AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಹರಂ ಮೆರವಣಿಗೆ ವೇಳೆ ವಿದ್ಯುತ್ ಸ್ಪರ್ಶ, ಇಬ್ಬರ ಸಾವು

ವಿದ್ಯುತ್ ಸ್ಪರ್ಶದಿಂದ ನೆಲಕ್ಕೆ ಬಿದ್ದವರನ್ನ ಲಿಂಗಸಗೂರು ತಾಲುಕು ಅಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಸಾವನಪ್ಪಿದ್ದಾರೆ. ಸ್ಥಳಕ್ಕೆ ಮಸ್ಕಿ ಠಾಣೆಯ ಪೊಲೀಸರ ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.

ಮೊಹರಂ ಮೆರವಣಿಗೆ ವೇಳೆ ವಿದ್ಯುತ್ ಸ್ಪರ್ಶ, ಇಬ್ಬರ ಸಾವು
ಮೊಹರಂ ಮೆರವಣಿಗೆ ವೇಳೆ ವಿದ್ಯುತ್ ಸ್ಪರ್ಶ, ಇಬ್ಬರ ಸಾವು
TV9 Web
| Updated By: ಸಾಧು ಶ್ರೀನಾಥ್​|

Updated on:Aug 20, 2021 | 10:41 AM

Share

ರಾಯಚೂರು: ಮೊಹರಂ ಮೆರವಣಿಗೆ ವೇಳೆ ವಿದ್ಯುತ್ ಸ್ಪರ್ಶವಾಗಿ ಇಬ್ಬರು ಮೃತಪಟ್ಟಿದ್ದಾರೆ. ಮೊಹರಂ ದೇವರನ್ನ ಹೊತ್ತಿದ್ದ ಛತ್ರಿಗೆ ವಿದ್ಯುತ್ ತಂತಿ ತಗುಲಿ ಅವಘಡ ಸಂಭವಿಸಿದೆ. ದೇವರನ್ನು ಹೊತ್ತಿದ್ದ ಹುಸೇನ್‌ ಸಾಬ್ (50) ಮತ್ತು ಒಬ್ಬ ಮಹಿಳೆ ಅಸುನೀಗಿದ್ದಾರೆ.

ರಾಯಚೂರು ಜಿಲ್ಲೆ ಮಸ್ಕಿ ತಾಲೂಕಿನ ಸಂತೆ ಕೆಲ್ಲೂರು ಗ್ರಾಮದಲ್ಲಿ ಮೊಹರಂ ಮೆರವಣಿಗೆ ವೇಳೆ ಈ ದುರ್ಘಟನೆ ನಡೆದಿದೆ. ವಿದ್ಯುತ್ ಸ್ಪರ್ಶದಿಂದ ನೆಲಕ್ಕೆ ಬಿದ್ದವರನ್ನ ಲಿಂಗಸಗೂರು ತಾಲೂಕು ಅಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಸಾವನಪ್ಪಿದ್ದಾರೆ. ಸ್ಥಳಕ್ಕೆ ಮಸ್ಕಿ ಠಾಣೆಯ ಪೊಲೀಸರ ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.

ಗದಗ ವರದಿ:

ಗದಗ ಜಿಲ್ಲೆ ರೋಣ ತಾಲೂಕಿನ ಹೊಳೆ ಆಲೂರಿನಲ್ಲಿ ನಿನ್ನೆ ರಾತ್ರಿ ಕೋವಿಡ್​​ ಮಾರ್ಗಸೂಚಿಗಳನ್ನು ಬ್ರೇಕ್ ಮಾಡಿ ಭರ್ಜರಿ ಮೊಹರಂ ಮೆರವಣಿಗೆ ನಡೆಸಲಾಗಿದೆ. ಸರ್ಕಾರದ ನಿಯಮಗಳಿಗೆ ಡೋಂಟ್ ಕೇರ್ ಎಂದ ಹೊಳೆ ಆಲೂರು ಜನ ಸಾವಿರಾರು ಸಂಖ್ಯೆಯಲ್ಲಿ ಮೆರವಣಿಗೆಯಲ್ಲಿ ಭಾಗಿಯಾಗಿದ್ದಾರೆ. ಪಂಜಾ ಮೆರವಣಿಗೆಯಲ್ಲಿ ಸಾಮಾಜಿಕ ಅಂತರ, ಮಾಸ್ಕ್ ಮಾಯವಾಗಿದೆ. ಸಂಭವನೀಯ ಮೂರನೇ ಅಲೆ ಆತಂಕದ ಮಧ್ಯೆ ಜನರ ನಿರ್ಲಕ್ಷ್ಯ ತೋರಿರುವುದು ಆತಂಕಕಾರಿಯಾಗಿದೆ. ಇನ್ನು ತಾಲೂಕು ಆಡಳಿತ ಅಧಿಕಾರಿಗಳು ಸಹ ಜನ ಜಾಗೃತಿ ಮೂಡಿಸುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ.

ಸಿಎಂ ಬಸವರಾಜ ಬೊಮ್ಮಾಯಿ ಮನವಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವರಮಹಾಲಕ್ಷ್ಮೀ ಹಬ್ಬ ಮತ್ತು ಮೊಹರಂ ಹಬ್ಬಕ್ಕೆ ಶುಭ ಕೋರಿದ್ದಾರೆ. ರಾಜ್ಯದ ಜನತೆಗೆ ಶುಭ ಕೋರಿದ ಸಿಎಂ ಬೊಮ್ಮಾಯಿ, ಹಬ್ಬದ ಸಂಭ್ರಮದಲ್ಲಿ ಯಾರೂ ಮೈಮರೆಯಬೇಡಿ. ಕೊವಿಡ್ ನಿಯಮಗಳನ್ನು ಪಾಲಿಸಿ ಎಂದು ಸೂಚಿಸಿದ್ದಾರೆ. ಜನ ಸೇರದೆ ಕೊವಿಡ್ ನಿಯಮ ಪಾಲಿಸಿ ಹಬ್ಬ ಆಚರಿಸಿ ಎಂದು ರಾಜ್ಯದ ಜನರಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಮನವಿ ಮಾಡಿಕೊಂಡಿದ್ದಾರೆ.

(muharram celebration electrocution 2 died in maski taluk raichur)

Published On - 9:37 am, Fri, 20 August 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ