AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Woman Auto Driver: 30 ವರ್ಷಗಳಿಂದ ಅವಡುಗಚ್ಚಿ ಆಟೋ ಓಡಿಸುತ್ತಿರುವ ಸ್ವಾಭಿಮಾನಿ ನಿರ್ಮಲಾ ಜೀವನಗಾಥೆಯನ್ನೊಮ್ಮೆ ಓದಿ!

ಇನ್ನೇನು ವಯಸ್ಸಾಯ್ತು ಮನೆಯಲ್ಲಿರೋಣ ಅಂತ ಯೋಚಿಸೋವಾಗಲೇ, ಹೆಗಲೆತ್ತರಕ್ಕೆ ಬೆಳೆದಿದ್ದ ಮಗ ವಿರೇಶ್ ಅಕಾಲಿಕ ಮರಣಕ್ಕೆ ತುತ್ತಾಗಿದ್ದ. ಆಗ ಮತ್ತೆ ಅದೇ ಆಟೋ ಸೇವೆಯನ್ನು ನಿರ್ಮಲಾ ಮುಂದುವರೆಸಿದ್ದಾರೆ. ಇದೇ ದುಡಿಮೆಯಿಂದ ಅನಾರೋಗ್ಯ ಪೀಡಿತ ಪತಿಯ ಚಿಕಿತ್ಸಾ ಖರ್ಚು, ಮನೆ ಖರ್ಚು ನಿಭಾಯಿಸಿಕೊಂಡು ಮಗಳು ರೇಖಾ ಮದುವೆ ಮಾಡಿಸಿದ್ದಾರೆ. ಜೊತೆಗೆ ಮತ್ತೊಬ್ಬ ಪುತ್ರ ನರೇಶನನ್ನು ಉನ್ನತ ವ್ಯಾಸಂಗಕ್ಕಾಗಿ ವಿಶಾಖಪಟ್ಟಣಂಗೆ ಕಳುಹಿಸಿದ್ದಾರೆ.

Woman Auto Driver: 30 ವರ್ಷಗಳಿಂದ ಅವಡುಗಚ್ಚಿ ಆಟೋ ಓಡಿಸುತ್ತಿರುವ ಸ್ವಾಭಿಮಾನಿ ನಿರ್ಮಲಾ ಜೀವನಗಾಥೆಯನ್ನೊಮ್ಮೆ ಓದಿ!
ಸ್ವಾಭಿಮಾನಿ ನಿರ್ಮಲಾ ಜೀವನಗಾಥೆಯನ್ನೊಮ್ಮೆ ಓದಿ!
ಸಾಧು ಶ್ರೀನಾಥ್​
|

Updated on:May 23, 2023 | 11:15 AM

Share

ಪತಿ ಕಿರುಕುಳ, ಗಂಡನಿಗೆ ದುಡಿಮೆಯಿಲ್ಲ, ಪತಿಗೆ ದೀರ್ಘ ಕಾಳದ ಅನಾರೋಗ್ಯ ಹೀಗೆ ಹತ್ತು ಹಲವು ಕಾರಣಗಳಿಂದ ಅದೆಷ್ಟೋ ಮಹಿಳೆಯರು ತವರು ಸೇರ್ತಾರೆ. ಆದ್ರೆ ಹೀಗೆ ಗಂಡನಿಂದ ದೂರವಾಗಿರೊ ಅದೆಷ್ಟೋ ಮಹಿಳೆಯರಿಗೆ ಬಿಸಿಲುನಾಡು ರಾಯಚೂರಿನ ಆ ಮಹಿಳೆಯ ಕಥೆಯನ್ನ ನೋಡಲೇಬೇಕು. ಒಮ್ಮೆ ಆ ಬಡ ಮಹಿಳೆ ಸ್ವಾಭಿಮಾನ ನೋಡಿದ್ರೆ ನೀವು ಚೇಂಜ್ ಆಗೋದು ಪಕ್ಕಾ. ಹೀಗೆ ಸರ್, ಸರ್ ಬನ್ನಿ.. ಎಲ್ಲಿಗೆ ಕರ್ಕೊಂಡ್ ಹೋಗ್ಬೇಕು ಹೇಳಿ.. ಆಟೋ.. ಬನ್ನಿ ಸಾರ್ ಆಟೋ – ಅಂತ ಕೂಗುತ್ತಿರೊ ಈ ಮಹಿಳೆಯನ್ನು ನೋಡಿ. ಗಂಡನ ಕಿರುಕುಳಕ್ಕೆ ಬೇಸತ್ತು ದೂರ ಆಗೋ ಅದೆಷ್ಟೋ ಮಹಿಳೆಯರಿಗೆ ಈ ಆಟೋ ಚಾಲಕಿ ಸ್ಪೂರ್ತಿ. ಅಷ್ಟಕ್ಕೂ ಈಕೆ ರಾಯಚೂರು (Raichur) ಜಿಲ್ಲೆಯ ಮೊಟ್ಟ ಮೊದಲ ಮಹಿಳಾ ಆಟೋ ಚಾಲಕಿ ಕಂ ಸ್ವಾಭಿಮಾನಿ ಮಹಿಳೆ (Woman Auto Driver).

ಹೌದು.. ಇಲ್ಲಿ ಕಾಣ್ತಿರೊ ಈ ಆಟೋ ಚಾಲಕಿ ಹೆಸರು ನಿರ್ಮಲಾ.. ವಯಸ್ಸು 53.. ರಾಯಚೂರು ನಗರದ ಆಶಾಪುರ ರಸ್ತೆಯ ಸಣ್ಣದೊಂದು ಮನೆಯೊಂದರಲ್ಲಿ ಪತಿ ರಾಮುಲು‌ ಜೊತೆ ವಾಸವಿದ್ದಾರೆ.. ಈ ಆಟೋ ಚಾಲಕಿ ನಿರ್ಮಲಾ ರಾಯಚೂರು ಜಿಲ್ಲೆಯ ಮೊದಲ ಹಾಗೂ ಏಕೈಕ ಮಹಿಳಾ ಆಟೋ‌ ಚಾಲಕಿ.. ನಿರ್ಮಲಾ ಪತಿ ರಾಮುಲು ಕೂಡ ಆಟೋ ಚಾಲಕ.. ಆತ ದುಡಿಯುವುದನ್ನು ಬಿಟ್ಟು ಪತ್ನಿ ನಿರ್ಮಲಾ ಹಾಗೂ ಮಕ್ಕಳಿಗೆ ಕಿರುಕುಳ ಕೊಡೋಕೆ‌ ಶುರುಮಾಡಿದ್ದ.

ಆಗ ಗಂಡನ ಮನೆ ಬಿಟ್ಟು ಹೋದರೆ ಸಮಾಜ ನೋಡೊದೇ ಬೇರೆ ಥರ ಅಂತ ತಾನೇ ಮುಂದುನಿಂತು ಮನೆ ಜವಾಬ್ದಾರಿ ಹೆಗಲಿಗೇರಿಸಿಕೊಂಡಳು. ನಿರ್ಮಲಾ ಕೊನೆಗೆ ಆಟೋ‌ ಚಾಲನೆ ಕಲಿತು ಗಂಡ ರಾಮುಲು ಬದಲು ತಾನೇ ಆಟೋ ಚಾಲನೆಗೆ ನಿಂತ್ರು.. 1992 ರಲ್ಲಿ ಆಟೋ ಚಾಲನೆ ಶುರು ಮಾಡಿದ ನಿರ್ಮಲಾ ಇಲ್ಲಿಯವರೆಗೆ ಸುಮಾರು 30 ವರ್ಷಗಳ ಕಾಲ ಸತತವಾಗಿ ಆಟೋ ಚಾಲನೆ ಮಾಡ್ತಾ ಸ್ವಾವಲಂಬನೆಯಿಂದ ಜೀವನ ನಡೆಸ್ತಿದ್ದಾರೆ. ಈ ಮಹಿಳಾ ಆಟೋ ಚಾಲಕಿ ನಿರ್ಮಲಾ ಅಂದ್ರೆ ಇಡೀ ರಾಯಚೂರು ಜನಕ್ಕೆ ಅಚ್ಚುಮೆಚ್ಚು. ಇವ್ರು ನಿರ್ಮಲಾ ಅಕ್ಕ ಅಂತಲೇ ಫೇಮಸ್..

ಇದನ್ನೂ ಓದಿ: ಆ ಮಹಿಳೆ ಆಟೋದವನನ್ನು ನಂಬಿ ವಾಹನ ಹತ್ತಿದಳು, ಆದರೆ ಅವನು ಆಕೆಯನ್ನು ಹೊಲದತ್ತ ಕರೆದೊಯ್ದು..

ಇತ್ತ ಸಂಸಾರದ ನೌಕೆ ಸಾಗಿಸುತ್ತಾ, ಪತಿ ರಾಮುಲು ಅವರನ್ನು ತಿದ್ದಿ, ಮೊದಲಿನಂತೆ ಒಳ್ಳೆ ದಾರಿಗೆ ತಂದಿದ್ದಾರೆ. ಇನ್ನೇನು ವಯಸ್ಸಾಯ್ತು ಮನೆಯಲ್ಲಿರೋಣ ಅಂತ ಯೋಚಿಸೋವಾಗಲೇ, ಹೆಗಲೆತ್ತರಕ್ಕೆ ಬೆಳೆದಿದ್ದ ಮಗ ವಿರೇಶ್ ಅಕಾಲಿಕ ಮರಣಕ್ಕೆ ತುತ್ತಾಗಿದ್ದ. ಆಗ ವಿಧಿಯಿಲ್ಲದೇ ಎದೆಗುಂದದೇ ಮತ್ತೆ ಅದೇ ಆಟೋ ಸೇವೆಯನ್ನು ನಿರ್ಮಲಾ ಮುಂದುವರೆಸಿದ್ದಾರೆ. ಇದೇ ದುಡಿಮೆಯಿಂದ ಅನಾರೋಗ್ಯ ಪೀಡಿತ ಪತಿಯ ಚಿಕಿತ್ಸಾ ಖರ್ಚು, ಮನೆ ಖರ್ಚು ನಿಭಾಯಿಸಿಕೊಂಡು ಮಗಳು ರೇಖಾ ಮದುವೆ ಮಾಡಿಸಿದ್ದಾರೆ.

ಜೊತೆಗೆ ಮತ್ತೊಬ್ಬ ಪುತ್ರ ನರೇಶ್ ನನ್ನು ಉನ್ನತ ವ್ಯಾಸಂಗಕ್ಕಾಗಿ ವಿಶಾಖಪಟ್ಟಣಂಗೆ ಕಳುಹಿಸಿದ್ದಾರೆ.. ಹೀಗೆ, ಆಟೋ ಸೇವೆ ವೇಳೆ ಬಡವರು, ತುರ್ತು ಪರಿಸ್ಥಿತಿಯದಲ್ಲಿರೋರು, ಮಹಿಳೆಯರ ಸಹಜ ಕಷ್ಟಗಳನ್ನು ಕಣ್ಣಾರೆ ಕಂಡು ಮತ್ತೊಂದು ಹೆಜ್ಜೆ ಮುಂದಿಟ್ಟಿದ್ರು.. ಜೀವನ ನಡೆಸಲು ಬೇಕಾಗೋ ದುಡಿಮೆ ಜೊತೆ ಅದೇ ಆಟೋ ಸೇವೆ ಮೂಲಕ ಬಡವರಿಗೆ, ಗರ್ಭಿಣಿಯರಿಗೆ, ಹಣವಿಲ್ಲದ ವೃದ್ಧರಿಗೆ ಉಚಿತ ಸೇವೆಯನ್ನು ಕೊಡ್ತಾರೆ ಈ ನಿರ್ಮಲಾ..

ಆಟೋ ಚಾರ್ಜ್ ಕೊಡೊ ವೇಳೆ ಹಣವಿಲ್ಲ ಅಂತ ಯಾರಾದ್ರೂ ಮನವಿ ಮಾಡಿದ್ರೇ, ಅಂಥವರ ಜೊತೆ ಕಿರಿಕ್ ಮಾಡದೇ ಕೊಟ್ಟಷ್ಟು ಹಣ ಪಡೆದು ಆಟೋ ಸೇವೆ ನೀಡ್ತಾರೆ.. ಹೀಗೆ ಸಾರ್ಥಕ 30 ವರ್ಷಗಳ ಆಟೋ ಸೇವೆಯಲ್ಲಿ ನಿರ್ಮಲಾಗೆ ಅದೇಷ್ಟೋ ಮಹಿಳೆಯರು, ಹೆಣ್ಣು ಮಗಳಾಗಿ ಆಟೋ ಓಡಿಸೋದು ಕಷ್ಟ ಆಗಲ್ವ.. ಜನ ಸರಿಯಲ್ವಲ್ಲ ಅಂತೆಲ್ಲಾ ಪ್ರಶ್ನೆಗಳನ್ನು ಕೇಳ್ತಾರಂತೆ.. ಆ ವೇಳೆ, ಎಲ್ರೂ ಒಂದೇ ರೀತಿ ಇರಲ್ಲ.. ಎಲ್ಲರೂ ನಮ್ಮ ಅಣ್ಣ-ತಮ್ಮಂದಿರಂತೆ.. ಮಹಿಳೆಯರು ಮನೆಯಿಂದ ಹೊರ ಬಂದು ಸ್ವಾವಲಂಬಿಯಾಗಿ ದುಡಿಯ ಬೇಕು ಅಂತ ಮಹಿಳೆಯರಿಗೆ ಸಂದೇಶ ನೀಡಿದ್ದಾರೆ.

ಹೀಗೆ ರಾಯಚೂರು ಜನರ ಅಚ್ಚುಮೆಚ್ಚಿನ ಮಹಿಳಾ ಆಟೋ ಚಾಲಕಿ ನಿರ್ಮಲಾರನ್ನು ಕೆಲ ಸಂಘ ಸಂಸ್ಥೆಗಳು ಸನ್ಮಾನ ಮಾಡಿ ಗೌರವಿಸಿವೆ. ಅದೇನೆ ಇರಲಿ, ಗಂಡ ಕಿರುಕುಳ ನೀಡಿದ್ರೆ ಸಾಕು ತವರು ಸೇರುವ ಅದೆಷ್ಟೋ ಮಹಿಳೆಯರಿಗೆ, ಆಟೋ ಚಾಲಕಿ ನಿರ್ಮಲಾ ಅಕ್ಕಳನ್ನು ನೋಡಿ ಸ್ವಾವಲಂಬಿಯಾಗಿ ಬದುಕಿ, ಜಯಿಸಬೇಕು ಎಂಬ ಮಹತ್ತರ ಸಂದೇಶ ರವಾನೆಯಾಗುತ್ತದೆ.

ವರದಿ: ಭೀಮೇಶ್, ಟಿವಿ9, ರಾಯಚೂರು

Published On - 11:12 am, Tue, 23 May 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!