AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2ನೇ ಮದ್ವೆಯಾದ ಪತಿ: ಮೊದಲ ಹೆಂಡ್ತಿ ಜೀವನಾಂಶ ಕೇಳಿದ್ದಕ್ಕೆ ಗಂಡ ರಾಕ್ಷಸ ಅವತಾರ

ಎಲ್ಲೆಡೆ ಯುಗಾದಿ ಹಬ್ಬ ಮನೆ ಮಾಡಿದ್ದು, ಜನರು ಮನೆಯಲ್ಲಿ ಸಿಹಿ ಮಾಡಿ ಹಬ್ಬವನ್ನು ಸಂಭ್ರಮಿಸುತ್ತಿದ್ದರೆ, ಮತ್ತೊಂದೆಡೆ ವ್ಯಕ್ತಿಯೋರ್ವ ನಟ್ಟ ನಡುರಸ್ತೆಯಲ್ಲೇ ವ್ಯಕ್ತಿಯೋರ್ವ ತನ್ನ ಪತ್ನಿ ಹಾಗೂ ನಾದಿನಿ ಮೇಲೆ ಮಚ್ಚಿನಿಂದ ಮನ ಬಂದಂತೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಯಾವ ಮಟ್ಟಿಗೆ ಅಂದ್ರೆ ಕೈ ಬೆರಳುಗಳು ಕಟ್ ಆಗಿ ರಸ್ತೆಯಲ್ಲೇ ಬಿದ್ದಿವೆ. ಅಷ್ಟಕ್ಕೂ ಆ ನರಹಂತಕನ ಅಟ್ಟಹಾಸಕ್ಕೆ ಕಾರಣ ಏನು ಎನ್ನುವ ವಿವರ ಇಲ್ಲಿದೆ.

2ನೇ ಮದ್ವೆಯಾದ ಪತಿ: ಮೊದಲ ಹೆಂಡ್ತಿ ಜೀವನಾಂಶ ಕೇಳಿದ್ದಕ್ಕೆ ಗಂಡ ರಾಕ್ಷಸ ಅವತಾರ
ಪದ್ಮಾವತಿ, ತಿಮ್ಮಪ್ಪ
Follow us
ಭೀಮೇಶ್​​ ಪೂಜಾರ್
| Updated By: ರಮೇಶ್ ಬಿ. ಜವಳಗೇರಾ

Updated on: Mar 30, 2025 | 6:06 PM

ರಾಯಚೂರು, (ಮಾರ್ಚ್ 30): ಬೈಕ್​ನಲ್ಲಿ ಬಂದ ಯಮಕಿಂಕರ ಬೈಕ್​ನಲ್ಲಿಟ್ಟಿದ್ದ ಮಚ್ಚು ತೆಗೆದುಕೊಂಡು ಏಕಾಏಕಿ ಎಳೆನೀರು ಕೊಚ್ಚೊ ಹಾಗೆ ಕೊಚ್ಚಿ ಹಾಕಿದ್ದಾನೆ. ವ್ಯಕ್ತಿಯೋರ್ವ ತನ್ನ ಪತ್ನಿ(Wife) ಹಾಗೂ ನಾದಿನಿ ಮೇಲೆ ಮಚ್ಚಿನಿಂದ ಮನಬಂದಂತೆ ಹಲ್ಲೆ ಮಾಡಿದ್ದಾನೆ. ಈ ಘಟನೆ ನಡೆದಿದ್ದು, ರಾಯಚೂರು (Raichur) ತಾಲ್ಲೂಕಿನ ಏಗನೂರು ಗ್ರಾಮದಲ್ಲಿ. ತಿಮ್ಮಪ್ಪ ಎನ್ನುವ ವ್ಯಕ್ತಿಯೇ ಈ ರೀತಿ ವಿಕೃತವಾಗಿ ದಾಳಿ ನಡೆಸಿದ್ದಾನೆ. ಆರೋಪಿ ತಿಮ್ಮಪ್ಪ ತನ್ನ ಪತ್ನಿ ಪದ್ಮಾವತಿ, ಪದ್ಮಾವತಿ ತಂಗಿ ಭೂದೇವಿಯನ್ನು ಮಚ್ಚಿನಿಂದ ಹೊಡೆದಿದ್ದಾನೆ. ಈ ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ವಿಡಿಯೋವನ್ನು ಜನ ಬೆಚ್ಚಿಬಿದ್ದಿದ್ದಾರೆ.

ತಿಮ್ಮಪ್ಪ ಪತ್ನಿ ಹಾಗೂ ನಾದಿನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸೋಕೆ ಕಾರಣವೇ ಆಸ್ತಿ. ಹೌದು,ಈ ರಾಕ್ಷಸ ತಿಮ್ಮಪ್ಪ ಯಾದವ್ ಹಾಗೂ ಪತ್ನಿ ಪದ್ಮಾವತಿಗೆ ನಾಲ್ಕು ಜನ ಮುದ್ದಾದ ಮಕ್ಕಳಿದ್ದಾರೆ. ಮೊದಮೊದಲು ಮಟ್ಕಾ ದಂಧೆ ನಡೆಸ್ತಿದ್ದನಂತೆ. ಬಳಿಕ ಪತ್ನಿಗೆ ನಿತ್ಯ ಟಾರ್ಚರ್ ಶುರು ಮಾಡಿದ್ದ. ಅಲ್ಲದೇ ಎರಡನೇ ಮದುವೆ ಕೂಡ ಆಗಿದ್ದಾನಂತೆ. ಹೀಗಾಗಿ ಪತ್ನಿ ಪದ್ಮಾವತಿ ಕೋರ್ಟ್​ ಮೊರೆ ಹೋಗಿ ಜೀವನಾಂಶಕ್ಕೆ ಬೇಡಿಕೆ ಇಟ್ಟಿದ್ದಳು. ಕೋರ್ಟ್ ಕೂಡ ಪತ್ನಿ ಪದ್ಮಾವತಿಗೆ ಜೀವನಾಂಶ ಕೊಡುವಂತೆ ಪತಿ ತಿಮ್ಮಪ್ಪಗೆ ಸೂಚಿಸಿತ್ತು. ಆದ್ರೆ ಕಳೆದ ಎರಡು ತಿಂಗಳ ಹಿಂದಷ್ಟೇ ಆರೋಪಿ ತಿಮ್ಮಪ್ಪ ಪತ್ನಿಗೆ ಜೀವನಾಂಶ ಕೊಡಲಾಗದೇ ಜೈಲು ಸೇರಿದ್ದ. ಬಳಿಕ ಮತ್ತೆ ಹೊರ ಬಂದು ಪತ್ನಿಗೆ ಟಾರ್ಚರ್ ಕೊಡಲಾರಂಭಿಸಿದ್ದಾನೆ.

ಇದನ್ನೂ ಓದಿ: ಯಾದಗಿರಿ ಡಬಲ್​ ಮರ್ಡರ್​ ಪ್ರಕರಣಕ್ಕೆ ಟ್ವಿಸ್ಟ್: ಹೆಣ್ಣಿನ ವಿಚಾರಕ್ಕೆ ಶುರುವಾದ ದ್ವೇಷ ಇಬ್ಬರ ಕೊಲೆಯಲ್ಲಿ ಅಂತ್ಯ

ತಿಮ್ಮಪ್ಪ ಐದು ಎಕರೆ ಜಮೀನು ಮಾಲೀಕ. ಹೀಗಾಗಿ ತನ್ನ ನಾಲ್ಕು ಮಕ್ಕಳ ಭವಿಷ್ಯಕ್ಕಾಗಿ ಜಮೀನಿನಲ್ಲಿ ಪಾಲು ಕೇಳಿದ್ಲು ಪದ್ಮಾವತಿ. ಈ ಮಧ್ಯೆ ನಿನ್ನೆಯಷ್ಟೇ ಪದ್ಮಾವತಿ ಜೀವನಾಂಶದ ಕುರಿತು ಮತ್ತೆ ಕೋರ್ಟ್​ಗೆ ಹೋಗಿ ಹೋಗಿದ್ದಳು. ಇತ್ತ ಆಕೆ ತಂಗಿ ಭೂದೇವಿಗೆ ನಿಶ್ಚಿತಾರ್ಥವಾಗಿದ್ದು ಇನ್ನೊಂದು ತಿಂಗಳಲ್ಲಿ ಮದುವೆಯಿದೆ. ಹೀಗಾಗಿ ಅಕ್ಕ ಪದ್ಮಾವತಿ ಜೊತೆ ಟೇಲರಿಂಗ್ ಕೆಲಸ ಕಲಿಯಲಿಕ್ಕೆ ಆಕೆ ಜೊತೆಗಿದ್ದಳು. ನಿನ್ನೆ ಗ್ರಾಮದಲ್ಲಿ ಅಕ್ಕತಂಗಿ ನಡೆದುಕೊಂಡು ಹೋಗುತ್ತಿದ್ದಾಗ ಬೈಕ್​ನಲ್ಲಿ ಬಂದ ಪಾಪಿ ತಿಮ್ಮಪ್ಪ ಇಬ್ಬರ ಮೇಲೂ ಮಚ್ಚಿನಿಂದ ದಾಳಿ ಮಾಡಿದ್ದಾನೆ.

ಇದನ್ನೂ ಓದಿ
Image
ಬೆಳಗಾವಿ: ಸಾರ್ವಜನಿಕವಾಗಿ ಬಟ್ಟೆ ಹರಿದು ಅತ್ತೆ ಮೇಲೆ ಅಳಿಯನಿಂದ ಹಲ್ಲೆ
Image
ಗರ್ಭಿಣಿಯಾಗಿದ್ದಾಗ್ಲೇ ಬೇರೊಬ್ಬನ ಓಡಿಹೋಗಿದ್ದ ಮಹಿಳೆ, ಮಗುವಿನ ಕೊಂದ ಮಲತಂದೆ
Image
ಪತ್ನಿ ಜತೆ ಅಕ್ರಮ ಸಂಬಂಧ, ಗುಂಡಿ ತೋಡಿ ಬಾಡಿಗೆದಾರನನ್ನು ಜೀವಂತ ಸಮಾಧಿ
Image
ಮದುವೆಯಾಗಿ ಕೇವಲ 15 ದಿನಕ್ಕೆ ಗಂಡನ ಕೊಲೆಗೆ ಸುಪಾರಿ ಕೊಟ್ಟ ಹೆಂಡತಿ

ಘಟನೆಯಲ್ಲಿ ಪದ್ಮಾವತಿಯ ಕೈ ಬೆರಳುಗಳು ತುಂಡಾಗಿ ರಸ್ತೆಯಲ್ಲಿ ಬಿದ್ದಿದ್ದು, ಗಂಭೀರವಾಗಿ ಗಾಯಗೊಂಡಿದ್ದಾಳೆ. ಮತ್ತೊಂದೆಡೆ ಅಕ್ಕನ ಜೊತೆಗಿದ್ದ ತಂಗಿಯ ಮುಂಗೈ ತುಂಗಾಡಿಗಿದ್ದು, ಸದ್ಯ ರಿಮ್ಸ್​ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಮಚ್ಚಿನಿಂದ ದಾಳಿ ಮಾಡಿದ್ದ ತಿಮ್ಮಪ್ಪನನ್ನ ರಾಯಚೂರು ಗ್ರಾಮೀಣ ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅವಳೇ ನನ್ನ ಹೆಂಡತಿ, ತಾಳೆ ಕಟ್ಟಿದ್ದೇನೆ: ಮಡೆನೂರು ಮನು ಶಾಕಿಂಗ್ ಆಡಿಯೋ
ಅವಳೇ ನನ್ನ ಹೆಂಡತಿ, ತಾಳೆ ಕಟ್ಟಿದ್ದೇನೆ: ಮಡೆನೂರು ಮನು ಶಾಕಿಂಗ್ ಆಡಿಯೋ
25 ವರ್ಷಗಳ ನಂತರ ಆಂಗ್ಲರ ವಿರುದ್ಧ ಶತಕ ದಾಖಲು
25 ವರ್ಷಗಳ ನಂತರ ಆಂಗ್ಲರ ವಿರುದ್ಧ ಶತಕ ದಾಖಲು
ಆಸ್ಪತ್ರೆಗೆ ಹೋಗಲು ರಸ್ತೆಯಿಲ್ಲದೇ ವೃದ್ಧೆ ಪರದಾಟ
ಆಸ್ಪತ್ರೆಗೆ ಹೋಗಲು ರಸ್ತೆಯಿಲ್ಲದೇ ವೃದ್ಧೆ ಪರದಾಟ
ಗಂಡ-ಹೆಂಡ್ತಿ ಜಗಳದಲ್ಲಿ ಮದ್ವೆ ಮಾಡಿಸಿದ್ದ ಬ್ರೋಕರ್ ಕೊಲೆ
ಗಂಡ-ಹೆಂಡ್ತಿ ಜಗಳದಲ್ಲಿ ಮದ್ವೆ ಮಾಡಿಸಿದ್ದ ಬ್ರೋಕರ್ ಕೊಲೆ
ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?