ಪಥಸಂಚಲನದಲ್ಲಿ ಪಾಲ್ಗೊಂಡಿದ್ದ PDO ಸಸ್ಪೆಂಡ್ ವಿಚಾರ: ಪ್ರವೀಣ್​​ಗೆ ಧೈರ್ಯ ತುಂಬಿದ ತೇಜಸ್ವಿ ಸೂರ್ಯ

ಆರ್‌ಎಸ್‌ಎಸ್ ವಿರುದ್ಧ ಸಮರ ಸಾರಿರುವ ಸರ್ಕಾರ ಇದೀಗ ಸಂಘ ಪರಿವಾರದ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದ ಸರ್ಕಾರಿ ನೌಕರರ ಮೇಲೆ ಸಮರಕ್ಕೆ ಮುಂದಾಗಿದೆ. ಅದರಂತೆ ಶುಕ್ರವಾರ ರಾಯಚೂರು ಪಿಡಿಓ ಪ್ರವೀಣ್ ಕುಮಾರ್​​ರ​ನ್ನು ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗವಹಿಸಿದ್ದಕ್ಕಾಗಿ ಅಮಾನತುಗೊಳಿಸಲಾಗಿದೆ. ಸದ್ಯ ಈ ವಿಚಾರವಾಗಿ ಸಂಸದ ತೇಜಸ್ವಿ ಸೂರ್ಯ ಇದನ್ನು ಕಾನೂನುಬಾಹಿರ ಎಂದು ಖಂಡಿಸಿದ್ದು, ಅಮಾನತನ್ನು ರದ್ದುಗೊಳಿಸಲು ಕಾನೂನು ಹೋರಾಟ ನಡೆಸುವುದಾಗಿ ಹೇಳಿದ್ದಾರೆ.

ಪಥಸಂಚಲನದಲ್ಲಿ ಪಾಲ್ಗೊಂಡಿದ್ದ PDO ಸಸ್ಪೆಂಡ್ ವಿಚಾರ: ಪ್ರವೀಣ್​​ಗೆ ಧೈರ್ಯ ತುಂಬಿದ ತೇಜಸ್ವಿ ಸೂರ್ಯ
ಸಂಸದ ತೇಜಸ್ವಿ ಸೂರ್ಯ, ಪಿಡಿಓ ಪ್ರವೀಣ್ ಕುಮಾರ್
Edited By:

Updated on: Oct 18, 2025 | 1:51 PM

ರಾಯಚೂರು, ಅಕ್ಟೋಬರ್​​ 18: ಸರ್ಕಾರ ಮೊದಲು ಸರ್ಕಾರಿ ಜಾಗಗಳಲ್ಲಿ ಆರ್​​ಎಸ್​ಎಸ್​ (RSS) ಚಟುವಟಿಕೆಗಳಿಗೆ ಕಡಿವಾಣ ಹಾಕಿತು. ಬಳಿಕ ಸಂಘ ಪರಿವಾರದ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದ ಸರ್ಕಾರಿ ನೌಕರರಿಗೆ ಶಾಕ್ ಕೊಟ್ಟಿದೆ. ಶುಕ್ರವಾರ ಆರ್​ಎಸ್​ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಪಿಡಿಓ ಪ್ರವೀಣ್ ಕುಮಾರ್​​ರನ್ನು ಅಮಾನತು ಮಾಡಲಾಗಿದೆ. ಸದ್ಯ ಅಮಾನತು ಆಗಿರುವ ಪ್ರವೀಣ್ ಕುಮಾರ್​ ಜೊತೆಗೆ ಸಂಸದ ತೇಜಸ್ವಿ ಸೂರ್ಯ (Tejasvi Surya) ಮಾತನಾಡಿದ್ದು, ಆತ್ಮಸ್ತೈರ್ಯ ತುಂಬಿದ್ದಾರೆ.

ಪ್ರವೀಣ್ ಕುಮಾರ್​ ತೇಜಸ್ವಿ ಸೂರ್ಯ ಭರವಸೆ 

ಈ ಕುರಿತಾಗಿ ಟ್ವೀಟ್​ ಮಾಡಿರು ಸಂಸದ ತೇಜಸ್ವಿ ಸೂರ್ಯ, ಶ್ರೀ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು, ಆರ್‌ಎಸ್‌ಎಸ್‌ ಪಥಸಂಚಲನದಲ್ಲಿ ಭಾಗವಹಿಸಿದ್ದಕ್ಕಾಗಿ ಅಮಾನತುಗೊಳಿಸಿದ ಅಧಿಕಾರಿ ಶ್ರೀ ಪ್ರವೀಣ್ ಕುಮಾರ್​ರೊಂದಿಗೆ ನಾನು ಮಾತನಾಡಿದ್ದು, ಈ ಕಾನೂನುಬಾಹಿರ ಮತ್ತು ಅಕ್ರಮ ಅಮಾನತನ್ನು ಪ್ರಶ್ನಿಸಲು ನಾನು ವೈಯಕ್ತಿಕವಾಗಿ ಸಂಬಂಧಪಟ್ಟ ನ್ಯಾಯಾಧಿಕರಣ ಮತ್ತು ನ್ಯಾಯಾಲಯಗಳ ಮುಂದೆ ಹಾಜರಾಗುತ್ತೇನೆ ಎಂದು ಅವರಿಗೆ ಭರವಸೆ ನೀಡಿದ್ದೇನೆ ಎಂದರು.

ಸಂಸದ ತೇಜಸ್ವಿ ಸೂರ್ಯ ಟ್ವೀಟ್​


ಆರ್‌ಎಸ್‌ಎಸ್‌ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಸರ್ಕಾರಿ ನೌಕರರ ಹಕ್ಕನ್ನು ಎತ್ತಿಹಿಡಿದಿರುವ ಅನೇಕ ಹೈಕೋರ್ಟ್‌ಗಳ ತೀರ್ಪುಗಳಿವೆ. ಈ ಅಕ್ರಮ ಅಮಾನತು ರದ್ದಾಗುವುದರಲ್ಲಿ ನನಗೆ ಯಾವುದೇ ಸಂದೇಹವಿಲ್ಲ. ಸಿಎಂ ಸಿದ್ದರಾಮಯ್ಯ ಸರ್ಕಾರವು ಕಾನೂನು ಹೋರಾಟ ಬಯಸಿದರೆ, ನಾವು ತಯಾರಾಗಿದ್ದೇವೆ ಎಂದಿದ್ದಾರೆ.

ಇದನ್ನೂ ಓದಿ: RSS ಪಥಸಂಚಲನದಲ್ಲಿ ಭಾಗಿ: ರಾಯಚೂರಿನ ರೋಡಲಬಂಡಾ ಪಿಡಿಓ ಅಮಾನತು

ಆರೆಸ್ಸೆಸ್​ ಶತಮಾನೋತ್ಸವ ಹಿನ್ನಲೆ ಅಕ್ಟೋಬರ್​ 12ರಂದು ಲಿಂಗಸುಗೂರು ಪಟ್ಟಣದಲ್ಲಿ ನಡೆದಿದ್ದ ಪಥಸಂಚಲನದಲ್ಲಿ ರಾಯಚೂರಿನ ಸಿರವಾರ ತಾಲೂಕು ಲಿಂಗಸಗೂರು ಪಂಚಾಯಿತಿಯ ಪಿಡಿಓ ಪ್ರವೀಣ್ ಕುಮಾರ್ ಕೆಪಿ ಗಣವೇಶ ಧರಿಸಿ ಲಾಟಿ ಹಿಡಿದು ಭಾಗಿಯಾಗಿದ್ದರು. ಹೀಗಾಗಿ ನಿಯಮ ಉಲ್ಲಂಘನೆ ಮಾಡಿದ್ದಾರೆ ಎಂದು ಸಸ್ಪೆಂಡ್​ ಮಾಡಲಾಗಿದೆ. ಈ ಪಿಡಿಓ ಸಸ್ಪೆಂಡ್​ ಬೆನ್ನಲ್ಲೇ ಮತ್ತಷ್ಟು ಸಿಬ್ಬಂದಿ ಬಗ್ಗೆ ಮಾಹಿತಿ ಕಲೆ ಹಾಕೋದಕ್ಕೆ ಸರ್ಕಾರ ಮುಂದಾಗಿದೆ ಎನ್ನಲಾಗುತ್ತಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 1:50 pm, Sat, 18 October 25