AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರು ಅಕ್ರಮ ಮರಳುಗಾರಿಕೆಯ ಕಿಂಗ್ ಪಿನ್ ​ಬೋಸರಾಜು ಪುತ್ರ: ಜೆಡಿಎಸ್​ ಆರೋಪ

ರಾಯಚೂರು ಜಿಲ್ಲೆಯ ದೇವದುರ್ಗದ ಬಾಗೂರಿನಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದು, ಇದರ ಕಿಂಗ್ ಪಿನ್ ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು ಅವರ ಪುತ್ರ ಎಂದು ರಾಯಚೂರು ಜೆಡಿಎಸ್ ಜಿಲ್ಲಾಧ್ಯಕ್ಷ ವಿರೂಪಾಕ್ಷ ಗಂಭೀರ ಆರೋಪ ಮಾಡಿದ್ದಾರೆ.

ರಾಯಚೂರು ಅಕ್ರಮ ಮರಳುಗಾರಿಕೆಯ ಕಿಂಗ್ ಪಿನ್ ​ಬೋಸರಾಜು ಪುತ್ರ: ಜೆಡಿಎಸ್​ ಆರೋಪ
ಸಚಿವ ಎನ್​ಎಸ್​ ಬೋಸರಾಜು
ಭೀಮೇಶ್​​ ಪೂಜಾರ್
| Updated By: ವಿವೇಕ ಬಿರಾದಾರ|

Updated on: Aug 08, 2023 | 3:45 PM

Share

ರಾಯಚೂರು: ದೇವದುರ್ಗದ ಬಾಗೂರಿನಲ್ಲಿ ಅಕ್ರಮ ಮರಳುಗಾರಿಕೆ (Illegal Sand Mining) ನಡೆಯುತ್ತಿದ್ದು, ಇದರ ಕಿಂಗ್ ಪಿನ್ ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು (NS Boseraju) ಅವರ ಪುತ್ರ ಎಂದು ರಾಯಚೂರು (Raichuru) ಜೆಡಿಎಸ್ (JDS) ಜಿಲ್ಲಾಧ್ಯಕ್ಷ ವಿರೂಪಾಕ್ಷ ಗಂಭೀರ ಆರೋಪ ಮಾಡಿದ್ದಾರೆ. ರಾಯಚೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಸರ್ಕಾರದ ಬೊಕ್ಕಸ ತುಂಬಿಸಲು ಮರಳು ಮಾಫಿಯಾ ದಂಧೆ ಮಾಡುತ್ತಿದ್ದಾರೆ ಎಂದರು.

ಕೃಷ್ಣಾ ನದಿತೀರದ ಬಾಗೂರು ಗ್ರಾಮದ ಜನರು, ಅಲ್ಲಿ ಕೆಲಸ ಮಾಡುತ್ತಿರುವ ಹಿಟಾಜಿ, ಟ್ರ್ಯಾಕ್ಟರ್ ಮತ್ತು ಜೆಸಿಬಿ ಮಾಲೀಕರು ರವಿ ಬೋಸರಾಜ್ ಹೆಸರು ಹೇಳುತ್ತಿದ್ದಾರೆ. ಅಶೋಕ್ ಪೋತಗಲ್ ಎಂಬುವ ಹಿಂಬಾಲಕನ ಮೂಲಕ ದಂಧೆ ನಡೆಸುತ್ತಿದ್ದಾರೆ. ಸ್ಥಳೀಯ ದೇವದುರ್ಗ ಜೆಡಿಎಸ್ ಶಾಸಕಿ ಕರೆಮ್ಮ ನಾಯಕ್ ಅವರ ಎಚ್ಚರಿಕೆಗಳಿಗೆ ಬಗ್ಗದೇ ದಂಧೆ ನಡೆಸುತ್ತಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ:  ಸಿಎಂ ಸಿದ್ದರಾಮಯ್ಯರಿಗೆ ಸ್ಪೆಷಲ್​ ಕುರಿ ಗಿಫ್ಟ್​ ಮಾಡಿದ ರಾಯಚೂರು ಅಭಿಮಾನಿ

ರಾಜಕಾರಣದಲ್ಲಿ ತೇಜೋವಧೆ ಮಾಡುವುದೇ ಇವರ ಕೆಲಸ: ಎನ್.ಎಸ್.ಬೋಸರಾಜು

ಅವರ ಲೀಡರ್ ಹೆಚ್.ಡಿ.ಕುಮಾರಸ್ವಾಮಿ ಅವರು ಬೆಂಗಳೂರಿನಲ್ಲಿ ಹಿಟ್ ಆ್ಯಂಡ್​ ರನ್ ಮಾಡುತ್ತಾರೆ. ಇವರು ಜಿಲ್ಲೆಯಲ್ಲಿ ಅದೇ ಕೆಲಸ ಮಾಡುತ್ತಾರೆ. ಯಾವುದೇ ಸರ್ಕಾರ ಇದ್ದರೂ ಕುಮಾರಸ್ವಾಮಿ ಹಿಟ್ ಆ್ಯಂಡ್ ರನ್ ಮಾಡುತ್ತಾರೆ. ಆರೋಪಕ್ಕೆ ಸಾಕ್ಷಿಯಿರುವುದಿಲ್ಲ. ಯಾರೇ ಏನೇ ಮಾಡಿದರೂ ಸಾಕ್ಷಿ ಬೇಕು, ದೂರು ದಾಖಲಾಗಬೇಕು. ಯಾರು ರಾಜಕಾರಣದಲ್ಲಿ ಇರುತ್ತಾರೆ ಅವರ ತೇಜೋವಧೆ ಮಾಡುವ ಕೆಲಸವನ್ನೇ ಕೆಲವರು ಮಾಡುತ್ತಿರುತ್ತಾರೆ. ಆರೋಪಕ್ಕೆ ಸಾಕ್ಷಿ ತೋರಿಸಲಿ ಎಂದು ಸಚಿವ ಎನ್.ಎಸ್.ಬೋಸರಾಜು ತಿರುಗೇಟು ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!