AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶಪ್ರೇಮ ಮೆರೆಯಲು ಹೋಗಿ ಕಾರ್ಮಿಕನ‌ ಹುಚ್ಚಾಟ, 150 ಮೀಟರ್ ಎತ್ತರದ ಆರ್​ಟಿಪಿಎಸ್ ಮೇಲೇರಿ ಧ್ವಜ ಹಾರಿಸಿದ

ರಾಯಚೂರು ತಾಲೂಕಿನ ಶಕ್ತಿನಗರ ಬಳಿಯ ಆರ್​ಟಿಪಿಎಸ್ ವಿದ್ಯುತ್ ಉತ್ಪಾದನಾ ಘಟಕದ ಮೇಲೇರಿ ಸುನೀಲ್ ಎಂಬ ಕಾರ್ಮಿಕ ಹುಚ್ಚಾಟ ಮೆರೆದಿದ್ದಾನೆ. ಸುಮಾರು‌ 150 ಕ್ಕೂ ಹೆಚ್ಚು ಮೀಟರ್ ಎತ್ತರದ ಆರ್​ಟಿಪಿಎಸ್​ನ ಏಳನೇ ಯುನಿಟ್ ಮೇಲೇರಿ ಕಾರ್ಮಿಕ ಸುನೀಲ್ ಭಾರತದ ಧ್ವಜ ಹಾರಿಸಿದ್ದಾನೆ. ಈ ಹಿಂದೆ ಅಧಿಕಾರಿಗಳ ಕಿರುಕುಳ, ವೇತನ ಸಮಸ್ಯೆ ಅಂತ ಆರೋಪಿಸಿ ಇದೇ ಘಟಕದ ಮೇಲೇರಿ ಸುನೀಲ್ ಆತ್ಮಹತ್ಯೆಗೆ ಯತ್ನಿಸಿದ್ದ.

ದೇಶಪ್ರೇಮ ಮೆರೆಯಲು ಹೋಗಿ ಕಾರ್ಮಿಕನ‌ ಹುಚ್ಚಾಟ, 150 ಮೀಟರ್ ಎತ್ತರದ ಆರ್​ಟಿಪಿಎಸ್ ಮೇಲೇರಿ ಧ್ವಜ ಹಾರಿಸಿದ
ದೇಶಪ್ರೇಮ ಮೆರೆಯಲು ಆರ್ ಟಿಪಿಎಸ್ ಘಟಕದ ಮೇಲೇರಿದ ಕಾರ್ಮಿಕ
ಭೀಮೇಶ್​​ ಪೂಜಾರ್
| Edited By: ಆಯೇಷಾ ಬಾನು|

Updated on:Aug 14, 2023 | 3:18 PM

Share

ರಾಯಚೂರು, ಆ.14: 76ನೇ ಸ್ವಾತಂತ್ರ್ಯೋತ್ಸವಕ್ಕೆ(Independence Day) ಕೇವಲ ಒಂದೇ ಒಂದು ದಿನ ಮಾತ್ರ ಬಾಕಿ ಇದ್ದು ಇಡೀ ಭಾರತ ಸಜ್ಜಾಗುತ್ತಿದೆ. ನರೇಂದ್ರ ಮೋದಿಯವರ(Narendra Modi) ಕರೆಯಂತೆ ಮನೆ ಮನೆಗಳಲ್ಲಿ ತಿರಂಗಾ ಹಾರಾಡಲು ತಯಾರಿ ನಡೆಯುತ್ತಿದೆ. ಆದ್ರೆ ರಾಯಚೂರಲ್ಲೊಬ್ಬ ಕಾರ್ಮಿಕ ದೇಶ ಪ್ರೇಮ ಮೆರೆಯಲೆಂದು 150 ಮೀಟರ್ ಮೇಲೇರಿ ಧ್ವಜ ಹಾರಿಸಿದ್ದಾನೆ. ಕಾರ್ಮಿಕನನ್ನು ಕೆಳಗಿಳಿಸುವುದೇ ಆರ್ ಟಿಪಿಎಸ್‌ ಸಿಬ್ಬಂದಿ, ಪೊಲೀಸ್ ಸಿಬ್ಬಂದಿಗೆ ತಲೆ ನೋವಾಗಿದ್ದು ಹುಚ್ಚು ಪ್ರೇಮಕ್ಕೆ ಅಧಿಕಾರಿಗಳು ಸುಸ್ತಾಗಿದ್ದಾರೆ.

ರಾಯಚೂರು ತಾಲೂಕಿನ ಶಕ್ತಿನಗರ ಬಳಿಯ ಆರ್​ಟಿಪಿಎಸ್ ವಿದ್ಯುತ್ ಉತ್ಪಾದನಾ ಘಟಕದ ಮೇಲೇರಿ ಸುನೀಲ್ ಎಂಬ ಕಾರ್ಮಿಕ ಹುಚ್ಚಾಟ ಮೆರೆದಿದ್ದಾನೆ. ಸುಮಾರು‌ 150 ಕ್ಕೂ ಹೆಚ್ಚು ಮೀಟರ್ ಎತ್ತರದ ಆರ್​ಟಿಪಿಎಸ್​ನ ಏಳನೇ ಯುನಿಟ್ ಮೇಲೇರಿ ಕಾರ್ಮಿಕ ಸುನೀಲ್ ಭಾರತದ ಧ್ವಜ ಹಾರಿಸಿದ್ದಾನೆ. ಈ ವಿಚಾರ ತಿಳಿಯುತ್ತಿದ್ದಂತೆ ಆರ್​ಟಿಪಿಎಸ್‌ ಸಿಬ್ಬಂದಿ, ಪೊಲೀಸ್ ಸಿಬ್ಬಂದಿ ತಲೆ ಬಿಸಿ ಮಾಡಿಕೊಂಡಿದ್ದು ಸುನೀಲನನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದಾರೆ.

ಇದನ್ನೂ ಓದಿ: ಶಕ್ತಿ ಯೋಜನೆ ಎಫೆಕ್ಟ್, ಸೀಟ್ ಮೇಲೇರಿ ಟಿಕೆಟ್​ ನೀಡಿದ ಬಸ್ ಕಂಡಕ್ಟರ್: ವಿಡಿಯೋ ವೈರಲ್

ಈ ಹಿಂದೆ ಅಧಿಕಾರಿಗಳ ಕಿರುಕುಳ, ವೇತನ ಸಮಸ್ಯೆ ಅಂತ ಆರೋಪಿಸಿ ಇದೇ ಘಟಕದ ಮೇಲೇರಿ ಸುನೀಲ್ ಆತ್ಮಹತ್ಯೆಗೆ ಯತ್ನಿಸಿದ್ದ. ನಂತರ ಮಾಜಿ ಶಾಸಕ ತಿಪ್ಪರಾಜು ಹವಾಲ್ದಾರ್ ಬಂದು ಮೇಲೇರಿದ್ದ ಸುನೀಲ್ ಗೆ ಕರೆ ಮಾಡಿ ಸಮಾಧಾನ ಪಡಿಸಿ ಕೆಳಗಿಳಿಸಿದ್ರು. ಇಂದು ಕೂಡ ವಿದ್ಯುತ್ ಉತ್ಪಾದನಾ ಘಟಕ ಮೇಲೇರುವುದನ್ನು ನೋಡಿದ ಅಧಿಕಾರಿಗಳು ಕಂಗಾಲಾಗಿದ್ದರು. ಈ ಬಾರಿ ಕೂಡ ಆತ್ಮಹತ್ಯೆ ಮಾಡಿಕೊಳ್ಳಲು ಮೇಲೇರುತ್ತಿದ್ದಾನೆಂದು ಕೊಂಡು ಅಧಿಕಾರಿಗಳು ಶಕ್ತಿನಗರ ಪೊಲೀಸರನ್ನ ಕರೆಸಿದ್ದಾರೆ. ಸ್ಥಳದಲ್ಲಿ ಕೆಲ ಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಆದರೆ ಈ ಬಾರಿ ಆತ್ಮಹತ್ಯೆಗೆ ಯತ್ನಿಸದೆ ಸುನೀತ್ ದೇಶ ಪ್ರೇಮ ಮೆರೆಯಲು ಸಾಹಸಕ್ಕೆ ಕೈ ಹಾಕಿದ್ದ. ಆರ್​ಟಿಪಿಎಸ್ ವಿದ್ಯುತ್ ಉತ್ಪಾದನಾ ಘಟಕದ ಮೇಲೆ ಭಾರತದ ಧ್ವಜವನ್ನ ಹಾರಿಸಿದ್ದಾನೆ. ಸದ್ಯ ಭಾರತ ಧ್ವಜವನ್ನ ಹಾರಿಸಿ ಕಾರ್ಮಿಕ ಸುನೀಲ್ ಕೆಳಗಿಳಿದಿದ್ದು ಪೊಲೀಸರು, ಅಧಿಕಾರಿಗಳು ನಿಟ್ಟುಸಿರುಬಿಟ್ಟಿದ್ದಾರೆ.

ರಾಯಚೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 3:13 pm, Mon, 14 August 23

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ