AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರು: ಒಂದೇ ಶಾಲೆಯಲ್ಲಿ 150 ಕ್ಕೂ ಹೆಚ್ಚು ಮಕ್ಕಳಲ್ಲಿ ಕಾಣಿಸಿಕೊಂಡ ಮಂಗನ ಬಾವು

ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ನೀರಲಕೇರಿ ಗ್ರಾಮದ ನೀರಲಕೇರಿ ಸರಕಾರಿ ಶಾಲೆಯ 150 ಕ್ಕೂ ಹೆಚ್ಚು ಮಕ್ಕಳ ಮಂಗನ ಬಾವು ಕಾಣಿಸಿಕೊಂಡಿದೆ. ಕಾಯಿಲೆ ಒಬ್ಬರಿಂದ ಒಬ್ಬರಿಗೆ ಹರಡಿ, ಇಡೀ ಶಾಲೆಯನ್ನು ಆವರಿಸಿದೆ. ಗಂಟಲು ಭಾಗದಲ್ಲಿ ಬಾವು, ತಲೆನೋವು, ಸ್ನಾಯು ಸೆಳೆತದಿಂದ ಮಕ್ಕಳು ಬಳಲುತ್ತಿದ್ದಾರೆ.

ರಾಯಚೂರು: ಒಂದೇ ಶಾಲೆಯಲ್ಲಿ 150 ಕ್ಕೂ ಹೆಚ್ಚು ಮಕ್ಕಳಲ್ಲಿ ಕಾಣಿಸಿಕೊಂಡ ಮಂಗನ ಬಾವು
ಮಂಗನ ಬಾವುದಿಂದ ಬಳಲುತ್ತಿರುವ ಮಕ್ಕಳು
ಭೀಮೇಶ್​​ ಪೂಜಾರ್
| Edited By: |

Updated on: Feb 11, 2024 | 9:21 AM

Share

ರಾಯಚೂರು, ಫೆಬ್ರವರಿ 11: ಲಿಂಗಸಗೂರು (Lingasur) ತಾಲೂಕಿನ ನೀರಲಕೇರಿ ಗ್ರಾಮದ ನೀರಲಕೇರಿ ಸರಕಾರಿ ಶಾಲೆಯ (Government School) 150 ಕ್ಕೂ ಹೆಚ್ಚು ಮಕ್ಕಳ ಮಂಗನ ಬಾವು (Mumps Virus) ಕಾಣಿಸಿಕೊಂಡಿದೆ. ಕಾಯಿಲೆ ಒಬ್ಬರಿಂದ ಒಬ್ಬರಿಗೆ ಹರಡಿ, ಇಡೀ ಶಾಲೆಯನ್ನು ಆವರಿಸಿದೆ. ಗಂಟಲು ಭಾಗದಲ್ಲಿ ಬಾವು, ತಲೆನೋವು, ಸ್ನಾಯು ಸೆಳೆತದಿಂದ ಮಕ್ಕಳು ಬಳಲುತ್ತಿದ್ದಾರೆ. ಬಾವು ಇರುವ ಕಡೆ ಅರಿಶಿಣ ಮತ್ತು ಪಟ್ಟಿ ಹಾಕಿ ಪೋಷಕರು ಮನೆ ಮದ್ದು ನೀಡುತ್ತಿದ್ದಾರೆ. ಮಂಗನ ಬಾವು ಕಾಯಿಲೆ ಹೆಚ್ಚುತ್ತಿರುವುದರಿಂದ ವಿದ್ಯಾರ್ಥಿಗಳು ಶಾಲೆಗೆ ಗೈರಾಗುತ್ತಿದ್ದಾರೆ. ಸದ್ಯ ಭಾದಿತರಿಗೆ ಆನೆಹೊಸರು, ಲಿಂಗಸಗೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ವಿಚಾರ ತಿಳಿದು ಗ್ರಾಮದಲ್ಲಿ ಮುಕ್ಕಾಂ ಹೂಡಿರುವ ಆರೋಗ್ಯ ಇಲಾಖೆ ಅಧಿಕಾರಿಗಳು ಶಾಲೆಯ 300 ಕ್ಕೂ ಹೆಚ್ಚು ವಿದ್ಯಾರ್ಥಿಗಳ ಮತ್ತು ಗ್ರಾಮಸ್ಥರ ಆರೋಗ್ಯ ತಪಾಸಣೆ ನಡೆಸುತ್ತಿದ್ದಾರೆ.

ಈ ಬಗ್ಗೆ ರಾಯಚೂರು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸುರೇಂದ್ರ ಬಾಬು ಮಾತನಾಡಿ, ಪೋಷಕರು ಹೆದರುವ ಅವಶ್ಯಕತೆ ಇಲ್ಲ. ಸಾಮಾನ್ಯವಾಗಿ ಬೇಸಿಗೆಯ ಫೆಬ್ರವರಿ-ಮಾರ್ಚ್ ತಿಂಗಳಲ್ಲಿ ಖಾಯಿಲೆ ಬರುತ್ತದೆ. ಮೂರು-ನಾಲ್ಕು ದಿನಗಳಲ್ಲಿ ಬಾವು ವಾಸಿಯಾಗತ್ತೆ. ಸದ್ಯ ಶಾಲಾ ಮಕ್ಕಳಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.

ಏನಿದು ಮಂಗನ ಬಾವು?

ಮಂಗನ ಬಾವು ಅಥವಾ ಕೆಪ್ಪಟ ಮಮ್ಸ್ ಎಂಬ ವೈರಾಣುಗಳಿಂದ ಈ ರೋಗ ಬರುತ್ತದೆ. ಪ್ಯಾರೊಟಿಡ್ ಗ್ರಂಥಿಗಳನ್ನು ದೊಡ್ಡದಾಗಿಸುವ ಮೂಲಕ ತೀವ್ರ ನೋವನ್ನುಂಟು ಮಾಡುತ್ತದೆ. ಕಿವಿಯ ಮುಂಭಾಗದಲ್ಲಿ ಕೆಳಗಡೆ ಇರುವ ಈ ಗ್ರಂಥಿಗಳು ಜೊಲ್ಲನ್ನು ಉತ್ಪಾದಿಸುತ್ತವೆ.

ಇದನ್ನೂ ಓದಿ: Monkeypox: ಮಂಗನ ಕಾಯಿಲೆಯಿಂದ ಯಾರಿಗೆ ಅಪಾಯ ಜಾಸ್ತಿ?; ಮಂಕಿಫಾಕ್ಸ್​ನಿಂದ ಪಾರಾಗುವುದು ಹೇಗೆ?

ಇದೊಂದು ಸಾಂಕ್ರಾಮಿಕ ರೋಗವಾಗಿದ್ದು, ಸೋಂಕಿತ ಮಗು, ವ್ಯಕ್ತಿಯ ಸಂಪರ್ಕದಿಂದಾಗಿ (ದೈಹಿಕ ಸ್ಪರ್ಶ,ಎಂಜಲು,ಉಸಿರಾಟ) ಇನ್ನೊಬ್ಬರಿಗೆ ಹರಡುತ್ತದೆ. 2 ರಿಂದ 12 ವರ್ಷ ಪ್ರಾಯದ ಮಕ್ಕಳು ಈ ಸೋಂಕಿಗೆ ಹೆಚ್ಚಾಗಿ ಗುರಿಯಾಗುತ್ತಾರೆ. ವಯಸ್ಸಾದವರಲ್ಲಿ ಪ್ಯಾರೊಟಿಡ್ ಗ್ರಂಥಿಗಳ ಜೊತೆಗೆ ವೃಷಣಗಳು, ಮೇದೋಜ್ಜೀರಕ ಗ್ರಂಥಿ ಮತ್ತು ನರಮಂಡಲದಂತಹ ಇತರ ಅಂಗಾಂಗಗಳೂ ಈ ಸೋಂಕಿಗೊಳಗಾಗಬಹುದು. ಸಾಮಾನ್ಯವಾಗಿ ವೈರಾಣು ಸೋಂಕು ಉಂಟಾದ 12ರಿಂದ 14 ದಿನಗಳಲ್ಲಿ ರೋಗದ ಲಕ್ಷಣಗಳು ಕಂಡು ಬರುತ್ತವೆ.

ಮಂಗನಬಾವು ಹರಡಲು ಕಾರಣವೇನು?:

  1. ಮಂಗನಬಾವಿನ ರೋಗಲಕ್ಷಣಗಳು ಹೆಚ್ಚಾಗಿ ಗೋಚರವಾಗುವುದಿಲ್ಲ. ಇದು ಸೌಮ್ಯವಾಗಿರುತ್ತದೆ. ಈ ರೋಗ ತೀರಾ ಅಪಾಯಕಾರಿಯೇನಲ್ಲ.
  2. ಮಂಗನಬಾವು ರೋಗ ಇರುವವರು ಸೀನಿದಾಗ ಅಥವಾ ಕೆಮ್ಮಿದಾಗ ಅವರ ಬಾಯಿಯಿಂದ ಹೊಮ್ಮುವ ಎಂಜಲನ್ನು ನಾವು ಮುಟ್ಟಿದರೂ ಅದರಿಂದ ವೈರಸ್ ಹರಡುತ್ತದೆ.
  3. ಚುಂಬನ ಅಥವಾ ಅವರು ಕುಡಿದ ನೀರಿನ ಬಾಟಲಿಯಲ್ಲಿ ನೀರು ಕುಡಿಯುವುದರಿಂದ ಅಥವಾ ನೇರ ಸಂಪರ್ಕದಿಂದಲೂ ಈ ವೈರಸ್ ಹರಡುತ್ತದೆ.
  4. ಸೋಂಕಿತ ಲಾಲಾರಸವನ್ನು ಹೊಂದಿರುವ ಆಟಿಕೆಗಳು, ಕಪ್​ಗಳು ಮತ್ತು ಪಾತ್ರೆಗಳಂತಹ ವಸ್ತುಗಳನ್ನು ಹಂಚಿಕೊಳ್ಳುವುದರಿಂದ ಇ ರೋಗ ಹರಡುತ್ತದೆ.
  5. ಮಂಗನಬಾವು ಇರುವವರೊಂದಿಗೆ ಕ್ರೀಡೆಗಳನ್ನು ಆಡುವುದು, ನೃತ್ಯ ಮಾಡುವುದು, ಚುಂಬಿಸುವುದು ಅಥವಾ ನಿಕಟ ಸಂಪರ್ಕವನ್ನು ಒಳಗೊಂಡಿರುವ ಇತರ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದಲೂ ಹರಡುತ್ತದೆ.

ಮಂಗನಬಾವು ಬಂದಾಗ ಮುಖದ ಕೆಳಗಿನ ಭಾಗ ಊದಿಕೊಳ್ಳುತ್ತದೆ. ಇದು ತಲೆನೋವು, ಜ್ವರ ಮತ್ತು ಆಯಾಸದಂತಹ ಸೌಮ್ಯ ಲಕ್ಷಣಗಳೊಂದಿಗೆ ಪ್ರಾರಂಭವಾಗುತ್ತದೆ. ಆದರೆ ನಂತರ ಗಂಟಲಿನಲ್ಲಿ ತೀವ್ರವಾದ ಊತ ಉಂಟಾಗುತ್ತದೆ. ಹಿಂದೆ ಮಂಗನಬಾವು ಮಕ್ಕಳಲ್ಲಿ ಉಂಟಾಗುವ ಬಹಳ ಸಾಮಾನ್ಯ ಕಾಯಿಲೆಯಾಗಿತ್ತು. 1967ರಲ್ಲಿ ಮಂಪ್ಸ್ ಲಸಿಕೆ ಲಭ್ಯವಾದ ನಂತರ ಈ ರೋಗದ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಯಿತು. ದಡಾರ-ಮಂಪ್ಸ್-ರುಬೆಲ್ಲಾ (MMR) ಲಸಿಕೆಯನ್ನು ಪಡೆಯುವ ಮೂಲಕ ನಿಮ್ಮ ಮಗುವಿಗೆ ಮಂಗನಬಾವು ಬಾರದಂತೆ ಮುನ್ನೆಚ್ಚರಿಕೆ ವಹಿಸಬಹುದು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Bhemesh Poojar
Bhemesh Poojar

ಕಳೆದ 10 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.ಈ ಹಿಂದೆ ಬೆಂಗಳೂರು ನಗರದಲ್ಲಿ ಕ್ರೈಂ ರಿಪೋರ್ಟರ್ ಆಗಿ ಎಂಟು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದೇನೆ.ಟಿವಿ9 ಸಂಸ್ಥೆಯಲ್ಲಿ ಕಳೆದ ಎರಡು ವರ್ಷಗಳಿಂದ ರಾಯಚೂರು ಜಿಲ್ಲಾ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ.ನನ್ನ ಹವ್ಯಾಸ ಕ್ರಿಕೆಟ್ ಆಡುವುದು.

Read More
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!