AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರಾಕ್ಟರ್ ಚಾಲಕನ ಮೇಲೆ ಹಲ್ಲೆ ಪ್ರಕರಣ: ಮಸ್ಕಿ PSI ಮಣಿಕಂಠ ಸಸ್ಪೆಂಡ್

ಟ್ರಾಕ್ಟರ್ ಚಾಲಕನ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಯಚೂರು ಜಿಲ್ಲೆಯ ಮಸ್ಕಿ ಪೊಲೀಸ್​ ಠಾಣೆ ಪಿಎಸ್​​ಐ ಮಣಿಕಂಠ ಅವರನ್ನು ಅಮಾನತು ಮಾಡಲಾಗಿದೆ. ಬಳ್ಳಾರಿ ವಲಯದ ಐಜಿ ಲೋಕೇಶ್ ಕುಮಾರ್ ಅವರು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದಾರೆ.

ಟ್ರಾಕ್ಟರ್ ಚಾಲಕನ ಮೇಲೆ ಹಲ್ಲೆ ಪ್ರಕರಣ: ಮಸ್ಕಿ PSI ಮಣಿಕಂಠ ಸಸ್ಪೆಂಡ್
ಮಣಿಕಂಠ
ಭೀಮೇಶ್​​ ಪೂಜಾರ್
| Edited By: |

Updated on: Sep 27, 2023 | 8:11 AM

Share

ರಾಯಚೂರು, (ಸೆಪ್ಟೆಂಬರ್ 27): ಟ್ರಾಕ್ಟರ್ ಚಾಲಕನ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಸ್ಕಿ ಪೊಲೀಸ್​ ಠಾಣೆ (Maski Police Station) ಪಿಎಸ್​​ಐ ಮಣಿಕಂಠ (Manikanta) ಅವರನ್ನು ಅಮಾನತು ಮಾಡಲಾಗಿದೆ. ಬಳ್ಳಾರಿ (Bellary) ವಲಯದ ಐಜಿ ಲೋಕೇಶ್ ಕುಮಾರ್ ಅವರು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದಾರೆ. ಅಕ್ರಮ ಮರಳು ಸಾಗಾಟ ಆರೋಪದ ಮೇಲೆ ಟ್ರ್ಯಾಕ್ಟರ್​ ಚಾಲಕ ನಿರುಪಾದಿ ಎನ್ನುವರಿಗೆ ಮನಬಂದಂತೆ ಬಾಸುಂಡೆ ಬರುವಂತೆ ಥಳಿಸಿದ್ದರು. ಈ ಬಗ್ಗೆ ನಿರುಪಾದಿ ಪತ್ನಿ ಲಕ್ಷ್ಮೀ ನೀಡಿದ್ದ ದೂರಿನ ಅನ್ವಯ ಮಣಿಕಂಠ ವಿರುದ್ಧ ಮಸ್ಕಿ ಠಾಣೆಯಲ್ಲೇ ಎಫ್​ಐಆರ್ ದಾಖಲಾಗಿತ್ತು. ಅಲ್ಲದೇ ವಾಲ್ಮೀಕಿ ಸಂಘ, ಮಣಿಕಂಠ ಅವರನ್ನು ಅಮಾನತು ಮಾಡುವಂತೆ ಠಾಣೆ ಮುಂದೆ ಪ್ರತಿಭಟನೆ ಮಾಡಿತ್ತು. ಇದೀಗ ಈ ಪ್ರಕರಣದಲ್ಲಿ ಪಿಎಸ್​ಐ ಮಣಿಕಂಠ ಅವರನ್ನು ಅಮಾನತು ಮಾಡಲಾಗಿದೆ.

ಸೆಪ್ಟೆಂಬರ್ 20 ರಂದು ಮಸ್ಕಿ ಪಟ್ಟಣದಲ್ಲಿ ನಿರುಪಾದಿ ಎಂಬುವರು ಟ್ರ್ಯಾಕ್ಟರ್​ನಲ್ಲಿ ಮರಳು ತೆಗೆದುಕೊಂಡು ಹೋಗುತ್ತಿದ್ದರು. ಈ ವೇಳೆ ಪಿಎಸ್​ಐ ಮಣಿಕಂಠ ಟ್ರ್ಯಾಕ್ಟರ್ ತಡೆದು ಮರಳು ತೆಗೆದುಕೊಂಡು ಹೋಗಲು 20 ಸಾವಿರ ರೂ.ಗೆ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಲಾಗಿದೆ. ಅಲ್ಲದೇ ತನ್ನ ಜೀಪ್​ನಲ್ಲಿದ್ದ ಪೈಪ್ ತೆಗೆದುಕೊಂಡು ನಿರುಪಾದಿ ಅವರಿಗೆ ಮನಬಂದಂತೆ ಥಳಿಸಿದ್ದರು. ಹಾಗೇ ಪಿಎಸ್​ಐ ಮಣಿಕಂಠ ಜಾತಿ ನಿಂದನೆ ಮಾಡಿರುವ ಆರೋಪ ಕೇಳಿಬಂದಿತ್ತು. ಹೀಗಾಗಿ ಹಲ್ಲೆ, ಬೆದರಿಕೆ, ಜಾತಿ ನಿಂದನೆ ಆರೋಪದಡಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: ರಾಯಚೂರಿನಲ್ಲಿ ಟ್ರಾಕ್ಟರ್ ಚಾಲಕನ ಮೇಲೆ ಹಲ್ಲೆ‌ ಪ್ರಕರಣ: ಪಿಎಸ್​ಐ ವಿರುದ್ಧ ಎಫ್​ಐಆರ್​ ದಾಖಲು

ಈ ಸಂಬಂಧ ವಾಲ್ಮೀಕಿ ನಾಯಕ ಮಾಹಾಸಭಾ ತಾಲೂಕು ಘಟಕವು ಪಿಎಸ್​ಐ ವಿರುದ್ಧ ಕ್ರಮ ಕೈಗೊಳ್ಳುವಂತೆ ಲಿಂಗಸೂರು ಡಿವೈಎಸ್​​ಪಿ ಮಂಜುನಾಥ ಹಾಗೂ ಸಿಪಿಐ ಬಾಲಚಂದ್ರ ಲಕ್ಕಂ ಅವರಿಗೆ ಮನವಿ ಸಲ್ಲಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು