AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರಾಕ್ಟರ್ ಚಾಲಕನ ಮೇಲೆ ಹಲ್ಲೆ ಪ್ರಕರಣ: ಮಸ್ಕಿ PSI ಮಣಿಕಂಠ ಸಸ್ಪೆಂಡ್

ಟ್ರಾಕ್ಟರ್ ಚಾಲಕನ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಯಚೂರು ಜಿಲ್ಲೆಯ ಮಸ್ಕಿ ಪೊಲೀಸ್​ ಠಾಣೆ ಪಿಎಸ್​​ಐ ಮಣಿಕಂಠ ಅವರನ್ನು ಅಮಾನತು ಮಾಡಲಾಗಿದೆ. ಬಳ್ಳಾರಿ ವಲಯದ ಐಜಿ ಲೋಕೇಶ್ ಕುಮಾರ್ ಅವರು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದಾರೆ.

ಟ್ರಾಕ್ಟರ್ ಚಾಲಕನ ಮೇಲೆ ಹಲ್ಲೆ ಪ್ರಕರಣ: ಮಸ್ಕಿ PSI ಮಣಿಕಂಠ ಸಸ್ಪೆಂಡ್
ಮಣಿಕಂಠ
ಭೀಮೇಶ್​​ ಪೂಜಾರ್
| Edited By: |

Updated on: Sep 27, 2023 | 8:11 AM

Share

ರಾಯಚೂರು, (ಸೆಪ್ಟೆಂಬರ್ 27): ಟ್ರಾಕ್ಟರ್ ಚಾಲಕನ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಸ್ಕಿ ಪೊಲೀಸ್​ ಠಾಣೆ (Maski Police Station) ಪಿಎಸ್​​ಐ ಮಣಿಕಂಠ (Manikanta) ಅವರನ್ನು ಅಮಾನತು ಮಾಡಲಾಗಿದೆ. ಬಳ್ಳಾರಿ (Bellary) ವಲಯದ ಐಜಿ ಲೋಕೇಶ್ ಕುಮಾರ್ ಅವರು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದಾರೆ. ಅಕ್ರಮ ಮರಳು ಸಾಗಾಟ ಆರೋಪದ ಮೇಲೆ ಟ್ರ್ಯಾಕ್ಟರ್​ ಚಾಲಕ ನಿರುಪಾದಿ ಎನ್ನುವರಿಗೆ ಮನಬಂದಂತೆ ಬಾಸುಂಡೆ ಬರುವಂತೆ ಥಳಿಸಿದ್ದರು. ಈ ಬಗ್ಗೆ ನಿರುಪಾದಿ ಪತ್ನಿ ಲಕ್ಷ್ಮೀ ನೀಡಿದ್ದ ದೂರಿನ ಅನ್ವಯ ಮಣಿಕಂಠ ವಿರುದ್ಧ ಮಸ್ಕಿ ಠಾಣೆಯಲ್ಲೇ ಎಫ್​ಐಆರ್ ದಾಖಲಾಗಿತ್ತು. ಅಲ್ಲದೇ ವಾಲ್ಮೀಕಿ ಸಂಘ, ಮಣಿಕಂಠ ಅವರನ್ನು ಅಮಾನತು ಮಾಡುವಂತೆ ಠಾಣೆ ಮುಂದೆ ಪ್ರತಿಭಟನೆ ಮಾಡಿತ್ತು. ಇದೀಗ ಈ ಪ್ರಕರಣದಲ್ಲಿ ಪಿಎಸ್​ಐ ಮಣಿಕಂಠ ಅವರನ್ನು ಅಮಾನತು ಮಾಡಲಾಗಿದೆ.

ಸೆಪ್ಟೆಂಬರ್ 20 ರಂದು ಮಸ್ಕಿ ಪಟ್ಟಣದಲ್ಲಿ ನಿರುಪಾದಿ ಎಂಬುವರು ಟ್ರ್ಯಾಕ್ಟರ್​ನಲ್ಲಿ ಮರಳು ತೆಗೆದುಕೊಂಡು ಹೋಗುತ್ತಿದ್ದರು. ಈ ವೇಳೆ ಪಿಎಸ್​ಐ ಮಣಿಕಂಠ ಟ್ರ್ಯಾಕ್ಟರ್ ತಡೆದು ಮರಳು ತೆಗೆದುಕೊಂಡು ಹೋಗಲು 20 ಸಾವಿರ ರೂ.ಗೆ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಲಾಗಿದೆ. ಅಲ್ಲದೇ ತನ್ನ ಜೀಪ್​ನಲ್ಲಿದ್ದ ಪೈಪ್ ತೆಗೆದುಕೊಂಡು ನಿರುಪಾದಿ ಅವರಿಗೆ ಮನಬಂದಂತೆ ಥಳಿಸಿದ್ದರು. ಹಾಗೇ ಪಿಎಸ್​ಐ ಮಣಿಕಂಠ ಜಾತಿ ನಿಂದನೆ ಮಾಡಿರುವ ಆರೋಪ ಕೇಳಿಬಂದಿತ್ತು. ಹೀಗಾಗಿ ಹಲ್ಲೆ, ಬೆದರಿಕೆ, ಜಾತಿ ನಿಂದನೆ ಆರೋಪದಡಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: ರಾಯಚೂರಿನಲ್ಲಿ ಟ್ರಾಕ್ಟರ್ ಚಾಲಕನ ಮೇಲೆ ಹಲ್ಲೆ‌ ಪ್ರಕರಣ: ಪಿಎಸ್​ಐ ವಿರುದ್ಧ ಎಫ್​ಐಆರ್​ ದಾಖಲು

ಈ ಸಂಬಂಧ ವಾಲ್ಮೀಕಿ ನಾಯಕ ಮಾಹಾಸಭಾ ತಾಲೂಕು ಘಟಕವು ಪಿಎಸ್​ಐ ವಿರುದ್ಧ ಕ್ರಮ ಕೈಗೊಳ್ಳುವಂತೆ ಲಿಂಗಸೂರು ಡಿವೈಎಸ್​​ಪಿ ಮಂಜುನಾಥ ಹಾಗೂ ಸಿಪಿಐ ಬಾಲಚಂದ್ರ ಲಕ್ಕಂ ಅವರಿಗೆ ಮನವಿ ಸಲ್ಲಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್