AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವದುರ್ಗದಲ್ಲಿ ಕೋಟ್ಯಂತರ ರೂ​​​ ನರೇಗಾ ಅಕ್ರಮ, ಉಸ್ತುವಾರಿ ಸಚಿವ ಶರಣ ಪ್ರಕಾಶ್ ಪಾಟೀಲ್ ಹೇಳಿದ್ದೇನು?

ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಈ ಬಗ್ಗೆ ಪ್ರತಿಯಿಸಿದ್ದಾರೆ - ಅಕ್ರಮದ ಫೈನಲ್ ರಿಪೋರ್ಟ್ ಕೂಡ ಸರ್ಕಾರದ ಮಟ್ಟದಲ್ಲಿ ಪರಿಶೀಲನಾ ಹಂತದಲ್ಲಿದೆ. ಅದು ಕ್ಲಿಯರ್ ಆಗುತ್ತಿದ್ದಂತೆಯೇ ಪಿಡಿಓಗಳು ಹಾಗೂ ಅದರಲ್ಲಿ ಶಾಮೀಲಾದ ಉನ್ನತಮಟ್ಟದ ಅಧಿಕಾರಿಗಳ ವಿರುದ್ಧವೂ ಕ್ರಮಕೈಗೊಳ್ಳಲಾಗುತ್ತೆ ಎಂದಿದ್ದಾರೆ.

ದೇವದುರ್ಗದಲ್ಲಿ ಕೋಟ್ಯಂತರ ರೂ​​​ ನರೇಗಾ ಅಕ್ರಮ, ಉಸ್ತುವಾರಿ ಸಚಿವ ಶರಣ ಪ್ರಕಾಶ್ ಪಾಟೀಲ್ ಹೇಳಿದ್ದೇನು?
ನರೇಗಾ ಅಕ್ರಮ: ಉಸ್ತುವಾರಿ ಸಚಿವ ಶರಣ ಪಾಟೀಲ್ ಹೇಳಿದ್ದೇನು?
ಭೀಮೇಶ್​​ ಪೂಜಾರ್
| Updated By: ಸಾಧು ಶ್ರೀನಾಥ್​|

Updated on: Jan 31, 2024 | 11:01 AM

Share

ಅದು ಸರ್ಕಾರದ ಯೋಜನೆಯ ಕೋಟಿ ಕೋಟಿ ಹಣ ಭ್ರಷ್ಟಾಚಾರ ಪ್ರಕರಣ. ಬಡವರ ದುಡ್ಡು ನುಂಗಿ ನೀರು ಕುಡಿದಿದ್ದೋರಿಗೆ ಕ್ರಿಮಿನಲ್ ಕೇಸ್ ಉರುಳು ಸುತ್ತಿಕೊಂಡಿದ್ದು, ಭ್ರಷ್ಟರಿಗೆ ನಡುಕ ಶುರುವಾಗಿದೆ. ಹೌದು.. ರಾಯಚೂರು ಜಿಲ್ಲೆ ದೇವದುರ್ಗ ತಾಲ್ಲೂಕಿನಲ್ಲಿ ಇಡೀ ರಾಜ್ಯದಲ್ಲೇ ನಡೆಯಲಾರದಂತ ನರೇಗಾ ಯೋಜನೆಯ ಬೃಹತ್ ಹಗರಣ ನಡೆದಿದೆ.. ದೇವದುರ್ಗ ತಾಲ್ಲೂಕು ಪಂಚಾಯಿತಿ ವ್ಯಾಪ್ತಿಯ‌ ಸುಮಾರು 32 ಪಿಡಿಓಗಳನ್ನ ರಾಯಚೂರು ಜಿಲ್ಲಾ ಪಂಚಾಯತ ಸಿಇಓ ಪಾಂಡ್ವೆ ರಾಹುಲ್ ತುಕಾರಾಮ್ ಅಮಾನತ್ತುಗೊಳಿಸಿದ್ದಾರೆ. ಸಾಮಾಜಿಕ ಲೆಕ್ಕ ಪರಿಶೋಧನಾ ಸಮಿತಿಯ ಮಧ್ಯಂತರ ವರದಿ ಆಧಾರದಲ್ಲಿ ಕ್ರಮಕೈಗೊಳ್ಳುವಂತೆ ಸರ್ಕಾರ ಸೂಚಿಸಿತ್ತು ಇದರ ಬೆನ್ನಲ್ಲೇ ಅಮಾನತ್ತಾದ ಪಿಡಿಓಗಳಿಗೆ ಕ್ರಿಮಿನಲ್ ಕೇಸ್ ಉರುಲು ಸುತ್ತುಕೊಂಡಿದೆ. ಯಾವ ಕ್ಷಣದಲ್ಲಿ ಬೇಕಾದ್ರೂ ಪಿಡಿಓಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಾಗೊ ಸಾಧ್ಯತೆಯಿದೆ.

ವಾಓ-2; ಹೌದು‌..ದೇವದುರ್ಗ ತಾಲ್ಲೂಕು ಪಂಚಾಯತ ವ್ಯಾಪ್ತಿಯ 33 ಗ್ರಾ. ಪಂಚಾಯಿತಿಗಳಲ್ಲಿ ಒಟ್ಟು 5385 ಕಾಮಗಾರಿಗಳಲ್ಲಿ ಭಾರೀ ಅಕ್ರಮ ನಡೆದಿತ್ತು..ಆ ಪೈಕಿ 32 ಗ್ರಾಮ ಪಂಚಾಯತಿಗಳ ಕಾಮಗಾರಿಗಳ ಸಾಮಾಗ್ರಿಗಳನ್ನು ಒಂದೇ ಸಂಸ್ಥೆಯಲ್ಲಿ ಖರೀದಿಸಲಾಗಿತ್ತು. ಒಟ್ಟು 102.32 ಕೋಟಿ ರೂ. ಅನ್ನ ಮಾರುತೇಶ್ವರ ಎಂಟರ್ ಪ್ರೈಸಸ್ ಅನ್ನೋ ಒಂದೇ ಸಂಸ್ಥೆಗೆ ಪಾವತಿಸಿರೊ ಸತ್ಯ ಬಯಲಾಗಿತ್ತು. ಕಡತಗಳನ್ನು ನಿರ್ವಹಿಸದೇ 32.51 ಕೋಟಿ ರೂ.ಪಾವತಿ, ಅಂದಾಜು ಮೊತ್ತಕ್ಕಿಂತ ಹೆಚ್ಚುವರಿಯಾಗಿ 11.64 ಕೋಟಿ ಪಾವತಿ ಮಾಡಿರುವುದು ಬೆಳಕಿಗೆ ಬಂದಿತ್ತು.

ಇದನ್ನೂ ಓದಿ: ನರೇಗಾ ಯೋಜನೆಯಲ್ಲಿ ಅಕ್ರಮ; ಕಾಮಗಾರಿಯನ್ನೇ ನಡೆಸದೆ ಹಣ ಗುಳುಂ ಮಾಡಿದ ಗ್ರಾಪಂ ಅಧಿಕಾರಿಗಳು !

ಸರ್ಕಾರಕ್ಕೆ 5.10 ಕೋಟಿ ತೆರಿಗೆ ವಂಚಿಸಲಾಗಿತ್ತು. ನಕಲಿ ಜಾಬ್ ಕಾರ್ಡ್ ಸೃಷ್ಟಿಸಿ,ಫಲಾನುಭವಿಗಳಿಗೆ ಹಣ ಹಾಕದೇ ಸಾಮಾಗ್ರಿ ಪೂರೈಕೆದಾರರಿಗೆ ಹಣ ಸಂದಾಯಿಸಿದ್ದಲ್ಲದೇ, ಶೇಕಡಾ 95 ರಷ್ಟು ಕಾಮಗಾರಿಗಳಿಗೆ ನಾಮಫಲಕ ಅಳವಡಿಸದೇ ಪ್ರತಿ ನಾಮಫಲಕಕ್ಕೆ 5000 ರೂ.ಪಾವತಿಸಲಾಗಿತ್ತು..ಹೀಗೆ ವಿವಿಧ ವಿಧಾನಗಳ ಮೂಲಕ 49 ಕೋಟಿ 27 ಲಕ್ಷ ಹಣ ದುರುಪಯೋಗವಾಗಿರೋದನ್ನ ಬಯಲಾಗಿತ್ತು..

ಸದ್ಯ ಇವೆಲ್ಲಾ ಅಕ್ರಮಗಳ ಬೆನ್ನಲ್ಲೇ ತನಿಖೆ ಚುರುಕುಗೊಂಡಿದ್ದು ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಪ್ರತಿಯಿಸಿದ್ದಾರೆ. ಅಕ್ರಮದ ಫೈನಲ್ ರಿಪೋರ್ಟ್ ಕೂಡ ಸರ್ಕಾರದ ಮಟ್ಟದಲ್ಲಿ ಪರಿಶೀಲನಾ ಹಂತದಲ್ಲಿದೆ..ಅದು ಕ್ಲಿಯರ್ ಆಗುತ್ತಿದ್ದಂತೆಯೇ ಪಿಡಿಓಗಳು ಹಾಗೂ ಅಧರಲ್ಲಿ ಶಾಮೀಲಾದ ಉನ್ನತ ಮಟ್ಟದ ಅಧಿಕಾರಿಗಳ ವಿರುದ್ಧವೂ ಕ್ರಮಕೈಗೊಳ್ಳಲಾಗುತ್ತೆ ಎಂದಿದ್ದಾರೆ. ಅದನೆ ಇರ್ಲಿ ಸರ್ಕಾರ ಮುಲಾಜಿಲ್ಲದೇ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಂಡು ದುರುಪಯೋಗ ಪಡಿಸಿಕೊಳ್ಳಲಾದ ಹಣ ವಸೂಲು ಮಾಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು