AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವದುರ್ಗದಲ್ಲಿ ಕೋಟ್ಯಂತರ ರೂ​​​ ನರೇಗಾ ಅಕ್ರಮ, ಉಸ್ತುವಾರಿ ಸಚಿವ ಶರಣ ಪ್ರಕಾಶ್ ಪಾಟೀಲ್ ಹೇಳಿದ್ದೇನು?

ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಈ ಬಗ್ಗೆ ಪ್ರತಿಯಿಸಿದ್ದಾರೆ - ಅಕ್ರಮದ ಫೈನಲ್ ರಿಪೋರ್ಟ್ ಕೂಡ ಸರ್ಕಾರದ ಮಟ್ಟದಲ್ಲಿ ಪರಿಶೀಲನಾ ಹಂತದಲ್ಲಿದೆ. ಅದು ಕ್ಲಿಯರ್ ಆಗುತ್ತಿದ್ದಂತೆಯೇ ಪಿಡಿಓಗಳು ಹಾಗೂ ಅದರಲ್ಲಿ ಶಾಮೀಲಾದ ಉನ್ನತಮಟ್ಟದ ಅಧಿಕಾರಿಗಳ ವಿರುದ್ಧವೂ ಕ್ರಮಕೈಗೊಳ್ಳಲಾಗುತ್ತೆ ಎಂದಿದ್ದಾರೆ.

ದೇವದುರ್ಗದಲ್ಲಿ ಕೋಟ್ಯಂತರ ರೂ​​​ ನರೇಗಾ ಅಕ್ರಮ, ಉಸ್ತುವಾರಿ ಸಚಿವ ಶರಣ ಪ್ರಕಾಶ್ ಪಾಟೀಲ್ ಹೇಳಿದ್ದೇನು?
ನರೇಗಾ ಅಕ್ರಮ: ಉಸ್ತುವಾರಿ ಸಚಿವ ಶರಣ ಪಾಟೀಲ್ ಹೇಳಿದ್ದೇನು?
ಭೀಮೇಶ್​​ ಪೂಜಾರ್
| Edited By: |

Updated on: Jan 31, 2024 | 11:01 AM

Share

ಅದು ಸರ್ಕಾರದ ಯೋಜನೆಯ ಕೋಟಿ ಕೋಟಿ ಹಣ ಭ್ರಷ್ಟಾಚಾರ ಪ್ರಕರಣ. ಬಡವರ ದುಡ್ಡು ನುಂಗಿ ನೀರು ಕುಡಿದಿದ್ದೋರಿಗೆ ಕ್ರಿಮಿನಲ್ ಕೇಸ್ ಉರುಳು ಸುತ್ತಿಕೊಂಡಿದ್ದು, ಭ್ರಷ್ಟರಿಗೆ ನಡುಕ ಶುರುವಾಗಿದೆ. ಹೌದು.. ರಾಯಚೂರು ಜಿಲ್ಲೆ ದೇವದುರ್ಗ ತಾಲ್ಲೂಕಿನಲ್ಲಿ ಇಡೀ ರಾಜ್ಯದಲ್ಲೇ ನಡೆಯಲಾರದಂತ ನರೇಗಾ ಯೋಜನೆಯ ಬೃಹತ್ ಹಗರಣ ನಡೆದಿದೆ.. ದೇವದುರ್ಗ ತಾಲ್ಲೂಕು ಪಂಚಾಯಿತಿ ವ್ಯಾಪ್ತಿಯ‌ ಸುಮಾರು 32 ಪಿಡಿಓಗಳನ್ನ ರಾಯಚೂರು ಜಿಲ್ಲಾ ಪಂಚಾಯತ ಸಿಇಓ ಪಾಂಡ್ವೆ ರಾಹುಲ್ ತುಕಾರಾಮ್ ಅಮಾನತ್ತುಗೊಳಿಸಿದ್ದಾರೆ. ಸಾಮಾಜಿಕ ಲೆಕ್ಕ ಪರಿಶೋಧನಾ ಸಮಿತಿಯ ಮಧ್ಯಂತರ ವರದಿ ಆಧಾರದಲ್ಲಿ ಕ್ರಮಕೈಗೊಳ್ಳುವಂತೆ ಸರ್ಕಾರ ಸೂಚಿಸಿತ್ತು ಇದರ ಬೆನ್ನಲ್ಲೇ ಅಮಾನತ್ತಾದ ಪಿಡಿಓಗಳಿಗೆ ಕ್ರಿಮಿನಲ್ ಕೇಸ್ ಉರುಲು ಸುತ್ತುಕೊಂಡಿದೆ. ಯಾವ ಕ್ಷಣದಲ್ಲಿ ಬೇಕಾದ್ರೂ ಪಿಡಿಓಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಾಗೊ ಸಾಧ್ಯತೆಯಿದೆ.

ವಾಓ-2; ಹೌದು‌..ದೇವದುರ್ಗ ತಾಲ್ಲೂಕು ಪಂಚಾಯತ ವ್ಯಾಪ್ತಿಯ 33 ಗ್ರಾ. ಪಂಚಾಯಿತಿಗಳಲ್ಲಿ ಒಟ್ಟು 5385 ಕಾಮಗಾರಿಗಳಲ್ಲಿ ಭಾರೀ ಅಕ್ರಮ ನಡೆದಿತ್ತು..ಆ ಪೈಕಿ 32 ಗ್ರಾಮ ಪಂಚಾಯತಿಗಳ ಕಾಮಗಾರಿಗಳ ಸಾಮಾಗ್ರಿಗಳನ್ನು ಒಂದೇ ಸಂಸ್ಥೆಯಲ್ಲಿ ಖರೀದಿಸಲಾಗಿತ್ತು. ಒಟ್ಟು 102.32 ಕೋಟಿ ರೂ. ಅನ್ನ ಮಾರುತೇಶ್ವರ ಎಂಟರ್ ಪ್ರೈಸಸ್ ಅನ್ನೋ ಒಂದೇ ಸಂಸ್ಥೆಗೆ ಪಾವತಿಸಿರೊ ಸತ್ಯ ಬಯಲಾಗಿತ್ತು. ಕಡತಗಳನ್ನು ನಿರ್ವಹಿಸದೇ 32.51 ಕೋಟಿ ರೂ.ಪಾವತಿ, ಅಂದಾಜು ಮೊತ್ತಕ್ಕಿಂತ ಹೆಚ್ಚುವರಿಯಾಗಿ 11.64 ಕೋಟಿ ಪಾವತಿ ಮಾಡಿರುವುದು ಬೆಳಕಿಗೆ ಬಂದಿತ್ತು.

ಇದನ್ನೂ ಓದಿ: ನರೇಗಾ ಯೋಜನೆಯಲ್ಲಿ ಅಕ್ರಮ; ಕಾಮಗಾರಿಯನ್ನೇ ನಡೆಸದೆ ಹಣ ಗುಳುಂ ಮಾಡಿದ ಗ್ರಾಪಂ ಅಧಿಕಾರಿಗಳು !

ಸರ್ಕಾರಕ್ಕೆ 5.10 ಕೋಟಿ ತೆರಿಗೆ ವಂಚಿಸಲಾಗಿತ್ತು. ನಕಲಿ ಜಾಬ್ ಕಾರ್ಡ್ ಸೃಷ್ಟಿಸಿ,ಫಲಾನುಭವಿಗಳಿಗೆ ಹಣ ಹಾಕದೇ ಸಾಮಾಗ್ರಿ ಪೂರೈಕೆದಾರರಿಗೆ ಹಣ ಸಂದಾಯಿಸಿದ್ದಲ್ಲದೇ, ಶೇಕಡಾ 95 ರಷ್ಟು ಕಾಮಗಾರಿಗಳಿಗೆ ನಾಮಫಲಕ ಅಳವಡಿಸದೇ ಪ್ರತಿ ನಾಮಫಲಕಕ್ಕೆ 5000 ರೂ.ಪಾವತಿಸಲಾಗಿತ್ತು..ಹೀಗೆ ವಿವಿಧ ವಿಧಾನಗಳ ಮೂಲಕ 49 ಕೋಟಿ 27 ಲಕ್ಷ ಹಣ ದುರುಪಯೋಗವಾಗಿರೋದನ್ನ ಬಯಲಾಗಿತ್ತು..

ಸದ್ಯ ಇವೆಲ್ಲಾ ಅಕ್ರಮಗಳ ಬೆನ್ನಲ್ಲೇ ತನಿಖೆ ಚುರುಕುಗೊಂಡಿದ್ದು ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಪ್ರತಿಯಿಸಿದ್ದಾರೆ. ಅಕ್ರಮದ ಫೈನಲ್ ರಿಪೋರ್ಟ್ ಕೂಡ ಸರ್ಕಾರದ ಮಟ್ಟದಲ್ಲಿ ಪರಿಶೀಲನಾ ಹಂತದಲ್ಲಿದೆ..ಅದು ಕ್ಲಿಯರ್ ಆಗುತ್ತಿದ್ದಂತೆಯೇ ಪಿಡಿಓಗಳು ಹಾಗೂ ಅಧರಲ್ಲಿ ಶಾಮೀಲಾದ ಉನ್ನತ ಮಟ್ಟದ ಅಧಿಕಾರಿಗಳ ವಿರುದ್ಧವೂ ಕ್ರಮಕೈಗೊಳ್ಳಲಾಗುತ್ತೆ ಎಂದಿದ್ದಾರೆ. ಅದನೆ ಇರ್ಲಿ ಸರ್ಕಾರ ಮುಲಾಜಿಲ್ಲದೇ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಂಡು ದುರುಪಯೋಗ ಪಡಿಸಿಕೊಳ್ಳಲಾದ ಹಣ ವಸೂಲು ಮಾಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Bhemesh Poojar
Bhemesh Poojar

ಕಳೆದ 10 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.ಈ ಹಿಂದೆ ಬೆಂಗಳೂರು ನಗರದಲ್ಲಿ ಕ್ರೈಂ ರಿಪೋರ್ಟರ್ ಆಗಿ ಎಂಟು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದೇನೆ.ಟಿವಿ9 ಸಂಸ್ಥೆಯಲ್ಲಿ ಕಳೆದ ಎರಡು ವರ್ಷಗಳಿಂದ ರಾಯಚೂರು ಜಿಲ್ಲಾ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ.ನನ್ನ ಹವ್ಯಾಸ ಕ್ರಿಕೆಟ್ ಆಡುವುದು.

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್