Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಶ್ಯೂ ಪೇಪರ್ ವಿಚಾರಕ್ಕೆ ಯುವಕರಿಗೆ ಚಾಕುವಿನಿಂದ ಇರಿದ ಪಾನ್ ಶಾಪ್ ಮಾಲೀಕ

ರಾಯಚೂರಿನ ಅಪ್ಪು ಡಾಬಾದಲ್ಲಿ ಊಟ ಮಾಡಲು ಹೋಗಿದ್ದಾಗ ವೇಟರ್ ಎಂದು ತಿಳಿದು ಟಿಶ್ಯೂ ಪೇಪರ್ ತೆಗೆದುಕೊಂಡು ಬಾ ಎಂದಿದ್ದಕ್ಕೆ ಪಾನ್ ಶಾಪ್ ಮಾಲೀಕ ಹಾಗೂ ಊಟಕ್ಕೆ ಬಂದಿದ್ದ ಯುವಕರ ನಡುವೆ ಗಲಾಟೆಯಾಗಿದೆ. ಈ ವೇಳೆ ಈರುಳ್ಳಿ ಕತ್ತರಿಸಲು ಇಟ್ಟಿದ್ದ ಜಾಕುವಿನಿಂದ ಪಾನ್ ಶಾಪ್ ಮಾಲೀಕ ಯುವಕರ ಮೇಲೆ ಹಲ್ಲೆ ನಡೆಸಿದ್ದಾನೆ. ಗಾಯಾಳು ಯುವಕರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಟಿಶ್ಯೂ ಪೇಪರ್ ವಿಚಾರಕ್ಕೆ ಯುವಕರಿಗೆ ಚಾಕುವಿನಿಂದ ಇರಿದ ಪಾನ್ ಶಾಪ್ ಮಾಲೀಕ
ಘಟನೆ ನಡೆದ ಸ್ಥಳ
Follow us
TV9 Web
| Updated By: ಆಯೇಷಾ ಬಾನು

Updated on: Oct 29, 2023 | 11:48 AM

ರಾಯಚೂರು, ಅ.29: ಟಿಶ್ಯೂ ಪೇಪರ್ (Tissue Paper) ವಿಚಾರಕ್ಕೆ ಡಾಬಾದಲ್ಲಿ ಪಾನ್ ಶಾಪ್ ಮಾಲೀಕ ಯುವಕರ ಮೇಲೆ ಚಾಕು ಇರಿದ ಘಟನೆ ರಾಯಚೂರು (Raichur) ಜಿಲ್ಲೆಯ ‌ಮಾನ್ವಿ ಪಟ್ಟಣದಲ್ಲಿ ನಡೆದಿದೆ. ರಮೇಶ್ ಮತ್ತು ಸತ್ತರ್ ಅನ್ನೊ ಯುವಕರ ಮೇಲೆ ಚೂರಿ ಇರಿಯಲಾಗಿದೆ. ಇದೇ ಅಕ್ಟೋಬರ್ 26ರ ಸಂಜೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ರಮೇಶ್ ಮತ್ತು ಸತ್ತರ್ ಇಬ್ಬರು ಅಪ್ಪು ಡಾಬಾಗೆ ಊಟ ಮಾಡಲು ಹೋಗಿದ್ದರು. ಈ ವೇಳೆ ಪಾನ್ ಶಾಪ್ ಮಾಲೀಕ ವಿರೇಶ್ ಟೇಬಲ್ ಬಳಿ ಬಂದಿದ್ದರು. ಆಗ ಯುವಕರು ವಿರೇಶ್​ರನ್ನು ವೇಟರ್ ಎಂದು ತಿಳಿದು ಟಿಶ್ಯೂ ಪೇಪರ್ ತೆಗೆದುಕೊಂಡು ಬಾ ಎಂದಿದ್ದಾರೆ. ಈ ವಿಚಾರಕ್ಕೆ ಜಗಳ ಆಗಿ ಚಾಕು ಇರಿತವಾಗಿದೆ.

ವಿರೇಶ್ ಮತ್ತಿ ಸತ್ತರ್ ಸ್ನೇಹಿತರ ನಡುವೆ ಕಿರಿಕ್ ಆಗಿದ್ದು ಈರುಳ್ಳಿ ಕತ್ತರಿಸಲು ಇಟ್ಟಿದ್ದ ಚಾಕುವಿನಿಂದ ಸತ್ತರ್ ಹಾಗೂ ರಮೇಶ್ ಮೇಲೆ ವಿರೇಶ್ ಹಲ್ಲೆ ನಡೆಸಿದ್ದಾರೆ. ಘಟನೆಯಲ್ಲಿ ರಮೇಶ್ ಮತ್ತು ಸತ್ತರ್​ಗೆ ಗಂಭೀರ ಗಾಯಗಳಾಗಿದ್ದು ಗಾಯಾಳುಗಳಿಗೆ ಮಾನ್ವಿ & ರಾಯಚೂರು ರಿಮ್ಸ್ ನಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಚಾಕು ಇರಿದ ಆರೋಪಿ ವಿರೇಶ್​ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಇಂದು ಬೆಳ್ಳಂ ಬೆಳಗ್ಗೆಯೇ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್​ಗೆ ಇಬ್ಬರು ಬಲಿ, ತಿಂಗಳಲ್ಲಿ ಇದು ಆರನೇ ಬಲಿ

ನಡುರಸ್ತೆಯಲ್ಲಿಯೇ ಅಪರಿಚಿತ ವ್ಯಕ್ತಿಗಳಿಗೆ ಚಾಕು ಇರಿದ ಯುವಕ

ಇನ್ನು ಮತ್ತೊಂದೆಡೆ ಉತ್ತರ ಕನ್ನಡ ಜಿಲ್ಲೆ ಕಾರವಾರ ನಗರದ ಹೈಚರ್ಚ್ ರಸ್ತೆಯಲ್ಲಿ ಅಪರಿಚಿತ ವ್ಯಕ್ತಿಗಳಿಗೆ ಯುವಕ ಚಾಕು ಇರಿದ ಘಟನೆ ನಡೆದಿದೆ. ಯುವಕರ ಎರಡು ಗುಂಪುಗಳ ನಡುವೆ ಗಲಾಟೆ ನಡೆಯುತ್ತಿತ್ತು. ಆಗ ಸಿಟ್ಟಿನಲ್ಲಿ ಮನೆಗೆ ಹೋಗಿ ಚಾಕು ತಂದು ಯುವಕ ಇಬ್ಬರಿಗೆ ಚಾಕು ಇರಿದಿದ್ದಾನೆ. ಸುಮಾರು ಅರ್ಧ ಘಂಟೆಗಳ ಕಾಲ ಗಲಾಟೆ ನಡೆಸಿ ಹಲ್ಲೆ ಮಾಡಿದ್ದಾನೆ. ಸ್ಥಳಕ್ಕೆ ಪೊಲೀಸರು ಆಗಮಿಸುತ್ತಿದ್ದಂತೆ ಚಾಕು ಹಿಡಿದಿದ್ದ ಯುವಕ ಪರಾರಿಯಾಗಿದ್ದಾನೆ. ಸದ್ಯ ಪೊಲೀಸರು ಚಾಕು ಇರಿತಕ್ಕೊಳಗಾದವರನ್ನ ಆಸ್ಪತ್ರೆಗೆ ಕಳಿಸಿದ್ದಾರೆ. ಕೆಲವರನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಕಾರವಾರ ನಗರದಲ್ಲಿ ಕೆಲ ಕಾಲ ಬಿಗುವಿನ ವಾತಾವರಣ ಸೃಷ್ಟಿಯಾಗಿತ್ತು.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ
ಹಿಂದಿ ಬದಲು ಇಂಗ್ಲಿಷ್​​ನಲ್ಲೇ ಭಯೋತ್ಪಾದನೆ ವಿರುದ್ಧ ಮೋದಿ ಸಂದೇಶ ರವಾನೆ
ಹಿಂದಿ ಬದಲು ಇಂಗ್ಲಿಷ್​​ನಲ್ಲೇ ಭಯೋತ್ಪಾದನೆ ವಿರುದ್ಧ ಮೋದಿ ಸಂದೇಶ ರವಾನೆ
ಉಗ್ರರು ಹಿಂದೂಗಳನ್ನೇ ಟಾರ್ಗೆಟ್ ಮಾಡಿ ಕೊಲ್ಲುತ್ತಿದ್ದುದ್ದು ಸತ್ಯ: ಪಲ್ಲವಿ
ಉಗ್ರರು ಹಿಂದೂಗಳನ್ನೇ ಟಾರ್ಗೆಟ್ ಮಾಡಿ ಕೊಲ್ಲುತ್ತಿದ್ದುದ್ದು ಸತ್ಯ: ಪಲ್ಲವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪುತ್ರನ ಪ್ರಾಣ ಕಾಪಾಡಿದ ಮುಸ್ಲಿಂ ವ್ಯಕ್ತಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪುತ್ರನ ಪ್ರಾಣ ಕಾಪಾಡಿದ ಮುಸ್ಲಿಂ ವ್ಯಕ್ತಿ
ಅಪ್ಪನ ಮುಖ ದಿಟ್ಟಿಸುತ್ತಿದ್ದ ಅಭಿಜಯನಲ್ಲಿನ ತಾಕಲಾಟಗಳು ಒಂದೆರಡಲ್ಲ
ಅಪ್ಪನ ಮುಖ ದಿಟ್ಟಿಸುತ್ತಿದ್ದ ಅಭಿಜಯನಲ್ಲಿನ ತಾಕಲಾಟಗಳು ಒಂದೆರಡಲ್ಲ
ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಲಿದ್ದಾರೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ
ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಲಿದ್ದಾರೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ