AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರು: ನೀರು ಕುಡಿಯಲು ಯೋಗ್ಯವಾಗಿಲ್ಲ ಎಂದು ವರದಿ ನೀಡಿದ್ದಕ್ಕೆ ವೈದ್ಯರ ಮೇಲೆ ಪಿಡಿಓ ಗರಂ

ಲಿಂಗಸಗೂರು ತಾಲೂಕು ಮಟ್ಟದ ವೈದ್ಯರು ನೀಡಿದ ಕಲುಷಿತ ನೀರು ವರದಿಗೆ ಪಿಡಿಓ ಆಕ್ರೋಶ ವ್ಯಕ್ತಪಡಿಸಿದ್ದು, ವೈದ್ಯರ ವರದಿ ಒಪ್ಪಲ್ಲ ಎಂದಿದ್ದಾರೆ. ಇದರೊಂದಿಗೆತಾಲೂಕು ಮಟ್ಟದ ಅಧಿಕಾರಿ ಹಾಗೂ ಪಿಡಿಒ ಸತ್ಯ ಮುಚ್ಚಿಡುವ ಯತ್ನ ಮಾಡಿದ್ರಾ ಎನ್ನುವ ಪ್ರಶ್ನೆಗಳು ಉದ್ಭವಿಸಿವೆ.

ರಾಯಚೂರು: ನೀರು ಕುಡಿಯಲು ಯೋಗ್ಯವಾಗಿಲ್ಲ ಎಂದು ವರದಿ ನೀಡಿದ್ದಕ್ಕೆ ವೈದ್ಯರ ಮೇಲೆ ಪಿಡಿಓ ಗರಂ
ಸಾಂದರ್ಭಿಕ ಚಿತ್ರ
ಭೀಮೇಶ್​​ ಪೂಜಾರ್
| Edited By: |

Updated on:Aug 11, 2023 | 9:26 AM

Share

ರಾಯಚೂರು, (ಆಗಸ್ಟ್ 11): ಜಿಲ್ಲೆಯ ಲಿಂಗಸುಗೂರು ತಾಲೂಕಿನ ಚಿತ್ತಾಪುರ ಗ್ರಾಮದಲ್ಲಿ ಕಲುಷಿತ ನೀರು (contaminated water)ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲೂಕು ಮಟ್ಟದ ವೈದ್ಯರ ತಂಡ ನೀರಿನ ವರದಿ ನೀಡಿದೆ. ಒಟ್ಟು 24 ವಾಟರ್ ಸ್ಯಾಂಪಲ್​​ ಪೈಕಿ 3 ವಾಟರ್​ ಸ್ಯಾಂಪಲ್ ಅನ್​ಫಿಟ್ ಎಂದು ಲಿಂಗಸುಗೂರು ತಾಲೂಕು ಮಟ್ಟದ ವೈದ್ಯರ ತಂಡ ವರದಿ ನೀಡಿದೆ. ಆದ್ರೆ, ಈ ವರದಿಯನ್ನು ಚಿತ್ತಾಪುರ ಗ್ರಾಮಪಂಚಾಯಿತಿ ಪಿಡಿಓ ಶಶಿಕಲಾ ಪಾಟೀಲ್ ಒಪ್ಪುತ್ತಿಲ್ಲ. ಇದರೊಂದಿಗೆ ತಾಲೂಕು ಮಟ್ಟದ ಅಧಿಕಾರಿ, ಪಿಡಿಓ ಸೇರಿಕೊಂಡು ಸತ್ಯ ಮುಚ್ಚಿಡುವ ಯತ್ನ ಮಾಡಿದ್ರಾ ಎನ್ನುವ ಅನುಮಾನಗಳು ವ್ಯಕ್ತವಾಗಿವೆ.

ಇದನ್ನೂ ಓದಿ: ರಾಯಚೂರು ಜಿಲ್ಲೆಯಲ್ಲಿ ಮತ್ತೊಂದು ಕಲುಷಿತ ನೀರು ದುರಂತ ಪ್ರಕರಣ ಬೆಳಕಿಗೆ, 80ಕ್ಕೂ ಹೆಚ್ಚು ಜನ ಅಸ್ವಸ್ಥ

ವೈದ್ಯರ ವರದಿ ಒಪ್ಪ. ನಮ್ಮ ಇಲಾಖೆ ನೀಡುವ ವರದಿಯನ್ನು ಮಾತ್ರ ಒಪ್ಪುತ್ತೇನೆ ಎಂದಿರುವ PDO ಶಶಿಕಲಾ, ಅಧಿಕಾರಿ ಅಮರೇಶ್​ ಯಾದವ್, ತಾಲೂಕು ವೈದ್ಯರ ತಂಡ ನೀಡಿರುವ ವರದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವರದಿ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು ಏಕೆ ಎಂದು ಟಿಹೆಚ್​ಒ ಅಮರೇಗೌಡ ವಿರುದ್ಧ ಪಿಡಿಒ, ಹಿರಿಯ ಅಧಿಕಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಟಿಹೆಚ್​ಒ ಅಮರೇಗೌಡ , ನಮ್ಮ ವರದಿಯಲ್ಲಿ ಬಂದಿರುವ ಅಂಶಗಳ ಬಗ್ಗೆ ಮಾಹಿತಿ ನೀಡಿದ್ದೇನೆ. ಸತ್ಯ ಹೇಳಿದ್ದೇನೆ. ನಮ್ಮ ವರದಿ ಸರಿ ಇದೆ ಎಂದಿದ್ದಾರೆ.

ತಾಲ್ಲೂಕು ವೈದ್ಯರ ತಂಡದ ವರದಿ ಬಿಲ್ ಕುಲ್ ಒಪ್ಪಲ್ಲ ಎಂದು ಹಿರಿಯ ಅಧಿಕಾರಿ ಎಂದು ಲೆಕ್ಕಿಸದೇ ಟಿಎಚ್​ಓ ಮೇಲೆ ದರ್ಪ ಮೆರೆದಿದ್ದಾರೆ. ಮತ್ತೊಂದೆಡೆ ಪಂಚಾಯಿತಿ ತಮ್ಮ ತಪ್ಪು ಬೆಳಕಿಗೆ ಬರತ್ತೆ ಎಂದು ಪಿಡಿಓ ಮೇಡಂ ಗರಂ ಆಗಿದ್ದಾರೆ ಎಂದು ಸ್ಥಳೀಯರು ಮಾತನಾಡಿಕೊಳ್ಳುತ್ತಿದ್ದಾರೆ. ಈ ಮೂಲಕ ಪಂಚಾಯಿತಿ ಅಧಿಕಾರಿಗಳು ಹಾಗೂ ವೈದ್ಯರ ಜಟಾಪಟಿಯಿಂದಾಗಿ ಚಿತ್ತಾಪುರ ಗ್ರಾಮಸ್ಥರು ಹೈರಾಣಾಗಿದ್ದಾರೆ.

ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ಚಿತ್ತಾಪುರ ಗ್ರಾಮದಲ್ಲಿ ಲುಷಿತ ನೀರು ಸೇವಿಸಿ 80ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡಿದ್ದಾರೆ. ಕುಡಿಯುವ ನೀರಿಗೆ ಚರಂಡಿ ನೀರು ಮಿಶ್ರಣವಾಗಿದ್ದು ಗ್ರಾಮಸ್ಥರು ಅಸ್ವಸ್ಥಗೊಂಡಿದ್ದಾರೆ. ಚರಂಡಿ ಬಂದ್ ಮಾಡಿಸಿ ಎಂದು ಟಿವಿ9 ಕ್ಯಾಮೆರಾ ಎದುರು ಅಳಲು ತೋಡಿಕೊಂಡಿದ್ದರು.

ರಾಯಚೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:25 am, Fri, 11 August 23

ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ