AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರಿನಲ್ಲಿ ರಾಶಿಗಟ್ಟಲೆ ಔಷಧಿ ಹೂಳಲು ಯತ್ನ; ವಿಡಿಯೋ ಮಾಡುತ್ತಿದ್ದಂತೆ ಕಾಲ್ಕಿತ್ತ ಓಪೆಕ್ ಆಸ್ಪತ್ರೆ ಸಿಬ್ಬಂದಿ

ಔಷಧಿ ಹೂಳುವ ವೇಳೆ ಸ್ಥಳೀಯರೊಬ್ಬರು ವಿಡಿಯೋ ಮಾಡಿದ್ದಾರೆ. ಆಗ ಆಸ್ಪತ್ರೆ ಸಿಬ್ಬಂದಿಯವರು ಔಷಧಿ ಹೂಳದೇ ಕಾಲ್ಕಿತ್ತಿದ್ದಾರೆ. ಇನ್ನು ಓಪೆಕ್ ಆಸ್ಪತ್ರೆಯಲ್ಲಿ ರೋಗಿಗಳಿಗೆ ಔಷಧಿ ನೀಡದ ಆರೋಪ ಕೇಳಿಬಂದಿದೆ.

ರಾಯಚೂರಿನಲ್ಲಿ ರಾಶಿಗಟ್ಟಲೆ ಔಷಧಿ ಹೂಳಲು ಯತ್ನ; ವಿಡಿಯೋ ಮಾಡುತ್ತಿದ್ದಂತೆ ಕಾಲ್ಕಿತ್ತ ಓಪೆಕ್ ಆಸ್ಪತ್ರೆ ಸಿಬ್ಬಂದಿ
ಔಷಧಿ ಹೂಳಲು ಯತ್ನಿಸಿದ್ದಾರೆ
TV9 Web
| Edited By: |

Updated on:Dec 05, 2021 | 12:24 PM

Share

ರಾಯಚೂರು: ನಗರದ ಓಪೆಕ್ ಆಸ್ಪತ್ರೆಯಲ್ಲಿ (Opec Hospital) ರಾಶಿಗಟ್ಟಲೆ ಔಷಧಿ ಹೂಳಲು ಯತ್ನ ನಡೆದಿದೆ. ಜನರಿಗೆ ತಲುಪಬೇಕಿದ್ದ ಔಷಧಿ ಅವಧಿ ಮೀರಿದ ಹಿನ್ನೆಲೆ ಅದನ್ನು ಹೂಳಲು ಆಸ್ಪತ್ರೆ ಸಿಬ್ಬಂದಿ ಯತ್ನಿಸಿದೆ. ಔಷಧಿ ಹೂಳುವ ವೇಳೆ ಸ್ಥಳೀಯರೊಬ್ಬರು ವಿಡಿಯೋ ಮಾಡಿದ್ದಾರೆ. ಆಗ ಆಸ್ಪತ್ರೆ ಸಿಬ್ಬಂದಿಯವರು ಔಷಧಿ ಹೂಳದೇ ಕಾಲ್ಕಿತ್ತಿದ್ದಾರೆ. ಇನ್ನು ಓಪೆಕ್ ಆಸ್ಪತ್ರೆಯಲ್ಲಿ ರೋಗಿಗಳಿಗೆ ಔಷಧಿ ನೀಡದ ಆರೋಪ ಕೇಳಿಬಂದಿದೆ. ಔಷಧಿ ಸ್ಟಾಕ್ ಇದ್ದರೂ ಖಾಸಗಿ ಮೆಡಿಕಲ್ ಸ್ಟೋರ್​ಗೆ ರೆಫರ್ ಮಾಡುತ್ತಾರೆ. ಈ ಮೂಲಕ ಕೆಲವರು ಕಮಿಷನ್ ಪಡೆಯುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಇದೇ ಕಾರಣಕ್ಕೆ ಔಷಧಿ ಸ್ಟಾಕ್ ಉಳಿದು ಅವಧಿ ಮುಗಿದಿದೆ ಅಂತ ಆರೋಪ ಕೇಳಿಬಂದಿದ್ದು, ಓಪೆಕ್ ಅವಾಂತರದ ಬಗ್ಗೆ ವಿಶೇಷಾಧಿಕಾರಿ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ನನಗೆ ಮಾಹಿತಿಯಿಲ್ಲ, ಪರಿಶೀಲಿಸುವೆ ಅಂತ ವಿಶೇಷಾಧಿಕಾರಿ ಡಾ.ನಾಗರಾಜ್ ಗದ್ವಾಲ್ ತಿಳಿಸಿದ್ದಾರೆ. ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಜಿಲ್ಲಾಧಿಕಾರಿಗೆ ದೂರು ನೀಡಿದ್ದಾರೆ. ಸೂಕ್ತ ತನಿಖೆಯಾಗದಿದ್ದರೆ ಕೋರ್ಟ್​ಗೆ ದೂರು ಎಚ್ಚರಿಕೆ ನೀಡಿದ್ದಾರೆ.

2 ಬೈಕ್ ಕಳವು ಬೆಂಗಳೂರಿನಲ್ಲಿ ಮನೆಗಳ ಮುಂದೆ ನಿಲ್ಲಿಸಿದ್ದ 2 ಬೈಕ್ ಕಳುವಾಗಿದೆ. ಸಿಡೇದಹಳ್ಳಿಯಲ್ಲಿ ಪ್ರತಿಭನ್ ಎಂಬುವರಿಗೆ ಸೇರಿದ ಬುಲೆಟ್, ಭುವನೇಶ್ವರಿನಗರದ ಚಂದ್ರಶೇಖರ್ ಎಂಬುವರ ಬೈಕ್ ಕಳುವಾಗಿದೆ. ದಿನನಿತ್ಯ ಬೈಕ್ ಕಳ್ಳತನವಾಗುತ್ತಿದೆ ಅಂತ ಪೊಲೀಸರ ವಿರುದ್ಧ ಸ್ಥಳೀಯರು ಕಿಡಿಕಾರಿದ್ದಾರೆ.

3 ಮೇಕೆ ಕಳವು ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಮಾಚೋನಾಯಕನಹಳ್ಳಿಯಲ್ಲಿ ಬೆಲೆಬಾಳುವ 3 ಮೇಕೆ ಕಳುವಾಗಿದೆ. ಕೆಂಪಮ್ಮ ಎಂಬುವವರಿಗೆ ಸೇರಿದ ಲಕ್ಷಾಂತರ ಬೆಲೆಬಾಳುವ ಮೇಕೆಗಳು ಕಳ್ಳತನವಾಗಿದ್ದು, ರೈತ ಮಹಿಳೆ ಕಂಗಾಲಾಗಿದ್ದಾರೆ.

ಇದನ್ನೂ ಓದಿ

Omicron in Delhi: ಭಾರತದಲ್ಲಿ 5ನೇ ಒಮಿಕ್ರಾನ್​ ಪ್ರಕರಣ ಪತ್ತೆ; ಟಾಂಜಾನಿಯದಿಂದ ದೆಹಲಿಗೆ ಬಂದಿದ್ದ ವ್ಯಕ್ತಿಯಲ್ಲಿ ಸೋಂಕು ದೃಢ

‘ಶಿವರಾಂ ನಡೆದಾಡುವ ಅಯ್ಯಪ್ಪ ಸ್ವಾಮಿ ಆಗಿದ್ರು; ಅವರಿಗೆ ಹಲವು ಅಭಿಷೇಕ ಮಾಡ್ತೀವಿ’: ಡಾ. ಎನ್​. ಜಯರಾಂ

Published On - 12:14 pm, Sun, 5 December 21

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ