AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Raichur News: ವಿದ್ಯುತ್ ತಗುಲಿ ಲೈನ್ ಮ್ಯಾನ್ ಸಾವು; ಕಂಬದ ಮೇಲೆಯೇ ನೇತಾಡಿದ ಮೃತದೇಹ

ವಿದ್ಯುತ್ ತಗುಲಿ ಲೈನ್ ಮ್ಯಾನ್ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಅರಕೇರಾ ತಾಲ್ಲೂಕಿನ ಆಲದಮರದ ತಾಂಡದಲ್ಲಿ ನಡೆದಿದೆ. ವಿರೂಪಾಕ್ಷ(28) ಮೃತ ರ್ದುದೈವಿ.

Raichur News: ವಿದ್ಯುತ್ ತಗುಲಿ ಲೈನ್ ಮ್ಯಾನ್ ಸಾವು; ಕಂಬದ ಮೇಲೆಯೇ ನೇತಾಡಿದ ಮೃತದೇಹ
ವಿದ್ಯುತ್​ ತಗುಲಿ ಲೈನ್​ಮ್ಯಾನ್​ ಸಾವು
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on: Jun 04, 2023 | 2:53 PM

Share

ರಾಯಚೂರು: ವಿದ್ಯುತ್ ತಗುಲಿ ಲೈನ್ ಮ್ಯಾನ್ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಅರಕೇರಾ(Arakera) ತಾಲ್ಲೂಕಿನ ಆಲದಮರದ ತಾಂಡದಲ್ಲಿ ನಡೆದಿದೆ. ವಿರೂಪಾಕ್ಷ(28) ಮೃತ ರ್ದುದೈವಿ. ವಿರೂಪಾಕ್ಷ ಅರಕೇರಾ ಜುಟಮರಡಿ ಕೆಇಬಿ(KEB) ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ. ಇಂದು(ಜೂ.4) ವಿದ್ಯುತ್ ಪೂರೈಕೆಯ ಸಮಸ್ಯೆಯನ್ನು ಪರಿಹರಿಸಲು ಕಂಬ ಹತ್ತಿದ್ದನು. ಈ ವೇಳೆ ವಿದ್ಯುತ್ ಶಾಕ್ ಹೊಡೆದಿದ್ದು, ವಿದ್ಯುತ್ ಕಂಬದ ಮೇಲೆಯೇ ಕೊನೆಯುಸಿರೆಳದಿದ್ದಾನೆ. ಈ ಕುರಿತು ದೇವದುರ್ಗ ಠಾಣಾ ವ್ಯಾಪ್ತಿ ಪ್ರಕರಣ ದಾಖಲಾಗಿದೆ.

ಆಸ್ತಿ ವಿವಾದ ಹಿನ್ನೆಲೆ‌ ಸಹೋದರರ ನಡುವೆ ಗಲಾಟೆ; ಓರ್ವನ ಬರ್ಬರ ಹತ್ಯೆ ಮತ್ತೋರ್ವನ ಸ್ಥಿತಿ ಗಂಭೀರ

ಬೆಳಗಾವಿ: ಜಿಲ್ಲೆಯ ಬೈಲಹೊಂಗಲ ತಾಲೂಕಿನ ತಿಗಡಿ ಗ್ರಾಮದಲ್ಲಿ ಆಸ್ತಿ ವಿವಾದ ಹಿನ್ನೆಲೆ‌ ಸಹೋದರರ ನಡುವೆ ಗಲಾಟೆಯಾಗಿದ್ದು, ಓರ್ವನ ಬರ್ಬರ ಹತ್ಯೆಯಾಗಿದೆ. ಮತ್ತೋರ್ವನ ಸ್ಥಿತಿ ಗಂಭೀರವಾಗಿದ್ದು, ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಜಮೀನಿಗೆ ತೆರಳಿದ್ದ ವೇಳೆ ಸುರೇಶ್ ಖಣಗಾಂವಿಯನ್ನ ಸಹೋದರ ಚಿಕ್ಕಪ್ಪನ ಮಗ ಶಂಕರ್ ಖಣಗಾಂವಿ ಹತ್ಯೆ ಮಾಡಿದ್ದಾನೆ. ಹಲವು ವರ್ಷಗಳಿಂದ ಸುರೇಶ್ ಮತ್ತು ಶಂಕರ್ ನಡುವೆ ಜಮೀನಿನ ವ್ಯಾಜ್ಯವಿತ್ತು. ಇಂದು(ಜೂ.4) ಸುರೇಶ್ ಜಮೀನಿಗೆ ಹೋದ ಅನ್ನೋ ಕಾರಣಕ್ಕೆ ಹತ್ಯೆ ಮಾಡಿದ್ದಾನೆ.ಈ ವೇಳೆ ಜಗಳ ಬಿಡಿಸಲು ಹೋದ ಸದಾ ಖಣಗಾಂವಿಗೆ ಗಂಭೀರ ಗಾಯಗಳಾಗಿವೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ:Yadgir New: ಚಲಿಸುತ್ತಿದ್ದ ಬಸ್‌ನಲ್ಲೇ ಹೃದಯಾಘಾತದಿಂದ ಮಹಿಳೆ ಸಾವು

ನಿಂತಿದ್ದ ಕ್ಯಾಂಟರ್​ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಗೂಡ್ಸ್ ವಾಹನ; ಓರ್ವ ಸಾವು

ಮಂಡ್ಯ: ಜಿಲ್ಲೆ ಮದ್ದೂರು ತಾಲೂಕಿನ ಚಳ್ಳನಕೆರೆ ಗೇಟ್ ಬಳಿ ನಿಂತಿದ್ದ ಕ್ಯಾಂಟರ್​ಗೆ ಹಿಂಬದಿಯಿಂದ ಬಂದ ಗೂಡ್ಸ್ ವಾಹನ ಡಿಕ್ಕಿ ಹೊಡೆದಿದ್ದು, ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮತ್ತೊಬ್ಬನಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ಸಾಗಿಸಲಾಗಿದೆ. ಇನ್ನು ಬೆಳಗ್ಗಿನ ಜಾವ ನಿದ್ದೆಯ ಮಂಪರಿನಲ್ಲಿ ಡಿಕ್ಕಿ ಹೊಡೆದಿದೆ ಎಂದು ಹೇಳಲಾಗುತ್ತಿದೆ. ಜೊತೆಗೆ ಅಪಘಾತದ ರಭಸಕ್ಕೆ ವಾಹನ ನಜ್ಜುಗುಜ್ಜು ಆಗಿದೆ. ಸ್ಥಳಕ್ಕೆ ಮದ್ದೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಮೃತ ವ್ಯಕ್ತಿ ಯಾರು ಎಂಬುದು ತಿಳಿದಿಲ್ಲ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್