AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ರಾಯಚೂರು: ತರಕಾರಿ, ಸೊಪ್ಪು ಕಾಲಿಂದ ಒದ್ದ ಪಿಸಿಐ ಅಮಾನತು

ವೀಕೆಂಡ್ ಲಾಕ್ ಡೌನ್ ಇದ್ದರೂ ಕೆಲವು ಮಹಿಳೆಯರು ತರಕಾರಿ ಸೊಪ್ಪು ಮಾರಾಟ ಮಾಡುತ್ತಿದ್ದರು. ಏಕಾಏಕೀ ಬಂದು ತರಕಾರಿ ಹಾಗೂ ಸೊಪ್ಪನ್ನು ಕಾಲಿನಿಂದ ಒದ್ದ ಪಿಎಸ್ಐ ಅಜಂ ದರ್ಪ ಮೆರೆದಿದ್ದರು. ಅವರು ಕಾಲಿನಿಂದ ತರಕಾರಿ ಮತ್ತು ಸೊಪ್ಪನ್ನು ಒದೆಯುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

Viral Video: ರಾಯಚೂರು: ತರಕಾರಿ, ಸೊಪ್ಪು ಕಾಲಿಂದ ಒದ್ದ ಪಿಸಿಐ ಅಮಾನತು
ಕಾಲಿಂದ ಒದೆಯುತ್ತಿರುವ ದೃಶ್ಯ
TV9 Web
| Edited By: |

Updated on: Jun 20, 2021 | 8:20 PM

Share

ರಾಯಚೂರು: ವಾರಾಂತ್ಯದ ಕರ್ಫ್ಯೂ ಲಾಕ್ ಡೌನ್ ಇದ್ದರೂ ಸಹ ತರಕಾರಿ, ಸೊಪ್ಪು ಮಾರಾಟ ಮಾಡುತ್ತಿದ್ದ ಕಾರಣ ತರಕಾರಿ ಮತ್ತು ಸೊಪ್ಪನ್ನು ಒದ್ದ ಸದರ್ ಬಜಾರ್ ಪಿಎಸ್ಐ ಅಜಂರನ್ನು ಅಮಾನತುಗೊಳಿಸಲಾಗಿದೆ. ರಾಯಚೂರು ನಗರದ ಚಂದ್ರಮೌಳೇಶ್ವರ ವೃತ್ತದ ಬಳಿ ನಡೆದಿದ್ದ ಘಟನೆಗೆ ಸಂಬಂಧಿಸಿ ಎಸಿಪಿ ಪ್ರಕಾಶ ನಿಕ್ಕಂ ಈ ಆದೇಶ ಹೊರಡಿಸಿದ್ದಾರೆ.

ವೀಕೆಂಡ್ ಲಾಕ್ ಡೌನ್ ಇದ್ದರೂ ಕೆಲವು ಮಹಿಳೆಯರು ತರಕಾರಿ ಸೊಪ್ಪು ಮಾರಾಟ ಮಾಡುತ್ತಿದ್ದರು. ಏಕಾಏಕೀ ಬಂದು ತರಕಾರಿ ಹಾಗೂ ಸೊಪ್ಪನ್ನು ಕಾಲಿನಿಂದ ಒದ್ದ ಪಿಎಸ್ಐ ಅಜಂ ದರ್ಪ ಮೆರೆದಿದ್ದರು. ಅವರು ಕಾಲಿನಿಂದ ತರಕಾರಿ ಮತ್ತು ಸೊಪ್ಪನ್ನು ಒದೆಯುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಕೋಲಾರ: ಡೆತ್​ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಯೂಟ್ಯೂಬ್ ಚಾನೆಲ್ ವರದಿಗಾರ

ಕೋಲಾರ: ಯೂಟ್ಯೂಬ್​ ಚಾನಲ್​ ಒಂದರ ವರದಿಗಾರನೊಬ್ಬ ಡೆತ್​ ನೋಟ್​ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್​ ನಗರದಲ್ಲಿ ನಡೆದಿದೆ. ವಿ.ಟಿವಿ ಹೆಸರಿನ ಯೂಟ್ಯೂಬ್​ ಚಾನಲ್​ನ ವರದಿಗಾರ ಶ್ರೀಧರ್​(45) ಆತ್ಮಹತ್ಯೆಗೆ ಶರಣಾದ ವರದಿಗಾರ. ಕಳೆದ ಹಲವು ವರ್ಷಗಳಿಂದ ಕೆಜಿಎಫ್​ ನಗರದಲ್ಲಿ ಕೆಲವು ಸ್ಥಳೀಯ ಪತ್ರಿಕೆಗಳು ಹಾಗೂ ಯೂಟ್ಯೂಬ್​ ಚಾನಲ್​ ನಲ್ಲಿ ಕೆಲಸ ಮಾಡುತ್ತಿದ್ದ ಶ್ರೀಧರ್​ ಸಕ್ರಿಯ ಪತ್ರಕರ್ತರಾಗಿ ಗುರುತಿಸಿಕೊಂಡಿದ್ದರು. ಈ ನಡುವೆ ಕೆಜಿಎಫ್​ನ ಬೆಮೆಲ್​ ನಗರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಮಹಿಳೆಯೊಬ್ಬಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಪೊಲೀಸರು ಕರೆದು ವಿಚಾರಣೆ ನಡೆಸಿದ್ದರು ಎನ್ನಲಾಗಿದ್ದು ಇದರಿಂದ ಮನನೊಂದು ಆತ್ಮಹತ್ಯೆ ನಿರ್ಧಾರ ಮಾಡಿರಬಹುದು ಎನ್ನಲಾಗಿದೆ.

ಬೆಮೆಲ್​ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಮಹಿಳೆಯ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಧರ್​ ಅವರನ್ನು ನಿನ್ನೆ ವಿಚಾರಣೆ ನಡೆಸಿದ್ದರು, ಜೊತೆಗೆ ಕರೆದಾಗ ವಿಚಾರಣೆ ಬರುವಂತೆ ಹೇಳಿ ಕಳಿಸಿದ್ದರು. ನಿನ್ನೆ ರಾತ್ರಿ ವಿಚಾರಣೆ ಮುಗಿಸಿಕೊಂಡು ಬಂದಿದ್ದ ಶ್ರೀಧರ್​ ಇಂದು ಬೆಳಗ್ಗೆ ಮನೆಯಿಂದ ಬಂದವರೇ ಕೆಜಿಎಫ್​ ರಾಬರ್ಟ್​ಸನ್​ ಪೇಟೆ ಬಸ್​ ನಿಲ್ದಾಣದ ಬಳಿ ಇರುವ ತಮ್ಮ ವಿಟಿವಿ ಯೂಟ್ಯೂಬ್​ ಚಾನಲ್​ನ ಕಚೇರಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇನ್ನು ತಮ್ಮ ಡೆತ್​ ನೋಟ್​ನಲ್ಲಿ ಶ್ರೀಧರ್​ ತಾನು ಯಾವುದೇ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗಿಲ್ಲವೆಂದು ಬರೆದುಕೊಂಡಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ರಾಬರ್ಟ್​ಸನ್​ ಪೇಟೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ‘ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ಸಾಕ್ಷಿಗಳು ಬೇಕಿದ್ದ ಹಿನ್ನೆಲೆ ಕರೆದು ವಿಚಾರಣೆೆಗೆಂದು ಕರೆದಿದ್ದೆವು. ಅವರಿಗೆ ಯಾವುದೇ ಒತ್ತಡ ಹಾಕಿರಲಿಲ್ಲ. ಅವರಿಂದ ಇನ್ನೂ ಸಾಕಷ್ಟು ಮಾಹಿತಿ ಪಡೆಯಬೇಕಿತ್ತು. ಅಷ್ಟರಲ್ಲೇ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಬಗ್ಗೆ ತನಿಖೆ ಮುಂದುವರೆಸುತ್ತೇವೆ‘ ಎಂದು ಡಿವೈಎಸ್ಪಿ ಉಮೇಶ್​ ಅವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Karnataka Covid Update: ಕರ್ನಾಟಕದಲ್ಲಿ ಇಂದು 4,517 ಜನರಿಗೆ ಕೊವಿಡ್ ದೃಢ, 120 ಜನರು ನಿಧನ; ಪಾಸಿಟಿವಿಟಿ ದರ ಶೇ 2.58 Covishield: ವಿದೇಶಗಳಿಗೆ ತೆರಳುವವರಿಗೆ 28 ದಿನಕ್ಕೆ 2ನೇ ಡೋಸ್ ಕೊವಿಡ್ ಲಸಿಕೆ; ಜುಲೈ 22ರಿಂದಲೇ ಆರಂಭ

(PSI suspended in Raichuru for kick the vegetables in leg on weekend curfew)

ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?