AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರಿನಲ್ಲಿ ರಾಶಿಗಟ್ಟಲೆ ಔಷಧಿ ಹೂಳಲು ಯತ್ನ; ವಿಡಿಯೋ ಮಾಡುತ್ತಿದ್ದಂತೆ ಕಾಲ್ಕಿತ್ತ ಓಪೆಕ್ ಆಸ್ಪತ್ರೆ ಸಿಬ್ಬಂದಿ

ಔಷಧಿ ಹೂಳುವ ವೇಳೆ ಸ್ಥಳೀಯರೊಬ್ಬರು ವಿಡಿಯೋ ಮಾಡಿದ್ದಾರೆ. ಆಗ ಆಸ್ಪತ್ರೆ ಸಿಬ್ಬಂದಿಯವರು ಔಷಧಿ ಹೂಳದೇ ಕಾಲ್ಕಿತ್ತಿದ್ದಾರೆ. ಇನ್ನು ಓಪೆಕ್ ಆಸ್ಪತ್ರೆಯಲ್ಲಿ ರೋಗಿಗಳಿಗೆ ಔಷಧಿ ನೀಡದ ಆರೋಪ ಕೇಳಿಬಂದಿದೆ.

ರಾಯಚೂರಿನಲ್ಲಿ ರಾಶಿಗಟ್ಟಲೆ ಔಷಧಿ ಹೂಳಲು ಯತ್ನ; ವಿಡಿಯೋ ಮಾಡುತ್ತಿದ್ದಂತೆ ಕಾಲ್ಕಿತ್ತ ಓಪೆಕ್ ಆಸ್ಪತ್ರೆ ಸಿಬ್ಬಂದಿ
ಔಷಧಿ ಹೂಳಲು ಯತ್ನಿಸಿದ್ದಾರೆ
TV9 Web
| Edited By: |

Updated on:Dec 05, 2021 | 12:24 PM

Share

ರಾಯಚೂರು: ನಗರದ ಓಪೆಕ್ ಆಸ್ಪತ್ರೆಯಲ್ಲಿ (Opec Hospital) ರಾಶಿಗಟ್ಟಲೆ ಔಷಧಿ ಹೂಳಲು ಯತ್ನ ನಡೆದಿದೆ. ಜನರಿಗೆ ತಲುಪಬೇಕಿದ್ದ ಔಷಧಿ ಅವಧಿ ಮೀರಿದ ಹಿನ್ನೆಲೆ ಅದನ್ನು ಹೂಳಲು ಆಸ್ಪತ್ರೆ ಸಿಬ್ಬಂದಿ ಯತ್ನಿಸಿದೆ. ಔಷಧಿ ಹೂಳುವ ವೇಳೆ ಸ್ಥಳೀಯರೊಬ್ಬರು ವಿಡಿಯೋ ಮಾಡಿದ್ದಾರೆ. ಆಗ ಆಸ್ಪತ್ರೆ ಸಿಬ್ಬಂದಿಯವರು ಔಷಧಿ ಹೂಳದೇ ಕಾಲ್ಕಿತ್ತಿದ್ದಾರೆ. ಇನ್ನು ಓಪೆಕ್ ಆಸ್ಪತ್ರೆಯಲ್ಲಿ ರೋಗಿಗಳಿಗೆ ಔಷಧಿ ನೀಡದ ಆರೋಪ ಕೇಳಿಬಂದಿದೆ. ಔಷಧಿ ಸ್ಟಾಕ್ ಇದ್ದರೂ ಖಾಸಗಿ ಮೆಡಿಕಲ್ ಸ್ಟೋರ್​ಗೆ ರೆಫರ್ ಮಾಡುತ್ತಾರೆ. ಈ ಮೂಲಕ ಕೆಲವರು ಕಮಿಷನ್ ಪಡೆಯುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಇದೇ ಕಾರಣಕ್ಕೆ ಔಷಧಿ ಸ್ಟಾಕ್ ಉಳಿದು ಅವಧಿ ಮುಗಿದಿದೆ ಅಂತ ಆರೋಪ ಕೇಳಿಬಂದಿದ್ದು, ಓಪೆಕ್ ಅವಾಂತರದ ಬಗ್ಗೆ ವಿಶೇಷಾಧಿಕಾರಿ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ನನಗೆ ಮಾಹಿತಿಯಿಲ್ಲ, ಪರಿಶೀಲಿಸುವೆ ಅಂತ ವಿಶೇಷಾಧಿಕಾರಿ ಡಾ.ನಾಗರಾಜ್ ಗದ್ವಾಲ್ ತಿಳಿಸಿದ್ದಾರೆ. ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಜಿಲ್ಲಾಧಿಕಾರಿಗೆ ದೂರು ನೀಡಿದ್ದಾರೆ. ಸೂಕ್ತ ತನಿಖೆಯಾಗದಿದ್ದರೆ ಕೋರ್ಟ್​ಗೆ ದೂರು ಎಚ್ಚರಿಕೆ ನೀಡಿದ್ದಾರೆ.

2 ಬೈಕ್ ಕಳವು ಬೆಂಗಳೂರಿನಲ್ಲಿ ಮನೆಗಳ ಮುಂದೆ ನಿಲ್ಲಿಸಿದ್ದ 2 ಬೈಕ್ ಕಳುವಾಗಿದೆ. ಸಿಡೇದಹಳ್ಳಿಯಲ್ಲಿ ಪ್ರತಿಭನ್ ಎಂಬುವರಿಗೆ ಸೇರಿದ ಬುಲೆಟ್, ಭುವನೇಶ್ವರಿನಗರದ ಚಂದ್ರಶೇಖರ್ ಎಂಬುವರ ಬೈಕ್ ಕಳುವಾಗಿದೆ. ದಿನನಿತ್ಯ ಬೈಕ್ ಕಳ್ಳತನವಾಗುತ್ತಿದೆ ಅಂತ ಪೊಲೀಸರ ವಿರುದ್ಧ ಸ್ಥಳೀಯರು ಕಿಡಿಕಾರಿದ್ದಾರೆ.

3 ಮೇಕೆ ಕಳವು ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಮಾಚೋನಾಯಕನಹಳ್ಳಿಯಲ್ಲಿ ಬೆಲೆಬಾಳುವ 3 ಮೇಕೆ ಕಳುವಾಗಿದೆ. ಕೆಂಪಮ್ಮ ಎಂಬುವವರಿಗೆ ಸೇರಿದ ಲಕ್ಷಾಂತರ ಬೆಲೆಬಾಳುವ ಮೇಕೆಗಳು ಕಳ್ಳತನವಾಗಿದ್ದು, ರೈತ ಮಹಿಳೆ ಕಂಗಾಲಾಗಿದ್ದಾರೆ.

ಇದನ್ನೂ ಓದಿ

Omicron in Delhi: ಭಾರತದಲ್ಲಿ 5ನೇ ಒಮಿಕ್ರಾನ್​ ಪ್ರಕರಣ ಪತ್ತೆ; ಟಾಂಜಾನಿಯದಿಂದ ದೆಹಲಿಗೆ ಬಂದಿದ್ದ ವ್ಯಕ್ತಿಯಲ್ಲಿ ಸೋಂಕು ದೃಢ

‘ಶಿವರಾಂ ನಡೆದಾಡುವ ಅಯ್ಯಪ್ಪ ಸ್ವಾಮಿ ಆಗಿದ್ರು; ಅವರಿಗೆ ಹಲವು ಅಭಿಷೇಕ ಮಾಡ್ತೀವಿ’: ಡಾ. ಎನ್​. ಜಯರಾಂ

Published On - 12:14 pm, Sun, 5 December 21

Follow Us
OTD: ಭಯೋತ್ಪಾದಕರ ದಾಳಿ: ಕ್ರಿಕೆಟ್ ಇತಿಹಾಸದ ಕರಾಳ ದಿನ
OTD: ಭಯೋತ್ಪಾದಕರ ದಾಳಿ: ಕ್ರಿಕೆಟ್ ಇತಿಹಾಸದ ಕರಾಳ ದಿನ
ಅಮೆರಿಕದ ಟ್ರಂಪ್ ಟವರ್​​ನಲ್ಲಿ ಅನುಮಾನಾಸ್ಪದ ಬಾಕ್ಸ್​ ಪತ್ತೆ
ಅಮೆರಿಕದ ಟ್ರಂಪ್ ಟವರ್​​ನಲ್ಲಿ ಅನುಮಾನಾಸ್ಪದ ಬಾಕ್ಸ್​ ಪತ್ತೆ
ಚಂದ್ರ ಗ್ರಹಣ ದಿನವೇ ವೈಭವದಿಂದ ನೆರವೇರಿದ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವ
ಚಂದ್ರ ಗ್ರಹಣ ದಿನವೇ ವೈಭವದಿಂದ ನೆರವೇರಿದ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವ
ಹೋಳಿ ಹುಣ್ಣಿಮೆಯಂದೇ ಗ್ರಹಣ: ಸಾಲು ಸಾಲು ಅವಘಡಗಳು ಫಿಕ್ಸ್​​?
ಹೋಳಿ ಹುಣ್ಣಿಮೆಯಂದೇ ಗ್ರಹಣ: ಸಾಲು ಸಾಲು ಅವಘಡಗಳು ಫಿಕ್ಸ್​​?
ಓಡಿಬಂದು ಮುಳ್ಳಿನ ಪೊದೆಗೆ ಹಾರ್ತಾರೆ, ಆದ್ರೂ ಏನಾಗಲ್ಲ! ವಿಡಿಯೋ ಇಲ್ಲಿದೆ
ಓಡಿಬಂದು ಮುಳ್ಳಿನ ಪೊದೆಗೆ ಹಾರ್ತಾರೆ, ಆದ್ರೂ ಏನಾಗಲ್ಲ! ವಿಡಿಯೋ ಇಲ್ಲಿದೆ
ವ್ಯಾನ್​ಗೆ ಗುದ್ದಿದ ಸ್ಲೀಪರ್ ಬಸ್, 6 ಮಂದಿ ಸಾವು
ವ್ಯಾನ್​ಗೆ ಗುದ್ದಿದ ಸ್ಲೀಪರ್ ಬಸ್, 6 ಮಂದಿ ಸಾವು
ಹೋಳಿ ಆಚರಣೆ ವೇಳೆ ಹೊತ್ತಿಸಿದ್ದ ಬೆಂಕಿ ಮೇಲೆ ನಡೆದ ಕಲಿಯುಗದ ಪ್ರಹ್ಲಾದ
ಹೋಳಿ ಆಚರಣೆ ವೇಳೆ ಹೊತ್ತಿಸಿದ್ದ ಬೆಂಕಿ ಮೇಲೆ ನಡೆದ ಕಲಿಯುಗದ ಪ್ರಹ್ಲಾದ
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ