AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Raichur: ಗೃಹ ಲಕ್ಷ್ಮೀ ಯೋಜನೆ ಅರ್ಜಿಗೆ ಜನರಿಂದ ಹಣ ವಸೂಲಿ, 3 ಸೈಬರ್ ಸೆಂಟರ್​ಗಳ ವಿರುದ್ಧ ಎಫ್​ಐಆರ್ ದಾಖಲು

ಗೃಹ ಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಲು ಜನರಿಂದ ಹಣ ವಸೂಲಿ ಮಾಡುತ್ತಿದ್ದ ಸೈಬರ್​ ಸೆಂಟರ್​ಗಳ ಮೇಲೆ ಮಾನ್ವಿ ತಹಶೀಲ್ದಾರ್​ ದಾಳಿ ಮಾಡಿದ್ದಾರೆ.

Raichur: ಗೃಹ ಲಕ್ಷ್ಮೀ ಯೋಜನೆ ಅರ್ಜಿಗೆ ಜನರಿಂದ ಹಣ ವಸೂಲಿ, 3 ಸೈಬರ್ ಸೆಂಟರ್​ಗಳ ವಿರುದ್ಧ ಎಫ್​ಐಆರ್ ದಾಖಲು
ಲಕ್ಷ್ಮೀ ಕಂಪ್ಯೂಟರ್
ಭೀಮೇಶ್​​ ಪೂಜಾರ್
| Edited By: |

Updated on:Jul 25, 2023 | 10:50 AM

Share

ರಾಯಚೂರು, (ಜುಲೈ 25): ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷೆಯ ಐದು ಗ್ಯಾರಂಟಿಗಳಲ್ಲಿ ಪ್ರಮುಖವಾದ ‘ಗೃಹಲಕ್ಷ್ಮಿ’ ಯೋಜನೆ (gruha lakshmi scheme) ಜಾರಿಯಾಗಿದೆ. ಮನೆ ಯಜಮಾನಿಗೆ ಮಾಸಿಕ 2000 ನೀಡುವ ಈ ‘ಗೃಹಲಕ್ಷ್ಮಿ’ ಯೋಜನೆಗೆ ಆನ್​ಲೈನ್​ ಮೂಲಕ ಈಗಾಗಲೇ ನೋಂದಣಿ ಪ್ರತಿಕ್ರಿಯೆ ಶುರುವಾಗಿದ್ದು, ಅರ್ಜಿ ಸಲ್ಲಿಕೆಗೆ ಯಾವುದೇ ಹಣ ಪಡೆಯುವಂತಿಲ್ಲ ಎಂದು ಸರ್ಕಾರವೇ ಹೇಳಿದೆ. ಆದರೂ ಖಾಸಗಿ ಸೈಬರ್ ಸೆಂಟರ್​ಗಳು(cyber centre) ಸಾರ್ವಜನಿಕರಿಂದ ಹಣ ವಸೂಲಿ ಮಾಡುತ್ತಿವೆ. ಅದರಂತೆ ರಾಯಚೂರಿನಲ್ಲಿ ಹಣ ವಸೂಲಿ ಮಾಡುತ್ತಿದ್ದ ಮೂರು ಸೈಬರ್ ಕೇಂದ್ರಗಳ ವಿರುದ್ಧ ದಾಖಲಾಗಿದೆ.

ಇದನ್ನೂ ಓದಿ: Gruha Lakshmi: ಅರ್ಜಿ ಸಲ್ಲಿಸಲು ಹಣ ಪಡೆದ ಗ್ರಾಮ ಒನ್ ಸಿಬ್ಬಂದಿ ಲಾಗಿನ್ ಐಡಿ ರದ್ದು

ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆಗೆ ಗ್ರಾಹಕರಿಂದ 100-200 ರೂ. ವಸೂಲಿ ಮಾಡುತ್ತಿದ್ದ ರಾಯಚೂರು ಜಿಲ್ಲೆ ಮಾನ್ವಿಯ 3 ಸೈಬರ್ ಕೇಂದ್ರಗಳ ವಿರುದ್ಧ ದೂರು ದಾಖಲಾಗಿದೆ. ಹಣ ವಸೂಲಿ ಮಾಡುತ್ತಿದ್ದ ಮಾಹಿತಿ ಮೇರೆಗೆ ಮಾನ್ವಿ ತಹಶೀಲ್ದಾರ್ ಚಂದ್ರಕಾಂತ್ ಅವರು ಸೈಬರ್​ ಸೆಂಟರ್​ಗಳ ಮೇಲೆ ದಾಳಿ ಮಾಡಿದ್ದು, ಈ ವೇಳೆ ಅಧಿಕೃತ ಸರ್ಕಾರಿ ಐಡಿಯನ್ನ ಅಕ್ರಮವಾಗಿ ಪಡೆದು ಸಾರ್ವಜನಿಕರಿಂದ ಹಣ ವಸೂಲಿ ಮಾಡಿ ಅರ್ಜಿ ಸಲ್ಲಿಕೆ ಮಾಡುತ್ತಿರುವುದು ಪತ್ತೆಯಾಗಿದೆ.

ಎಕ್ಸೆಲ್ ಕಂಪ್ಯೂಟರ್, ಲಕ್ಷ್ಮೀ ಕಂಪ್ಯೂಟರ್, ಸೂರ್ಯ ಕಂಪ್ಯೂಟರ್​ ಸೆಂಟರ್​ನಲ್ಲಿ ಫಲಾನುಭವಿಗಳಿಂದ ಹಣ ವಸೂಲ್ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಚಂದ್ರಕಾಂತ್ ಅವರು ನಗರದ ಮೂರು ಸೈಬರ್ ಸೆಂಟರ್​ ವಿರುದ್ಧ ಮಾನ್ವಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಇವರ ದೂರಿನ ಮೇರೆಗೆ ಪೊಲೀಸರು, ಐಟಿ ಆಕ್ಟ್ ಹಾಗೂ ಐಪಿಸಿ ಸೆಕ್ಷನ್ 420 ವಂಚನೆ ಆರೋಪದಡಿ ಎಫ್​ಐಆರ್​ ದಾಖಲಿಸಿಕೊಂಡಿದ್ದಾರೆ.

ಗೃಹ ಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಲು ಗ್ರಾಮ ಒನ್, ಬಾಪೂಜಿ ಸೇವಾ ಕೇಂದ್ರ ಹಾಗೂ ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಕೆ ಸರ್ಕಾರ ಅವಕಾಶ ಮಾಡಿಕೊಟ್ಟಿದೆ. ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಗಂಭೀರವಾಗಿ ಪರಿಗಣಿಸಿದ್ದು, ಹಣ ಪಡೆದುಕೊಂಡರೆ ಕ್ರಿಮಿನಲ್ ಕೇಸ್ ದಾಖಲಿಸಲಾಗುವುದು ಜೊತೆ ಐಡಿ ಕ್ಯಾನ್ಸಲ್ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ. ಆದರೂ ಸಹ ಖಾಸಗಿ ಸೈಬರ್ ಸೆಂಟರ್​ಗಳು ಅಕ್ರಮವಾಗಿ ಐಡಿ ಪಡೆದುಕೊಂಡು ಸಾರ್ವಜನಿಕರಿಂದ ಹಣ ವಸೂಲಿಗೆ ಇಳಿದಿವೆ

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 10:27 am, Tue, 25 July 23

Follow Us
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!