AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರು: ಚಿರತೆ ಹೆದರಿಸಲು ಹೋದವರ ಮೇಲೆ ಚಿರತೆ ದಾಳಿ, ಮೂವರಿಗೆ ಗಂಭೀರ ಗಾಯ

ಚಿರತೆಯನ್ನು ಹೆದರಿಸಲು ಕೈಗೆ ಸಿಕ್ಕ ಆಯುಧ ತೆಗೆದುಕೊಂಡು ಹೋಗಿದ್ದ ಮೂವರ ಮೇಲೆ ಚಿರತೆ ದಾಳಿ ನಡೆಸಿದ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಡಿ.ಕರಡಿಗುಡ್ಡ ಗ್ರಾಮದಲ್ಲಿ ನಡೆದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ರಾಯಚೂರು: ಚಿರತೆ ಹೆದರಿಸಲು ಹೋದವರ ಮೇಲೆ ಚಿರತೆ ದಾಳಿ, ಮೂವರಿಗೆ ಗಂಭೀರ ಗಾಯ
ಘಟನಾ ಸ್ಥಳ
ಭೀಮೇಶ್​​ ಪೂಜಾರ್
| Edited By: ಆಯೇಷಾ ಬಾನು|

Updated on: Jul 07, 2024 | 2:53 PM

Share

ರಾಯಚೂರು, ಜುಲೈ.07: ಜಿಲ್ಲೆಯ ದೇವದುರ್ಗ ತಾಲೂಕಿನ ಡಿ.ಕರಡಿಗುಡ್ಡ ಗ್ರಾಮದಲ್ಲಿ ಚಿರತೆ (Leopard) ದಾಳಿಯಿಂದ ಮೂವರಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ರಂಗನಾಥ್ ಎಂಬಾತ ಬಹಿರ್ದೆಸೆಗೆ ಹೋದಾಗ ಚಿರತೆ ಪ್ರತ್ಯಕ್ಷವಾಗಿತ್ತು. ಇನ್ನು ಚಿರತೆ ಪ್ರತ್ಯಕ್ಷವಾದ ಬಗ್ಗೆ ರಮೇಶ್ ಮತ್ತು ಮಲ್ಲಣ್ಣನಿಗೆ ರಂಗನಾಥ್ ಮಾಹಿತಿ ನೀಡಿದ್ದು ಮೂವರು ಸೇರಿ ಆಯುಧ ತೆಗೆದುಕೊಂಡು ಚಿರತೆಗೆ ಬೆದರಿಸಲು ಯತ್ನಿಸಿದ್ದಾರೆ. ಈ ವೇಳೆ ರಂಗನಾಥ್, ಮಲ್ಲಣ್ಣ ಹಾಗೂ ರಮೇಶ್ ಮೇಲೆ ಚಿರತೆ ದಾಳಿ ನಡೆಸಿದೆ.

ಗಾಯಾಳುಗಳಿಗೆ ದೇವದುರ್ಗ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಚಿರತೆ ಪ್ರತ್ಯಕ್ಷ ಹಿನ್ನೆಲೆಯಲ್ಲಿ ಎನ್.ಗಣೇಕಲ್, ಜಾಲಹಳ್ಳಿ, ಕಮದಾಳು, ಯರಮಸಾಳ, ಜೇರಬಂಡಿ, ಗುಂಡಗುರ್ತಿ ಗ್ರಾಮದ ನಿವಾಸಿಗಳಲ್ಲಿ ಆತಂಕ‌‌ ಮನೆ ಮಾಡಿದೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ, ಪೊಲೀಸರು ಭೇಟಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ದೇವದುರ್ಗ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಚಿರತೆ ದಾಳಿ ಬೆಚ್ಚಿಬಿದ್ದ ಗ್ರಾಮಸ್ಥರು

ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ವಗಲಗೆರೆ ಗ್ರಾಮದ ರೈತ ರಾಜಣ್ಣಗೆ ಸೇರಿದ ಮೇಕೆ, ನಾಯಿ ಮೇಲೆ ಚಿರತೆ ದಾಳಿ ನಡೆಸಿದೆ. ಒಂದೇ ದಿನ 2 ಬಾರಿ ಚಿರತೆ ದಾಳಿಯಿಂದ ವಗಲಗೆರೆ ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಚಿರತೆ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಡೆಂಗ್ಯೂ ಹೆಚ್ಚಳ: ಮುನ್ನೆಚ್ಚರಿಕೆ ಕ್ರಮಕ್ಕೆ ಗ್ರಾಮ ಪಂಚಾಯತಿಗಳಿಗೆ ಗೈಡ್​ಲೈನ್ಸ್

ಮತ್ತೆ ಕಂಪಿಸಿದ ಭೂಮಿ, ನಿವಾಸಿಗಳಲ್ಲಿ ಆತಂಕ

ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಮಿ ಕಂಪಿಸಿದೆ. ತಿಕೋಟ ತಾಲೂಕಿನ ಸೋಮದೇವರಹಟ್ಟಿ, ಘೋಣಸಗಿ ಕಳ್ಳಕವಟಗಿ, ಹುಬನೂರ, ಟಕ್ಕಳಕಿ ಭಾಗದಲ್ಲಿ ರಾತ್ರಿ 9.26ರ ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದೆ. ಇದ್ರಿಂದ ಭಯಗೊಂಡ ನಿವಾಸಿಗಳು ಮನೆಗಳಿಂದ ಹೊರ ಓಡಿಬಂದ್ರು.

ವಿಶೇಷ ಊಟ ಸೇವಿಸಿದ ಅಸ್ವಸ್ಥಗೊಂಡ ವಿದ್ಯಾರ್ಥಿಗಳು

ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿರೊ ಮೊರಾರ್ಜಿ ದೇಸಾಯಿ ಹಾಸ್ಟೆಲ್​​ನಲ್ಲಿ ಊಟ ಸೇವಿಸಿದ್ದ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ. ಮೊನ್ನೆ ಅಮವಾಸ್ಯೆ ಹಿನ್ನೆಲೆಯಲ್ಲಿ ವಿಶೇಷ ಊಟ ಸಿದ್ಧಪಡಿಸಲಾತ್ತು. ರಾತ್ರಿ ವಿದ್ಯಾರ್ಥಿಗಳು ಊಟ ಸೇವಿಸದ ಬಳಿಕ ವಾಂತಿ, ಬೇಧಿ, ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ಅಸ್ವಸ್ಥಗೊಂಡ 31 ವಿದ್ಯಾರ್ಥಿಗಳ ಪೈಕಿ 29 ಮಕ್ಕಳಿಗೆ ಮಾನ್ವಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗ್ತಿದ್ರೆ, ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ಇಬ್ಬರಿಗೆ ಚಿಕಿತ್ಸೆ ನೀಡಲಾಗ್ತಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
‘ಹೇಗಿದೆ ಟಾಕ್ಸಿಕ್?’ ಕಲೆಕ್ಷನ್, ವಿಮರ್ಶೆ ಇತ್ಯಾದಿ: ವಿಡಿಯೋ ನೋಡಿ
‘ಹೇಗಿದೆ ಟಾಕ್ಸಿಕ್?’ ಕಲೆಕ್ಷನ್, ವಿಮರ್ಶೆ ಇತ್ಯಾದಿ: ವಿಡಿಯೋ ನೋಡಿ
ನೇಪಾಳ-ಟಿಬೆಟ್ ಗಡಿಯಲ್ಲಿ ಪ್ರವಾಹಕ್ಕೆ ಕೊಚ್ಚಿಹೋಯ್ತು ತ್ರಿಶೂಲಿ ನದಿ ಸೇತುವೆ
ನೇಪಾಳ-ಟಿಬೆಟ್ ಗಡಿಯಲ್ಲಿ ಪ್ರವಾಹಕ್ಕೆ ಕೊಚ್ಚಿಹೋಯ್ತು ತ್ರಿಶೂಲಿ ನದಿ ಸೇತುವೆ
ಏಕಾಏಕಿ ಹೊತ್ತಿ ಉರಿದ ಕಾರು: ಕನ್ಯೆ ನೋಡಲು ಹೋಗಿದ್ದವ ಪ್ರಾಣಾಪಾಯದಿಂದ ಪಾರು
ಏಕಾಏಕಿ ಹೊತ್ತಿ ಉರಿದ ಕಾರು: ಕನ್ಯೆ ನೋಡಲು ಹೋಗಿದ್ದವ ಪ್ರಾಣಾಪಾಯದಿಂದ ಪಾರು
6 ಬಾರಿ ಅಂಬಾರಿ ಹೊತ್ತು ನಿವೃತ್ತಿಯಾದ ಅಭಿಮನ್ಯುಗೆ ಮತ್ತೊಂದು ಹೊಣೆಗಾರಿಕೆ?
6 ಬಾರಿ ಅಂಬಾರಿ ಹೊತ್ತು ನಿವೃತ್ತಿಯಾದ ಅಭಿಮನ್ಯುಗೆ ಮತ್ತೊಂದು ಹೊಣೆಗಾರಿಕೆ?
ಸಿಎಂ ಡಿಕೆ ಶಿವಕುಮಾರ್ ದಿಢೀರ್ ಸುದ್ದಿಗೋಷ್ಠಿಯ ನೇರಪ್ರಸಾರ
ಸಿಎಂ ಡಿಕೆ ಶಿವಕುಮಾರ್ ದಿಢೀರ್ ಸುದ್ದಿಗೋಷ್ಠಿಯ ನೇರಪ್ರಸಾರ
‘ಟಾಕ್ಸಿಕ್’ ಅದ್ದೂರಿ ರಿಲೀಸ್; ತುಮಕೂರಿನಲ್ಲೂ ಯಶ್ ಫ್ಯಾನ್ಸ್ ಸಂಭ್ರಮ
‘ಟಾಕ್ಸಿಕ್’ ಅದ್ದೂರಿ ರಿಲೀಸ್; ತುಮಕೂರಿನಲ್ಲೂ ಯಶ್ ಫ್ಯಾನ್ಸ್ ಸಂಭ್ರಮ
125 ಜೋಡಿಗೆ ಉಚಿತ ಸಾಮೂಹಿಕ ವಿವಾಹ ಮಾಡಿಸಿದ ಶಾಸಕ
125 ಜೋಡಿಗೆ ಉಚಿತ ಸಾಮೂಹಿಕ ವಿವಾಹ ಮಾಡಿಸಿದ ಶಾಸಕ
ನಾಳೆ ಸಿಎಂ ಡಿಕೆ ಶಿವಕುಮಾರ್ ದೆಹಲಿಗೆ: ಸಂಪುಟಕ್ಕೆ ಸಣ್ಣ ಸರ್ಜರಿ ಆಗುತ್ತಾ?
ನಾಳೆ ಸಿಎಂ ಡಿಕೆ ಶಿವಕುಮಾರ್ ದೆಹಲಿಗೆ: ಸಂಪುಟಕ್ಕೆ ಸಣ್ಣ ಸರ್ಜರಿ ಆಗುತ್ತಾ?
ಹೆಲ್ಮೆಟ್ ಧರಿಸದೆ ಬೈಕ್ ಓಡಿಸಿದ ಶಾಸಕ ಪ್ರಕಾಶ್ ಕೋಳಿವಾಡಗೆ ಪೊಲೀಸರಿಂದ ದಂಡ
ಹೆಲ್ಮೆಟ್ ಧರಿಸದೆ ಬೈಕ್ ಓಡಿಸಿದ ಶಾಸಕ ಪ್ರಕಾಶ್ ಕೋಳಿವಾಡಗೆ ಪೊಲೀಸರಿಂದ ದಂಡ
ಉಡುಪಿ ಪೊಲೀಸರ ಮಿಂಚಿನ ಕಾರ್ಯಾಚರಣೆಯಲ್ಲಿ ಬಲೆಗೆ ಬಿದ್ದ ಕ್ರಿಮಿನಲ್!
ಉಡುಪಿ ಪೊಲೀಸರ ಮಿಂಚಿನ ಕಾರ್ಯಾಚರಣೆಯಲ್ಲಿ ಬಲೆಗೆ ಬಿದ್ದ ಕ್ರಿಮಿನಲ್!