AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರು: ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಭಾರೀ ಅವ್ಯವಹಾರ, ಭತ್ತ ಅಡಮಾನ ಹೆಸರಿನಲ್ಲಿ 3 ಕೋಟಿ ರೂ. ಗುಳುಂ

ರೈತರ ಕ್ಷೇಮಾಭಿವೃದ್ಧೀಗಾಗಿ ಇರುವ ಕೃಷಿ ಸಹಕಾರಿ ಬ್ಯಾಂಕ್​ನಲ್ಲಿ ರೈತರು ಅಪಾರ ಪ್ರಮಾಣದ ಭತ್ತ ಅಡಮಾನ ಇಟ್ಟು ಸಾಲ ಪಡೆದಿದ್ದರು. ಆದರೆ ಸಾಲ ಮರುಪಾವತಿ ಮಾಡಲು ಹೋದಾಗ ಗೋದಾಮಿನಲ್ಲಿದ್ದ ಸಹಸ್ರಾರು ಭತ್ತದ ಚೀಲಗಳೇ ಮಾಯವಾಗಿದ್ದವು. ಗೋಡೌನ್ ಖಾಲಿಯಾಗಿತ್ತು. ಭತ್ತ ಅಡಮಾನ ಇಟ್ಟು ಸಾಲ ಕೊಟ್ಟಿರುವುದಾಗಿ ಕೋಟಿ ಕೋಟಿ ಅವ್ಯವಹಾರ ಎಸಗಿರುವ ಆರೋಪ ಕೇಳಿ ಬಂದಿದೆ.

ರಾಯಚೂರು: ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಭಾರೀ ಅವ್ಯವಹಾರ, ಭತ್ತ ಅಡಮಾನ ಹೆಸರಿನಲ್ಲಿ 3 ಕೋಟಿ ರೂ. ಗುಳುಂ
ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘ
ಭೀಮೇಶ್​​ ಪೂಜಾರ್
| Edited By: |

Updated on: May 23, 2025 | 8:42 AM

Share

ರಾಯಚೂರು, ಮೇ 23: ರಾಯಚೂರು ಜಿಲ್ಲೆ ಸಿಂಧನೂರು ತಾಲ್ಲೂಕಿನಲ್ಲಿರೊ ಆರ್​ಚ್ ಕ್ಯಾಂಪ್​ 2 ರಲ್ಲಿ (ಬಂಗಾಳ ಮೂಲದ ಹಿಂದುಗಳಿಗೆ ಪುರ್ವಸತಿ ಕಲ್ಪಿಸಿರುವ ಪ್ರದೇಶ. ಸುಮಾರು ನಾಲ್ಕೈದು ಕ್ಯಾಂಪ್​​ಗಳಿವೆ)​​ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ (Prathamika Krushi Pattina Sahakara Sangha) ಸಂಘವಿದೆ. ಇದೇ ಸಹಕಾರಿ ಸಂಘದಲ್ಲಿ ಈಗ ಕೋಟಿ ಕೋಟಿ ರೂಪಾಯಿ ಅವ್ಯವಹಾರ ನಡೆದಿರುವ ಆರೋಪ ಕೇಳಿಬಂದಿದೆ. 2021 ನೇ ಸಾಲಿನಲ್ಲಿ ಈ ಸಹಕಾರಿ ಸಂಘದಿಂದ ಕೆಲ ರೈತರು ಭತ್ತ ಅಡಮಾನ ಇಟ್ಟುಕೊಂಡು ಸಾಲ ಪಡೆದಿದ್ದರು. ಆನಂದ್ ಎಂಬ ರೈತ 1500 ಚೀಲ ಭತ್ತವನ್ನು ಅಡಮಾನ ಇಟ್ಟು,16 ಲಕ್ಷ ರೂ. ಸಾಲ ಪಡೆದಿದ್ದರು. ಆದರೆ, ಇತ್ತೀಚೆಗೆ ಆ ರೈತ ಸಾಲ ಮರುವಾಪತಿ ಮಾಡಲು ಹೋಗಿದ್ದಾಗ ಆಡಳಿತ ಮಂಡಳಿಯ ಅವ್ಯವಹಾರ ಬಯಲಾಗಿದೆ. ರೈತ ಆನಂದ್ ಅಡಮಾನ ಇಟ್ಟಿದ್ದ 1500 ಚೀಲ ಭತ್ತವೇ ಗೋಡೌನ್​​ನಿಂದ ಕಾಣೆಯಾಗಿತ್ತು. ಇದು ಸಹಕಾರಿ ಸಂಘದ ಈಗಿನ ಹೊಸ ಆಡಳಿತ ಮಂಡಳಿಯನ್ನು ಕೆರಳಿಸಿದೆ. ದಾಖಲೆಗಳನ್ನು ಪರಿಶೀಲಿಸಿದಾಗ ರೈತರು ಅಡಮಾನ ಇಟ್ಟಿದ್ದ ಭತ್ತವನ್ನೇ ಬಳಸಿಕೊಂಡು ಹಳೆ ಆಡಳಿತ ಮಂಡಳಿ ಗೋಲ್​ಮಾಲ್​ ಮಾಡಿರುವ ಸತ್ಯ ಬಯಲಾಗಿದೆ.

ಈ ಪ್ರಾಥಮಿಕ ಗ್ರಾಮೀಣ ಸಹಕಾರಿ ಸಂಘದಲ್ಲಿ 1000ಕ್ಕೂ ಹೆಚ್ಚು ರೈತರು ಸದಸ್ಯರಾಗಿದ್ದಾರೆ. ವರ್ಷಕ್ಕೆ ಇಲ್ಲಿ ಕೋಟ್ಯಂತರ ರೂಪಾಯಿ ವಹಿವಾಟು ನಡೆಯುತ್ತಿದೆ. ರೈತರ ಹಿತ ಕಾಪಾಡುವ ನಿಟ್ಟಿನಲ್ಲಿ ಕೆಲಸ ಮಾಡಬೇಕಿದ್ದ ಸಹಕಾರಿ ಸಂಘ​ ಈಗ ರೈತರಿಗೇ ವಂಚನೆ ಎಸಗಿದೆ. ರೈತ ಆನಂದ್ ಸೇರಿ ಕೇವಲ ಆರೇಳು ರೈತರಿಂದ ಸುಮಾರು 3000 ಸಾವಿರ ಚೀಲ ಭತ್ತವನ್ನು ಅಡಮಾನ ಇರಿಸಿಕೊಳ್ಳಲಾಗಿದ್ದು, ಹೆಚ್ಚುವರಿ ಭತ್ತ ಅಡಮಾನ ಇಟ್ಟುಕೊಳ್ಳಲಾಗಿದೆ ಎಂದು ಬಿಂಬಿಸಲಾಗಿದೆ ಎಂಬ ಆರೋಪವಿದೆ. ಆದರೆ, ಅಸಲಿಗೆ ನಡೆದಿದ್ದೇ ಬೇರೆ ಎನ್ನುತ್ತಾರೆ ರೈತರು. ಹೆಚ್ಚಿನ ಸಂಖ್ಯೆಯ ರೈತರಿಂದ ಅಪಾರ ಪ್ರಮಾಣದ ಭತ್ತ ಅಡಮಾನ ಇಟ್ಟುಕೊಂಡು ಸುಮಾರು 3 ಕೋಟಿ 61 ಲಕ್ಷ ರೂ. ಸಾಲ ಮಂಜೂರು ಮಾಡಲಾಗಿದೆ ಎಂದು ಹಳೆ ಆಡಳಿತ ಮಂಡಳಿ ದಾಖಲೆ ಸೃಷ್ಟಿಸಿದೆ ಎಂಬುದು ಹೊಸ ಆಡಳಿತ ಮಂಡಳಿಯ ಆರೋಪ.

ಅವ್ಯವಹಾರ ಬೆಳಕಿಗೆ ಬರುತ್ತಿದ್ದಂತೆಯೇ ಸಹಕಾರಿ ಸಂಘದ ಹೊಸ ಆಡಳಿತ ಮಂಡಳಿ, ಗೋಲ್​ಮಾಲ್​ ಆರೋಪದ ದಾಖಲೆಗಳನ್ನು ನೀಡಿ ಎಂದು ಹಳೆ ಆಡಳಿತ ಮಂಡಳಿಯನ್ನು ಆಗ್ರಹಿಸಿದೆ. ಆದರೂ ಹಳೆ ಆಡಳಿತ ಮಂಡಳಿ ದಾಖಲೆಗಳನ್ನೇ ನೀಡುತ್ತಿಲ್ಲ. ಕೇವಲ ರೈತರನ್ನು ವಂಚಿಸಿರೋದಷ್ಟೇ ಅಲ್ಲದೆ, ವಿವಿಧ ರೀತಿಯಲ್ಲೂ ಹಳೆ ಆಡಳಿತ ಮಂಡಳಿ ಕೋಟಿ ಕೋಟಿ ಅವ್ಯವಹಾರ ನಡೆಸಿದೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ತನಿಖೆ ನಡೆಸಿ ಎಂದು ಹೊಸ ಆಡಳಿತ ನಿರ್ದೇಶಕ ಆರೋಗ್ಯಸ್ವಾಮಿ ಆಗ್ರಹಿಸಿದ್ದಾರೆ.

ಇದನ್ನೂ ಓದಿ
Image
ಪ್ರಿಯಾಂಕ್ ವಿರುದ್ಧ ಛಲವಾದಿ ಅವಹೇಳನಾಕಾರಿ ಮಾತು: ವಿವಾದದ ಬೆನ್ನಲ್ಲೇ ವಿಷಾದ
Image
ಮೆಟ್ರೋ ಪ್ರಯಾಣಿಕರೇ ಗಮನಿಸಿ: ಶುಕ್ರವಾರ ಸಂಚಾರ ಸಮಯದಲ್ಲಿಲ್ಲ ಬದಲಾವಣೆ
Image
ಮಳೆ ಬೆನ್ನಲ್ಲೇ ಬೆಂಗಳೂರಿನಲ್ಲಿ ಹೆಚ್ಚಾದ ಸಾಂಕ್ರಾಮಿಕ ರೋಗಗಳ ಆತಂಕ
Image
ಬೆಂಗಳೂರು: ರಾಜಕಾಲುವೆ ಒತ್ತುವರಿ ತೆರವಿಗೆ ಸಿದ್ದರಾಮಯ್ಯ ಸೂಚನೆ

ಇದನ್ನೂ ಓದಿ: ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಜನ ಔಷಧ ಕೇಂದ್ರ ನಿರ್ಬಂಧಕ್ಕೆ ವಿಪಕ್ಷಗಳಿಂದ ತೀವ್ರ ವಿರೋಧ

ದೊಡ್ಡ ಮಟ್ಟದ ಅವ್ಯವಹಾರ ಆರೋಪವನ್ನು ಸದ್ದಿಲ್ಲದೇ ಮುಚ್ಚಿ ಹಾಕುವ ಯತ್ನವೂ ನಡೆಯುತ್ತಿದ್ದು, ಈ ಬಗ್ಗೆ ಕೂಡಲೇ ಸಂಬಂಧ ಪಟ್ಟ ಇಲಾಖೆ ಪರಿಶೀಲನೆ ನಡೆಸಿ ಕ್ರಮಕೈಗೊಳ್ಳಬೇಕಿದೆ. ಅಲ್ಲದೇ ಕಾಣೆಯಾಗಿರುವ ಭತ್ತದ ಚೀಲಗಳ ನಿಗೂಢತೆಯನ್ನು ಬೇಧಿಸಬೇಕಿದೆ.

ಕರ್ನಾಟಕದ ಇನ್ನಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ
ತಮಿಳುನಾಡಿನಲ್ಲಿ ಡಿಎಂಕೆ ಬದಲು ಎಐಎಡಿಎಂಕೆಯನ್ನು ಹೊಗಳಿದ ರಾಹುಲ್ ಗಾಂಧಿ
ತಮಿಳುನಾಡಿನಲ್ಲಿ ಡಿಎಂಕೆ ಬದಲು ಎಐಎಡಿಎಂಕೆಯನ್ನು ಹೊಗಳಿದ ರಾಹುಲ್ ಗಾಂಧಿ
ಕತ್ತಲಲ್ಲಿ ಬಂದ್ರು,ಕಾರಲ್ಲಿ ಬಂದು ಹಸು ಕದ್ಕೊಂಡು ಹೋದ್ರು!
ಕತ್ತಲಲ್ಲಿ ಬಂದ್ರು,ಕಾರಲ್ಲಿ ಬಂದು ಹಸು ಕದ್ಕೊಂಡು ಹೋದ್ರು!
CCTV Video: ಸಾಲ ಮಾಡಿ ತಂದಿದ್ದ ಕನಸಿನ ಬೈಕ್ ಕೊಂಡ ರಾತ್ರಿಯೇ ಕಳ್ಳತನ!
CCTV Video: ಸಾಲ ಮಾಡಿ ತಂದಿದ್ದ ಕನಸಿನ ಬೈಕ್ ಕೊಂಡ ರಾತ್ರಿಯೇ ಕಳ್ಳತನ!
ಯುವತಿಯರ ಅಂಗಾಂಗ ಮುಟ್ಟಿ ಪರಾರಿಯಾಗುತ್ತಿರುವ ಕಾಮುಕರು: ವಿಡಿಯೋ ವೈರಲ್
ಯುವತಿಯರ ಅಂಗಾಂಗ ಮುಟ್ಟಿ ಪರಾರಿಯಾಗುತ್ತಿರುವ ಕಾಮುಕರು: ವಿಡಿಯೋ ವೈರಲ್