Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಶ್ಯೂ ಪೇಪರ್ ವಿಚಾರಕ್ಕೆ ಯುವಕರಿಗೆ ಚಾಕುವಿನಿಂದ ಇರಿದ ಪಾನ್ ಶಾಪ್ ಮಾಲೀಕ

ರಾಯಚೂರಿನ ಅಪ್ಪು ಡಾಬಾದಲ್ಲಿ ಊಟ ಮಾಡಲು ಹೋಗಿದ್ದಾಗ ವೇಟರ್ ಎಂದು ತಿಳಿದು ಟಿಶ್ಯೂ ಪೇಪರ್ ತೆಗೆದುಕೊಂಡು ಬಾ ಎಂದಿದ್ದಕ್ಕೆ ಪಾನ್ ಶಾಪ್ ಮಾಲೀಕ ಹಾಗೂ ಊಟಕ್ಕೆ ಬಂದಿದ್ದ ಯುವಕರ ನಡುವೆ ಗಲಾಟೆಯಾಗಿದೆ. ಈ ವೇಳೆ ಈರುಳ್ಳಿ ಕತ್ತರಿಸಲು ಇಟ್ಟಿದ್ದ ಜಾಕುವಿನಿಂದ ಪಾನ್ ಶಾಪ್ ಮಾಲೀಕ ಯುವಕರ ಮೇಲೆ ಹಲ್ಲೆ ನಡೆಸಿದ್ದಾನೆ. ಗಾಯಾಳು ಯುವಕರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಟಿಶ್ಯೂ ಪೇಪರ್ ವಿಚಾರಕ್ಕೆ ಯುವಕರಿಗೆ ಚಾಕುವಿನಿಂದ ಇರಿದ ಪಾನ್ ಶಾಪ್ ಮಾಲೀಕ
ಘಟನೆ ನಡೆದ ಸ್ಥಳ
Follow us
TV9 Web
| Updated By: ಆಯೇಷಾ ಬಾನು

Updated on: Oct 29, 2023 | 11:48 AM

ರಾಯಚೂರು, ಅ.29: ಟಿಶ್ಯೂ ಪೇಪರ್ (Tissue Paper) ವಿಚಾರಕ್ಕೆ ಡಾಬಾದಲ್ಲಿ ಪಾನ್ ಶಾಪ್ ಮಾಲೀಕ ಯುವಕರ ಮೇಲೆ ಚಾಕು ಇರಿದ ಘಟನೆ ರಾಯಚೂರು (Raichur) ಜಿಲ್ಲೆಯ ‌ಮಾನ್ವಿ ಪಟ್ಟಣದಲ್ಲಿ ನಡೆದಿದೆ. ರಮೇಶ್ ಮತ್ತು ಸತ್ತರ್ ಅನ್ನೊ ಯುವಕರ ಮೇಲೆ ಚೂರಿ ಇರಿಯಲಾಗಿದೆ. ಇದೇ ಅಕ್ಟೋಬರ್ 26ರ ಸಂಜೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ರಮೇಶ್ ಮತ್ತು ಸತ್ತರ್ ಇಬ್ಬರು ಅಪ್ಪು ಡಾಬಾಗೆ ಊಟ ಮಾಡಲು ಹೋಗಿದ್ದರು. ಈ ವೇಳೆ ಪಾನ್ ಶಾಪ್ ಮಾಲೀಕ ವಿರೇಶ್ ಟೇಬಲ್ ಬಳಿ ಬಂದಿದ್ದರು. ಆಗ ಯುವಕರು ವಿರೇಶ್​ರನ್ನು ವೇಟರ್ ಎಂದು ತಿಳಿದು ಟಿಶ್ಯೂ ಪೇಪರ್ ತೆಗೆದುಕೊಂಡು ಬಾ ಎಂದಿದ್ದಾರೆ. ಈ ವಿಚಾರಕ್ಕೆ ಜಗಳ ಆಗಿ ಚಾಕು ಇರಿತವಾಗಿದೆ.

ವಿರೇಶ್ ಮತ್ತಿ ಸತ್ತರ್ ಸ್ನೇಹಿತರ ನಡುವೆ ಕಿರಿಕ್ ಆಗಿದ್ದು ಈರುಳ್ಳಿ ಕತ್ತರಿಸಲು ಇಟ್ಟಿದ್ದ ಚಾಕುವಿನಿಂದ ಸತ್ತರ್ ಹಾಗೂ ರಮೇಶ್ ಮೇಲೆ ವಿರೇಶ್ ಹಲ್ಲೆ ನಡೆಸಿದ್ದಾರೆ. ಘಟನೆಯಲ್ಲಿ ರಮೇಶ್ ಮತ್ತು ಸತ್ತರ್​ಗೆ ಗಂಭೀರ ಗಾಯಗಳಾಗಿದ್ದು ಗಾಯಾಳುಗಳಿಗೆ ಮಾನ್ವಿ & ರಾಯಚೂರು ರಿಮ್ಸ್ ನಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಚಾಕು ಇರಿದ ಆರೋಪಿ ವಿರೇಶ್​ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಇಂದು ಬೆಳ್ಳಂ ಬೆಳಗ್ಗೆಯೇ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್​ಗೆ ಇಬ್ಬರು ಬಲಿ, ತಿಂಗಳಲ್ಲಿ ಇದು ಆರನೇ ಬಲಿ

ನಡುರಸ್ತೆಯಲ್ಲಿಯೇ ಅಪರಿಚಿತ ವ್ಯಕ್ತಿಗಳಿಗೆ ಚಾಕು ಇರಿದ ಯುವಕ

ಇನ್ನು ಮತ್ತೊಂದೆಡೆ ಉತ್ತರ ಕನ್ನಡ ಜಿಲ್ಲೆ ಕಾರವಾರ ನಗರದ ಹೈಚರ್ಚ್ ರಸ್ತೆಯಲ್ಲಿ ಅಪರಿಚಿತ ವ್ಯಕ್ತಿಗಳಿಗೆ ಯುವಕ ಚಾಕು ಇರಿದ ಘಟನೆ ನಡೆದಿದೆ. ಯುವಕರ ಎರಡು ಗುಂಪುಗಳ ನಡುವೆ ಗಲಾಟೆ ನಡೆಯುತ್ತಿತ್ತು. ಆಗ ಸಿಟ್ಟಿನಲ್ಲಿ ಮನೆಗೆ ಹೋಗಿ ಚಾಕು ತಂದು ಯುವಕ ಇಬ್ಬರಿಗೆ ಚಾಕು ಇರಿದಿದ್ದಾನೆ. ಸುಮಾರು ಅರ್ಧ ಘಂಟೆಗಳ ಕಾಲ ಗಲಾಟೆ ನಡೆಸಿ ಹಲ್ಲೆ ಮಾಡಿದ್ದಾನೆ. ಸ್ಥಳಕ್ಕೆ ಪೊಲೀಸರು ಆಗಮಿಸುತ್ತಿದ್ದಂತೆ ಚಾಕು ಹಿಡಿದಿದ್ದ ಯುವಕ ಪರಾರಿಯಾಗಿದ್ದಾನೆ. ಸದ್ಯ ಪೊಲೀಸರು ಚಾಕು ಇರಿತಕ್ಕೊಳಗಾದವರನ್ನ ಆಸ್ಪತ್ರೆಗೆ ಕಳಿಸಿದ್ದಾರೆ. ಕೆಲವರನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಕಾರವಾರ ನಗರದಲ್ಲಿ ಕೆಲ ಕಾಲ ಬಿಗುವಿನ ವಾತಾವರಣ ಸೃಷ್ಟಿಯಾಗಿತ್ತು.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್
2 ಕೋಟಿ ಹಣ ಬೇಕು ಶಿವ, ಹುಂಡಿಯಲ್ಲಿ ಸಿಕ್ತು ಬೇಡಿಕೆ ಪತ್ರ
2 ಕೋಟಿ ಹಣ ಬೇಕು ಶಿವ, ಹುಂಡಿಯಲ್ಲಿ ಸಿಕ್ತು ಬೇಡಿಕೆ ಪತ್ರ