AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾರಾಯಣಪುರ ವಿತರಣಾ ಕಾಲುವೆ ಒಡೆದು ಅಪಾರ ನೀರು ಪೋಲು; 200 ಎಕರೆಗೂ ಅಧಿಕ ಬೆಳೆ ನೀರು ಪಾಲು

ಬೆಳೆಗಳಿಗೆ ಸಾವಿರಾರೂ ರೂಪಾಯಿ ಸಾಲಮಾಡಿ ರಸಗೊಬ್ಬರ ಹಾಕಲಾಗಿತ್ತು. ಕಾಲುವೆ ಒಡೆದು ನುಗ್ಗಿದ ನೀರಿನ ರಭಸಕ್ಕೆ ಎಲ್ಲಾ ರಸಗೊಬ್ಬರ, ಕೀಟನಾಶಕ ಕೊಚ್ಚಿಹೋಗಿದೆ ಎಂದು ರೈತರು ಅಕ್ರೋಶ ವ್ಯಕ್ತಪಡಿಸ್ತಿದ್ದಾರೆ.

ನಾರಾಯಣಪುರ ವಿತರಣಾ ಕಾಲುವೆ ಒಡೆದು ಅಪಾರ ನೀರು ಪೋಲು; 200 ಎಕರೆಗೂ ಅಧಿಕ ಬೆಳೆ ನೀರು ಪಾಲು
ನೀರಿನ ಕಾಲುವೆ ಒಡೆದು ಅಪಾರ ಪ್ರಮಾಣದ ಬೆಳೆ ನಷ್ಟ
TV9 Web
| Edited By: |

Updated on:Sep 20, 2021 | 1:11 PM

Share

ರಾಯಚೂರು: ಜಿಲ್ಲೆಯ ದೇವದುರ್ಗ ತಾಲೂಕಿನ ಹೊಸುರು ಸಿದ್ದಾಪುರ ಗ್ರಾಮದ ಬಳಿ, ನೀರಿನ ಕಾಲುವೆ ಒಡೆದು ರೈತರು ಸಂಕಷ್ಟಕ್ಕೆ ಸಿಲುಕುವಂತಾಗಿದೆ.  ನಾರಾಯಣಪುರ ಬಲದಂಡೆಯ 9ನೇ ವಿತರಣಾ ಕಾಲುವೆಯ 4ನೇ ಕಿ.ಮೀ ಹತ್ತಿರ ನೀರಿನ ಕಾಲುವೆ ಒಡೆದು ಅಪಾರ ಪ್ರಮಾಣದ ಬೆಳೆ ನಷ್ಟವಾಗಿದೆ. ಇಂದು (ಸೆಪ್ಟೆಂಬರ್ 20, ಸೋಮವಾರ) ಬೆಳಿಗ್ಗೆ ಈ ಘಟನೆ ಜರುಗಿದ್ದು, 200 ಎಕರೆಗೂ ಅಧಿಕ ಪ್ರದೇಶದಲ್ಲಿ ರೈತರು ಬೆಳೆದಿದ್ದ ಭತ್ತ, ಮೇಣಸಿನಕಾಯಿ, ಸೇಂಗಾ, ಈರುಳ್ಳಿ, ಸಜ್ಜೆ ಸೇರಿದಂತೆ ಅನೇಕ ಬೆಳೆ ನೀರು ಪಾಲಾಗಿದೆ.

ಈ ಬೆಳೆಗಳಿಗೆ ಸಾವಿರಾರೂ ರೂಪಾಯಿ ಸಾಲಮಾಡಿ ರಸಗೊಬ್ಬರ ಹಾಕಲಾಗಿತ್ತು. ಕಾಲುವೆ ಒಡೆದು ನುಗ್ಗಿದ ನೀರಿನ ರಭಸಕ್ಕೆ ಎಲ್ಲಾ ರಸಗೊಬ್ಬರ, ಕೀಟನಾಶಕ ಕೊಚ್ಚಿಹೋಗಿದೆ ಎಂದು ರೈತರು ಅಕ್ರೋಶ ವ್ಯಕ್ತಪಡಿಸ್ತಿದ್ದಾರೆ.

ಕಾಲುವೆ ಒಡೆಯಲು ಪ್ರಮುಖ ಕಾರಣ ಅಧಿಕಾರಿಗಳು. ಕಾಲುವೆ ಬಗ್ಗೆ ಅಧಿಕಾರಿಗಳಿಗೆ ಕಾಳಜಿ ಇಲ್ಲವಾಗಿದೆ. ಪ್ರಸಕ್ತ ವರ್ಷ ಕಾಲುವೆಯ ದುರಸ್ತಿ ಹಾಗೂ ಜಂಗಲ್ ಕಟಿಂಗ್, ಹೂಳು ಸ್ವಚ್ಛತೆಗೆ ಕೃಷ್ಣ ಭಾಗ್ಯ ಜಲ ನಿಗಮ 11 ಕೋಟಿ ರೂಪಾಯಿ ಅನುದಾನ ಮಂಜೂರು ಮಾಡಿದೆ. ಆದರೆ, ಅಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು, ಗುತ್ತಿಗೆದಾರರು ಸೇರಿ ಯಾವುದೇ ದುರಸ್ತಿ, ಕಾಲುವೆ ಹೂಳು ಸ್ವಚ್ಛತೆ ಮಾಡದೇ ಇರುವುದರಿಂದ ಒಡೆಯಲು ಕಾರಣವಾಗಿದೆ ಎಂದು ರೈತರು ಆರೋಪಿಸಿದ್ದಾರೆ.

ಕಾಲುವೆಯ ಎಡ ಭಾಗದ ಲೈನಿಂಗ್ ಒಡೆದು ಅಪಾರ ಪ್ರಮಾಣದ ಬೆಳೆ ಹಾಳಾಗಿದೆ. ಕಾಲುವೆಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಸಿರುವುದೇ ಕಾಲುವೆ ಒಡೆಯಲು ಕಾರಣವಾಗಿದೆ. ಎರಡು ಎಕರೆ ಪ್ರದೇಶದಲ್ಲಿ ಬೆಳೆದ ಭತ್ತಕ್ಕೆ ಹಾಕಿದ ರಸಗೋಬ್ಬರ ಎಲ್ಲಾ ನೀರಿನಲ್ಲಿ ಹರಿದು ಹೋಗಿದೆ ಎಂದು ರೈತ ಮುಖಂಡರು ಆರೋಪಿಸಿದ್ದಾರೆ.

crop loss

ಅನೇಕ ಬೆಳೆ ನೀರು ಪಾಲು

ಕೃಷ್ಣಾ ಭಾಗ್ಯ ಜಲ ನಿಗಮದ ಅಧಿಕಾರಿಗಳ ನಿರ್ಲಕ್ಷ್ಯವೇ ಇದಕ್ಕೆ ಕಾರಣವಾಗಿದ್ದು, ರೈತರಿಗೆ ಬೆಳೆ ಪರಿಹಾರ ನೀಡಬೇಕೆಂದು ರೈತರು ಒತ್ತಾಯಿಸಿದ್ದಾರೆ. ಈದೀಗ ಕಾಲುವೆ ನೀರು ಹರಿವು ಸ್ಥಗಿತಗೊಳಿಸಿ ದುರಸ್ಥಿ ಕಾರ್ಯ ಕೈಗೊಳ್ಳಲಾಗಿದೆ. ಘಟನಾ ಸ್ಥಳಕ್ಕೆ ಸಹಾಯಕ ಇಂಜನಿಯರ್ ಎಂ.ಎಸ್. ಭಜಂತ್ರಿ, ಕಿರಿಯ ಇಂಜನಿಯರ್ ಶ್ರೀಧರ್ ಭೇಟಿ ನೀಡಿ, ಅಗತ್ಯ ಕ್ರಮ ಕೈಗೊಂಡು ಸಂಜೆಯ ಹೊತ್ತಿಗೆ ಕಾಲುವೆಗೆ ನೀರು ಹರಿಸಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಅಕಾಲಿಕ ಮಳೆಗೆ ನಲುಗಿದ ಯಾದಗಿರಿ; ವರುಣನ ಅಬ್ಬರಕ್ಕೆ ಶೇಂಗಾ ಬೆಳೆ ನೀರು ಪಾಲು

Onion Diseases: ಬೆಲೆ ಕುಸಿತದ ನಡುವೆ ಈರುಳ್ಳಿ ಬೆಳೆಗೆ ಕೊಳೆ ರೋಗ ಕಾಟ, ರೈತರು ಕಂಗಾಲು

Published On - 1:09 pm, Mon, 20 September 21

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ