AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Raichur News: ಟಿಕೆಟ್ ನೀಡಲು ಸೀಟ್​ ಮೇಲೆ ಹತ್ತಿ ಕೂತ ಕಂಡಕ್ಟರ್, ಶಕ್ತಿ ಯೋಜನೆಯಿಂದ ಭಾರೀ ಫಜೀತಿ

ಪ್ರಯಾಣಿಕರಿಗೆ ಟಿಕೆಟ್ ನೀಡಲು ಸ್ಥಳವಿಲ್ಲದೇ ಕೊನೆಗೆ ಸೀಟ್ ಮೇಲಿನ ರಾಡ್ ಮೇಲೆ ಕುಳಿತು ಟಿಕೆಟ್ ನೀಡಿದ್ದಾರೆ. ಸದ್ಯ ಕಂಡಕ್ಟರ್​ನ ಪಜೀತಿಯ ವಿಡಿಯೋ ವೈರಲ್ ಆಗಿದೆ.

Raichur News: ಟಿಕೆಟ್ ನೀಡಲು ಸೀಟ್​ ಮೇಲೆ ಹತ್ತಿ ಕೂತ ಕಂಡಕ್ಟರ್, ಶಕ್ತಿ ಯೋಜನೆಯಿಂದ ಭಾರೀ ಫಜೀತಿ
ಟಿಕೆಟ್ ನೀಡಲು ಸೀಟ್​ ಮೇಲೆ ಹತ್ತಿ ಕೂತ ಕಂಡಕ್ಟರ್
Follow us
ಭೀಮೇಶ್​​ ಪೂಜಾರ್
| Updated By: ಆಯೇಷಾ ಬಾನು

Updated on: Jul 20, 2023 | 3:16 PM

ರಾಯಚೂರು: ಶಕ್ತಿ ಯೋಜನೆ ಹೆಸರಲ್ಲಿ ಮಹಿಳೆಯರಿಗೆ ಸರ್ಕಾರಿ ಬಸ್​ಗಳಲ್ಲಿ ಉಚಿತ ಪ್ರಯಾಣ ಭಾಗ್ಯ ಸಿಕ್ಕಿದೆ(Free Bus Travel For Women Scheme). ಹೀಗಾಗಿ ಎಲ್ಲಾ ಸರ್ಕಾರಿ ಬಸ್​ಗಳು ಮಹಿಳೆಯರಿಂದ ತುಂಬಿ ತುಳುಕುತ್ತಿವೆ. ಸರ್ಕಾರದ ಶಕ್ತಿ ಯೋಜನೆ ಎಫೆಕ್ಟ್​ನಿಂದಾಗಿ ರಾಯಚೂರಿನ(Raichur) ಗ್ರಾಮೀಣ ಭಾಗದ ಬಸ್​ಗಳಲ್ಲಿ ಕಂಡಕ್ಟರ್​ಗಳು ಪರದಾಡುವಂತಾಗಿದೆ. ಕೆಎಸ್​ಆರ್​ಟಿಸಿ ಬಸ್ ಕಂಡಕ್ಟರ್ ಪ್ರಯಾಣಿಕರಿಗೆ ಟಿಕೆಟ್ ನೀಡಲು ಹರಸಾಹಸ ಪಡುತ್ತಿರುವುದು ಕಂಡು ಬಂದಿದೆ.

ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ಮುದಗಲ್-ಅಂಕಲಿಮಠ-ಮುದೇನೂರು ಮಾರ್ಗದಲ್ಲಿ ಬಸ್ ಫುಲ್ ರಶ್‌ ಆಗಿದೆ. ಈ ಹಿನ್ನೆಲೆ ಟಿಕೆಟ್ ಕೊಡಲಾಗದೇ ಬಸ್ ಕಂಡಕ್ಟರ್ ಪರದಾಡಿದ್ದಾರೆ. ಪ್ರಯಾಣಿಕರಿಗೆ ಟಿಕೆಟ್ ನೀಡಲು ಸ್ಥಳವಿಲ್ಲದೇ ಕೊನೆಗೆ ಸೀಟ್ ಮೇಲಿನ ರಾಡ್ ಮೇಲೆ ಕುಳಿತು ಟಿಕೆಟ್ ನೀಡಿದ್ದಾರೆ. ಸದ್ಯ ಕಂಡಕ್ಟರ್​ನ ಪಜೀತಿಯ ವಿಡಿಯೋ ವೈರಲ್ ಆಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಬಂಧಿತರಾಗಿರುವ ಶಂಕಿತ ಉಗ್ರರಿಗೆ ದಾವಣಗೆರೆ ಲಿಂಕ್? ಮತ್ತೊಬ್ಬ ಸಿಸಿಬಿ ವಶಕ್ಕೆ

ಮುದಗಲ್-ಮುದೇನೂರು ಮಾರ್ಗದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರು ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಕರ್ನಾಟಕದಲ್ಲಿ ಶಕ್ತಿ ಯೋಜನೆ ಜಾರಿಯಾದ ನಂತರ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಪ್ರಯಾಣಿಸುವ ಮಹಿಳಾ ಪ್ರಯಾಣಿಕರ ಸಂಖ್ಯೆಯಲ್ಲಿ ಗಣನೀಯ ಏರಿಕೆಯಾಗಿದೆ. ಶಕ್ತಿ ಯೋಜನೆ ಜಾರಿಯಾದ ಒಂದು ತಿಂಗಳಲ್ಲಿ 16 ಕೋಟಿಗೂ ಹೆಚ್ಚು ಮಹಿಳಾ ಪ್ರಯಾಣಿಕರು ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಪ್ರಯಾಣಿಸಿದ್ದಾರೆ.

ಜುಲೈ 4 ರಂದು 70 ಲಕ್ಷ ಮಹಿಳಾ ಪ್ರಯಾಣಿಕರು ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಪ್ರಯಾಣಿಸಿದ್ದು ಇದು ಒಂದೇ ದಿನದಲ್ಲಿ ಅತಿ ಹೆಚ್ಚು ಮಹಿಳಾ ಪ್ರಯಾಣಿಕರು ಪ್ರಯಾಣಿಸಿದ್ದಾರೆ.

ರಾಯಚೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಕಾನೂನು ಪ್ರಕ್ರಿಯೆ ಮೂಲಕ ಜನಾರ್ಧನ ರೆಡ್ಡಿಗೆ ರಿಲೀಫ್: ಶ್ರೀರಾಮುಲು
ಕಾನೂನು ಪ್ರಕ್ರಿಯೆ ಮೂಲಕ ಜನಾರ್ಧನ ರೆಡ್ಡಿಗೆ ರಿಲೀಫ್: ಶ್ರೀರಾಮುಲು
ವಿಡಿಯೋ ಮಾಡೋದು ನಿಲ್ಲಿಸು; ಡ್ರಗ್ ಪಾರ್ಟಿ ವೇಳೆ ಪೊಲೀಸರಿಗೆ ಮಂಗ್ಲಿ ಆವಾಜ್
ವಿಡಿಯೋ ಮಾಡೋದು ನಿಲ್ಲಿಸು; ಡ್ರಗ್ ಪಾರ್ಟಿ ವೇಳೆ ಪೊಲೀಸರಿಗೆ ಮಂಗ್ಲಿ ಆವಾಜ್
ಮಂತ್ರಿ ಸ್ಥಾನ ಒಲ್ಲೆಯೆನ್ನಲು ನಾನೇನು ಸನ್ಯಾಸಿಯೇ? ಬಸವರಾಜು, ಶಾಸಕ
ಮಂತ್ರಿ ಸ್ಥಾನ ಒಲ್ಲೆಯೆನ್ನಲು ನಾನೇನು ಸನ್ಯಾಸಿಯೇ? ಬಸವರಾಜು, ಶಾಸಕ
ಇಬ್ಬರು ಬೇರೆ ಬೇರೆ ಜಾತಿಯವರು; ಯುವತಿ ಎಸ್​ಸಿಯಾದರೆ ಯುವಕ ಗೌಡಾಸ್!
ಇಬ್ಬರು ಬೇರೆ ಬೇರೆ ಜಾತಿಯವರು; ಯುವತಿ ಎಸ್​ಸಿಯಾದರೆ ಯುವಕ ಗೌಡಾಸ್!
ಸಂಸದ ಇ ತುಕಾರಾಂ ಮತ್ತು ಶಾಸಕ ಭರತ್ ರೆಡ್ಡಿ ಮನಗಳ ಮೇಲೂ ಈಡಿ ದಾಳಿ
ಸಂಸದ ಇ ತುಕಾರಾಂ ಮತ್ತು ಶಾಸಕ ಭರತ್ ರೆಡ್ಡಿ ಮನಗಳ ಮೇಲೂ ಈಡಿ ದಾಳಿ
ಹನುಮಾನ್ ಭಕ್ತರೊಬ್ಬರ ಅಂತ್ಯಕ್ರಿಯೆಗೆ ಬಂದ ಕೋತಿ
ಹನುಮಾನ್ ಭಕ್ತರೊಬ್ಬರ ಅಂತ್ಯಕ್ರಿಯೆಗೆ ಬಂದ ಕೋತಿ
ಶ್ರೀಕಾಂತ್ ಮತ್ತವನ ತಂಡದಿಂದ ಮಚ್ಚಿನಿಂದ ಹಲ್ಲೆ, ಹಂತಕರು ಪರಾರಿ
ಶ್ರೀಕಾಂತ್ ಮತ್ತವನ ತಂಡದಿಂದ ಮಚ್ಚಿನಿಂದ ಹಲ್ಲೆ, ಹಂತಕರು ಪರಾರಿ
ಕೃಷ್ಣ ನಟನೆಯ ‘ಬ್ರ್ಯಾಟ್’ ಚಿತ್ರದ ಟೀಸರ್ ನೋಡಿದ ಮಗಳು ಪರಿ ರಿಯಾಕ್ಷನ್ ನೋಡಿ
ಕೃಷ್ಣ ನಟನೆಯ ‘ಬ್ರ್ಯಾಟ್’ ಚಿತ್ರದ ಟೀಸರ್ ನೋಡಿದ ಮಗಳು ಪರಿ ರಿಯಾಕ್ಷನ್ ನೋಡಿ
ಶ್ರೀನಿವಾಸಪುರದಿಂದ ಬೇರೆ ಊರುಗಳಿಗೆ ಹೋಗುವ ರಸ್ತೆಗಳು ಬಂದ್
ಶ್ರೀನಿವಾಸಪುರದಿಂದ ಬೇರೆ ಊರುಗಳಿಗೆ ಹೋಗುವ ರಸ್ತೆಗಳು ಬಂದ್
ರಾಜಾ ರಘುವಂಶಿ ಕೊಲೆ ಆರೋಪಿಗೆ ಏರ್​ಪೋರ್ಟ್​ನಲ್ಲಿ ಪ್ರಯಾಣಿಕರಿಂದ ಕಪಾಳಮೋಕ್ಷ
ರಾಜಾ ರಘುವಂಶಿ ಕೊಲೆ ಆರೋಪಿಗೆ ಏರ್​ಪೋರ್ಟ್​ನಲ್ಲಿ ಪ್ರಯಾಣಿಕರಿಂದ ಕಪಾಳಮೋಕ್ಷ