AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರಿನಲ್ಲಿ ರಾಶಿಗಟ್ಟಲೆ ಔಷಧಿ ಹೂಳಲು ಯತ್ನ; ವಿಡಿಯೋ ಮಾಡುತ್ತಿದ್ದಂತೆ ಕಾಲ್ಕಿತ್ತ ಓಪೆಕ್ ಆಸ್ಪತ್ರೆ ಸಿಬ್ಬಂದಿ

ಔಷಧಿ ಹೂಳುವ ವೇಳೆ ಸ್ಥಳೀಯರೊಬ್ಬರು ವಿಡಿಯೋ ಮಾಡಿದ್ದಾರೆ. ಆಗ ಆಸ್ಪತ್ರೆ ಸಿಬ್ಬಂದಿಯವರು ಔಷಧಿ ಹೂಳದೇ ಕಾಲ್ಕಿತ್ತಿದ್ದಾರೆ. ಇನ್ನು ಓಪೆಕ್ ಆಸ್ಪತ್ರೆಯಲ್ಲಿ ರೋಗಿಗಳಿಗೆ ಔಷಧಿ ನೀಡದ ಆರೋಪ ಕೇಳಿಬಂದಿದೆ.

ರಾಯಚೂರಿನಲ್ಲಿ ರಾಶಿಗಟ್ಟಲೆ ಔಷಧಿ ಹೂಳಲು ಯತ್ನ; ವಿಡಿಯೋ ಮಾಡುತ್ತಿದ್ದಂತೆ ಕಾಲ್ಕಿತ್ತ ಓಪೆಕ್ ಆಸ್ಪತ್ರೆ ಸಿಬ್ಬಂದಿ
ಔಷಧಿ ಹೂಳಲು ಯತ್ನಿಸಿದ್ದಾರೆ
TV9 Web
| Edited By: |

Updated on:Dec 05, 2021 | 12:24 PM

Share

ರಾಯಚೂರು: ನಗರದ ಓಪೆಕ್ ಆಸ್ಪತ್ರೆಯಲ್ಲಿ (Opec Hospital) ರಾಶಿಗಟ್ಟಲೆ ಔಷಧಿ ಹೂಳಲು ಯತ್ನ ನಡೆದಿದೆ. ಜನರಿಗೆ ತಲುಪಬೇಕಿದ್ದ ಔಷಧಿ ಅವಧಿ ಮೀರಿದ ಹಿನ್ನೆಲೆ ಅದನ್ನು ಹೂಳಲು ಆಸ್ಪತ್ರೆ ಸಿಬ್ಬಂದಿ ಯತ್ನಿಸಿದೆ. ಔಷಧಿ ಹೂಳುವ ವೇಳೆ ಸ್ಥಳೀಯರೊಬ್ಬರು ವಿಡಿಯೋ ಮಾಡಿದ್ದಾರೆ. ಆಗ ಆಸ್ಪತ್ರೆ ಸಿಬ್ಬಂದಿಯವರು ಔಷಧಿ ಹೂಳದೇ ಕಾಲ್ಕಿತ್ತಿದ್ದಾರೆ. ಇನ್ನು ಓಪೆಕ್ ಆಸ್ಪತ್ರೆಯಲ್ಲಿ ರೋಗಿಗಳಿಗೆ ಔಷಧಿ ನೀಡದ ಆರೋಪ ಕೇಳಿಬಂದಿದೆ. ಔಷಧಿ ಸ್ಟಾಕ್ ಇದ್ದರೂ ಖಾಸಗಿ ಮೆಡಿಕಲ್ ಸ್ಟೋರ್​ಗೆ ರೆಫರ್ ಮಾಡುತ್ತಾರೆ. ಈ ಮೂಲಕ ಕೆಲವರು ಕಮಿಷನ್ ಪಡೆಯುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಇದೇ ಕಾರಣಕ್ಕೆ ಔಷಧಿ ಸ್ಟಾಕ್ ಉಳಿದು ಅವಧಿ ಮುಗಿದಿದೆ ಅಂತ ಆರೋಪ ಕೇಳಿಬಂದಿದ್ದು, ಓಪೆಕ್ ಅವಾಂತರದ ಬಗ್ಗೆ ವಿಶೇಷಾಧಿಕಾರಿ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ನನಗೆ ಮಾಹಿತಿಯಿಲ್ಲ, ಪರಿಶೀಲಿಸುವೆ ಅಂತ ವಿಶೇಷಾಧಿಕಾರಿ ಡಾ.ನಾಗರಾಜ್ ಗದ್ವಾಲ್ ತಿಳಿಸಿದ್ದಾರೆ. ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಜಿಲ್ಲಾಧಿಕಾರಿಗೆ ದೂರು ನೀಡಿದ್ದಾರೆ. ಸೂಕ್ತ ತನಿಖೆಯಾಗದಿದ್ದರೆ ಕೋರ್ಟ್​ಗೆ ದೂರು ಎಚ್ಚರಿಕೆ ನೀಡಿದ್ದಾರೆ.

2 ಬೈಕ್ ಕಳವು ಬೆಂಗಳೂರಿನಲ್ಲಿ ಮನೆಗಳ ಮುಂದೆ ನಿಲ್ಲಿಸಿದ್ದ 2 ಬೈಕ್ ಕಳುವಾಗಿದೆ. ಸಿಡೇದಹಳ್ಳಿಯಲ್ಲಿ ಪ್ರತಿಭನ್ ಎಂಬುವರಿಗೆ ಸೇರಿದ ಬುಲೆಟ್, ಭುವನೇಶ್ವರಿನಗರದ ಚಂದ್ರಶೇಖರ್ ಎಂಬುವರ ಬೈಕ್ ಕಳುವಾಗಿದೆ. ದಿನನಿತ್ಯ ಬೈಕ್ ಕಳ್ಳತನವಾಗುತ್ತಿದೆ ಅಂತ ಪೊಲೀಸರ ವಿರುದ್ಧ ಸ್ಥಳೀಯರು ಕಿಡಿಕಾರಿದ್ದಾರೆ.

3 ಮೇಕೆ ಕಳವು ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಮಾಚೋನಾಯಕನಹಳ್ಳಿಯಲ್ಲಿ ಬೆಲೆಬಾಳುವ 3 ಮೇಕೆ ಕಳುವಾಗಿದೆ. ಕೆಂಪಮ್ಮ ಎಂಬುವವರಿಗೆ ಸೇರಿದ ಲಕ್ಷಾಂತರ ಬೆಲೆಬಾಳುವ ಮೇಕೆಗಳು ಕಳ್ಳತನವಾಗಿದ್ದು, ರೈತ ಮಹಿಳೆ ಕಂಗಾಲಾಗಿದ್ದಾರೆ.

ಇದನ್ನೂ ಓದಿ

Omicron in Delhi: ಭಾರತದಲ್ಲಿ 5ನೇ ಒಮಿಕ್ರಾನ್​ ಪ್ರಕರಣ ಪತ್ತೆ; ಟಾಂಜಾನಿಯದಿಂದ ದೆಹಲಿಗೆ ಬಂದಿದ್ದ ವ್ಯಕ್ತಿಯಲ್ಲಿ ಸೋಂಕು ದೃಢ

‘ಶಿವರಾಂ ನಡೆದಾಡುವ ಅಯ್ಯಪ್ಪ ಸ್ವಾಮಿ ಆಗಿದ್ರು; ಅವರಿಗೆ ಹಲವು ಅಭಿಷೇಕ ಮಾಡ್ತೀವಿ’: ಡಾ. ಎನ್​. ಜಯರಾಂ

Published On - 12:14 pm, Sun, 5 December 21

ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​