AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೈಟ್​ ಶಿಫ್ಟ್​​ನಲ್ಲಿ ಮಹಿಳಾ ಇಂಜಿನಿಯರ್ ಜೊತೆ ಅಸಭ್ಯ ವರ್ತನೆ: ಸಾಕ್ಷ್ಯಾಧಾರ ಲಭ್ಯ, ಜೆಸ್ಕಾಂ ಇಂಜಿನಿಯರ್ ಸಸ್ಪೆಂಡ್​

ಉಷ್ಣ ವಿದ್ಯುತ್​ ಸ್ಥಾವರವನ್ನು ಹೊಂದಿರುವ ರಾಯಚೂರಿನಲ್ಲಿ ಜೆಸ್ಕಾಂ ಮಹಿಳಾ ಇಂಜಿನಿಯರ್ ಗೆ ಹಿರಿಯ ಇಂಜಿನಿಯರ್ ನಿಂದ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣ ನಡೆದಿದೆ. ಸಾಕ್ಷ್ಯಾಧಾರ ಲಭ್ಯವಾಗಿರುವ ಹಿನ್ನೆಲೆಯಲ್ಲಿ ಜೆಸ್ಕಾಂ ಎಕ್ಸಿಕ್ಯುಟಿವ್ ಇಂಜಿನಿಯರ್​ನನ್ನು ಕೊನೆಗೂ ಸಸ್ಪೆಂಡ್ ಮಾಡಲಾಗಿದೆ.

ನೈಟ್​ ಶಿಫ್ಟ್​​ನಲ್ಲಿ ಮಹಿಳಾ ಇಂಜಿನಿಯರ್ ಜೊತೆ ಅಸಭ್ಯ ವರ್ತನೆ: ಸಾಕ್ಷ್ಯಾಧಾರ ಲಭ್ಯ, ಜೆಸ್ಕಾಂ ಇಂಜಿನಿಯರ್ ಸಸ್ಪೆಂಡ್​
ಅಸಭ್ಯ ವರ್ತನೆ: ಸಾಕ್ಷ್ಯಾಧಾರ ಲಭ್ಯ, ಜೆಸ್ಕಾಂ ಇಂಜಿನಿಯರ್ ಸಸ್ಪೆಂಡ್​
Follow us
ಭೀಮೇಶ್​​ ಪೂಜಾರ್
| Updated By: ಸಾಧು ಶ್ರೀನಾಥ್​

Updated on:Sep 20, 2023 | 11:00 AM

ರಾಯಚೂರು, ಸೆಪ್ಟೆಂಬರ್​ 20: ಉಷ್ಣ ವಿದ್ಯುತ್​ ಸ್ಥಾವರವನ್ನು ಹೊಂದಿರುವ ರಾಯಚೂರಿನಲ್ಲಿ ಜೆಸ್ಕಾಂ ಮಹಿಳಾ ಇಂಜಿನಿಯರ್ ಗೆ ಹಿರಿಯ ಇಂಜಿನಿಯರ್ ನಿಂದ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣ ನಡೆದಿದೆ. ಸಾಕ್ಷ್ಯಾಧಾರ ಲಭ್ಯವಾಗಿರುವ ಹಿನ್ನೆಲೆಯಲ್ಲಿ ಜೆಸ್ಕಾಂ ಎಕ್ಸಿಕ್ಯುಟಿವ್ ಇಂಜಿನಿಯರ್​ನನ್ನು ಕೊನೆಗೂ ಸಸ್ಪೆಂಡ್ ಮಾಡಲಾಗಿದೆ. ಜೆಸ್ಕಾಂ ಇಇ ಶ್ರೀನಿವಾಸ್ ನನ್ನು ಅಮಾನತುಗೊಳಿಸಿ ಇಲಾಖೆ ಆದೇಶ ಹೊರಡಿಸಿದೆ.

ರಾಯಚೂರಿನ 220 ಕೆವಿ ಸ್ವೀಕರಣಾ ಕೇಂದ್ರದಲ್ಲಿ ಘಟನೆ ನಡೆದಿದ್ದು, ರಾತ್ರಿ ಪಾಳಯದಲ್ಲಿದ್ದ ಮಹಿಳಾ ಇಂಜಿನಿಯರ್ ಜೊತೆ ಇಇ ಶ್ರೀನಿವಾಸ್ ಅಸಭ್ಯವಾಗಿ ವರ್ತಿಸಿರುವುದು ಪ್ರಾಥಮಿಕ ತನಿಖೆ ವೇಳೆ ಸಾಬೀತಾಗಿರುವ ಹಿನ್ನೆಲೆ ಅಮಾನತು ಆದೇಶ ಹೊರಬಿದ್ದಿದೆ.

ಇದನ್ನೂ ಓದಿ: ವಿದೇಶದಲ್ಲಿ ಕುಳಿತು ಸುಳ್ಯದಲ್ಲಿರುವ ಹೆಂಡತಿಗೆ ತ್ರಿವಳಿ ತಲಾಖ್ ನೀಡಿದ ಭೂಪ!

ಇದೇ ಆಗಸ್ಟ್ 25 ರಂದುರಾತ್ರಿ ಪಾಳಯದಲ್ಲಿದ್ದ ಮಹಿಳಾ ಇಂಜಿನಿಯರ್ ಆಫ್ರೀನ್ ಎಂಬುವವರ ಜೊತೆ ರೀಡಿಂಗ್ ಮಾಪನಗಳನ್ನು ತೆಗೆದುಕೊಳ್ಳಲು ಹೋದಾಗ ಇಇ ಶ್ರೀನಿವಾಸ್ ಅನುಚಿತವಾಗಿ ವರ್ತಿಸಿದ್ದ. ಈ ಬಗ್ಗೆ ಇತರೆ ಮಹಿಳಾ ಸಿಬ್ಬಂದಿ ಹಾಗೂ ಇನ್ನಿತರ ಸಿಬ್ಬಂದಿ ಸಹಾಯದೊಂದಿಗೆ ಪ್ರತಿಭಟನೆ ನಡೆದಿತ್ತು.

ಇದನ್ನೂ ಓದಿ: Bellary News: ಜೆಸ್ಕಾಂ ಎಡವಟ್ಟು: ಮನೆಗೆ 4 ಲಕ್ಷ ವಿದ್ಯುತ್​ ಬಿಲ್​ ನೀಡಿದ ಸಿಬ್ಬಂದಿ

ಘಟನೆ ಬಗ್ಗೆ ಖುದ್ದು ಸಂತ್ರಸ್ತೆ ಇಂಜಿನಿಯರ್ ಆಫ್ರಿನ್ ಹೇಳಿಕೆ ದಾಖಲಿಸಿಕೊಂಡಿದ್ದ ಹಿರಿಯ ಅಧಿಕಾರಿಗಳ ತಂಡ, ಪ್ರಾಥಮಿಕ ತನಿಖೆ ವೇಳೆ ಆಫ್ರಿನ್ ಗೆ ಲೈಂಗಿಕ ಕಿರುಕುಳ ನೀಡಿರೊ ಬಗ್ಗೆ ಸಾಕ್ಷಾಧಾರ ಲಭ್ಯವಾದ ಬೆನ್ನಲ್ಲೇ ಇಇ ಶ್ರೀನಿವಾಸ್ ವಿರುದ್ಧ ಈ ಕ್ರಮ ಕೈಗೊಳ್ಳಲಾಗಿದೆ.

ರಾಯಚೂರಿನಲ್ಲಿ ಟ್ರ್ಯಾಕ್ಟರ್ ಮತ್ತು ಟಾಟಾ ಏಸ್ ಮಧ್ಯೆ ಡಿಕ್ಕಿ: ಚಾಲಕ ಸಾವು

ಮಾನ್ವಿ ತಾಲೂಕಿನ ಚೀಕಲಪರ್ವಿ ಗ್ರಾಮದಲ್ಲಿ ತಡರಾತ್ರಿ ಟ್ರ್ಯಾಕ್ಟರ್ ಮತ್ತು ಟಾಟಾ ಏಸ್ ಮಧ್ಯೆ ಡಿಕ್ಕಿ; ಡಿಕ್ಕಿ ರಭಸಕ್ಕೆ ಟಾಟಾ ಏಸ್ ವಾಹನದ ಚಾಲಕ ಮೆಹಬೂಬ್ (28) ಮೃತಪಟ್ಟಿದ್ದಾನೆ.

ಮಾನ್ವಿ ಕಡೆಯಿಂದ ಚೀಕಲಪರ್ವಿ ಕಡೆ ಬರುತ್ತಿದ ಟಾಟಾ ಏಸ್, ಮರಳು ತುಂಬಿಕೊಂಡು ಮಾನ್ವಿ ಕಡೆ ಹೊರಟಿದ್ದ ಟ್ರ್ಯಾಕ್ಟರ್ ಮುಖಾಮುಖಿ ಡಿಕ್ಕಿ ಹೊಡೆದಿದೆ. ಟಾಟಾ ಎಸಿ ಚಾಲಕ ಮೆಹಬೂಬ್ ತೀವ್ರ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾನೆ. ಸ್ಥಳೀಯರು ಕಾರಿನಲ್ಲಿ ಮಾನ್ವಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಮೆಹಬೂಬ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:54 am, Wed, 20 September 23

ಭಾರತ-ಪಾಕಿಸ್ತಾನದ ಯುದ್ಧ ನಿಲ್ಲಿಸಿದ್ದು ನಾನೇ; ಹಳೇ ರಾಗ ಹಾಡಿದ ಟ್ರಂಪ್
ಭಾರತ-ಪಾಕಿಸ್ತಾನದ ಯುದ್ಧ ನಿಲ್ಲಿಸಿದ್ದು ನಾನೇ; ಹಳೇ ರಾಗ ಹಾಡಿದ ಟ್ರಂಪ್
ಯತ್ನಾಳ್, ಈಶ್ವರಪ್ಪ ಜೋಡಿಗೆ ಕನ್ನಡಿ ತೋರಿಸಿದ ರಾಜ್ಯ ಬಿಜೆಪಿ ಉಸ್ತುವಾರಿ
ಯತ್ನಾಳ್, ಈಶ್ವರಪ್ಪ ಜೋಡಿಗೆ ಕನ್ನಡಿ ತೋರಿಸಿದ ರಾಜ್ಯ ಬಿಜೆಪಿ ಉಸ್ತುವಾರಿ
ಅಣ್ಣಾವ್ರ ಮೊಮ್ಮಗನಿಗೆ ದುನಿಯಾ ವಿಜಿ ಆಕ್ಷನ್ ಕಟ್, ಭರದಿಂದ ಸಾಗಿದೆ ಶೂಟಿಂಗ್
ಅಣ್ಣಾವ್ರ ಮೊಮ್ಮಗನಿಗೆ ದುನಿಯಾ ವಿಜಿ ಆಕ್ಷನ್ ಕಟ್, ಭರದಿಂದ ಸಾಗಿದೆ ಶೂಟಿಂಗ್
ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರಗಳು ದಿನಕ್ಕೊಂದು ಬಯಲಾಗುತ್ತಿವೆ: ಚಲವಾದಿ
ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರಗಳು ದಿನಕ್ಕೊಂದು ಬಯಲಾಗುತ್ತಿವೆ: ಚಲವಾದಿ
ಪೊಲೀಸ್ ಮತ್ತು ಪ್ರತಿಭಟನೆಕಾರರ ನಡುವೆ ಸಿಲುಕಿ ಒದ್ದಾಡಿದ ರೇಣುಕಾಚಾರ್ಯ
ಪೊಲೀಸ್ ಮತ್ತು ಪ್ರತಿಭಟನೆಕಾರರ ನಡುವೆ ಸಿಲುಕಿ ಒದ್ದಾಡಿದ ರೇಣುಕಾಚಾರ್ಯ
ರಾಜು ಕಾಗೆ ಕೇಳಿದ ಕೆಲಸಗಳೆಲ್ಲವನ್ನೂ ಮಾಡಿಕೊಟ್ಟಿದ್ದೇನೆ: ಶಿವಕುಮಾರ್
ರಾಜು ಕಾಗೆ ಕೇಳಿದ ಕೆಲಸಗಳೆಲ್ಲವನ್ನೂ ಮಾಡಿಕೊಟ್ಟಿದ್ದೇನೆ: ಶಿವಕುಮಾರ್
ಹಿಮಾಚಲ ಪ್ರದೇಶದ ಕುಲುವಿನಲ್ಲಿ ಮೇಘಸ್ಫೋಟ; ಸೈಂಜ್ ಕಣಿವೆಯಲ್ಲಿ ಪ್ರವಾಹ
ಹಿಮಾಚಲ ಪ್ರದೇಶದ ಕುಲುವಿನಲ್ಲಿ ಮೇಘಸ್ಫೋಟ; ಸೈಂಜ್ ಕಣಿವೆಯಲ್ಲಿ ಪ್ರವಾಹ
ಕೇವಲ ನಾಲ್ಕು ದಿನಗಳ ಪರಿಚಯ ದೈಹಿಕ ಸಂಪರ್ಕದವರೆಗೆ ಮುಂದುವರಿಯಿತು
ಕೇವಲ ನಾಲ್ಕು ದಿನಗಳ ಪರಿಚಯ ದೈಹಿಕ ಸಂಪರ್ಕದವರೆಗೆ ಮುಂದುವರಿಯಿತು
ಕ್ಷಮೆ ಕೇಳಲು ಶಿವರಾಜ್​ಕುಮಾರ್ ಮನೆ ಎದುರು ಕಾಯುತ್ತಿರುವ ಮಡೆನೂರು ಮನು
ಕ್ಷಮೆ ಕೇಳಲು ಶಿವರಾಜ್​ಕುಮಾರ್ ಮನೆ ಎದುರು ಕಾಯುತ್ತಿರುವ ಮಡೆನೂರು ಮನು
ನೀರು ಬಿಡೋದಿಲ್ಲ ಅಂತ ಸ್ಟೇಟಸ್​ ಹಾಕಿದ್ದ BJP ಮುಖಂಡನ ಮೇಲೆ ಹಲ್ಲೆ
ನೀರು ಬಿಡೋದಿಲ್ಲ ಅಂತ ಸ್ಟೇಟಸ್​ ಹಾಕಿದ್ದ BJP ಮುಖಂಡನ ಮೇಲೆ ಹಲ್ಲೆ