AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರು: ನರೇಗಾ ಕಾಮಗಾರಿಗಳಲ್ಲಿ 100 ಕೋಟಿಗೂ ಅಧಿಕ ಅವ್ಯವಹಾರ, ನಾಲ್ವರು ಪಿಡಿಓಗಳು ಅಮಾನತು

ದೇವದುರ್ಗ ತಾಲೂಕಿನ 33 ಗ್ರಾಮ ಪಂಚಾಯಿತಿಗಳಲ್ಲಿ ನರೇಗಾ ಕಾಮಗಾರಿಗಳಲ್ಲಿ 100 ಕೋಟಿಗೂ ಅಧಿಕ ಹಣ ಭ್ರಷ್ಟಾಚಾರ ಪ್ರಕರಣ ಸಂಬಂಧ ದೇವದುರ್ಗ ತಾಲೂಕಿನ ನಾಲ್ವರು ಪಿಡಿಓಗಳನ್ನು ಅಮಾನತು ಮಾಡಲಾಗಿದೆ. ಇಲಾಖಾ ತನಿಖೆ, ವಿಚಾರಣೆ ಕಾಯ್ದಿರಿಸಿ ಅಮಾನತು ಮಾಡಿ ರಾಯಚೂರು ಜಿಲ್ಲಾ.ಪಂ ಸಿಇಓ ಪಾಂಡ್ವೆ ರಾಹುಲ್ ತುಕಾರಾಮ್ ಆದೇಶ ಹೊರಡಿಸಿದ್ದಾರೆ.

ರಾಯಚೂರು: ನರೇಗಾ ಕಾಮಗಾರಿಗಳಲ್ಲಿ 100 ಕೋಟಿಗೂ ಅಧಿಕ ಅವ್ಯವಹಾರ, ನಾಲ್ವರು ಪಿಡಿಓಗಳು ಅಮಾನತು
ಕ್ಯಾದಿಗೇರಾ ಪಂ.ಪಿಡಿಓ ಸಿಬಿ ಪಾಟೀಲ್, ಶಾವಂತಗೆರಾ ಪಂ.ಪಿಡಿಓ ಗುರುಸ್ವಾಮಿ, ಜಾಲಹಳ್ಳಿ ಪಂ, ಪಿಡಿಓ ಪತ್ಯಪ್ಪ ರಾಠೋಡ್, ಗಾಣದಾಳ ಪಿಡಿಓ ಮಲ್ಲಪ್ಪ
Follow us
ಭೀಮೇಶ್​​ ಪೂಜಾರ್
| Updated By: ಆಯೇಷಾ ಬಾನು

Updated on:Dec 11, 2023 | 11:49 AM

ರಾಯಚೂರು, ಡಿ.11: ದೇವದುರ್ಗ ತಾಲೂಕಿನ 33 ಗ್ರಾಮ ಪಂಚಾಯಿತಿಗಳಲ್ಲಿ ನರೇಗಾ ಕಾಮಗಾರಿಗಳಲ್ಲಿ (NREGA Yojana) 100 ಕೋಟಿಗೂ ಅಧಿಕ ಹಣ ಭ್ರಷ್ಟಾಚಾರ ಪ್ರಕರಣ ಸಂಬಂಧ ಇಬ್ಬರು ಗೆಜೆಟೆಡ್ ಅಧಿಕಾರಿಗಳ ವಿರುದ್ಧ ಎಫ್​ಐಆರ್ (FIR) ದಾಖಲಾಗಿದ್ದು ದೇವದುರ್ಗ ತಾಲೂಕಿನ ನಾಲ್ವರು ಪಿಡಿಓಗಳನ್ನು ಅಮಾನತು ಮಾಡಲಾಗಿದೆ. ಜಾಲಹಳ್ಳಿ ಪಂ, ಪಿಡಿಓ ಪತ್ಯಪ್ಪ ರಾಠೋಡ್, ಶಾವಂತಗೆರಾ ಪಂ.ಪಿಡಿಓ ಗುರುಸ್ವಾಮಿ, ಕ್ಯಾದಿಗೇರಾ ಪಂ.ಪಿಡಿಓ ಸಿಬಿ ಪಾಟೀಲ್, ಗಾಣದಾಳ ಪಿಡಿಓ ಮಲ್ಲಪ್ಪ ಅವರನ್ನು ಅಮಾನತು ಮಾಡಲಾಗಿದೆ.

ಇಲಾಖಾ ತನಿಖೆ, ವಿಚಾರಣೆ ಕಾಯ್ದಿರಿಸಿ ಅಮಾನತು ಮಾಡಿ ರಾಯಚೂರು ಜಿಲ್ಲಾ.ಪಂ ಸಿಇಓ ಪಾಂಡ್ವೆ ರಾಹುಲ್ ತುಕಾರಾಮ್ ಆದೇಶ ಹೊರಡಿಸಿದ್ದಾರೆ. ದೇವದುರ್ಗ ತಾಲ್ಲೂಕಿನ 33 ಗ್ರಾ.ಪಂ ವ್ಯಾಪ್ತಿ ನಡೆದಿದ್ದ ಅಕ್ರಮ ಪ್ರಕರಣದಲ್ಲಿ ಇನ್ನೂ ಕೆಲ ಪಿಡಿಓಗಳು, ಚುನಾಯಿತ ಪ್ರತಿನಿಧಿಗಳು ಭಾಗಿಯಾಗಿರುವ ಆರೋಪ ಕೇಳಿ ಬಂದಿದ್ದು ಅವರ ವಿರುದ್ಧವೂ ಕ್ರಮಕ್ಕೆ ಸ್ಥಳೀಯರು ಆಗ್ರಹಿಸಿದ್ದಾರೆ.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಿರ್ದೇಶನದ ಮೇರೆಗೆ ನರೇಗಾ ಯೋಜನೆಯ ಸಹಾಯಕ ನಿರ್ದೇಶಕ ಅಣ್ಣರಾವ್ ಅವರು ಅಕ್ರಮದ ಬಗ್ಗೆ ದೂರು ನೀಡಿದ್ದರು. ದೂರಿನಂತೆ ತಾಲ್ಲೂಕು ಪಂಚಾಯಿತಿಯ ಹಿಂದಿನ ಇಒ ಪಂಪಾಪತಿ ಹಿರೇಮಠ, ನಿರ್ಗಮಿತ ನರೇಗಾ ಯೋಜನೆ ಸಹಾಯಕ ನಿರ್ದೇಶಕ ಬಸಣ್ಣ ನಾಯಕ ಹೇಮನೂರು ವಿರುದ್ಧ ದೇವದುರ್ಗ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 465, 409, 420, 34ರ ಅಡಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: ರಾಯಚೂರು: ನರೇಗಾ ಅನುಷ್ಠಾನದಲ್ಲಿ ಭಾರಿ ಅವ್ಯವಹಾರ; ಸರ್ಕಾರದ ಬೊಕ್ಕಸಕ್ಕೆ ಕೋಟಿ ರೂ. ನಷ್ಟ

ನರೇಗಾ ಯೋಜನೆಯಡಿ 2020-21, 2021-22 ಹಾಗೂ 2022-23ರವರೆಗೆ ನಡೆದ ಕಾಮಗಾರಿ ಅನುಷ್ಠಾನಗೊಂಡ ಅಂದಾಜು ಮೊತ್ತಕ್ಕಿಂತ ಹೆಚ್ಚುವರಿಯಾಗಿ ₹11.64 ಕೋಟಿ ಮತ್ತು ಅನುಷ್ಠಾನಗೊಂಡ ಕಾಮಗಾರಿಗಳ ಕಡತಗಳನ್ನು ನಿರ್ವಹಿಸದೆ ₹32.51 ಕೋಟಿಯನ್ನು ಅಕ್ರಮವಾಗಿ ಪಾವತಿಸಲಾಗಿದೆ. ಈ ಎಲ್ಲ ಪ್ರಕರಣಗಳಲ್ಲಿ ₹102.32 ಕೋಟಿಯನ್ನು ಶ್ರೀ ಮಾರುತೇಶ್ವರ ಎಂಟರ್‌ಪ್ರೈಸಸ್‌ಗೆ ನಿಯಮ ಮೀರಿ ಪಾವತಿಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:49 am, Mon, 11 December 23

ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ಟಿವಿ9 ವರದಿಗಾರ ಪ್ರಶ್ನಿಸುತ್ತಿದ್ದಂತೆಯೇ ರೆಡ್ ಕಾರ್ಪೆಟ್ ಮಂಗಮಾಯ
ಟಿವಿ9 ವರದಿಗಾರ ಪ್ರಶ್ನಿಸುತ್ತಿದ್ದಂತೆಯೇ ರೆಡ್ ಕಾರ್ಪೆಟ್ ಮಂಗಮಾಯ
ವಕ್ಫ್​ ಆಸ್ತಿ ಕಬಳಿಕೆ ತೆರವು: ವಕ್ಫ್ ನಮ್ಮ ದುಷ್ಮನ್ ಎಂದ ಮುಸ್ಲಿಂ ಮಹಿಳೆ
ವಕ್ಫ್​ ಆಸ್ತಿ ಕಬಳಿಕೆ ತೆರವು: ವಕ್ಫ್ ನಮ್ಮ ದುಷ್ಮನ್ ಎಂದ ಮುಸ್ಲಿಂ ಮಹಿಳೆ
ಜನಸಾಮಾನ್ಯರಿಗೆ ಕಷ್ಟ ತಪ್ಪಿದ್ದಲ್ಲ ಅಂತ ಉಡಾಫೆ ಮಾತಾಡಿದ ಕಾರ್ಯಕರ್ತೆ
ಜನಸಾಮಾನ್ಯರಿಗೆ ಕಷ್ಟ ತಪ್ಪಿದ್ದಲ್ಲ ಅಂತ ಉಡಾಫೆ ಮಾತಾಡಿದ ಕಾರ್ಯಕರ್ತೆ