AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೈಟ್​ ಶಿಫ್ಟ್​​ನಲ್ಲಿ ಮಹಿಳಾ ಇಂಜಿನಿಯರ್ ಜೊತೆ ಅಸಭ್ಯ ವರ್ತನೆ: ಸಾಕ್ಷ್ಯಾಧಾರ ಲಭ್ಯ, ಜೆಸ್ಕಾಂ ಇಂಜಿನಿಯರ್ ಸಸ್ಪೆಂಡ್​

ಉಷ್ಣ ವಿದ್ಯುತ್​ ಸ್ಥಾವರವನ್ನು ಹೊಂದಿರುವ ರಾಯಚೂರಿನಲ್ಲಿ ಜೆಸ್ಕಾಂ ಮಹಿಳಾ ಇಂಜಿನಿಯರ್ ಗೆ ಹಿರಿಯ ಇಂಜಿನಿಯರ್ ನಿಂದ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣ ನಡೆದಿದೆ. ಸಾಕ್ಷ್ಯಾಧಾರ ಲಭ್ಯವಾಗಿರುವ ಹಿನ್ನೆಲೆಯಲ್ಲಿ ಜೆಸ್ಕಾಂ ಎಕ್ಸಿಕ್ಯುಟಿವ್ ಇಂಜಿನಿಯರ್​ನನ್ನು ಕೊನೆಗೂ ಸಸ್ಪೆಂಡ್ ಮಾಡಲಾಗಿದೆ.

ನೈಟ್​ ಶಿಫ್ಟ್​​ನಲ್ಲಿ ಮಹಿಳಾ ಇಂಜಿನಿಯರ್ ಜೊತೆ ಅಸಭ್ಯ ವರ್ತನೆ: ಸಾಕ್ಷ್ಯಾಧಾರ ಲಭ್ಯ, ಜೆಸ್ಕಾಂ ಇಂಜಿನಿಯರ್ ಸಸ್ಪೆಂಡ್​
ಅಸಭ್ಯ ವರ್ತನೆ: ಸಾಕ್ಷ್ಯಾಧಾರ ಲಭ್ಯ, ಜೆಸ್ಕಾಂ ಇಂಜಿನಿಯರ್ ಸಸ್ಪೆಂಡ್​
ಭೀಮೇಶ್​​ ಪೂಜಾರ್
| Edited By: |

Updated on:Sep 20, 2023 | 11:00 AM

Share

ರಾಯಚೂರು, ಸೆಪ್ಟೆಂಬರ್​ 20: ಉಷ್ಣ ವಿದ್ಯುತ್​ ಸ್ಥಾವರವನ್ನು ಹೊಂದಿರುವ ರಾಯಚೂರಿನಲ್ಲಿ ಜೆಸ್ಕಾಂ ಮಹಿಳಾ ಇಂಜಿನಿಯರ್ ಗೆ ಹಿರಿಯ ಇಂಜಿನಿಯರ್ ನಿಂದ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣ ನಡೆದಿದೆ. ಸಾಕ್ಷ್ಯಾಧಾರ ಲಭ್ಯವಾಗಿರುವ ಹಿನ್ನೆಲೆಯಲ್ಲಿ ಜೆಸ್ಕಾಂ ಎಕ್ಸಿಕ್ಯುಟಿವ್ ಇಂಜಿನಿಯರ್​ನನ್ನು ಕೊನೆಗೂ ಸಸ್ಪೆಂಡ್ ಮಾಡಲಾಗಿದೆ. ಜೆಸ್ಕಾಂ ಇಇ ಶ್ರೀನಿವಾಸ್ ನನ್ನು ಅಮಾನತುಗೊಳಿಸಿ ಇಲಾಖೆ ಆದೇಶ ಹೊರಡಿಸಿದೆ.

ರಾಯಚೂರಿನ 220 ಕೆವಿ ಸ್ವೀಕರಣಾ ಕೇಂದ್ರದಲ್ಲಿ ಘಟನೆ ನಡೆದಿದ್ದು, ರಾತ್ರಿ ಪಾಳಯದಲ್ಲಿದ್ದ ಮಹಿಳಾ ಇಂಜಿನಿಯರ್ ಜೊತೆ ಇಇ ಶ್ರೀನಿವಾಸ್ ಅಸಭ್ಯವಾಗಿ ವರ್ತಿಸಿರುವುದು ಪ್ರಾಥಮಿಕ ತನಿಖೆ ವೇಳೆ ಸಾಬೀತಾಗಿರುವ ಹಿನ್ನೆಲೆ ಅಮಾನತು ಆದೇಶ ಹೊರಬಿದ್ದಿದೆ.

ಇದನ್ನೂ ಓದಿ: ವಿದೇಶದಲ್ಲಿ ಕುಳಿತು ಸುಳ್ಯದಲ್ಲಿರುವ ಹೆಂಡತಿಗೆ ತ್ರಿವಳಿ ತಲಾಖ್ ನೀಡಿದ ಭೂಪ!

ಇದೇ ಆಗಸ್ಟ್ 25 ರಂದುರಾತ್ರಿ ಪಾಳಯದಲ್ಲಿದ್ದ ಮಹಿಳಾ ಇಂಜಿನಿಯರ್ ಆಫ್ರೀನ್ ಎಂಬುವವರ ಜೊತೆ ರೀಡಿಂಗ್ ಮಾಪನಗಳನ್ನು ತೆಗೆದುಕೊಳ್ಳಲು ಹೋದಾಗ ಇಇ ಶ್ರೀನಿವಾಸ್ ಅನುಚಿತವಾಗಿ ವರ್ತಿಸಿದ್ದ. ಈ ಬಗ್ಗೆ ಇತರೆ ಮಹಿಳಾ ಸಿಬ್ಬಂದಿ ಹಾಗೂ ಇನ್ನಿತರ ಸಿಬ್ಬಂದಿ ಸಹಾಯದೊಂದಿಗೆ ಪ್ರತಿಭಟನೆ ನಡೆದಿತ್ತು.

ಇದನ್ನೂ ಓದಿ: Bellary News: ಜೆಸ್ಕಾಂ ಎಡವಟ್ಟು: ಮನೆಗೆ 4 ಲಕ್ಷ ವಿದ್ಯುತ್​ ಬಿಲ್​ ನೀಡಿದ ಸಿಬ್ಬಂದಿ

ಘಟನೆ ಬಗ್ಗೆ ಖುದ್ದು ಸಂತ್ರಸ್ತೆ ಇಂಜಿನಿಯರ್ ಆಫ್ರಿನ್ ಹೇಳಿಕೆ ದಾಖಲಿಸಿಕೊಂಡಿದ್ದ ಹಿರಿಯ ಅಧಿಕಾರಿಗಳ ತಂಡ, ಪ್ರಾಥಮಿಕ ತನಿಖೆ ವೇಳೆ ಆಫ್ರಿನ್ ಗೆ ಲೈಂಗಿಕ ಕಿರುಕುಳ ನೀಡಿರೊ ಬಗ್ಗೆ ಸಾಕ್ಷಾಧಾರ ಲಭ್ಯವಾದ ಬೆನ್ನಲ್ಲೇ ಇಇ ಶ್ರೀನಿವಾಸ್ ವಿರುದ್ಧ ಈ ಕ್ರಮ ಕೈಗೊಳ್ಳಲಾಗಿದೆ.

ರಾಯಚೂರಿನಲ್ಲಿ ಟ್ರ್ಯಾಕ್ಟರ್ ಮತ್ತು ಟಾಟಾ ಏಸ್ ಮಧ್ಯೆ ಡಿಕ್ಕಿ: ಚಾಲಕ ಸಾವು

ಮಾನ್ವಿ ತಾಲೂಕಿನ ಚೀಕಲಪರ್ವಿ ಗ್ರಾಮದಲ್ಲಿ ತಡರಾತ್ರಿ ಟ್ರ್ಯಾಕ್ಟರ್ ಮತ್ತು ಟಾಟಾ ಏಸ್ ಮಧ್ಯೆ ಡಿಕ್ಕಿ; ಡಿಕ್ಕಿ ರಭಸಕ್ಕೆ ಟಾಟಾ ಏಸ್ ವಾಹನದ ಚಾಲಕ ಮೆಹಬೂಬ್ (28) ಮೃತಪಟ್ಟಿದ್ದಾನೆ.

ಮಾನ್ವಿ ಕಡೆಯಿಂದ ಚೀಕಲಪರ್ವಿ ಕಡೆ ಬರುತ್ತಿದ ಟಾಟಾ ಏಸ್, ಮರಳು ತುಂಬಿಕೊಂಡು ಮಾನ್ವಿ ಕಡೆ ಹೊರಟಿದ್ದ ಟ್ರ್ಯಾಕ್ಟರ್ ಮುಖಾಮುಖಿ ಡಿಕ್ಕಿ ಹೊಡೆದಿದೆ. ಟಾಟಾ ಎಸಿ ಚಾಲಕ ಮೆಹಬೂಬ್ ತೀವ್ರ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾನೆ. ಸ್ಥಳೀಯರು ಕಾರಿನಲ್ಲಿ ಮಾನ್ವಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಮೆಹಬೂಬ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:54 am, Wed, 20 September 23

Follow Us
Bhemesh Poojar
Bhemesh Poojar

ಕಳೆದ 10 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.ಈ ಹಿಂದೆ ಬೆಂಗಳೂರು ನಗರದಲ್ಲಿ ಕ್ರೈಂ ರಿಪೋರ್ಟರ್ ಆಗಿ ಎಂಟು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದೇನೆ.ಟಿವಿ9 ಸಂಸ್ಥೆಯಲ್ಲಿ ಕಳೆದ ಎರಡು ವರ್ಷಗಳಿಂದ ರಾಯಚೂರು ಜಿಲ್ಲಾ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ.ನನ್ನ ಹವ್ಯಾಸ ಕ್ರಿಕೆಟ್ ಆಡುವುದು.

Read More
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!