AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2ನೇ ಮದ್ವೆಯಾದ ಪತಿ: ಮೊದಲ ಹೆಂಡ್ತಿ ಜೀವನಾಂಶ ಕೇಳಿದ್ದಕ್ಕೆ ಗಂಡ ರಾಕ್ಷಸ ಅವತಾರ

ಎಲ್ಲೆಡೆ ಯುಗಾದಿ ಹಬ್ಬ ಮನೆ ಮಾಡಿದ್ದು, ಜನರು ಮನೆಯಲ್ಲಿ ಸಿಹಿ ಮಾಡಿ ಹಬ್ಬವನ್ನು ಸಂಭ್ರಮಿಸುತ್ತಿದ್ದರೆ, ಮತ್ತೊಂದೆಡೆ ವ್ಯಕ್ತಿಯೋರ್ವ ನಟ್ಟ ನಡುರಸ್ತೆಯಲ್ಲೇ ವ್ಯಕ್ತಿಯೋರ್ವ ತನ್ನ ಪತ್ನಿ ಹಾಗೂ ನಾದಿನಿ ಮೇಲೆ ಮಚ್ಚಿನಿಂದ ಮನ ಬಂದಂತೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಯಾವ ಮಟ್ಟಿಗೆ ಅಂದ್ರೆ ಕೈ ಬೆರಳುಗಳು ಕಟ್ ಆಗಿ ರಸ್ತೆಯಲ್ಲೇ ಬಿದ್ದಿವೆ. ಅಷ್ಟಕ್ಕೂ ಆ ನರಹಂತಕನ ಅಟ್ಟಹಾಸಕ್ಕೆ ಕಾರಣ ಏನು ಎನ್ನುವ ವಿವರ ಇಲ್ಲಿದೆ.

2ನೇ ಮದ್ವೆಯಾದ ಪತಿ: ಮೊದಲ ಹೆಂಡ್ತಿ ಜೀವನಾಂಶ ಕೇಳಿದ್ದಕ್ಕೆ ಗಂಡ ರಾಕ್ಷಸ ಅವತಾರ
ಪದ್ಮಾವತಿ, ತಿಮ್ಮಪ್ಪ
ಭೀಮೇಶ್​​ ಪೂಜಾರ್
| Edited By: |

Updated on: Mar 30, 2025 | 6:06 PM

Share

ರಾಯಚೂರು, (ಮಾರ್ಚ್ 30): ಬೈಕ್​ನಲ್ಲಿ ಬಂದ ಯಮಕಿಂಕರ ಬೈಕ್​ನಲ್ಲಿಟ್ಟಿದ್ದ ಮಚ್ಚು ತೆಗೆದುಕೊಂಡು ಏಕಾಏಕಿ ಎಳೆನೀರು ಕೊಚ್ಚೊ ಹಾಗೆ ಕೊಚ್ಚಿ ಹಾಕಿದ್ದಾನೆ. ವ್ಯಕ್ತಿಯೋರ್ವ ತನ್ನ ಪತ್ನಿ(Wife) ಹಾಗೂ ನಾದಿನಿ ಮೇಲೆ ಮಚ್ಚಿನಿಂದ ಮನಬಂದಂತೆ ಹಲ್ಲೆ ಮಾಡಿದ್ದಾನೆ. ಈ ಘಟನೆ ನಡೆದಿದ್ದು, ರಾಯಚೂರು (Raichur) ತಾಲ್ಲೂಕಿನ ಏಗನೂರು ಗ್ರಾಮದಲ್ಲಿ. ತಿಮ್ಮಪ್ಪ ಎನ್ನುವ ವ್ಯಕ್ತಿಯೇ ಈ ರೀತಿ ವಿಕೃತವಾಗಿ ದಾಳಿ ನಡೆಸಿದ್ದಾನೆ. ಆರೋಪಿ ತಿಮ್ಮಪ್ಪ ತನ್ನ ಪತ್ನಿ ಪದ್ಮಾವತಿ, ಪದ್ಮಾವತಿ ತಂಗಿ ಭೂದೇವಿಯನ್ನು ಮಚ್ಚಿನಿಂದ ಹೊಡೆದಿದ್ದಾನೆ. ಈ ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ವಿಡಿಯೋವನ್ನು ಜನ ಬೆಚ್ಚಿಬಿದ್ದಿದ್ದಾರೆ.

ತಿಮ್ಮಪ್ಪ ಪತ್ನಿ ಹಾಗೂ ನಾದಿನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸೋಕೆ ಕಾರಣವೇ ಆಸ್ತಿ. ಹೌದು,ಈ ರಾಕ್ಷಸ ತಿಮ್ಮಪ್ಪ ಯಾದವ್ ಹಾಗೂ ಪತ್ನಿ ಪದ್ಮಾವತಿಗೆ ನಾಲ್ಕು ಜನ ಮುದ್ದಾದ ಮಕ್ಕಳಿದ್ದಾರೆ. ಮೊದಮೊದಲು ಮಟ್ಕಾ ದಂಧೆ ನಡೆಸ್ತಿದ್ದನಂತೆ. ಬಳಿಕ ಪತ್ನಿಗೆ ನಿತ್ಯ ಟಾರ್ಚರ್ ಶುರು ಮಾಡಿದ್ದ. ಅಲ್ಲದೇ ಎರಡನೇ ಮದುವೆ ಕೂಡ ಆಗಿದ್ದಾನಂತೆ. ಹೀಗಾಗಿ ಪತ್ನಿ ಪದ್ಮಾವತಿ ಕೋರ್ಟ್​ ಮೊರೆ ಹೋಗಿ ಜೀವನಾಂಶಕ್ಕೆ ಬೇಡಿಕೆ ಇಟ್ಟಿದ್ದಳು. ಕೋರ್ಟ್ ಕೂಡ ಪತ್ನಿ ಪದ್ಮಾವತಿಗೆ ಜೀವನಾಂಶ ಕೊಡುವಂತೆ ಪತಿ ತಿಮ್ಮಪ್ಪಗೆ ಸೂಚಿಸಿತ್ತು. ಆದ್ರೆ ಕಳೆದ ಎರಡು ತಿಂಗಳ ಹಿಂದಷ್ಟೇ ಆರೋಪಿ ತಿಮ್ಮಪ್ಪ ಪತ್ನಿಗೆ ಜೀವನಾಂಶ ಕೊಡಲಾಗದೇ ಜೈಲು ಸೇರಿದ್ದ. ಬಳಿಕ ಮತ್ತೆ ಹೊರ ಬಂದು ಪತ್ನಿಗೆ ಟಾರ್ಚರ್ ಕೊಡಲಾರಂಭಿಸಿದ್ದಾನೆ.

ಇದನ್ನೂ ಓದಿ: ಯಾದಗಿರಿ ಡಬಲ್​ ಮರ್ಡರ್​ ಪ್ರಕರಣಕ್ಕೆ ಟ್ವಿಸ್ಟ್: ಹೆಣ್ಣಿನ ವಿಚಾರಕ್ಕೆ ಶುರುವಾದ ದ್ವೇಷ ಇಬ್ಬರ ಕೊಲೆಯಲ್ಲಿ ಅಂತ್ಯ

ತಿಮ್ಮಪ್ಪ ಐದು ಎಕರೆ ಜಮೀನು ಮಾಲೀಕ. ಹೀಗಾಗಿ ತನ್ನ ನಾಲ್ಕು ಮಕ್ಕಳ ಭವಿಷ್ಯಕ್ಕಾಗಿ ಜಮೀನಿನಲ್ಲಿ ಪಾಲು ಕೇಳಿದ್ಲು ಪದ್ಮಾವತಿ. ಈ ಮಧ್ಯೆ ನಿನ್ನೆಯಷ್ಟೇ ಪದ್ಮಾವತಿ ಜೀವನಾಂಶದ ಕುರಿತು ಮತ್ತೆ ಕೋರ್ಟ್​ಗೆ ಹೋಗಿ ಹೋಗಿದ್ದಳು. ಇತ್ತ ಆಕೆ ತಂಗಿ ಭೂದೇವಿಗೆ ನಿಶ್ಚಿತಾರ್ಥವಾಗಿದ್ದು ಇನ್ನೊಂದು ತಿಂಗಳಲ್ಲಿ ಮದುವೆಯಿದೆ. ಹೀಗಾಗಿ ಅಕ್ಕ ಪದ್ಮಾವತಿ ಜೊತೆ ಟೇಲರಿಂಗ್ ಕೆಲಸ ಕಲಿಯಲಿಕ್ಕೆ ಆಕೆ ಜೊತೆಗಿದ್ದಳು. ನಿನ್ನೆ ಗ್ರಾಮದಲ್ಲಿ ಅಕ್ಕತಂಗಿ ನಡೆದುಕೊಂಡು ಹೋಗುತ್ತಿದ್ದಾಗ ಬೈಕ್​ನಲ್ಲಿ ಬಂದ ಪಾಪಿ ತಿಮ್ಮಪ್ಪ ಇಬ್ಬರ ಮೇಲೂ ಮಚ್ಚಿನಿಂದ ದಾಳಿ ಮಾಡಿದ್ದಾನೆ.

ಇದನ್ನೂ ಓದಿ
Image
ಬೆಳಗಾವಿ: ಸಾರ್ವಜನಿಕವಾಗಿ ಬಟ್ಟೆ ಹರಿದು ಅತ್ತೆ ಮೇಲೆ ಅಳಿಯನಿಂದ ಹಲ್ಲೆ
Image
ಗರ್ಭಿಣಿಯಾಗಿದ್ದಾಗ್ಲೇ ಬೇರೊಬ್ಬನ ಓಡಿಹೋಗಿದ್ದ ಮಹಿಳೆ, ಮಗುವಿನ ಕೊಂದ ಮಲತಂದೆ
Image
ಪತ್ನಿ ಜತೆ ಅಕ್ರಮ ಸಂಬಂಧ, ಗುಂಡಿ ತೋಡಿ ಬಾಡಿಗೆದಾರನನ್ನು ಜೀವಂತ ಸಮಾಧಿ
Image
ಮದುವೆಯಾಗಿ ಕೇವಲ 15 ದಿನಕ್ಕೆ ಗಂಡನ ಕೊಲೆಗೆ ಸುಪಾರಿ ಕೊಟ್ಟ ಹೆಂಡತಿ

ಘಟನೆಯಲ್ಲಿ ಪದ್ಮಾವತಿಯ ಕೈ ಬೆರಳುಗಳು ತುಂಡಾಗಿ ರಸ್ತೆಯಲ್ಲಿ ಬಿದ್ದಿದ್ದು, ಗಂಭೀರವಾಗಿ ಗಾಯಗೊಂಡಿದ್ದಾಳೆ. ಮತ್ತೊಂದೆಡೆ ಅಕ್ಕನ ಜೊತೆಗಿದ್ದ ತಂಗಿಯ ಮುಂಗೈ ತುಂಗಾಡಿಗಿದ್ದು, ಸದ್ಯ ರಿಮ್ಸ್​ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಮಚ್ಚಿನಿಂದ ದಾಳಿ ಮಾಡಿದ್ದ ತಿಮ್ಮಪ್ಪನನ್ನ ರಾಯಚೂರು ಗ್ರಾಮೀಣ ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ