AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Raichur: ಗೃಹ ಲಕ್ಷ್ಮೀ ಯೋಜನೆ ಅರ್ಜಿಗೆ ಜನರಿಂದ ಹಣ ವಸೂಲಿ, 3 ಸೈಬರ್ ಸೆಂಟರ್​ಗಳ ವಿರುದ್ಧ ಎಫ್​ಐಆರ್ ದಾಖಲು

ಗೃಹ ಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಲು ಜನರಿಂದ ಹಣ ವಸೂಲಿ ಮಾಡುತ್ತಿದ್ದ ಸೈಬರ್​ ಸೆಂಟರ್​ಗಳ ಮೇಲೆ ಮಾನ್ವಿ ತಹಶೀಲ್ದಾರ್​ ದಾಳಿ ಮಾಡಿದ್ದಾರೆ.

Raichur: ಗೃಹ ಲಕ್ಷ್ಮೀ ಯೋಜನೆ ಅರ್ಜಿಗೆ ಜನರಿಂದ ಹಣ ವಸೂಲಿ, 3 ಸೈಬರ್ ಸೆಂಟರ್​ಗಳ ವಿರುದ್ಧ ಎಫ್​ಐಆರ್ ದಾಖಲು
ಲಕ್ಷ್ಮೀ ಕಂಪ್ಯೂಟರ್
ಭೀಮೇಶ್​​ ಪೂಜಾರ್
| Edited By: |

Updated on:Jul 25, 2023 | 10:50 AM

Share

ರಾಯಚೂರು, (ಜುಲೈ 25): ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷೆಯ ಐದು ಗ್ಯಾರಂಟಿಗಳಲ್ಲಿ ಪ್ರಮುಖವಾದ ‘ಗೃಹಲಕ್ಷ್ಮಿ’ ಯೋಜನೆ (gruha lakshmi scheme) ಜಾರಿಯಾಗಿದೆ. ಮನೆ ಯಜಮಾನಿಗೆ ಮಾಸಿಕ 2000 ನೀಡುವ ಈ ‘ಗೃಹಲಕ್ಷ್ಮಿ’ ಯೋಜನೆಗೆ ಆನ್​ಲೈನ್​ ಮೂಲಕ ಈಗಾಗಲೇ ನೋಂದಣಿ ಪ್ರತಿಕ್ರಿಯೆ ಶುರುವಾಗಿದ್ದು, ಅರ್ಜಿ ಸಲ್ಲಿಕೆಗೆ ಯಾವುದೇ ಹಣ ಪಡೆಯುವಂತಿಲ್ಲ ಎಂದು ಸರ್ಕಾರವೇ ಹೇಳಿದೆ. ಆದರೂ ಖಾಸಗಿ ಸೈಬರ್ ಸೆಂಟರ್​ಗಳು(cyber centre) ಸಾರ್ವಜನಿಕರಿಂದ ಹಣ ವಸೂಲಿ ಮಾಡುತ್ತಿವೆ. ಅದರಂತೆ ರಾಯಚೂರಿನಲ್ಲಿ ಹಣ ವಸೂಲಿ ಮಾಡುತ್ತಿದ್ದ ಮೂರು ಸೈಬರ್ ಕೇಂದ್ರಗಳ ವಿರುದ್ಧ ದಾಖಲಾಗಿದೆ.

ಇದನ್ನೂ ಓದಿ: Gruha Lakshmi: ಅರ್ಜಿ ಸಲ್ಲಿಸಲು ಹಣ ಪಡೆದ ಗ್ರಾಮ ಒನ್ ಸಿಬ್ಬಂದಿ ಲಾಗಿನ್ ಐಡಿ ರದ್ದು

ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆಗೆ ಗ್ರಾಹಕರಿಂದ 100-200 ರೂ. ವಸೂಲಿ ಮಾಡುತ್ತಿದ್ದ ರಾಯಚೂರು ಜಿಲ್ಲೆ ಮಾನ್ವಿಯ 3 ಸೈಬರ್ ಕೇಂದ್ರಗಳ ವಿರುದ್ಧ ದೂರು ದಾಖಲಾಗಿದೆ. ಹಣ ವಸೂಲಿ ಮಾಡುತ್ತಿದ್ದ ಮಾಹಿತಿ ಮೇರೆಗೆ ಮಾನ್ವಿ ತಹಶೀಲ್ದಾರ್ ಚಂದ್ರಕಾಂತ್ ಅವರು ಸೈಬರ್​ ಸೆಂಟರ್​ಗಳ ಮೇಲೆ ದಾಳಿ ಮಾಡಿದ್ದು, ಈ ವೇಳೆ ಅಧಿಕೃತ ಸರ್ಕಾರಿ ಐಡಿಯನ್ನ ಅಕ್ರಮವಾಗಿ ಪಡೆದು ಸಾರ್ವಜನಿಕರಿಂದ ಹಣ ವಸೂಲಿ ಮಾಡಿ ಅರ್ಜಿ ಸಲ್ಲಿಕೆ ಮಾಡುತ್ತಿರುವುದು ಪತ್ತೆಯಾಗಿದೆ.

ಎಕ್ಸೆಲ್ ಕಂಪ್ಯೂಟರ್, ಲಕ್ಷ್ಮೀ ಕಂಪ್ಯೂಟರ್, ಸೂರ್ಯ ಕಂಪ್ಯೂಟರ್​ ಸೆಂಟರ್​ನಲ್ಲಿ ಫಲಾನುಭವಿಗಳಿಂದ ಹಣ ವಸೂಲ್ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಚಂದ್ರಕಾಂತ್ ಅವರು ನಗರದ ಮೂರು ಸೈಬರ್ ಸೆಂಟರ್​ ವಿರುದ್ಧ ಮಾನ್ವಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಇವರ ದೂರಿನ ಮೇರೆಗೆ ಪೊಲೀಸರು, ಐಟಿ ಆಕ್ಟ್ ಹಾಗೂ ಐಪಿಸಿ ಸೆಕ್ಷನ್ 420 ವಂಚನೆ ಆರೋಪದಡಿ ಎಫ್​ಐಆರ್​ ದಾಖಲಿಸಿಕೊಂಡಿದ್ದಾರೆ.

ಗೃಹ ಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಲು ಗ್ರಾಮ ಒನ್, ಬಾಪೂಜಿ ಸೇವಾ ಕೇಂದ್ರ ಹಾಗೂ ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಕೆ ಸರ್ಕಾರ ಅವಕಾಶ ಮಾಡಿಕೊಟ್ಟಿದೆ. ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಗಂಭೀರವಾಗಿ ಪರಿಗಣಿಸಿದ್ದು, ಹಣ ಪಡೆದುಕೊಂಡರೆ ಕ್ರಿಮಿನಲ್ ಕೇಸ್ ದಾಖಲಿಸಲಾಗುವುದು ಜೊತೆ ಐಡಿ ಕ್ಯಾನ್ಸಲ್ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ. ಆದರೂ ಸಹ ಖಾಸಗಿ ಸೈಬರ್ ಸೆಂಟರ್​ಗಳು ಅಕ್ರಮವಾಗಿ ಐಡಿ ಪಡೆದುಕೊಂಡು ಸಾರ್ವಜನಿಕರಿಂದ ಹಣ ವಸೂಲಿಗೆ ಇಳಿದಿವೆ

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 10:27 am, Tue, 25 July 23

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್