಡುವೆ ಜನರಿಗೆ ಮತ್ತಷ್ಟು ಆತಂಕ ಹೆಚ್ಚಿಸುವಂತೆ ಕೃಷ್ಣನದಿಯಲ್ಲಿ ನಿತ್ಯವೂ ಮೊಸಳೆಗಳ ಪ್ರತ್ತಕ್ಷವಾಗುತ್ತಿವೆ. ಬೃಹತಾಕಾರದ‌ ಮೊಸಳೆಗಳನ್ನು ನೋಡಿ ಜನರು ಬೆಚ್ಚಿಬೀಳುತ್ತಿದ್ದಾರೆ.

ರಾಯಚೂರ ತಾಲೂಕಿನ ನಾರದಗಡ್ಡೆ ಬಳಿ ಬೃಹತಾಕಾರದ‌ ಮೊಸಳೆ ಪ್ರತ್ಯಕ್ಷವಾಗಿದೆ. ನಾರದಗಡ್ಡೆಗೆ ತೆಪ್ಪದಲ್ಲಿ ತೆರಳ್ತಿದ್ದ ಜನ ಮೊಸಳೆಯನ್ನು ನೋಡಿ ಆತಂಕಕ್ಕೆ ಒಳಗಾಗಿದ್ದಾರೆ. ಇನ್ನು ನದಿ ತೀರದ ಗ್ರಾಮಸ್ಥರಲ್ಲೂ ಕೂಡ ಆತಂಕ ಮನೆ ಮಾಡಿದೆ. ನಿತ್ಯವೂ ನದಿಯಲ್ಲಿ ಬೃಹದಾಕಾರದ‌ ಮೊಸಳೆಗಳು ತೇಲಿ ಬರುತ್ತಿರುವುದನ್ನು ನೋಡಿ ಜನರು ತಮ್ಮ ಜಾನುವಾರುಗಳನ್ನು ನದಿ ನೀರು ಕುಡಿಯಲು ಸಹ ಬಿಡದಂತ ಪರಿಸ್ಥಿತಿ ಎದುರಾಗಿದೆ. ನೀರು ಕುಡಿಯಲು ನದಿಗೆ ಬರುವ ಜಾನುವಾರುಗಳನ್ನ ಮೊಸಳೆಗಳು ಎಳೆದೊಯ್ಯುತ್ತಿವೆ. ಹೀಗಾಗಿ ಗ್ರಾಮಸ್ಥರು ಆತಂಕ ವ್ಯಕ್ತಪಡಿಸುತ್ತ ಆದಷ್ಟು ಬೇಗ ಈ ಬಗ್ಗೆ ಸರ್ಕಾರ ಏನಾದರೂ ಪರಿಹಾರ ಕೈಗೊಳ್ಳಬೇಕೆಂದು ಮನವಿ ಮಾಡಿಕೊಂಡಿದ್ದಾರೆ.

ಇನ್ನು ಮತ್ತೊಂದೆಡೆ ಮಹಾರಾಷ್ಟ್ರದಲ್ಲಿ ಹೆಚ್ಚಿದ ಮಳೆಯಿಂದ ಕೃಷ್ಣಾ ನದಿಯಲ್ಲಿ ನೀರಿನ ಹರಿವು ಪ್ರಮಾಣ ಹೆಚ್ಚಳವಾಗಿದೆ. ಹೀಗಾಗಿ ಹಿಪ್ಪರಗಿ ಬ್ಯಾರೇಜ್‌ ಒಳ ಹರಿವು 1 ಲಕ್ಷ 4 ಸಾವಿರ ಕ್ಯೂಸೆಕ್ ಹಾಗೂ ಹೊರಹರಿವು 1 ಲಕ್ಷ ,3 ಸಾವಿರ ಕ್ಯೂಸೆಕ್ ಆಗಿದೆ.

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ಹಾಗೂ ಜಮಖಂಡಿ ತಾಲೂಕಿನ ಕೃಷ್ಣಾ ನದಿ ಪಾತ್ರದ ಜನರಿಗೆ ಸುರಕ್ಷಿತವಾಗಿರಲು ಜನರಿಗೆ ಸೂಚನೆ ನೀಡಲಾಗಿದೆ. ನದಿ ಅಕ್ಕ ಪಕ್ಕದ ಬೋರ್ ವೆಲ್, ಪಂಪ್ ಸೆಟ್ಗಳನ್ನು ಸುರಕ್ಷಿತವಾಗಿಟ್ಟುಕೊಳ್ಳಲು ಸೂಚಿಸಲಾಗಿದೆ. ಸೆಪ್ಟಂಬರ್ ಅಂತ್ಯದಲ್ಲಿ ಪ್ರವಾಹಕ್ಕೆ ಸಿಲುಕಿದ್ದ ಕೃಷ್ಣಾ ತೀರದಲ್ಲಿ ಈಗ ಮತ್ತೆ ನದಿ ಉಕ್ಕುತ್ತಿರುವುದು ಆತಂಕ ಮೂಡಿಸಿದೆ.

ಇದನ್ನೂ ಓದಿ: ಬೆಳಗಾವಿಯಲ್ಲಿ ಶುರುವಾಯ್ತು ಪ್ರವಾಹ ಭೀತಿ! ಎಚ್ಚರಿಕೆಯಿಂದಿರಲು ಜಿಲ್ಲಾಡಳಿತ ಸೂಚನೆ

Follow Us
3 ವರ್ಷಗಳಲ್ಲಿ 1,000 ರೋಬೋಟಿಕ್ ಸರ್ಜರಿ ಯಶಸ್ವಿ
3 ವರ್ಷಗಳಲ್ಲಿ 1,000 ರೋಬೋಟಿಕ್ ಸರ್ಜರಿ ಯಶಸ್ವಿ
ದಿನೇಶ್ ಗುಂಡೂರಾವ್​​ಗೆ ಕೈತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ ಪ್ರತಿಭಟನೆ
ದಿನೇಶ್ ಗುಂಡೂರಾವ್​​ಗೆ ಕೈತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ ಪ್ರತಿಭಟನೆ
ಎಒ, ಎಎಒ ನೇಮಕಾತಿ ಸಮಸ್ಯೆ: ವಿದ್ಯಾರ್ಥಿಗಳ ಜೊತೆ ಡಿಕೆಶಿ ಚರ್ಚೆ
ಎಒ, ಎಎಒ ನೇಮಕಾತಿ ಸಮಸ್ಯೆ: ವಿದ್ಯಾರ್ಥಿಗಳ ಜೊತೆ ಡಿಕೆಶಿ ಚರ್ಚೆ
ರಾಜೀನಾಮೆ ಬೆದರಿಕೆ ಹಾಕಿದವರ ಮಾಹಿತಿ ಕೋರಿದ ಕಾಂಗ್ರೆಸ್ ಹೈಕಮಾಂಡ್
ರಾಜೀನಾಮೆ ಬೆದರಿಕೆ ಹಾಕಿದವರ ಮಾಹಿತಿ ಕೋರಿದ ಕಾಂಗ್ರೆಸ್ ಹೈಕಮಾಂಡ್
ಸಂಪುಟದಲ್ಲಿ ಮಹಿಳೆಯರಿಗೆ ಅವಕಾಶನೇ ಇಲ್ಲದೇ ಇರೋದು ಸರಿಯಲ್ಲ ಎಂದ KN ರಾಜಣ್ಣ
ಸಂಪುಟದಲ್ಲಿ ಮಹಿಳೆಯರಿಗೆ ಅವಕಾಶನೇ ಇಲ್ಲದೇ ಇರೋದು ಸರಿಯಲ್ಲ ಎಂದ KN ರಾಜಣ್ಣ
ಸಚಿವರ ಪ್ರಮಾಣವಚನಕ್ಕೆ ಸಿದ್ದರಾಮಯ್ಯ ಗೈರಾಗಿದ್ದೇಕೆ: ಯತೀಂದ್ರ ಕೊಟ್ರು ಕಾರಣ
ಸಚಿವರ ಪ್ರಮಾಣವಚನಕ್ಕೆ ಸಿದ್ದರಾಮಯ್ಯ ಗೈರಾಗಿದ್ದೇಕೆ: ಯತೀಂದ್ರ ಕೊಟ್ರು ಕಾರಣ
ಮೃತ ಕೋತಿಗೆ ವೈಕುಂಠ ಸಮಾರಾಧನೆ: ನೂರಾರು ಜನರಿಗೆ ಅನ್ನಸಂತರ್ಪಣೆ
ಮೃತ ಕೋತಿಗೆ ವೈಕುಂಠ ಸಮಾರಾಧನೆ: ನೂರಾರು ಜನರಿಗೆ ಅನ್ನಸಂತರ್ಪಣೆ
‘ಅಮೆರಿಕಾ ಅಮೆರಿಕಾ’ ಸೀಕ್ವೆಲ್​ನಲ್ಲಿ ಮನೋಮೂರ್ತಿ ಸಂಯೋಜನೆಯಲ್ಲಿ ಐದು ಹಾಡು
‘ಅಮೆರಿಕಾ ಅಮೆರಿಕಾ’ ಸೀಕ್ವೆಲ್​ನಲ್ಲಿ ಮನೋಮೂರ್ತಿ ಸಂಯೋಜನೆಯಲ್ಲಿ ಐದು ಹಾಡು
ಶಾಸಕರಿಗೆ ಸಿಎಂ ಡಿ.ಕೆ.ಶಿವಕುಮಾರ್ ಖಡಕ್ ವಾರ್ನಿಂಗ್
ಶಾಸಕರಿಗೆ ಸಿಎಂ ಡಿ.ಕೆ.ಶಿವಕುಮಾರ್ ಖಡಕ್ ವಾರ್ನಿಂಗ್
ಮೈಸೂರಿನಲ್ಲಿ ತಾಯಿ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವ
ಮೈಸೂರಿನಲ್ಲಿ ತಾಯಿ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವ