AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾರ್ಬೇಜ್ ಸಿಟಿಯಾಗಿರುವ ರಾಯಚೂರು ನಗರ; ಒಂದೇ ಒಂದು ರಸ್ತೆ ಬಿಟ್ಟು ಉಳಿದೆಲ್ಲಾ ರಸ್ತೆಗಳು ಕಸಮಯ, ಜಿಲ್ಲಾಡಳಿತದ ನಡೆಗೆ ಜನರ ಆಕ್ರೋಶ

ರಾಯಚೂರು ನಗರದಾದ್ಯಂತ ಕಸ ವಿಲೇವಾರಿ ಮಾಡಿಲ್ಲ. ರಾಯಚೂರಿನ ಎಲ್ಲ ರಸ್ತೆಗಳು ಕಸಮಯವಾಗಿದೆ. ಆದ್ರೆ ಒಂದೇ ಒಂದು ರಸ್ತೆ ಮಾತ್ರ ಸ್ವಚ್ಛ ಮಾಡಲಾಗಿದೆ. ಹೀಗಾಗಿ ನಗರಸಭೆ, ಜಿಲ್ಲಾಡಳಿತದ ನಡೆಗೆ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗಾರ್ಬೇಜ್ ಸಿಟಿಯಾಗಿರುವ ರಾಯಚೂರು ನಗರ; ಒಂದೇ ಒಂದು ರಸ್ತೆ ಬಿಟ್ಟು ಉಳಿದೆಲ್ಲಾ ರಸ್ತೆಗಳು ಕಸಮಯ, ಜಿಲ್ಲಾಡಳಿತದ ನಡೆಗೆ ಜನರ ಆಕ್ರೋಶ
ಗಾರ್ಬೇಜ್ ಸಿಟಿಯಾಗಿರುವ ರಾಯಚೂರು ನಗರ; ಒಂದೇ ಒಂದು ರಸ್ತೆ ಬಿಟ್ಟು ಉಳಿದೆಲ್ಲಾ ರಸ್ತೆಗಳು ಕಸಮಯ
TV9 Web
| Updated By: ಆಯೇಷಾ ಬಾನು|

Updated on: Nov 28, 2021 | 11:10 AM

Share

ರಾಯಚೂರು: ನಗರದ ರಸ್ತೆಗಳಲ್ಲಿ ಕಸ ಹೆಚ್ಚಾಗಿದೆ. ರಾಯಚೂರು ನಗರ ಗಾರ್ಬೇಜ್ ಸಿಟಿಯಾಗಿ ಪರಿವರ್ತನೆಗೊಂಡಿದೆ. ಆದರೂ ಕಸ ವಿಲೇವಾರಿಗೆ ನಗರಸಭೆ ಮಾತ್ರ ಮುಂದಾಗಿಲ್ಲ. ಆದ್ರೆ ರಾಯಚೂರು ನಗರದ ಒಂದು ರಸ್ತೆ ಮಾತ್ರ ಫುಲ್ ಕ್ಲೀನ್ ಆಗಿದೆ.

ರಾಯಚೂರು ನಗರದಾದ್ಯಂತ ಕಸ ವಿಲೇವಾರಿ ಮಾಡಿಲ್ಲ. ರಾಯಚೂರಿನ ಎಲ್ಲ ರಸ್ತೆಗಳು ಕಸಮಯವಾಗಿದೆ. ಆದ್ರೆ ಒಂದೇ ಒಂದು ರಸ್ತೆ ಮಾತ್ರ ಸ್ವಚ್ಛ ಮಾಡಲಾಗಿದೆ. ಹೀಗಾಗಿ ನಗರಸಭೆ, ಜಿಲ್ಲಾಡಳಿತದ ನಡೆಗೆ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನವೆಂಬರ್ 29ಕ್ಕೆ ರಾಜ್ಯಪಾಲ ಡಾ.ಥಾವರ್ ಚಂದ್ ಗೆಹ್ಲೋಟ್ ರಾಯಚೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಪಾಲರು ಸಂಚರಿಸುವ ರಸ್ತೆ ಮಾತ್ರ ಕ್ಲೀನಿಂಗ್ ಮಾಡಲಾಗಿದೆ. ಉಳಿದಂತೆ ಎಲ್ಲಾ ರಸ್ತೆಗಳು ಕಸಮಯವಾಗಿವೆ. ರಸ್ತೆಗಳು ಕಸಮಯವಾಗಿರುವ ಹಿನ್ನೆಲೆ ರೋಗ ಹರಡುವ ಆತಂಕ ಜನರನ್ನು ಕಾಡುತ್ತಿದೆ.

raichur road cleaning

ರಾಯಚೂರು ಕೃಷಿ ವಿವಿ‌

ರಸ್ತೆಗಳಲ್ಲಿ ಬಿದ್ದಿರುವ ಕಸವನ್ನು ವಿಲೆವಾರಿ ಮಾಡದೆ ನಿರ್ಲಕ್ಷ್ಯವಹಿಸಿದ್ದಾರೆ. ರಾಯಚೂರು ನಗರದಾದ್ಯಂತ ಬಹುತೇಕ ಕಡೆ ಕಸದ ಸಮಸ್ಯೆ ಇದೆ. ರಾಯಚೂರು ಕೃಷಿ ವಿವಿ‌ 11 ನೇ ಘಟಿಕೋತ್ಸವ ಉದ್ಘಾಟನೆಗೆ ರಾಜ್ಯಪಾಲರು ಆಗಮಿಸುತ್ತಿರುವುದರಿಂದ ಮುಖ್ಯ ರಸ್ತೆಯಲ್ಲಿ ಮಾತ್ರ ಕಸ ಕಾಣದಂತೆ ರಸ್ತೆ ಬದಿಗಳ ಸ್ವಚ್ಛತಾ ಕಾರ್ಯ ಮಾಡಲಾಗಿದೆ. ನಗರ ಸಭೆ & ಜಿಲ್ಲಾಡಳಿತದಿಂದ ಕಸದ ಸಮಸ್ಯೆ ಮುಚ್ಚಿ ಹಾಕುವ ಯತ್ನ ನಡೆದಿದೆ ಎಂದು ಸ್ಥಳೀಯರು ಆಕ್ರೋಶ ಹೊರ ಹಾಕಿದ್ದಾರೆ.

ರಾಯಚೂರು ಮತ್ತು ಲಿಂಗಸೂರು ಮಾರ್ಗದ ರಸ್ತೆ ಮಾತ್ರ ಕ್ಲೀನಿಂಗ್ ಮಾಡಲಾಗಿದ್ದು ಜನರ ಆರೋಗ್ಯ ದೃಷ್ಟಿಯಿಂದ ಸ್ವಚ್ಛತಾ ಕಾರ್ಯ ಮಾಡದ ನಗರ ಸಭೆ ಸಮಸ್ಯೆ ಕಾಣದಂತೆ ಮುಚ್ಚಿ ಹಾಕಲು ದೊಡ್ಡವರ ಕಣ್ಣೊರೆಸುವ ತಂತ್ರ ಮಾಡ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಇದನ್ನೂ ಓದಿ: ಕೊವಿಡ್ ಮಾರ್ಗಸೂಚಿ ಪಾಲನೆಗೆ ಹೆಚ್ಚಿನ ಒತ್ತು ನೀಡಿದ ಬಿಎಂಆರ್​ಸಿಎಲ್​; ಮೆಟ್ರೋದಲ್ಲಿ ಓಡಾಟಕ್ಕೆ ಮಾಸ್ಕ್ ಕಡ್ಡಾಯ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ