Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂತ್ರಾಲಯ ರಾಯರ ಮಠದ ಹೆಸರಿನಲ್ಲಿ ಹಣ ವಸೂಲಿ! ಇಬ್ಬರು ಅರೆಸ್ಟ್

ಆರೋಪಿಗಳು ಆನ್​ಲೈನ್​ನಲ್ಲಿ ಮಠದ ಪ್ರಸಾದ ನೀಡುತ್ತೇವೆಂದು ಹೇಳಿ ಭಕ್ತರಿಂದ ಹಣ ಸಂಗ್ರಹಿಸಿ ವಂಚಿಸಿದ್ದಾರೆ. ಜೊತೆಗೆ ಕೊರೊನಾ ಬಳಿಕ ಮಠದ ಸಿಬ್ಬಂದಿ, ಅರ್ಚಕರು ಸಂಕಷ್ಟದಲ್ಲಿದ್ದಾರೆ.

ಮಂತ್ರಾಲಯ ರಾಯರ ಮಠದ ಹೆಸರಿನಲ್ಲಿ ಹಣ ವಸೂಲಿ! ಇಬ್ಬರು ಅರೆಸ್ಟ್
ಮಂತ್ರಾಲಯ ಪ್ರಸಾದ
Follow us
TV9 Web
| Updated By: sandhya thejappa

Updated on:Jun 26, 2022 | 11:45 AM

ರಾಯಚೂರು: ಮಂತ್ರಾಲಯದ (Mantralayam) ರಾಯರ ಮಠದ ಹೆಸರಿನಲ್ಲಿ ಸರಣಿ ವಂಚನೆ ಮಾಡಿದ್ದ ಇಬ್ಬರು ಆರೋಪಿಗಳು ಅರೆಸ್ಟ್ ಆಗಿದ್ದಾರೆ. ಆರೋಪಿಗಳು ಆನ್​ಲೈನ್​ನಲ್ಲಿ (Online) ಮಠದ ಪ್ರಸಾದ ನೀಡುತ್ತೇವೆಂದು ಹೇಳಿ ಭಕ್ತರಿಂದ ಹಣ ಸಂಗ್ರಹಿಸಿ ವಂಚಿಸಿದ್ದಾರೆ. ಜೊತೆಗೆ ಕೊರೊನಾ ಬಳಿಕ ಮಠದ ಸಿಬ್ಬಂದಿ, ಅರ್ಚಕರು ಸಂಕಷ್ಟದಲ್ಲಿದ್ದಾರೆ. ಮಠದ ಸಿಬ್ಬಂದಿಯ ಸಹಾಯಕ್ಕಾಗಿ ದೇಣಿಗೆ ನೀಡುವಂತೆ ಹಣ ವಸೂಲಿ ಮಾಡಿದ್ದಾರೆ. ಅಲ್ಲದೆ ರಾಯರ ಮಠದ ಹೆಸರಲ್ಲಿ ನಕಲಿ ವೆಬ್​ಸೈಟ್​ ಐಡಿಯನ್ನೂ ಸೃಷ್ಟಿಸಿದ್ದಾರೆ ಎಂದು ತಿಳಿದುಬಂದಿದೆ.

ಆರೋಪಿಗಳು ವೆಬ್​ಸೈಟ್​ ಮೂಲಕ ಭಕ್ತರಿಂದ ಅಪಾರ ಪ್ರಮಾಣದ ಹಣ ವಸೂಲಿ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಭಕ್ತರು ಈ ಬಗ್ಗೆ ಮಠದ ಇ-ಮೇಲ್ಗೆ ಸಂದೇಶ ರವಾನಿಸಿದ್ದಾರೆ. ಭಕ್ತರು ಕಳಿಸಿದ್ದ ಇ-ಮೇಲ್ ಸಂದೇಶದಿಂದ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ಮಂತ್ರಾಲಯ ಪೊಲೀಸ್ ಠಾಣೆಯಲ್ಲಿ 2 ಪ್ರತ್ಯೇಕ ಕೇಸ್ ದಾಖಲಾಗಿದ್ದು, ಇಬ್ಬರನ್ನು ಬಂಧಿಸಲಾಗಿದೆ.

ಇದನ್ನೂ ಓದಿ: Viral Video: ವಿಮಾನದಲ್ಲಿ ಎಸಿ ಸ್ಥಗಿತಗೊಂಡು ಪ್ರಯಾಕರು ಸುಸ್ತೋ ಸುಸ್ತು! ವಿಮಾನ ಬಹಿಷ್ಕಾರದ ಎಚ್ಚರಿಕೆ ನೀಡಿದ ಪ್ರಯಾಣಿಕರು

ಇದನ್ನೂ ಓದಿ
Image
SSLC Supplementary Exam 2022: ಜೂನ್​ 27ರಿಂದ ಜುಲೈ 4ವರೆಗೆ ಎಸ್​​ಎಸ್​ಎಲ್​ಸಿ ಪೂರಕ ಪರೀಕ್ಷೆ ಆರಂಭ
Image
Viral Video: ವಿಮಾನದಲ್ಲಿ ಎಸಿ ಸ್ಥಗಿತಗೊಂಡು ಪ್ರಯಾಕರು ಸುಸ್ತೋ ಸುಸ್ತು! ವಿಮಾನ ಬಹಿಷ್ಕಾರದ ಎಚ್ಚರಿಕೆ ನೀಡಿದ ಪ್ರಯಾಣಿಕರು
Image
ನಿಮ್ಮ ದೇಹ ಕ್ರಿಸ್ತನಿಗೆ ಸೇರಿದ್ದು: ಅಮೆರಿಕದಲ್ಲಿ ಗರ್ಭಪಾತ ನಿಷೇಧ ತೀರ್ಪಿನ ಹಿಂದೆ ಸಂಪ್ರದಾಯವಾದಿಗಳ ಪ್ರಭಾವ, ಮಹಿಳೆಯರಿಂದ ತೀವ್ರ ಪ್ರತಿಭಟನೆ
Image
ಮುದ್ದಿನ ಶ್ವಾನದೊಂದಿಗೆ 777 ಚಾರ್ಲಿ ಸಿನಿಮಾ ವೀಕ್ಷಿಸಿದ ಜನಾರ್ದನ ರೆಡ್ಡಿ; ವೈರಲ್ ವಿಡಿಯೋ ಇಲ್ಲಿದೆ

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಭಕ್ತರು, ಕೊರೊನಾ ಬಳಿಕ ನಕಲಿ ವೆಬ್​ಸೈಟ್​ನಲ್ಲಿ ದೇವರ ಹೆಸರಲ್ಲಿ ವಂಚನೆಗಳು ನಡೆಯುತ್ತಿವೆ. ದೇವಾಸ್ಥಾನದಲ್ಲಿ 25 ರೂಪಾಯಿಗೆ ಸಿಗುತ್ತದೆ. ಆದರೆ ವಂಚಕರು 400- 500 ರೂ. ಗೆ ಮಾರಾಟ ಮಾಡುತ್ತಿದ್ದಾರೆ. ದೇವರ ಹೆಸರಲ್ಲಿ ವಂಚನೆಗಳು ನಡೆಯಬಾರದು. ರಾಯರ ಹೆಸರಲ್ಲಿ ಮಾಡುವ ವಂಚನೆಗಳಿಗೆ ಒಳಗಾಗಬೇಡಿ ಎಂದರು.

ಮಠದ ವ್ಯವಸ್ಥಾಪಕರು ಮಾತನಾಡಿ, ಪರಿಮಳ ಪ್ರಸಾದ ಪವಿತ್ರವಾದ ಪ್ರಸಾದ. ಈ ಪ್ರಸಾದವನ್ನು ಇಲ್ಲಿ 20 ರೂ.ಗೆ ಮಾರಾಟ ಮಾಡುತ್ತೇವೆ. ಆದರೆ ಕಿಡಿಗೇಡಿಗಳು 400ರಿಂದ 500 ರೂ.ಗೆ ಮಾರಾಟ ಮಾಡುತ್ತಿದ್ದಾರೆ. ನಾವು ನಮ್ಮ ವೆಬ್​ಸೈಟ್​ನಲ್ಲಿ ಪ್ರಸಾದ ವಿತರಣೆ ಮಾಡುತ್ತಿಲ್ಲ ಎಂದು ತಿಳಿಸಿದರು.

ಇದನ್ನೂ ಓದಿ: Mann Ki Baat: ಮನ್​ ಕಿ ಬಾತ್​ನಲ್ಲಿ 1975ರ ತುರ್ತು ಪರಿಸ್ಥಿತಿ ನೆನಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ

Published On - 10:58 am, Sun, 26 June 22

ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್