AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರಿನಲ್ಲಿ ಹಣಕ್ಕೆ ಬ್ಲ್ಯಾಕ್​ಮೇಲ್ ಮಾಡುತ್ತಿದ್ದ 6 ನಕಲಿ ಪತ್ರಕರ್ತರನ್ನು ಬಂಧಿಸಿದ ಪೊಲೀಸರು

ಮುದಗಲ್ ನ ಅಕ್ಕಿ ವ್ಯಾಪಾರಿ ವಿರೇಶ ಎನ್ನುವವರ ಅಂಗಡಿಗೆ ನುಗ್ಗಿ ಅವರಿಗೆ ಬ್ಲ್ಯಾಕ್​ಮೇಲ್ ಮಾಡಿದ್ದರು. ಕ್ಯಾಮರಾ ಮತ್ತು ಲೋಗೋ ಹಿಡಿದು ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ.

ರಾಯಚೂರಿನಲ್ಲಿ ಹಣಕ್ಕೆ ಬ್ಲ್ಯಾಕ್​ಮೇಲ್ ಮಾಡುತ್ತಿದ್ದ 6 ನಕಲಿ ಪತ್ರಕರ್ತರನ್ನು ಬಂಧಿಸಿದ ಪೊಲೀಸರು
6 ನಕಲಿ ಪತ್ರಕರ್ತರನ್ನು ಬಂಧಿಸಿದ ಪೊಲೀಸರು
TV9 Web
| Edited By: |

Updated on:Aug 31, 2022 | 12:48 PM

Share

ರಾಯಚೂರು: ಜಿಲ್ಲೆಯ ಲಿಂಗಸಗೂರು ತಾಲೂಕಿನ ಮುದಗಲ್​ನಲ್ಲಿ ಪೊಲೀಸರು 6 ನಕಲಿ ಪತ್ರಕರ್ತರನ್ನು ಬಂಧಿಸಿದ್ದಾರೆ. ಹಣಕ್ಕೆ ಬ್ಲ್ಯಾಕ್​ಮೇಲ್ ಮಾಡುತ್ತಿದ್ದ ಬೆಂಗಳೂರು ಮೂಲದ ಆರು ಜನ ನಕಲಿ ಪತ್ರಕರ್ತರನ್ನು ಬಂಧಿಸಲಾಗಿದೆ.

ರಾಜು ಬಿ, ನಾಗರಾಜ ಸಿ, ಪ್ರದೀಪಗೌಡ, ಅರ್ಪಿತಾ, ಮಹಾದೇವಿ, ಮೇಘ ಸೇರಿದಂತೆ ಮೂವರು ಯುವತಿಯರು, ಮೂವರು ಯುವಕರು ಯೂಟ್ಯೂಬ್ ಚಾನಲ್ ಹೆಸರಿನಲ್ಲಿ ಬ್ಲ್ಯಾಕ್​ಮೇಲ್ ಮಾಡುತ್ತಿದ್ದರು. ಮುದಗಲ್ ನ ಅಕ್ಕಿ ವ್ಯಾಪಾರಿ ವಿರೇಶ ಎನ್ನುವವರ ಅಂಗಡಿಗೆ ನುಗ್ಗಿ ಅವರಿಗೆ ಬ್ಲ್ಯಾಕ್​ಮೇಲ್ ಮಾಡಿದ್ದರು. ಕ್ಯಾಮರಾ ಮತ್ತು ಲೋಗೋ ಹಿಡಿದು ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಸುದ್ದಿ ಪ್ರಸಾರ ಮಾಡುವುದಾಗಿ ಬೆದರಿಕೆ ಹಾಕಿ 5 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು. ಅಕ್ಕಿ ಮಾರಾಟಗಾರ ವಿರೇಶ್ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ದೂರು ಆಧರಿಸಿ ಪೊಲೀಸರು ನಕಲಿ ಪತ್ರಕರ್ತರನ್ನು ಬಂಧಿಸಿದ್ದಾರೆ. ಬಂಧಿತರಿಂದ ಕ್ಯಾಮರಾ, ಐಡಿ ಕಾರ್ಡ್ ಹಾಗೂ ಮಾರುತಿ ಸ್ವಿಫ್ಟ್ ಕಾರ್ ಜಪ್ತಿ ಮಾಡಲಾಗಿದೆ. ಮುದಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

fake journalists

ಅಕ್ರಮವಾಗಿ ಸಾಗಿಸುತ್ತಿದ್ದ 85 ಲಕ್ಷ ರೂಪಾಯಿ ನಗದು ಜಪ್ತಿ

ಹಾವೇರಿ ಜಿಲ್ಲೆ ಹಾನಗಲ್ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಸಿನಿಮಾ ಸ್ಟೈಲ್‌ನಲ್ಲಿ ಕಾರು ಚೇಸ್ ಮಾಡಿ ಕಾರಿನಲ್ಲಿ ಅಕ್ರಮವಾಗಿ ಹಣ ಸಾಗಿಸುತ್ತಿದ್ದ ಆರೋಪಿಗಳು ಮತ್ತು 85 ಲಕ್ಷ ನಗದು ಜಪ್ತಿ ಮಾಡಿದ್ದಾರೆ. ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು ಆರೋಪಿಗಳು ಹುಬ್ಬಳ್ಳಿಯಿಂದ ಶಿವಮೊಗ್ಗ ಜಿಲ್ಲೆ ಸಾಗರದ ಕಡೆ ಹಣ ಸಾಗಿಸುತ್ತಿದ್ರು ಎಂದು ತಿಳಿದು ಬಂದಿದೆ.

ಫಯಾಜಖಾನ್ (31 ವರ್ಷ), ಇಮ್ರಾನ್ ಖಾನ್ (27 ವರ್ಷ) ಮತ್ತು ಶಿವಮೊಗ್ಗ ಜಿಲ್ಲೆ ಸಾಗರದ ಸದ್ಧಾಂಖಾನ್ (23 ವರ್ಷ) ಮತ್ತು ಸಯ್ಯದ ಅಮೀನ್ (29 ವರ್ಷ) ಬಂಧಿತರು. ಎಸ್ಪಿ ಹನುಮಂತರಾಯ ನೀಡಿದ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆದಿದೆ. ಹಾನಗಲ್ ಸಿಪಿಐ ಶಿವಶಂಕರ ಗಣಾಚಾರಿ ಹಾಗೂ ಪಿಎಸ್ಐ ಶ್ರೀಶೈಲ ಪಟ್ಟಣಶೆಟ್ಟಿ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದೆ. ಹಾನಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:52 am, Wed, 31 August 22

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ